Thursday, May 22, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, May 22, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಉತ್ತರ ಪ್ರದೇಶದಿಂದ ತಾಯಿ-ಮಗ ಪಲಾಯನ

by admin February 14, 2024
written by admin February 14, 2024 0 comments 2 minutes read
Share 2FacebookTwitterPinterestEmail
269

ಬೆಂಗಳೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಕಣಕ್ಕಿಳಿಯುವ ಮೂಲಕ ಉತ್ತರ ಪ್ರದೇಶದಿಂದ ತಾಯಿ-ಮಗ ಇಬ್ಬರೂ ಪಲಾಯನ ಮಾಡಿದಂತಾಗಿದೆ.

ಕಳೆದ 2019ರಲ್ಲಿ ಸೋಲಿನ ಭೀತಿಯಿಂದ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಮತ್ತು ಕೇರಳದ ವಯನಾಡು ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ, ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಂದ ಸೋಲನುಭವಿಸಿ, ವಯನಾಡು ಕ್ಷೇತ್ರದಿಂದ ಲೋಕಸಭೆ ಪ್ರವೇಶಿಸಿದ್ದರು.

ಈ ಬಾರಿ, ಅಂದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಿತ್ರ ಪಕ್ಷ ಸಿಪಿಐ(ಎಂ) ವಯನಾಡು ಕ್ಷೇತ್ರದಿಂದ ತನ್ನ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಇರಾದೆಯಲ್ಲಿದ್ದು, ರಾಹುಲ್ ಗಾಂಧಿ ಮತ್ತೆ ಉತ್ತರ ಪ್ರದೇಶದ ಅಮೇಥಿಗೆ ಹಿಂತಿರುಗುವರೆ ಅಥವಾ ರಾಯ್‌ಬರೇಲಿ ಕ್ಷೇತ್ರ ಆರಿಸಿಕೊಳ್ಳುವರೇ ಎಂಬ ಚರ್ಚೆಗಳು ನಡೆದಿವೆ.

ಕಳೆದ 2004 ರಿಂದಲೂ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವು ಈ ಬಾರಿ ತೆರವಾಗಿದ್ದು, ಗಾಂಧಿ ವಂಶದ ಇನ್ನೊಬ್ಬ ಮಹಿಳೆ ಹಾಗೂ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ವಾದ್ರಾ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸುವ ಮಾತುಗಳು ಪಕ್ಷದ ಉನ್ನತ ವಲಯದಲ್ಲಿ ಕೇಳಿಬರುತ್ತಿವೆ.

ಪುತ್ರಿಗೆ ರಾಯ್‌ಬರೇಲಿ ಕ್ಷೇತ್ರ ಬಿಟ್ಟುಕೊಡುವ ಉದ್ದೇಶದಿಂದಲೇ ಸೋನಿಯಾ ಗಾಂಧಿ ರಾಜಸ್ತಾನದ ಮೂಲಕ ರಾಜ್ಯಸಭೆ ಪ್ರವೇಶಿಸುತ್ತಿದ್ದಾರೆ ಎಂಬುದು ಒಂದು ತರ್ಕವಾದರೆ, ಚುನಾವಣೆ ಸಂದರ್ಭದಲ್ಲಿ ಪ್ರಚಾರ ಕಾರ್ಯದಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ತ್ರಾಣ ಇಲ್ಲದಿರುವುದು ಮತ್ತೊಂದು ಕಾರಣ ಎನ್ನಲಾಗಿದೆ.

ಒಟ್ಟಿನಲ್ಲಿ ಗಾಂಧಿ ಕುಟುಂಬ ಇಡೀ ಉತ್ತರ ಪ್ರದೇಶದಿಂದ ಎತ್ತಂಗಡಿ ಆದಂತಾಗಿದ್ದು, ಜವಾಹರಲಾಲ್ ನೆಹರು ಕಾಲದಿಂದ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೀಗೆ ಒಬ್ಬರಲ್ಲಾ ಒಬ್ಬರು ಉತ್ತರ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದರು (1977 ಹೊರತುಪಡಿಸಿ).

ಒಂದು ಕಾಲದಲ್ಲಿ ಪ್ರಧಾನಮಂತ್ರಿ ಹುದ್ದೆ ಏರಲು ಬಯಸುವವರು ಉತ್ತರ ಪ್ರದೇಶದ ಯಾವುದಾದರೊಂದು ಕ್ಷೇತ್ರದಿಂದ ಗೆದ್ದು ಬರಬೇಕೆಂಬ ಮಾತಿತ್ತು. ಇದಕ್ಕೆ ಕಾರಣ, ದೇಶದ ಎಲ್ಲಾ ರಾಜ್ಯಗಳಿಗಿಂತ ಉತ್ತರ ಪ್ರದೇಶವೇ ಅತೀ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯವಾಗಿತ್ತು. ಈಗಲೂ ಈ ರಾಜ್ಯವೇ ಹೆಚ್ಚು ಲೋಕಸಭಾ ಸ್ಥಾನಗಳನ್ನು (80) ಹೊಂದಿದೆ.

ರಾಯ್‌ಬರೇಲಿ ಕ್ಷೇತ್ರದಲ್ಲಿ ಒಂದು ವೇಳೆ ಪ್ರಿಯಾಂಕಾ ವಾದ್ರಾ ಸ್ಪರ್ಧೆಗಿಳಿದು ಗೆಲುವು ಸಾಧಿಸಿ ಲೋಕಸಭೆ ಪ್ರವೇಶಿಸಿದರೆ ಮೊದಲ ಸಾಲಿನಲ್ಲಂತೂ ಆಸನ ಲಭ್ಯವಾಗುವಷ್ಟು ಸದಸ್ಯತ್ವ ಹಿರಿತನ ಅವರು ಹೊಂದುವುದಿಲ್ಲ.

ಈ ಹಿಂದೆ ಸೋನಿಯಾ ಗಾಂಧಿ ಲೋಕಸಭೆ ಪ್ರವೇಶಿಸಿದಾಗ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಯುಪಿಎ ಒಕ್ಕೂಟದ ನಾಯಕಿ ಪಟ್ಟ ನೀಡಲಾಗಿತ್ತು.

ಈ ಬಾರಿ (2024ರ ಲೋಕಸಭಾ ಚುನಾವಣೆ ಫಲಿತಾಂಶ ನಂತರ) ಸೋನಿಯಾ ಗಾಂಧಿ ಅನುಪಸ್ಥಿತಿಯಲ್ಲಿ ಯುಪಿಎ ಒಕ್ಕೂಟದ ಮುಖ್ಯಸ್ಥನ ಪಟ್ಟ ರಾಹುಲ್ ಗಾಂಧಿಗೆ ಲಭ್ಯವಾಗುವ ಸಾಧ್ಯತೆ ಇದ್ದು, ಅವರು ಪ್ರತಿಪಕ್ಷದ ಮೊದಲ ಸಾಲಿನಲ್ಲಿ ಕುಳಿತುಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಎದುರಿನ ಸಾಲಿನಲ್ಲಿ ಆಸೀನರಾಗುವರೇ ಎಂಬುದು ಕುತೂಹಲಕರ ಸಂಗತಿ.

ಒಂದು ವೇಳೆ ಪ್ರಿಯಾಂಕ ವಾದ್ರಾ ಲೋಕಸಭೆ ಪ್ರವೇಶಿಸಿದರೆ ಅವರಿಗೆ ಯಾವ ಸಾಲಿನಲ್ಲಿ ಆಸನ ವ್ಯವಸ್ಥೆ ಆಗಲಿದೆ ಎಂಬುದೂ ಕುತೂಹಲ ಮೂಡಿಸಿದೆ.

ಲೋಕಸಭಾ ಸದಸ್ಯತ್ವ ವಿಷಯಕ್ಕೆ ಬಂದರೆ ಪ್ರಸ್ತುತ ಗಾಂಧಿ ವಂಶದ ಸದಸ್ಯರಲ್ಲಿ ರಾಹುಲ್ ಗಾಂಧಿಯೇ ಹಿರಿತನ ಹೊಂದಿದ್ದು (ಸೋನಿಯಾಗಾಂಧಿ ಈಗಾಗಲೇ ರಾಜಸ್ತಾನದಿಂದ ಸ್ಪರ್ಧೆಗಿಳಿದಿರುವ ಹಿನ್ನೆಲೆಯಲ್ಲಿ), ಪ್ರಿಯಾಂಕಾ ವಾದ್ರಾ ಕೊನೆಯ ಸಾಲಿನಲ್ಲಿ ಕುಳಿತುಕೊಳ್ಳುವರೇ!

ಒಂದು ವೇಳೆ ಕಾಂಗ್ರೆಸ್‌ನ ಇಬ್ಬರೂ ದಿಗ್ಗಜ ನಾಯಕರು ಲೋಕಸಭೆ ಪ್ರವೇಶಿಸಿದರೆ, ಕಾಂಗ್ರೆಸ್‌ನಲ್ಲಿ ಇವರಿಬ್ಬರಲ್ಲಿ ಯಾರು ಹೆಚ್ಚು ವರ್ಚಸ್ಸು ಹೊಂದಿದವರು ಎಂಬ ಲೆಕ್ಕಾಚಾರಗಳೂ ಆರಂಭವಾಗುವ ಸಾಧ್ಯತೆ ಇದ್ದು, ಬಹುಶಃ ಇಂತಹ ಸಂದಿಗ್ಧತೆಗೆ ಅವಕಾಶವಾಗದಂತೆ ಕಾಂಗ್ರೆಸ್ ಗಮನ ಹರಿಸುವುದಂತೂ ನಿಶ್ಚಿತ.

ಪ್ರಿಯಾಂಕಾ ವಾದ್ರಾ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವರೆಂಬುದು ಇದುವರೆಗೂ ಖಚಿತವಾಗಿಲ್ಲ.

2024ರ ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಹೆಚ್ಚು-ಕಡಿಮೆ ಇನ್ನೂ ಮೂರು ತಿಂಗಳು ಬಾಕಿ ಇದ್ದು, ರಾಷ್ಟ್ರ ರಾಜಕಾರಣದಲ್ಲಿ ಎಂತೆಂಥಾ ರಾಜಕೀಯ ದಾಳಗಳು ಉರುಳುತ್ತವೋ ಎಂಬುದನ್ನು ಕಾದುನೋಡಬೇಕಿದೆ.

ಹೆಚ್.ಎಂ.ವಿಜಯಕುಮಾರ್

Share this:

  • WhatsApp
  • Post
  • Tweet
  • Print
  • Email
amethicongrescpimloka sbha election 2024priyanka gandhiRahul Gandhiray barelisoniya gandhivayanadu
Share 2 FacebookTwitterPinterestEmail
admin

previous post
ದಿನ ಭವಿಷ್ಯ : ಬುಧವಾರ, 14 ಫೆಬ್ರವರಿ 2024
next post
ಬಿಜೆಪಿ ಶಾಸಕರಿಗೆ ಕೊಲೆ ಬೆದರಿಕೆ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ