Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕ ಕಾಂಗ್ರೆಸ್ ಕುಟುಂಬದ ಎಟಿಎಂ ಪ್ರಧಾನಿ ಆರೋಪ

by admin March 16, 2024
written by admin March 16, 2024 0 comments 2 minutes read
0FacebookTwitterPinterestEmail
160
ಕಾಂಗ್ರೆಸ್ ಖಾತೆ ತೆರೆಯಲು ಅವಕಾಶವಿಲ್ಲ ಎಂಬ ಗ್ಯಾರಂಟಿ ಕೊಡಿ

ಬೆಂಗಳೂರು: ಕರ್ನಾಟಕವನ್ನು ಕಾಂಗ್ರೆಸ್ ಲೂಟಿಯಿಂದ ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿದರು.

ಕಲಬುರ್ಗಿಯ ಎನ್.ವಿ.ಆಟದ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ಕರ್ನಾಟಕದ ಬಿಜೆಪಿಯ ಪ್ರತಿಯೊಬ್ಬ ಅಭ್ಯರ್ಥಿಯನ್ನು ಗೆಲ್ಲಿಸಿಕೊಡುವ ಮತ್ತು ಕಾಂಗ್ರೆಸ್ ಖಾತೆ ತೆರೆಯಲು ಅವಕಾಶ ಕೊಡುವುದಿಲ್ಲ ಎಂಬ ಗ್ಯಾರಂಟಿ ಕೊಡಲು ಕಮಲದ ಚಿಹ್ನೆಗೆ ಮತ ಕೊಡಿ ಎಂದು ಕೋರಿದರು.

ಕರ್ನಾಟಕವನ್ನು ಕಾಂಗ್ರೆಸ್ ಕುಟುಂಬದ ಎಟಿಎಂ ಮಾಡಿಕೊಂಡಿದ್ದಾರೆ. ಇಂಡಿ ಒಕ್ಕೂಟ ಮತ್ತು ಕಾಂಗ್ರೆಸ್‍ನ ಮುಖಂಡರು ಕೂಡ ಅಬ್ ಕೀ ಬಾರ್ ಮೋದಿ ಸರಕಾರ್ ಎಂದು ಹೇಳುತ್ತಿದ್ದಾರೆ. ಈ ಬಾರಿ ಜನಾದೇಶ ಬಿಜೆಪಿ ಪರವಾಗಿ ಇರಲಿ ಎಂದು ಅವರು ವಿನಂತಿಸಿದರು.

ಬಿಜೆಪಿಯ ಕೇಂದ್ರ ಸರ್ಕಾರವು ಕರ್ನಾಟಕದ ಅಭಿವೃದ್ಧಿಗೆ ಸದಾ ಶ್ರಮಿಸಿದೆ. ನಾವು ಅನುಭವ ಮಂಟಪದ ಪ್ರೇರಣೆ ಪಡೆದಿದ್ದೇವೆ ಎಂದ ಅವರು, ಕರ್ನಾಟಕದ ಗೌರವ ಮತ್ತು ಹೆಮ್ಮೆ ಹೆಚ್ಚಿಸಲು ಶ್ರಮಿಸಿದ್ದೇವೆ. ಕಾಂಗ್ರೆಸ್ಸಿಗರು ಈ ದೇಶದ ಪರಂಪರೆಗೆ ಅಗೌರವ ಸೂಚಿಸುತ್ತಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಮತ್ತು ಅದರ ಮುಖಂಡರು ಎಷ್ಟೇ ಉಡುಪು ಬದಲಿಸಿದರೂ ಅದರ ಮೂಲಗುಣ ಬದಲಾಗುವುದಿಲ್ಲ. ಕರ್ನಾಟಕದ ಜನರಲ್ಲಿ ಕಾಂಗ್ರೆಸ್ ಬಗ್ಗೆ ಆಕ್ರೋಶವಿದೆ. ಕಾಂಗ್ರೆಸ್ಸಿನ ಇಷ್ಟು ಕಡಿಮೆ ಸಮಯದಲ್ಲಿ ಜನರು ವಿಶ್ವಾಸ ಕಳಕೊಂಡಿದೆ ಎಂದು ನುಡಿದರು.

ಭ್ರಷ್ಟಾಚಾರ ಇಲ್ಲದೆ ಕಾಂಗ್ರೆಸ್ಸಿಗರು ಶ್ವಾಸೋಚ್ವಾಸ ಮಾಡುವುದಿಲ್ಲ. ಇಲ್ಲಿ ಅರಾಜಕತೆ ಹೆಚ್ಚಾಗಿದೆ. ಕಾಂಗ್ರೆಸ್ ಚುನಾವಣೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸುತ್ತಿಲ್ಲ ಎಂದು ಆಕ್ಷೇಪಿಸಿದ ಅವರು, ಉಚಿತ ವಿದ್ಯುತ್ ಬದಲು ಕತ್ತಲೆಯ ಬದುಕು ಜನರದಾಗಿದೆ. ಪಂಪ್ ಚಾಲೂ ಆಗುತ್ತಿಲ್ಲ. ಮೋದಿ ಸರ್ಕಾರವು 50 ಲಕ್ಷಕ್ಕೂ ಹೆಚ್ಚು ಜನರಿಗೆ ಕಿಸಾನ್ ಸಮ್ಮಾನ್ ಮೂಲಕ ವರದಾನವಾಗಿದೆ.

ಲೋಕಸಭೆ ಚುನಾವಣೆ ಧರ್ಮ ಯುದ್ಧ: ಡಾ. ಮಂಜುನಾಥ್

ಜಗದ್ಗುರು ಬಸವೇಶ್ವರ ಅವರ ನಾಡು, ಶಿವಶರಣರ ಬೀಡು, ಕಲಬುರ್ಗಿಯ ಜನತೆಗೆ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತನ್ನು ಆರಂಭಿಸಿದರು. ಕರ್ನಾಟಕವು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದಾಖಲೆ ಸೀಟು ನೀಡುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

ಕಳೆದ 2 ದಿನಗಳಿಂದ ಭಾರತದ ದಕ್ಷಿಣ ಭಾಗದಲ್ಲಿ ಸುತ್ತಾಡಿದ್ದೇನೆ. ಅದಕ್ಕಿಂತ ಮೊದಲು ಶ್ರೀನಗರಕ್ಕೆ ತೆರಳಿದ್ದೆ. 1988ರ ಬಳಿಕ ಶ್ರೀನಗರದಲ್ಲಿ ಇಷ್ಟು ದೊಡ್ಡ ರಾಜಕೀಯ ರ್ಯಾಲಿ ನಡೆದಿಲ್ಲ ಎಂದು ಮಾಧ್ಯಮದವರು ಬರೆದುದನ್ನು ನೆನಪಿಸಿದರು. ದಕ್ಷಿಣದ ರಾಜ್ಯಗಳಲ್ಲೂ ಜನರು ಉತ್ಸಾಹದಿಂದ ಪಾಲ್ಗೊಂಡು ವಿಕಸಿತ ಭಾರತದ ಸಂಕಲ್ಪ ಮಾಡುತ್ತಿದ್ದಾರೆ ಎಂದ ಅವರು, ದಕ್ಷಿಣ ಭಾರತದಲ್ಲಿ ಎಲ್ಲ ವರ್ಗದ ಜನರು ಬಿಜೆಪಿಗೆ ತಮ್ಮ ಅಪಾರ ಬೆಂಬಲ ಕೊಡಲು ಸಿದ್ಧರಾಗಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಏಪ್ರಿಲ್ 26 – ಮೇ 7ರಂದು ಮತದಾನ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ, ಭಗವಂತ ಖೂಬಾ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಉಮೇಶ್ ಜಾಧವ್, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಪ್ರಮುಖರಾದ ಅವಿನಾಶ್ ಜಾಧವ್, ಬಿ.ಜಿ.ಪಾಟೀಲ್, ಅಮರನಾಥ ಪಾಟೀಲ್, ಚಂದು ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ, ಶರಣು ಸಲಗರ, ಲಲಿತಾ ಅನಪೂರ, ರಾಜಕುಮಾರ್ ಪಾಟೀಲ ತೇಲ್ಕೂರ, ಶೈಲೇಂದ್ರ ಬೆಲ್ದಾಳೆ, ಸಿದ್ದು ಪಾಟೀಲ, ಸಂಸದರು, ಶಾಸಕರು, ಪಕ್ಷದ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಶೇ.27.5ರಷ್ಟು ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಶಿಫಾರಸು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congressguaranteeKalaburgiNarendra Modinot open accountprime minister
0 FacebookTwitterPinterestEmail
admin

previous post
ಲೋಕಸಭೆ ಚುನಾವಣೆ ಧರ್ಮ ಯುದ್ಧ: ಡಾ. ಮಂಜುನಾಥ್
next post
ದಿನ ಭವಿಷ್ಯ : ಭಾನುವಾರ, 17 ಮಾರ್ಚ್ 2024

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ