Sunday, April 26, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, April 26, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬೆಂಗಳೂರು ಸ್ಫೋಟಕ್ಕೆ ಮಂಗಳೂರು ಕುಕ್ಕರ್ ಬಾಂಬ್ ಲಿಂಕ್

by admin March 2, 2024
written by admin March 2, 2024 0 comments 2 minutes read
2FacebookTwitterPinterestEmail
150

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ

ಬೆಂಗಳೂರು:ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿಗಳೇ ಬೆಂಗಳೂರು ನಗರದ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಸ್ಫೋಟ ನಡೆಸಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.

ವಿಶ್ವಮಟ್ಟದಲ್ಲಿ ಐಟಿ ಕಾರಿಡಾರ್ ಎಂದು ಗುರುತಿಸಲ್ಪಟ್ಟಿರುವ ನಗರದ ವೈಟ್‌ಫೀಲ್ಡ್‌ನ ಜನದಟ್ಟಣೆ ಪ್ರದೇಶವೇ ಸುಕ್ಷಿತವಾಗಿಲ್ಲ ಎಂಬುದನ್ನು ಜಾಗತಿಕ ಮಟ್ಟದಲ್ಲಿ ತೋರ್ಪಡಿಸಲು ಇಂತಹ ಯತ್ನ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಪುಡಿ ಸಂಘಟನೆಗಳ ಕೃತ್ಯ

ಭಯೋತ್ಪಾದನಾ ಸಂಘಟನೆಗಳಿಂದ ಪ್ರಚೋದಿತಗೊಂಡ ಕೆಲವು ಪುಡಿ ಸಂಘಟನೆಗಳು ಈ ಕೃತ್ಯದಲ್ಲಿ ಭಾಗಿಯಾಗಿವೆ.

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬುದನ್ನು ಸಹಿಸಲಾಗದೆ, ಅಲ್ಲದೆ, ಆಡಳಿತ ಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ, ಸಾರ್ವಜನಿಕರು ಅತ್ತ ಗಮನ ಹರಿಸಿರುವ ಸಂದರ್ಭದಲ್ಲಿ ವಿಶ್ವಮಟ್ಟದ ಗಮನ ಸೆಳೆಯುವ ಕೃತ್ಯ ಇದಾಗಿದೆ ಎಂದು ಶಂಕಿಸಲಾಗಿದೆ.

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಬಳಸಿದ ಸಾಧನಗಳನ್ನೇ ಇಲ್ಲೂ ಬಳಸಲಾಗಿದೆ, ಹೀಗಾಗಿ ಈ ವ್ಯಕ್ತಿ ಕರಾವಳಿಯವನಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಹೋಟೆಲ್‌ನಲ್ಲಿ ಸ್ಫೋಟಕ ತುಂಬಿದ ಬ್ಯಾಗ್ ಅನ್ನು ನೇರವಾಗಿ ಇಡದೆ ಅಡ್ಡಾದಿಡ್ಡಿಯಾಗಿ ಇಟ್ಟಿದ್ದರೆ 20 ರಿಂದ 30 ಜನರು ಪ್ರಾಣ ಕಳೆದುಕೊಳ್ಳುತ್ತಿದ್ದರು.

ದೊಡ್ಡ ಅಪಾಯ ತಪ್ಪಿದೆ

ನೇರವಾಗಿ ಇಟ್ಟಿದ್ದರಿಂದ ಅದು ಮೇಲಕ್ಕೆ ಚಿಮ್ಮಿ ಹೋಟೆಲ್‌ನ ಮಾಲ್ಛಾವಣೆ ಕಿತ್ತುಹೋಗಿದ್ದು, ಕೆಲವರಿಗೆ ಗಾಯಗಳಾಗಿ, ದೊಡ್ಡ ಅಪಾಯ ತಪ್ಪಿದೆ.

ನಗರ ಸಾರಿಗೆ ಬಸ್‌ನಲ್ಲಿ ಐಟಿ ಕಾರಿಡಾರ್ ಪ್ರದೇಶಕ್ಕೆ ಧಾವಿಸಿದ ಯುವಕ, ಮಧ್ಯಾಹ್ನ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗಿಗಳು ಊಟಕ್ಕೆ ಸೇರುವ ಮತ್ತು ಜನನಿಬಿಡ ಪ್ರದೇಶವನ್ನು ಆಯ್ಕೆ ಮಾಡಿಕೊಂಡು ಈ ಸ್ಫೋಟಕ ಇಟ್ಟಿದ್ದಾನೆ.

ಇಡ್ಲಿಗಾಗಿ ಟೋಕನ್ ಪಡೆದು ಒಂದು ತಾಸು ಅಲ್ಲಿಯೇ ಕಳೆದು, ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿದ ನಂತರ ತಿಂಡಿ ತಿಂದು, ತಾನು ತಂದಿದ್ದ ಸ್ಫೋಟಕ ವಸ್ತುವನ್ನು ಕಟ್ಟೆ ಮೇಲಿಟ್ಟು ತೆರಳಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸ್ಥಳ ಪರಿಶೀಲನೆ ಮತ್ತು ಗಾಯಾಳುಗಳ ಕ್ಷೇಮ ವಿಚಾರಿಸಿದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದಿದ್ದಲ್ಲದೆ, ಮುಂದಿನ ದಿನಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೋಚಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಹಾಳು ಮಾಡುವ ಯತ್ನ

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಿಡಿಗೇಡಿಗಳು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಪ್ರಯತ್ನಿಸುತ್ತಾರೆ ಎಚ್ಚರವಿರಲಿ.

ಜನನಿಬಿಡ ಪ್ರದೇಶ, ಪ್ರವಾಸಿ ಕೇಂದ್ರ, ಅಣೆಕಟ್ಟುಗಳ ಸುರಕ್ಷತೆ, ಆಸ್ಪತ್ರೆ, ಸರ್ಕಾರಿ ಕಚೇರಿ, ರೈಲು ಮತ್ತು ಬಸ್ ನಿಲ್ದಾಣಗಳಲ್ಲಿ ಅತ್ಯಂತ ಸೂಕ್ಷ್ಮವಾಗಿ ಗಮನಿಸಬೇಕು ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದಿದ್ದಾರೆ.

ಬಾಂಬ್ ಸ್ಫೋಟ ಮಾಡಿದ ವ್ಯಕ್ತಿ ಮತ್ತು ಗುಂಪನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸವನ್ನು ಪೊಲೀಸರು ಮುಖ್ಯಮಂತ್ರಿ ಅವರಿಗೆ ನೀಡಿದ್ದು, ಎನ್‌ಐಎಗೆ ವಹಿಸುವುದು ಬೇಡ ಎಂದಿದ್ದಾರೆ.
ರಾಜ್ಯಸಭಾ ಚುನಾವಣಾ ಫಲಿತಾಂಶದ ನಂತರ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಘಟನೆಯ ತನಿಖಾ ವಿವರವನ್ನೂ ಪೊಲೀಸರು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದಾರೆ.

750 ಕೃಷಿ ಅಧಿಕಾರಿಗಳ ಹುದ್ದೆ ಭರ್ತಿ

ವಿಧಾನಸೌಧ ಮತ್ತು ಅದರ ಸುತ್ತಮುತ್ತಲ ಸುರಕ್ಷತಾ ಹೊಣೆ ಹೊತ್ತಿರುವ ಪೊಲೀಸ್ ಅಧಿಕಾರಿಯನ್ನು ಮುಖ್ಯಮಂತ್ರಿ ಅವರು ಸಭೆಯಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ಬಾಂಬ್ ಸ್ಫೋಟಗೊಂಡ ರಾಮೇಶ್ವರ ಕೆಫೆಗೆ ತೆರಳಿ ಪರಿಶೀಲನೆ ನಡೆಸಿದ್ದೇನೆ, ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದರು.

ವ್ಯಕ್ತಿ ಪತ್ತೆಹಚ್ಚಿ ಬಂಧನ ವಿಶ್ವಾಸ

ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ, ಆದಷ್ಟು ಬೇಗ ಕೃತ್ಯ ಎಸಗಿದ ವ್ಯಕ್ತಿಯನ್ನು ಪತ್ತೆಹಚ್ಚಿ ಬಂಧಿಸಲಾಗುವುದು.

ಘಟನೆಯಲ್ಲಿ ಗಾಯಗೊಂಡಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಬಿಜೆಪಿ ನಾಯಕರು ಸಾವು – ನೋವಿನಲ್ಲೂ ರಾಜಕಾರಣ ಮಾಡುತ್ತಿದ್ದಾರೆ, ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಸಂಭವಿಸಿದ್ದು ಬಿಜೆಪಿ ಕಾಲದಲ್ಲಿ ಅಲ್ಲವೇ, ಆಗಲೂ ತುಷ್ಟೀಕರಣದಿಂದಾಗಿ ಸ್ಪೋಟ ನಡೆದಿತ್ತೆ ಎಂದು ತಮ್ಮನ್ನು ಪ್ರಶ್ನಿಸಿದ ಮಾಧ್ಯಮಗಳಿಗೆ ಮರು ಪ್ರಶ್ನೆ ಹಾಕಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm - rameshwaram cafe blast site visitculprit will be nabbed soonmeeting with police officerstake strict measures all over the state - cm tells police officers
2 FacebookTwitterPinterestEmail
admin

previous post
750 ಕೃಷಿ ಅಧಿಕಾರಿಗಳ ಹುದ್ದೆ ಭರ್ತಿ
next post
ದಿನ ಭವಿಷ್ಯ : ಭಾನುವಾರ, 3 ಮಾರ್ಚ್ 2024

You may also like

ಅಧಿಕಾರ ಹಂಚಿಕೆ: ಹೈಕಮಾಂಡ್‌ಗೆ ಡಿಕೆಶಿ ಗಡುವು

April 25, 2026

ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

April 24, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (445)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,939)
  • ರಾಜ್ಯ (2,254)
  • ರಾಷ್ಟ್ರ (2,224)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ಹಂಚಿಕೆ: ಹೈಕಮಾಂಡ್‌ಗೆ ಡಿಕೆಶಿ ಗಡುವು

    April 25, 2026
  • ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

    April 24, 2026
  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026

KMS Special

  • ಅಧಿಕಾರ ಹಂಚಿಕೆ: ಹೈಕಮಾಂಡ್‌ಗೆ ಡಿಕೆಶಿ ಗಡುವು

    April 25, 2026
  • ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

    April 24, 2026
  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ಹಂಚಿಕೆ: ಹೈಕಮಾಂಡ್‌ಗೆ ಡಿಕೆಶಿ ಗಡುವು

April 25, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ