Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ

by admin February 20, 2024
written by admin February 20, 2024 0 comments 2 minutes read
1FacebookTwitterPinterestEmail
460

ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ರಾಜ್ಯ ಸರ್ಕಾರ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.

ರಾಜ್ಯಪಾಲರ ಭಾಷಣದ ವಂದನಾ ಮೇಲಿನ ಚರ್ಚೆಗೆ ಉತ್ತರಿಸಿ, ಬಿಜೆಪಿ, ಕೇಂದ್ರ ಹಾಗೂ ಮೋದಿ ಅವರನ್ನು ತಮ್ಮ ಭಾಷಣದುದ್ದಕ್ಕೂ ತರಾಟೆಗೆ ತೆಗೆದುಕೊಂಡರು.

ಮೋದಿ ಸರ್ಕಾರ ರೈತರ, ದಲಿತರ, ಬಡವರ, ಅಲ್ಪಸಂಖ್ಯಾತರ, ಮಹಿಳೆಯರ, ಕಾರ್ಮಿಕರ, ಸಂವಿಧಾನ ವಿರೋಧಿಯಾಗಿದೆ ಎಂದರು ಆರೋಪಿಸಿದರು.

ಪತ್ರಗಳಿಗೆ ಸ್ಪಂದನೆಯೇ ಇಲ್ಲ

ರಾಜ್ಯದ ಬಹುತೇಕ ಭಾಗ ಬರಕ್ಕೆ ಸಿಲುಕಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ಒಂದು ಪೈಸೆ ನೀಡಿಲ್ಲ, ಈ ಸಂಬಂಧ ಕೇಂದ್ರ ಸಚಿವರನ್ನು ಎರಡು ಬಾರಿ ಭೇಟಿ ಮಾಡಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ, ನಮ್ಮ ಪತ್ರಗಳಿಗೆ ಅವರಿಂದ ಸ್ಪಂದನೆಯೇ ಇಲ್ಲ.

ಇಂತಹ ಸರ್ಕಾರವನ್ನು ಏನೆಂದು ಕರೆಯಲು ಸಾಧ್ಯ, ಜನರಿಗೆ ಸಂವಿಧಾನದ ಜಾಗೃತಿ ಮೂಡಿಸಿ, ಕೆಲವರ ಕೊಳಕುತನವನ್ನು ಬಹಿರಂಗ ಮಾಡಲು ಜಾಗೃತಿ ಯಾತ್ರೆ ಆರಂಭಿಸಿದ್ದೇವೆ ಎಂದರು.

ನಾವು ಮನು ವಾದದಲ್ಲಿ ನಂಬಿಕೆ ಇಟ್ಟಿಲ್ಲ, ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವವರು, ಸರ್ವ ಜನಾಂಗದ ಶಾಂತಿಯ ತೋಟ ಎಂಬ ಮಾತಲ್ಲಿ ನಾವು ನಂಬಿಕೆ ಇರಿಸಿದ್ದೇವೆ. ಆದ್ದರಿಂದ ಎಲ್ಲಾ ವರ್ಗಗಳಿಗೆ ಶಕ್ತಿ ನೀಡಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.

77 ಸಾವಿರ ಕೋಟಿ ರೂ. ಹೂಡಿಕೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ರೂ. ಹೂಡಿಕೆ ಬಂದಿರುವುದೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮವಾಗಿರುವುದಕ್ಕೆ ಸಾಕ್ಷಿ ಎಂದರು.

ಬಿಜೆಪಿ ಎಂದರೆ ಸುಳ್ಳು, ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು, ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ.

ರಾಜ್ಯದಲ್ಲಿ ಇವತ್ತಿನವರೆಗೂ ಬಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದೇ ಇಲ್ಲ, ಹಿಂಬಾಗಿಲಲ್ಲಿ ಅಧಿಕಾರಕ್ಕೆ ಬಂದಿದ್ದಾರೆ, ಬಿಜೆಪಿಯಿಂದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಸದಾನಂದಗೌಡ ಮುಖ್ಯಮಂತ್ರಿ ಆದರು, ಇವರ‍್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ, ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ಇತರ ಪಕ್ಷದ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು.

ನಾವು 2013 ಹಾಗೂ 2023ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ, ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ ಎಂದರು.

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಅನುದಾನ ಕೇಳುವುದು ಸಂಘರ್ಷ ಅಲ್ಲ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರದ ಜತೆ ಸಂಘರ್ಷಕ್ಕೆ ಇಳಿಯಬಾರದು ಎಂದಿದ್ದಾರೆ, ನಾವು ಸಂಘರ್ಷಕ್ಕೆ ಇಳಿದಿಲ್ಲ, ರಾಜ್ಯದ ಪಾಲಿನ ಸಂವಿಧಾನಬದ್ಧ ಹಕ್ಕು, ಅನುದಾನ ಕೇಳುವುದು ಸಂಘರ್ಷ ಆಗುವುದಿಲ್ಲ.

ರಾಜ್ಯದಲ್ಲಿ ತೀವ್ರ ಬರಗಾಲವಿದೆ, ಪರಿಹಾರ ಕೋರಿ ಕೇಂದ್ರಕ್ಕೆ 17 ಬಾರಿ ಬರೆದೆವು, ಒಂದು ಪತ್ರಕ್ಕೆ ಮಾತ್ರ, “ನಿಮ್ಮ ಪತ್ರ ತಲುಪಿದೆ” ಎನ್ನುವ ಉತ್ತರ ಕೇಂದ್ರದಿಂದ ಬಂತು, ಉಳಿದ ಪತ್ರಗಳಿಗೆ ಉತ್ತರವೂ ಬರಲಿಲ್ಲ, ಇವತ್ತಿನವರೆಗೂ ಒಂದು ಪೈಸೆಯೂ ಅನುದಾನ ಬಂದಿಲ್ಲ, ರಾಜ್ಯದ ಪಾಲನ್ನು ಕೇಳುವುದು ತಪ್ಪಾ, ಇದು ಸಂಘರ್ಷ ಹೇಗಾಗುತ್ತದೆ ಎಂದು ಪ್ರಶ್ನಿಸಿದರು.

ಬರಗಾಲ ಹಿನ್ನೆಲೆಯಲ್ಲಿ ನರೇಗ ಮಾನವ ದಿನಗಳನ್ನು 100 ರಿಂದ 150 ದಿನಗಳಿಗೆ ಏರಿಕೆ ಮಾಡಬೇಕಿತ್ತು, ಪದೇ ಪದೇ ಮನವಿ ಮಾಡಿದರೂ ಏರಿಕೆ ಮಾಡಲೇ ಇಲ್ಲ, ಇದು ರಾಜ್ಯದ ಜನರಿಗೆ ಮಾಡಿದ ಅನ್ಯಾಯವಲ್ಲವೇ ಎಂದರು.

ಕೋಟಿ-ಕೋಟಿ ಫಲಾನುಭವಿಗಳು

ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳಿಂದ ಕೋಟಿ, ಕೋಟಿ ಫಲಾನುಭವಿಗಳು ಅನುಕೂಲ ಪಡೆಯುತ್ತಿದ್ದಾರೆ, ಪ್ರತಿ ಕೆಜಿಗೆ ೩೪ ರೂ. ಕೊಡುತ್ತೇವೆ ಎಂದರೂ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ.

ಈಗ 29 ರೂ.ಗೆ ಕೆಜಿ ಅಕ್ಕಿ ಕೊಡುವುದಾಗಿ ಹೇಳುತ್ತಿದ್ದಾರೆ, ಈಗಲೂ ನಮಗೆ ಅದೇ ಬೆಲೆಗೆ ಅಕ್ಕಿ ಕೊಡಿಸಿ, ಕೇಂದ್ರದಿಂದ ಖರೀದಿಸಿ ಜನರಿಗೆ ಕೊಡಲು ಸಿದ್ಧರಿದ್ದೇವೆ, ಕೇಂದ್ರದ ಜತೆ ಮಾತನಾಡಿ ಅಕ್ಕಿ ಕೊಡಿಸಿ ಎಂದು ಬಿಜೆಪಿ ಸದಸ್ಯರಿಗೆ ಮುಖ್ಯಮಂತ್ರಿ ಸವಾಲು ಹಾಕಿದರು.

ಬಿಜೆಪಿಯವರು ಎಂದಾದರೂ ಜಿಲ್ಲೆ, ತಾಲ್ಲೂಕುಗಳಲ್ಲಿರುವ ಹಿಂದುಳಿದ ವರ್ಗಗಳ, ಎಸ್‌ಸಿ, ಎಸ್‌ಟಿ ಹಾಸ್ಟೆಲ್‌ಗಳಿಗೆ ಭೇಟಿ ನೀಡಿದ್ದಾರಾ, ಈ ಸಮುದಾಯದ ವಿದ್ಯಾರ್ಥಿಗಳ ಕಷ್ಟಗಳನ್ನು ಕೇಳಿದ್ದಾರಾ, ಅವರ ಸಂಕಷ್ಟಗಳಿಗೆ ಸ್ಪಂದಿಸಿದ್ದಾರಾ ಎಂದು ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central govt. not responding to the state's requestscrores of benificiariesguarenty scheemsSiddaramaiahstate budget
1 FacebookTwitterPinterestEmail
admin

previous post
ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ
next post
ಡಾ. ಮಂಜುನಾಥ್ ವಿರುದ್ಧ ತನಿಖಾಸ್ತ್ರ?

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ