Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹದಗೆಟ್ಟ ಕಾನೂನು ಸುವ್ಯವಸ್ಥೆ: ವಿಧಾನಸಭೆಯಲ್ಲಿ ಕೋಲಾಹಲ

by admin February 13, 2024
written by admin February 13, 2024 2 comments 2 minutes read
3FacebookTwitterPinterestEmail
243

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಗಲಿನಲ್ಲೇ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಕೊಲೆ, ಸುಲಿಗೆ ನಡೆಯುತ್ತಿವೆ ಎಂದು ವಿಧಾನಸಭೆಯಲ್ಲಿಂದು ಪ್ರತಿಪಕ್ಷಗಳು ಮಾಡಿದ ಆರೋಪ ಭಾರೀ ಕೋಲಾಹಲಕ್ಕೆ ಎಡೆ ಮಾಡಿಕೊಟ್ಟಿತು.

ಸದನ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸುನೀಲ್ ಕುಮಾರ್ ಸೇರಿದಂತೆ ಹಲವರು ಮಾಡಿದ ಆರೋಪ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಶ್ನೋತ್ತರ ವೇಳೆಯನ್ನು ಕೈಗೆತ್ತಿಕೊಳ್ಳಲು ಮುಂದಾದಾಗ ಮಧ್ಯ ಪ್ರವೇಶಿಸಿದ ಅಶೋಕ್, ಹಾವೇರಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ, ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಲಾಗಿದೆ, ಶಿವಮೊಗ್ಗದಲ್ಲಿ ಮಚ್ಚು-ಲಾಂಗ್‌ಗಳ ಬ್ಯಾನರ್ ಹಾಕುತ್ತಿದ್ದಾರೆ, ಭಗವಾಧ್ವಜ ಅಳವಡಿಸಲು ವಿರೋಧ ವ್ಯಕ್ತಪಡಿಸಲಾಗುತ್ತಿದೆ.

ಸೈಬರ್ ಕ್ರೈಮ್‌ಗಳು ಹೆಚ್ಚಾಗಿವೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪ್ರಶ್ನೋತ್ತರ ವೇಳೆಯನ್ನು ಬದಿಗಿರಿಸಿ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ನಿಯಮಾವಳಿ ಪ್ರಕಾರ ನಡೆಯಲಿ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ವಿರೋಧ ಪಕ್ಷಗಳ ಬೇಡಿಕೆಯಂತೆ ಚರ್ಚೆ ಮಾಡಲು ಅಭ್ಯಂತರ ಇಲ್ಲ, ನಿಯಮಾವಳಿ ಪ್ರಕಾರ ಮೊದಲು ಪ್ರಶ್ನೋತ್ತರ ನಡೆಯಲಿ ಎಂದರು.

ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಚರ್ಚೆಗೆ ಮೊದಲು ಅವಕಾಶ ನೀಡಿ ಎಂದು ಪಟ್ಟು ಹಿಡಿದರು.

ಪ್ರಿಯಾಂಕ ಖರ್ಗೆ ಸವಾಲು

ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಕಾನೂನು ಸುವ್ಯವಸ್ಥೆ ಹದಗೆಡಿಸುವವರು ನೀವೆ, ಇಲ್ಲಿ ಚರ್ಚೆ ಮಾಡುವವರು ನೀವೆ, ರಾಜ್ಯದ ರೈತರನ್ನು ಮಧ್ಯ ಪ್ರದೇಶದಲ್ಲಿ ಬಂಧಿಸಲಾಗಿದೆ, ಅದರ ಬಗ್ಗೆಯೂ ಚರ್ಚೆ ಮಾಡೋಣ, ಪಿಎಸ್‌ಐ ನೇಮಕಾತಿ ಹಗರಣದ ಕುರಿತು ನ್ಯಾಯಮೂರ್ತಿ ವೀರಪ್ಪ ನೇತೃತ್ವದ ನ್ಯಾಯಾಂಗ ತನಿಖಾ ಆಯೋಗದ ಕುರಿತು ಚರ್ಚೆಯಾಗಲಿ, ರಾಷ್ಟ್ರಧ್ವಜವನ್ನು ಕೆಳಗೆ ಇಳಿಸಿ ಭಗವಾಧ್ವಜ ಏರಿಸುವುದು ಚರ್ಚೆಯಾಗಲಿ, ಪ್ರಸ್ತಾಪ ಮಾಡಿ ಎಂದು ಸವಾಲು ಹಾಕಿದರು.

ಸುನೀಲ್ ಕುಮಾರ್, ನಾವು ಏನು ಪ್ರಸ್ತಾಪ ಮಾಡಬೇಕು ಎಂಬ ಬಗ್ಗೆ ನೀವು ನಿರ್ದೇಶನ ನೀಡುವ ಅಗತ್ಯ ಇಲ್ಲ ಎಂದರು. ಈ ವೇಳೆ ಪ್ರಿಯಾಂಕ್ ಖರ್ಗೆ ಮತ್ತು ಸುನೀಲ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆಯಿತು.

ಉಪ್ಪು, ಹುಳಿ, ಖಾರ ಏನೂ ಇಲ್ಲ

ಅಶೋಕ್, ನಮಗೆ ಬುದ್ಧಿ ಹೇಳಲು ಬರಬೇಡಿ, ನಿಮ್ಮ ಇಂಡಿಯಾ ಮಿತ್ರಕೂಟಕ್ಕೆ ಹೇಳಿಕೊಳ್ಳಿ ಎಂದು ತಿರುಗೇಟು ನೀಡಿದರು.

ಕೆಲಕಾಲ ಕಾವೇರಿದ ಚರ್ಚೆ ಬಳಿಕ ಸಭಾಧ್ಯಕ್ಷ ಯು.ಟಿ.ಖಾದರ್, ಸದಸ್ಯರು ಆರಂಭದ ಹುಮ್ಮಸ್ಸಿನಲ್ಲಿರುತ್ತಾರೆ, ನಿಧಾನಕ್ಕೆ ಸಮ ಪ್ರಮಾಣಕ್ಕೆ ಬರಲಿ, ಕೊಬ್ಬರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಬೇಕು ಎಂಬ ವಿಚಾರ ಚರ್ಚೆ ಮಾಡಲು ಜೆಡಿಎಸ್‌ನ ಹೆಚ್.ಡಿ.ರೇವಣ್ಣ, ಬಾಲಕೃಷ್ಣ ಮೊದಲು ನಿಲುವಳಿ ಸೂಚನೆ ನೀಡಿದ್ದಾರೆ, ನಂತರ ಬಿಜೆಪಿ ನೀಡಿರುವ ಕಾನೂನು ಸುವ್ಯವಸ್ಥೆ ಸೂಚನೆ ತೆಗೆದುಕೊಳ್ಳೋಣ, ನಿಯಮದ ಪ್ರಕಾರ ಮೊದಲು ಸೂಚನಾ ಪತ್ರ ಕೊಟ್ಟವರಿಗೆ ಅವಕಾಶ ಮಾಡಿಕೊಡಲಾಗುವುದು. ಬಿಜೆಪಿ ಸದಸ್ಯರು ನಾಳೆ ಹೊಸದಾಗಿ ಸೂಚನಾ ಪತ್ರ ಕಳುಹಿಸಲಿ, ಪರಿಶೀಲಿಸುತ್ತೇನೆ ಎಂದರು.

ಸೂಚನಾ ಪತ್ರ ನೀಡಿ

ಅಶೋಕ್ ಹಾಗೂ ಅರಗ ಜ್ಞಾನೇಂದ್ರ ಮಾತನಾಡಿ, ಜೆಡಿಎಸ್ ನಮ್ಮ ಪಾಲುದಾರರಾಗಿದ್ದಾರೆ, ಅಧಿಕೃತ ವಿರೋಧ ಪಕ್ಷದ ನಿಲುವಳಿ ಸೂಚನೆ ಮೊದಲು ಕೈಗೆತ್ತಿಕೊಳ್ಳಬೇಕು, ವಿಚಾರ ಗಂಭೀರವಾಗಿದೆ ಎಂದಾಗ, ನಿಲುವಳಿ ಸೂಚನೆ ನೀಡುವಾಗ ಗಂಭೀರ ವಿಚಾರ ಎಂದು ಗೊತ್ತಿರಲಿಲ್ಲವೇ, ಮೊದಲು ಸಭಾಧ್ಯಕ್ಷರ ಕಚೇರಿಗೆ ಸೂಚನಾ ಪತ್ರ ನೀಡಬೇಕಲ್ಲವೇ ಎಂದು ಸಭಾಧ್ಯಕ್ಷರು ಪ್ರಶ್ನಿಸಿದರು.

ಸಚಿವ ಪರಮೇಶ್ವರ್, ಕಾನೂನು ಸುವ್ಯವಸ್ಥೆಯನ್ನು ನಿಲುವಳಿ ಸೂಚನೆಯಡಿ ಚರ್ಚಿಸಲು ಅವಕಾಶವಿದೆಯೇ ಎಂದರು.

ಈ ಹಂತದಲ್ಲಿ ವಿರೋಧ ಪಕ್ಷಗಳ ಸದಸ್ಯರು ಧ್ವನಿ ಏರಿಸಿ ವಾಗ್ವಾದಕ್ಕೆ ಇಳಿದಾಗ ಆಡಳಿತ ಪಕ್ಷದ ಶಾಸಕರಿಂದಲೂ ಪ್ರತಿಯಾಗಿ ಗದ್ದಲ ಕೇಳಿಬಂದಿತು. ಇದರಿಂದ ಸದನ ಕೆಲಕಾಲ ಗೊಂದಲದ ವಾತಾವರಣದಲ್ಲಿ ಮುಳುಗಿತು.

ಸಭಾಧ್ಯಕ್ಷರು, ಕೊಬ್ಬರಿ ಬೆಲೆ ಕುರಿತು ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ, ಕಾನೂನು ಸುವ್ಯವಸ್ಥೆ ಕುರಿತು ಹೊಸ ಸೂಚನೆ ಕೊಟ್ಟರೆ ನಾಳೆ ಪರಿಶೀಲಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp objectionfirst take main opposition's matterlaw and order failure-opposition aligationspeaker - i will take it next daytake first jds mattervidhana sabha
3 FacebookTwitterPinterestEmail
admin

previous post
ದಿನ ಭವಿಷ್ಯ : ಮಂಗಳವಾರ, 13 ಫೆಬ್ರವರಿ 2024
next post
ರಾಜ್ಯಸಭಾ ಚುನಾವಣೆ: ವಲಸಿಗರಿಗೆ ಕಾಂಗ್ರೆಸ್ ಟಿಕೆಟ್

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ