Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯ

ಉದ್ಯೋಗ ಮೇಳದಲ್ಲಿ  9,651 ಮಂದಿಗೆ ನೇರ ಉದ್ಯೋಗ

by admin February 28, 2024
written by admin February 28, 2024 0 comments 2 minutes read
2FacebookTwitterPinterestEmail
465
ಕೇರಳ  ಮಾದರಿಯಲ್ಲಿ ಸಾಗರೋತ್ತರ ಕಂಪನಿ ಪ್ರಾರಂಭ

ಬೆಂಗಳೂರು: ರಾಜಧಾನಿ ಬೆಂಗಳೂರು ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನಡೆದ ಯುವ ಸಮೃದ್ಧಿ ಸಮ್ಮೇಳನದಲ್ಲಿ ಸುಮಾರು 9,651 ಉದ್ಯೋಗ ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ಬರೆದಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.

ಯುವ ಸಮೃದ್ಧಿ ಸಮ್ಮೇಳನದ ಕುರಿತಂತೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು 53,913 ಪುರುಷರು, 32,494 ಮಹಿಳೆಯರು, ಇತರೆ 42 ಸೇರಿಂದತೆ ಒಟ್ಟು ಆನ್‍ಲೈನ್ ಮೂಲಕ 86,451 ಅಭ್ಯರ್ಥಿಗಳು ಹೆಸರನ್ನು ನೋಂದಣಿ ಮಾಡಿಕೊಂಡಿದ್ದರು.  ಸಮ್ಮೇಳನಕ್ಕೆ 44527 ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಶೈಕ್ಷಣಿಕ ಅರ್ಹತೆಗನುಗುಣವಾಗಿ ಒಟ್ಟು 9,651  ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ನೀಡಿದ್ದೇವೆ  ಎಂದು ಮಾಹಿತಿ ನೀಡಿದರು.

16,865 ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. 2,457 ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ತಿರಸ್ಕರಿಸಲಾಗಿದೆ. 15,461 ಅಭ್ಯರ್ಥಿಗಳು ಸಂದರ್ಶನಕ್ಕೊಳಗಾಗಿದ್ದರು. ಅಭ್ಯರ್ಥಿಗಳ ಪೂರ್ಣ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇವರಿಗೂ ಕೂಡ ಉದ್ಯೋಗ ನೀಡಲಾಗುತ್ತದೆ. ಒಟ್ಟಾರೆ ಎರಡು ದಿನ ನಡೆದ ಸಮ್ಮೇಳನ ನಮ್ಮ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎಂದರು.

ಸಮ್ಮೇಳನದಲ್ಲಿ ವೈಮಾನಿಕ  ಮತ್ತು ನಾಗರಿಕ ವಲಯದಿಂದ 26,  ಕೃಷಿ 6, ಉಡುಪು ವಲಯ 6, ಆಟೋಮೆಟಿವ್ 74, ಸೌಂದರ್ಯ ವಲಯ 3, ಆರೋಗ್ಯ ಕ್ಷೇತ್ರ 27, ಎಲೆಕ್ಟ್ರಾನಿಕ್ ವಲಯ 29, ಜವಳಿ 1, ಟೆಲಿಕಾಂ 19, ಸೇವಾ ವಲಯ 36, ಮೂಲಭೂತ ಉಪಕರಣಗಳ ವಲಯ 1 ಸೇರಿದಂತೆ ವಿವಿಧ ವಲಯಗಳಲ್ಲಿ ಉದ್ಯೋಗ ನೀಡಲಾಗಿದೆ ಎಂದು ಅವರು ತಿಳಿಸಿದರು.

ವಿಭಾಗವಾರು ಮೇಳ

ಮೊದಲ  ಹಂತದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಯಶಸ್ವಿ ಯುವ ಸಮೃದ್ಧಿ ಸಮ್ಮೇಳನ  ನಡೆದಿರುವ ಹಿನ್ನಲೆಯಲ್ಲಿ ಇನ್ನು ಮುಂದೆ ರಾಜ್ಯದ ಮೂರು ಪ್ರಮುಖ ವಿಭಾಗಗಳಲ್ಲಿ ಯುವ ಸಮೃದ್ಧಿ ಸಮ್ಮೇಳನ ನಡೆಸಲಾಗುವುದು ಎಂದು ಸಚಿವರು ಹೇಳಿದರು.

ಕಲಬುರಗಿ, ಬೆಳಗಾವಿ ಮತ್ತು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ನಡೆಸಲಾಗುವುದು. ಇದಕ್ಕಾಗಿ ಈಗಾಗಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ. ವಿಭಾಗವಾರು ಉದ್ಯೋಗ ಮೇಳ ನಡೆಸುವ ಮಾದರಿಯಂತೆ ರಾಜ್ಯದ ಎರಡು ಕಡೆ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ  ಕೇಂದ್ರ ಪ್ರಾರಂಭಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಹಾಗೂ ಮೈಸೂರಿನಲ್ಲಿ ಈ ಎರಡು ತರಬೇತಿ ಕೇಂದ್ರಗಳು ಪ್ರಾರಂಭವಾಗಲಿವೆ. ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಸುಮಾರು 25 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ. ಈಗಾಗಲೇ ಇದಕ್ಕೆ ಇಲಾಖೆ ವತಿಯಿಂದ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಾಟೀಲ್ ಹೇಳಿದರು.

ಸಾಗರೋತ್ತರ ಕಂಪನಿ ಪ್ರಾರಂಭ

ವಿದೇಶಿ ಕಂಪನಿಗಳಿಗೆ ಬೇಕಾದ ಮಾನವ ಸಂಪನ್ಮೂಲ ಒದಗಿಸಿಕೊಡಲು ಅನುಕೂಲವಾಗುವಂತೆ ರಾಜ್ಯ  ಸರ್ಕಾರವು ಕೇರಳ ಮಾದರಿಯಲ್ಲಿ ಸಾಗರೋತ್ತರ ಕಂಪನಿ ಪ್ರಾರಂಭಿಸಲಿದೆ ಎಂದು ಸಚಿವರು ಪ್ರಕಟಿಸಿದರು.

ಕೇರಳದಲ್ಲಿ ಈಗಾಗಲೇ ಸಾಗರೋತ್ತರ ಕಂಪನಿ ರಚನೆ ಮಾಡಲಾಗಿದೆ. ಇದೇ ಮಾದರಿಯನ್ನು ಇಟ್ಟುಕೊಂಡು ಕರ್ನಾಟಕದಲ್ಲೂ ಪ್ರಾರಂಭ ಮಾಡುತ್ತೇವೆ. ಎಂಜಿನಿಯರಿಂಗ್, ಡಿಪ್ಲಮೊ, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಸಾಗರೋತ್ತರ ಕಂಪನಿಗಳ ಮೂಲಕ ಮಾಹಿತಿ ಕೊಡಲಾಗುವುದು. ಈಗಾಗಲೇ 49 ಕಂಪನಿಗಳು ಮುಂದೆ ಬಂದಿವೆ ಎಂದು ತಿಳಿಸಿದರು.

ಐಬಿಎಂ ಕಂಪನಿಯವರೇ 5 ಲಕ್ಷ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ನೀಡಲು ಮುಂದೆ ಬಂದಿದ್ದಾರೆ. ಸಾಗರೋತ್ತರ ಕಂಪನಿಯು ಸಂವಹನ ಮಾಧ್ಯಮವಾಗಿ ರಾಜ್ಯದಲ್ಲಿ ಲಭ್ಯವಿರುವ ಮಾನವ ಸಂಪನ್ಮೂಲಗಳ ಬಗ್ಗೆ ಮಾಹಿತಿ ನೀಡಲಿದೆ. ಇದರಿಂದ ಉದ್ಯೋಗ ಆಕಾಂಕ್ಷಿಗಳು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಅಲೆಯುವುದು ತಪ್ಪುತ್ತದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
9651 YOUTHSACROSS KARNATAKAbengaluruDIRECTLY RECRUITEDGOVT PLANSMEGA JOB FAIRSAMRUDDHI SAMMELANASharan Prakash Patilsuccess
2 FacebookTwitterPinterestEmail
admin

previous post
ಕರ್ನಾಟಕ ವಿಧಾನಮಂಡಲ ನುಂಗಿದ ಪಾಕ್!
next post
ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿಸಿಟಿವಿ ಕಣ್ಗಾವಲು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ