Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಬೆಂಗಳೂರು ಬಿಡಿ: ಚುನಾವಣೆಗೆ ಸಿದ್ಧರಾಗಿ

by KM Shivaraju February 19, 2024
written by KM Shivaraju February 19, 2024 1 comment 1 minutes read
1FacebookTwitterPinterestEmail
150

ಸಚಿವರೂ, ಪಕ್ಷದ ಶಾಸಕರಿಗೆ ಸಿದ್ದರಾಮಯ್ಯ ಠರಾವು

ಬೆಂಗಳೂರು:ರಾಜ್ಯಸಭಾ ಚುನಾವಣೆ ಮುಗಿಯುತ್ತಿದ್ದಂತೆ ತಮ್ಮ ಜಿಲ್ಲೆ, ಕ್ಷೇತ್ರಗಳಿಗೆ ತೆರಳಿ, ರಾಜಧಾನಿ ಕಡೆ ಮುಖ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ, ಪಕ್ಷದ ಶಾಸಕರಿಗೆ ಕಟ್ಟಾಜ್ಞೆ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆ ನಮಗೆ ಮತ್ತು ಪಕ್ಷಕ್ಕೆ ಪ್ರತಿಷ್ಠೆಯಾಗಿದೆ, ಕನಿಷ್ಠ 20 ಸ್ಥಾನಗಳನ್ನು ನಾವು ಗೆಲ್ಲಲೇಬೇಕು.

ಗುರಿ ಮುಟ್ಟಲು ಶಕ್ತಿ ಮೀರಿ ಶ್ರಮಿಸಿ

ಚುನಾವಣೆಗೆ ಇನ್ನು 100 ದಿನಗಳೂ ಉಳಿದಿಲ್ಲ, ಇರುವ ಅಲ್ಪ ಸಮಯದಲ್ಲೇ ನಮ್ಮ ಗುರಿ ಮುಟ್ಟಲು ಶಕ್ತಿ ಮೀರಿ ಶ್ರಮಿಸಬೇಕಾಗಿದೆ. ಕರ್ನಾಟಕದಲ್ಲಿ ನಾವೇ ಅಧಿಕಾರದಲ್ಲಿದ್ದರೂ ವಿಧಾನಸಭಾ ಚುನಾವಣೆಗೂ, ಲೋಕಸಭಾ ಚುನಾವಣೆಗೂ ಮತದಾನ ಮಾಡುವಾಗ ಮತದಾರರ ಮನಸ್ಥಿಯೇ ಬೇರೆ ಇರುತ್ತದೆ.

ನಾವು ಕಠಿಣ ಸ್ಥಿತಿಯಲ್ಲಿದ್ದೇವೆ, ನಿಮಗೆ ಇದರ ಅರಿವಿದೆಯೋ ಇಲ್ಲವೋ, ನಾವು ಹೆಚ್ಚು ಸ್ಥಾನ ಗಳಿಸಿದರೆ ನಮ್ಮ ಸರ್ಕಾರ ಗಟ್ಟಿಯಾಗುತ್ತದೆ. ಚುನಾವಣೆಯಲ್ಲಿ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಿದ್ದೇವೆ, ನಮ್ಮ ಗ್ಯಾರಂಟಿ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿ ಜನತೆಯೂ ಸಂತುಷ್ಟವಾಗಿದ್ದಾರೆ.

ಸ್ಥಳೀಯವಾಗಿ ಕೆಲಸ ಮಾಡಿ

ಹಾಗೆಂದು ಕೈಕಟ್ಟಿ ಕುಳಿತುಕೊಳ್ಳಲು ಸಾಧ್ಯವಿಲ್ಲ, ಚುನಾವಣೆಯನ್ನೇ ಗುರಿಯಾಗಿಟ್ಟುಕೊಂಡು ಬೂತ್ ಮಟ್ಟದಿಂದ ಎಲ್ಲಾ ಹಂತದ ಕಾರ್ಯಕರ್ತರ ಮತ್ತು ಮುಖಂಡರ ಸಭೆ ನಡೆಸಿ, ಪಕ್ಷ ಸಂಘಟಿಸಿ ನಮ್ಮ ಗುರಿ ಮುಟ್ಟಬೇಕು. ನಮ್ಮ ಗುರಿ ಮುಟ್ಟಲು ನೀವು ಸ್ಥಳೀಯವಾಗಿ ಕೆಲಸ ಮಾಡಿ, ಬೆಂಗಳೂರು ಬಿಡಿ ಎಂದಿದ್ದಾರೆ.

ಬಜೆಟ್ ಅಧಿವೇಶನ ನಂತರ ಬರುವ ರಾಜ್ಯಸಭೆ ಚುನಾವಣೆ ಮುಗಿಯುತ್ತಿದ್ದಂತೆ ಸಚಿವರುಗಳು ತಮ್ಮ ತವರು ಜಿಲ್ಲೆಯಲ್ಲೇ ಉಳಿಯಬೇಕು, ಶಾಸಕರು ತಮ್ಮ ಕ್ಷೇತ್ರ ಬಿಟ್ಟು ಹೊರಬರಕೂಡದು.

ಪ್ರಸಕ್ತ ಸಾಲಿನ ಬಜೆಟ್ ಅಂಗೀಕಾರವಾಗುತ್ತಿದ್ದಂತೆ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುತ್ತೇನೆ, ನೀವು ಕ್ಷೇತ್ರಗಳ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ.

2,300 ಕೋಟಿ ರೂ. ಯೋಜನೆಗೆ ಅಸ್ತು

ಮತ್ತೊಂದೆಡೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಜೊತೆ ಜೊತೆಯಲ್ಲೇ ನಮ್ಮ ಗ್ಯಾರಂಟಿ ಕಾರ್ಯಕ್ರಮಗಳ ಬಗ್ಗೆ ಪ್ರಚಾರ ಮಾಡಲು ಆದ್ಯತೆ ಕೊಡಿ. ಗ್ಯಾರಂಟಿ ಫಲಾನುಭವಿಗಳ ಗುಂಪು ಸಭೆ ನಡೆಸಿ ಆ ಮತದಾರರನ್ನು ಪಕ್ಷಕ್ಕೆ ಹಿಡಿದಿಡುವ ಕೆಲಸ ಮಾಡಿ.

ಸಮಸ್ಯೆ ಪರಿಹರಿಸಲು ಅಧಿಕಾರಿಗಳನ್ನು ಸಂಪರ್ಕಿಸಿ

ಲೋಕಸಭಾ ಚುನಾವಣೆ ಮುಗಿಯುವರೆಗೂ ಬೆಂಗಳೂರಿನಲ್ಲಿ ನಿಮಗೆ ಯಾವುದೇ ಕೆಲಸ ಇರುವುದಿಲ್ಲ, ನಿಮ್ಮ ಕ್ಷೇತ್ರ ಇಲ್ಲವೆ ಜಿಲ್ಲೆಗೆ ಸಂಬಂಧಪಟ್ಟಂತೆ ಸಮಸ್ಯೆಗಳಿದ್ದರೆ ಅವುಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳಿ.

ಅದು ಸಾಧ್ಯವಾಗದಿದ್ದರೆ ನನ್ನ ಸಚಿವಾಲಯದ ಗಮನಕ್ಕೆ ತನ್ನಿ, ಕಾನೂನಾತ್ಮಕವಾಗಿದ್ದರೆ 24 ಗಂಟೆಗಳಲ್ಲಿ ಅಧಿಕಾರಿಗಳು ಬಗೆಹರಿಸಲಿದ್ದಾರೆ.

ಇನ್ನೇನಿದ್ದರೂ ಚುನಾವಣೆ ಅಷ್ಟೇ ನಮ್ಮ ಮುಂದಿರುವುದು, ನಾವು ಹೆಚ್ಚು ಸ್ಥಾನ ಪಡೆದಷ್ಟೂ ನಾವು, ನೀವು ಸರ್ಕಾರ ಬಲಿಷ್ಠಗೊಳ್ಳುತ್ತದೆ ಎಂದು ಕಿವಿಮಾತು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
get ready to loka sabha electionleave bengaluru-stay in your constituencyno work in bengaluru till loka sabha electionsiddaramaiah tells to congres mla's
1 FacebookTwitterPinterestEmail
KM Shivaraju

previous post
ಆಪರೇಷನ್ ಕಮಲ ಬೇಡ ಅಂದ್ರು ಮೋದಿ?
next post
ಡಿಕೆಶಿ VS ಹೆಚ್ ಡಿಕೆ ಫೈಟ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ