Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಸೋಲುವ ಭೀತಿ!

by admin March 22, 2024
written by admin March 22, 2024 0 comments 2 minutes read
0FacebookTwitterPinterestEmail
190

ಸಂವಿಧಾನಿಕ ಸಂಸ್ಥೆಗಳ ದುರುಪಯೋಗ: ಕಾಂಗ್ರೆಸ್ ಟೀಕೆ

ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕೇಂದ್ರದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ಬ್ಯಾಂಕ್ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಂವಿಧಾನಿಕ ಸಂಸ್ಥೆಗಳ ದುರುಪಯೋಗಕ್ಕೆ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಕಿಡಿಕಾರಿದ್ದಾರೆ.

ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಜೊತೆಗೂಡಿ ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯದಿಂದ ಬಿಜೆಪಿ ಸಂವಿಧಾನದ ಅಡಿಯಲ್ಲಿರುವ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಪ್ರತಿಪಕ್ಷಗಳನ್ನು ಹತ್ತಿಕ್ಕುತ್ತಿವೆ ಎಂದರು.

ಬಿಜೆಪಿ ತಿರಸ್ಕರಿಸಬೇಕು

ಇಂತಹ ಬಿಜೆಪಿಯನ್ನು ಸ್ಪಷ್ಟವಾಗಿ ತಿರಸ್ಕರಿಸಬೇಕು ಎಂದು ರಾಜ್ಯ ಮತ್ತು ರಾಷ್ಟ್ರದ ಜನತೆಗೆ ಕರೆ ನೀಡಿದರು.

ಬಿಜೆಪಿಗೆ ಪ್ರಜಾತಂತ್ರ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ, ಸರ್ವಾಧಿಕಾರದಲ್ಲಿ ಮಾತ್ರ ನಂಬಿಕೆ ಇದೆ ಎಂದರು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಹೋರಾಟದ ಹಾದಿ

ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ ಪಕ್ಷ ಕಾಂಗ್ರೆಸ್. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ ಎಂದರು.

ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯ ಅಂತಿಮ. ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಸೀಜ್ ಮಾಡಿರುವುದು ಸರ್ವಾಧಿಕಾರಿ ಧೋರಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವಕ್ಕೆ ಮಾರಕ

ಕಾಂಗ್ರೆಸ್ ಪಕ್ಷ ಚುನಾವಣೆ ನಡೆಸದಂತೆ ಬಿಜೆಪಿ ಈ ರೀತಿಯ ತೊಂದರೆ ಕೊಡುವುದು ಪ್ರಜಾಪ್ರಭುತ್ವಕ್ಕೆ ಮಾರಕ, ಇದು ಖಂಡನೀಯ ಎಂದರು.

ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ, ಬಿಜೆಪಿಗೆ ಅಸಮಾನತೆ ಇರಬೇಕು, ಜಾತಿ ವ್ಯವಸ್ಥೆ ಗಟ್ಟಿಯಾಗಬೇಕು, ನಿರುದ್ಯೋಗ ಹೆಚ್ಚಾಗಬೇಕು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬಾರದು, ಈ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಬಾರದು ಎನ್ನುವ ಮನಸ್ಥಿತಿ ಬಿಜೆಪಿಯದ್ದಾಗಿದೆ, ಇದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಣ ಇಲ್ಲದಂತೆ ಮಾಡಲು ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದ ಅವರು, ನಾವು ರಾಜ್ಯದಲ್ಲಿ 78 ಲಕ್ಷ ಪಕ್ಷದ ಸದಸ್ಯತ್ವ ನೀಡಿ ಪ್ರತಿಯೊಬ್ಬರಿಂದ 10 ರೂ. ಸಂಗ್ರಹಿಸಿ ಎಐಸಿಸಿಗೆ ನೀಡಿದೆವು. ಇನ್ನು ಯುವ ಕಾಂಗ್ರೆಸ್ ಸದಸ್ಯತ್ವದಿಂದ 90 ಕೋಟಿ ಸಂಗ್ರಹವಾಗಿತ್ತು. ಇನ್ನು ವಿಧಾನಸಭೆ ಚುನಾವಣೆ ಸಮಯದಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ತಲಾ 2 ಲಕ್ಷ ಸಂಗ್ರಹಿಸಿ ಸುಮಾರು 20 ಕೋಟಿ ಸಂಗ್ರಹಿಸಲಾಯಿತು.

ಈ ಬಾರಿ ಲೋಕಸಭೆ ಚುನಾವಣೆ ಸಮಯದಲ್ಲೂ ದೇಣಿಗೆ ಸಂಗ್ರಹಿಸಲು ಮುಂದಾಗಿದ್ದೆ. ಎಐಸಿಸಿ ನಾಯಕರು ಬೇಡ ಎಂದು ತಿಳಿಸಿದರು.

5, 8, 9, 11ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ
290 ಕೋಟಿ ರೂ. ಮುಟ್ಟುಗೋಲು

ನಾವು ಪಕ್ಷದ ಕಟ್ಟಡ, ಸಿಬ್ಬಂದಿ ವೇತನ ನೀಡಲು ಪರದಾಡುವ ಸಂದರ್ಭದಲ್ಲಿ ಎಐಸಿಸಿ ಖಾತೆಯಲ್ಲಿನ 290 ಕೋಟಿಯಷ್ಟು ಹಣವನ್ನು ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ ಮೂಲಕ ಮುಟ್ಟುಗೋಲು ಹಾಕಿಸಿದ್ದಾರೆ. ನಾವು ನ್ಯಾಯಾಧಿಕರಣಕ್ಕೆ ಹೋದರೂ ನಮಗೆ ನಿರಾಳತೆ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾವು ಯಾರ ಬಳಿ ನ್ಯಾಯ ಕೇಳಬೇಕು.

ನಮ್ಮದು ವ್ಯವಹಾರಿಕ ಸಂಸ್ಥೆಯಲ್ಲ. ನಮಗೆ ಜನರ ದೇಣಿಗೆ ಮಾತ್ರ ಸಿಗುತ್ತಿದೆ. ನಮಗೆ ಚುನಾವಣಾ ಬಾಂಡ್ ಮೂಲಕ ನಮಗೆ ಸಿಕ್ಕಿರೋದು ಕೇವಲ 11% ಮಾತ್ರ. ಆದರೆ ಬಿಜೆಪಿ ಅವರಿಗೆ 57% ಸಿಕ್ಕಿದೆ. ಇಂದು ಪತ್ರಿಕೆಗಳಲ್ಲಿ ಯಾರು ಯಾರಿಗೆ ಎಷ್ಟು ದೇಣಿಗೆ ನೀಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ನಾವು ಮಾಧ್ಯಮಗಳಲ್ಲಿ ಪಕ್ಷದ ವತಿಯಿಂದ ಜಾಹೀರಾತು ನೀಡಲು ಈಗ ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡರೆ ವಿರೋಧ ಪಕ್ಷಗಳು ಚುನಾವಣೆ ನಡೆಸುವುದು ಹೇಗೆ ಎಂದು ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres accuses central govt.dk shivakumarkpcc officeranadeep singh surjevalaSiddaramaiah
0 FacebookTwitterPinterestEmail
admin

previous post
5, 8, 9, 11ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ
next post
ದಿನ ಭವಿಷ್ಯ : ಶನಿವಾರ, 23 ಮಾರ್ಚ್ 2024

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ