Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಡಿಕೆಶಿ VS ಹೆಚ್ ಡಿಕೆ ಫೈಟ್

by admin February 19, 2024
written by admin February 19, 2024 0 comments 2 minutes read
Share 2FacebookTwitterPinterestEmail
308

ರಾಜ್ಯಸಭೆ ಚುನಾವಣೆ ಗೆಲುವಿಗೆ ಹಲವು ತಂತ್ರಗಾರಿಕೆ

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕುದುರೆ ವ್ಯಾಪಾರದ ಸದ್ದು ಜೋರಾಗಿದೆ.

ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಪೇಂದ್ರ ರೆಡ್ಡಿ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಬಹಿರಂಗವಾಗೇ ವಾಗ್ವಾದಕ್ಕೆ ಇಳಿದಿದ್ದಾರೆ. ಉಭಯ ನಾಯಕರು ಕುದುರೆ ವ್ಯಾಪಾರದ ಬಗ್ಗೆ ಆರೋಪ-ಪ್ರತ್ಯಾರೋಪ ಮಾಡಿದ್ದಾರೆ.

ನಾಮಪತ್ರ ಹಿಂಪಡೆಯಲು ಫೆಬ್ರವರಿ 20 ಕಡೆಯ ದಿನವಾಗಿದೆ. ರೆಡ್ಡಿ ಕಣದಲ್ಲಿ ಉಳಿಯುವುದು ಖಚಿತವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರಲ್ಲಿ ತಲ್ಲಣ ಮೂಡಿದೆ.

ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯಾದ ರಾಜ್ಯಸಭೆ ಚುನಾವಣೆ

ಚುನಾವಣೆಯನ್ನು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಅದರಲ್ಲೂ ಆಡಳಿತಾರೂಢ ಪಕ್ಷಕ್ಕೆ ಮೂರು ಸ್ಥಾನಗಳು ನಿರಾಯಾಸವಾಗಿ ಗೆಲ್ಲುವ ಸಾಮರ್ಥ್ಯ ಇದ್ದರೂ ಆಪರೇಷನ್ ಬಿಜೆಪಿ-ಜೆಡಿಎಸ್ ಬಗ್ಗೆ ಸ್ವಲ್ಪ ಭಯ ಮೂಡಿದೆ.

ಇದಕ್ಕೆ ಪರ್ಯಾಯವಾಗಿ ಪ್ರತಿಪಕ್ಷದ ನಾಲ್ಕು ಸದಸ್ಯರ ಅಡ್ಡ ಮತದಾನ ಮಾಡಿಸಲು ಕೆಲವು ಸಚಿವರಿಗೆ ಹೊಣೆಗಾರಿಕೆ ವಹಿಸಲಾಗಿದೆ ಎನ್ನಲಾಗಿದೆ.

ಎಲ್ಲಿಯಾದರೂ ನಮ್ಮ ಮತಕ್ಕೆ ಪೆಟ್ಟು ಬಿದ್ದರೆ, ಹೆಚ್ಚುವರಿಯಾಗಿ ಬಿಜೆಪಿ ಮತ್ತು ಜೆಡಿಎಸ್‌ನಲ್ಲಿರುವ ಅತೃಪ್ತರನ್ನು ಸೆಳೆಯುವ ಪ್ರಯತ್ನ ಆರಂಭಗೊಂಡಿದೆ.

ಬೆಂಗಳೂರು ಬಿಡಿ: ಚುನಾವಣೆಗೆ ಸಿದ್ಧರಾಗಿ

ರೆಡ್ಡಿ ಗೆಲುವಿಗಾಗಿ ತೆರೆಮರೆಯಲ್ಲೇ ಭಾರೀ ತಂತ್ರಗಾರಿಕೆ ನಡೆದಿದ್ದು, ಇದರಲ್ಲಿ ದೆಹಲಿಯ ಕೆಲವು ನಾಯಕರು ಕೈಜೋಡಿಸಿದ್ದಾರೆ.

ಇದರ ಸುಳಿವು ದೊರೆಯುತ್ತಿದ್ದಂತೆ ಆಡಳಿತ ಪಕ್ಷದ ಸದಸ್ಯರೇ ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿ ತಿರುಗಿಬಿದ್ದಿದ್ದಾರೆ.

ದೇಹದ ತೂಕ ಇಳಿಸಲು ಸೂರ್ಯ ಮುದ್ರಾ

ರಾಜ್ಯಸಭಾ ಚುನಾವಣೆ ವಿಚಾರದಲ್ಲಿ ಆಡಳಿತ ಪಕ್ಷವೇ ಸ್ವಲ್ಪ ಅದುರಿದಂತೆ ಕಂಡಿದೆ. ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಆ ಪಕ್ಷದ ನಾಯಕರು ತಮ್ಮ ಮತಗಳು ಅಡ್ಡ ಮತದಾನವಾಗದಂತೆ ಜಾಗ್ರತೆ ವಹಿಸಿದ್ದಾರೆ. ಇದರ ಜೊತೆಗೆ ಬಿಜೆಪಿ-ಜೆಡಿಎಸ್ ವಿರುದ್ಧ ಹರಿಹಾಯುವ ಕೆಲಸವು ನಡೆದಿದೆ.

ಕಾಂಗ್ರೆಸ್ ತಂತ್ರಗಾರಿಕೆ ಮತ್ತು ಮುಖಂಡರುಗಳು ಮಾಡಿರುವ ಆರೋಪಗಳ ಬಗ್ಗೆ ಕುಮಾರಸ್ವಾಮಿ ದಾಖಲೆ ಸಮೇತ ಮಾಹಿತಿ ನೀಡಲಿದ್ದಾರಂತೆ.

ಕುಮಾರಸ್ವಾಮಿ ಮೇಲೆ ಧಮಕಿ ಹಾಕಿದ ಆರೋಪ

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮ್ಮ ಶಾಸಕರನ್ನು ಹೊತ್ತೊಯ್ಯಲು ಜೆಡಿಎಸ್ ನಾಯಕ ಕುಮಾರಸ್ವಾಮಿ ಧಮಕಿ ಹಾಕುವ ಮಟ್ಟಕ್ಕಿಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಸೀರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಮತ್ತು ಅಜಯ್ ಮಾಕೆನ್ ಅವರು ಕಣಕ್ಕಿಳಿದಿದ್ದು, ಬಿಜೆಪಿಯ ನಾರಾಯಣಸಾ ಭಾಂಡಗೆ ಮತ್ತು ಜೆಡಿಎಸ್ ಪಕ್ಷದಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.

ಕುಮಾರಸ್ವಾಮಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಸಲುವಾಗಿ ಕಾಂಗ್ರೆಸ್ ಪಕ್ಷದ ಶಾಸಕರ ಮೇಲೆ ಕಣ್ಣು ಹಾಕಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.

ಆಪರೇಷನ್ ಕಮಲ ಬೇಡ ಅಂದ್ರು ಮೋದಿ?

ನಮ್ಮ ಪಕ್ಷದ ಶಾಸಕರಿಗೆ ಕರೆ ಮಾಡಿ ಆಫರ್ ಕೊಡುತ್ತಿರುವ ಕುಮಾರಸ್ವಾಮಿ, ಧಮಕಿಯನ್ನೂ ಹಾಕುತ್ತಿರುವ ಕುರಿತು ನನಗೆ ಮಾಹಿತಿ ಬಂದಿದೆ. ಅವರು, ಯಾವ ಶಾಸಕರಿಗೆ ಆಫರ್ ಕೊಟ್ಟಿದ್ದಾರೆ ಯಾರಿಗೆ ಧಮಕಿ ಹಾಕುತ್ತಿದ್ದಾರೆ ಎಂಬ ಬಗ್ಗೆ ಸ್ವತಃ ಶಾಸಕರೇ ತಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಸ್ಪಷ್ಟ ಪಡಿಸಿದರು.

ನಮ್ಮ ಪಕ್ಷದ ಶಾಸಕರ ಮೇಲೆ ಕಣ್ಣು ಹಾಕುವ ಬದಲು, ಕುಮಾರಸ್ವಾಮಿ ಅವರು ಮೊದಲು ತಮ್ಮ ಮನೆಯನ್ನು ಸರಿಪಡಿಸಿಕೊಳ್ಳಲಿ ಎಂದರಲ್ಲದೆ, ಈ ವಿಷಯದಲ್ಲಿ ನಾನು ಸದ್ಯ ಹೆಚ್ಚು ಮಾತನಾಡುವುದಿಲ್ಲ ಎಂದು ನುಡಿದರು.

ವಿರೋಧ ಪಕ್ಷಗಳು ನಿಮ್ಮ ಮತಗಳಿಗೆ ಕೈ ಹಾಕುತ್ತಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಐದನೇ ಅಭ್ಯರ್ಥಿಯನ್ನು ಹಾಕಿ ಅವರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ನಮಗೆ ಬೇರೆಯವರ ಮತಗಳ ಅಗತ್ಯವಿಲ್ಲ. ನಾವು ಗೆದ್ದಿರುವ ನೂರಾ ಮೂವತ್ತಾರು ಶಾಸಕರ ಜತೆ ಪಕ್ಷೇತರರೂ ನಮ್ಮ ಜತೆಗಿದ್ದಾರೆ ಎಂದರು.

2,300 ಕೋಟಿ ರೂ. ಯೋಜನೆಗೆ ಅಸ್ತು

ಕುಮಾರಸ್ವಾಮಿ ಅವರ ಪ್ರಯತ್ನದ ಬಗ್ಗೆ ಅನಿವಾರ್ಯವಾದರೆ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ತಿಳಿಸಿದ ಅವರು, ಯಾವ ಕಾರಣಕ್ಕೂ ನಮ್ಮ ಮನೆ ಹಾಳಾಗಲು ಬಿಡುವುದಿಲ್ಲ ಎಂದು ಹೇಳಿದರು.

Share this:

  • WhatsApp
  • Post
  • Tweet
  • Print
  • Email
bjpcongressdkselectionsFIGHThdkjdsManyRajya Sabhastrategiesvictory
Share 2 FacebookTwitterPinterestEmail
admin

previous post
ಬೆಂಗಳೂರು ಬಿಡಿ: ಚುನಾವಣೆಗೆ ಸಿದ್ಧರಾಗಿ
next post
ದಿನ ಭವಿಷ್ಯ : ಮಂಗಳವಾರ, 20 ಫೆಬ್ರವರಿ 2024

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ