Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೇಂದ್ರದ ವಿರುದ್ಧ ತೊಡೆ ತಟ್ಟಿದ ಸಿದ್ದರಾಮಯ್ಯ

by admin March 23, 2024
written by admin March 23, 2024 1 comment 2 minutes read
Share 0FacebookTwitterPinterestEmail
166

ಬರ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್ ಮೊರೆ

ಬೆಂಗಳೂರು:ಬರ ಪರಿಹಾರ ನಿರ್ವಹಣೆಗೆ ಕೇಂದ್ರದ ಅನುದಾನ ದೊರಕಿಸುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ರಾಜ್ಯ ಸರ್ಕಾರ ಇದೀಗ ನ್ಯಾಯಾಲಯದ ಮೂಲಕ ಅನುದಾನ ಪಡೆಯಲು ಮುಂದಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿಂದು ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಕ್ಕೆ ಎನ್‌ಡಿಆರ್‌ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದೇವೆ ಎಂದರು.

ಕಾದು-ಕಾದು ಸಾಕಾಯಿತು

ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು-ಕಾದು ಸಾಕಾಗಿ ನ್ಯಾಯಾಲಯದ ಮೊರೆ ಹೋಗಬೇಕಾಯಿತು.

ಸಂವಿಧಾನ ಪರಿಚ್ಛೇಧ 32ರ ಅಡಿಯಲ್ಲಿ ನಾವು ನಮ್ಮ ಕಾನೂನು ಬದ್ಧ ಹಕ್ಕನ್ನು ಚಲಾಯಿಸಿದ್ದೇವೆ ಎಂದು ಸಮರ್ಥಿಸಿಕೊಂಡರು.

ನಮ್ಮ ಪಾಲನ್ನು ಇಂದು ಕೊಡುತ್ತಾರೆ, ನಾಳೆ ಕೊಡುತ್ತಾರೆ, ಇವತ್ತು ಬರುತ್ತೆ, ನಾಳೆ ಬರುತ್ತೆ ಎಂದು ಐದು ತಿಂಗಳಿನಿಂದ ಕಾದು, ನಮಗೆ ಬೇರೆ ದಾರಿ ಕಾಣದೆ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದೇವೆ ಎಂದರು.

ಬರ ಹಾಗೂ ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗಿ ಸ್ಪಂದಿಸಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ, ಆದರೆ, ಇದುವರೆಗೂ ಕೇಂದ್ರ ಕಾನೂನು ಬದ್ಧವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದರು.

ಕೋಲಾರ, ಹಾಸನ, ಮಂಡ್ಯ ಜೆಡಿಎಸ್‌ಗೆ
223 ತಾಲ್ಲೂಕುಗಳು ಬರಪೀಡಿತ

ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ, ರಾಜ್ಯದಲ್ಲಿ 240 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿದ್ದೇವೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನಲ್ಲಿ ನಯಾ ಪೈಸೆಯನ್ನೂ ಕೊಟ್ಟಿಲ್ಲ ಎಂದರು.

ನಿಯಮಾವಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು ಪರಿಶೀಲನೆ ನಡೆಸಿ ಕೇಂದ್ರಕ್ಕೆ ಐಎಂಸಿಟಿ ವರದಿ ನೀಡಿದೆ.

ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದು ಎನ್‌ಡಿಆರ್‌ಎಫ್ ನಿಯಮಾವಳಿಗಳನ್ನು ಮಾಧ್ಯಮಗಳ ಎದುರಿಗೆ ಓದಿದರು.

ಪರಿಹಾರ ಕೊಡಲಿಲ್ಲ

ಕೇಂದ್ರ ತಂಡ ವರದಿ ಕೊಟ್ಟರೂ ನಮಗೆ ಕೇಂದ್ರ ಸರ್ಕಾರ ಸ್ಪಂದಿಸದಿದ್ದಾಗ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋದರೂ ಕೇಂದ್ರ ಸಚಿವರ ಭೇಟಿಗೆ ಅವಕಾಶವನ್ನೇ ಕೊಡಲಿಲ್ಲ. ಬಳಿಕ ನಾನೇ ಡಿಸೆಂಬರ್ 20 ರಂದು ನಾನು ಮತ್ತು ಕೃಷ್ಣಬೈರೇಗೌಡ ಅವರು ಮತ್ತೆ ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆವು. ಆದರೂ ನಮಗೆ ಪರಿಹಾರ ಕೊಡಲಿಲ್ಲ.

ಬಳಿಕ ನಾನು ಬೆಂಗಳೂರಿನಲ್ಲೇ ಪ್ರಧಾನಿ ಮೋದಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದೆ. ಆದರೂ ಪರಿಹಾರ ಸಿಗಲಿಲ್ಲ.

ಕೇಂದ್ರದಿಂದ ನಯಾಪೈಸೆ ಬಿಡುಗಡೆ ಆಗದಿದ್ದಾಗ 450 ಕೋಟಿ ರೂ., ಕುಡಿಯುವ ನೀರಿಗೆ 870 ಕೋಟಿ ರೂ. ಬಿಡುಗಡೆ ಮಾಡಿದೆವು. ಡಿಸಿಗಳ ಬಳಿ ಇನ್ನೂ 800 ಕೋಟಿ ರೂ. ಬರ ನಿರ್ವಹಣೆ ಉದ್ದೇಶಕ್ಕಾಗಿಯೇ ಮೀಸಲಿಡಲಾಗಿದೆ. ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ
ಎನ್‌ಡಿಆರ್‌ಎಫ್ ನಿಧಿ ಬಂದೇ ಇಲ್ಲ

4,600 ಕೋಟಿ ರೂ. ಇನ್‌ಪುಟ್ ಸಬ್ಸಿಡಿಗೆ ಹಣ ಬೇಕು, ಕಾಯ್ದೆ ಪ್ರಕಾರ ಇಂಥಾ ಸನ್ನಿವೇಶದಲ್ಲಿ ತಡ ಮಾಡದೆ ಹಣ ಬಿಡುಗಡೆ ಆಗಬೇಕಿತ್ತು. ಆದರೆ ಐದು ತಿಂಗಳಾದರೂ ನಮಗೆ ಎನ್‌ಡಿಆರ್‌ಎಫ್ ನಿಧಿ ಬಂದೇ ಇಲ್ಲ. ಹೀಗಾಗಿ ನಾವು ಬೇರೆ ದಾರಿ ಇಲ್ಲದೆ ಸುಪ್ರೀಂಕೋರ್ಟ್ ಬಾಗಿಲು ಬಡಿಯಬೇಕಾಯಿತು.

ನಮ್ಮ ನಾಡಿಗೆ, ನಮ್ಮ ನಾಡಿನ ಜನರಿಗೆ ಆಗಿರುವ ಅನ್ಯಾಯವನ್ನು ಸರಿಮಾಡಿ ಎಂದು, ಎನ್‌ಡಿಆರ್‌ಎಫ್ ನಿಧಿ ಕೊಡಿ ಎಂದು ಮೇಲಿಂದ ಮೇಲೆ ಮನವಿ ಮಾಡಿ ಎಲ್ಲಾ ರೀತಿಯಲ್ಲೂ ಬೇಡಿಕೆ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ. ಈ ಕಾರಣಕ್ಕೆ ನಾವು ಸುಪ್ರೀಂಕೋರ್ಟ್ ಬಳಿ ನ್ಯಾಯ ಕೇಳದೆ ಬೇರೆ ದಾರಿ ಇರಲಿಲ್ಲ ಎಂದರು.

ನಮಗೆ ಕಾನೂನು ಮೊರೆ ಹೋಗುವುದು ಇಷ್ಟ ಇರಲಿಲ್ಲ. ಆದರೆ ನಾವು ಕಾನೂನು ಮೊರೆ ಹೋಗುವ ಅನಿವಾರ್ಯತೆಯನ್ನು ಕೇಂದ್ರ ಸೃಷ್ಟಿಸಿದೆ ಎಂದರು.

Share this:

  • WhatsApp
  • Post
  • Tweet
  • Print
  • Email
central govt. not helping state in droughtkarnataka govt. to go to supreem courtseeking drought relief
Share 0 FacebookTwitterPinterestEmail
admin

previous post
ಕೋಲಾರ, ಹಾಸನ, ಮಂಡ್ಯ ಜೆಡಿಎಸ್‌ಗೆ
next post
ಬೊಜ್ಜು, ಕೊಬ್ಬು ನಿಯಂತ್ರಣಕ್ಕೆ ರುದ್ರಮುದ್ರೆ ರಾಮಬಾಣ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

1 comment

ಬೊಜ್ಜು, ಕೊಬ್ಬು ನಿಯಂತ್ರಣಕ್ಕೆ ರುದ್ರಮುದ್ರೆ ರಾಮಬಾಣ – KMS March 23, 2024 - 11:07 pm

[…] All ರಾಜಕೀಯ ರಾಜಕೀಯ […]

Reply

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ