Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿಯಿಂದ ಕುಮಾರಸ್ವಾಮಿಗೆ ಭಾರೀ ಬೇಡಿಕೆ

by KM Shivaraju March 25, 2024
written by KM Shivaraju March 25, 2024 0 comments 2 minutes read
0FacebookTwitterPinterestEmail
193


ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರುವಂತೆ ದುಂಬಾಲು

ಬೆಂಗಳೂರು:ಹೃದಯ ಶಸ್ತ್ರ ಚಿಕಿತ್ಸೆ ಪಡೆದು ನಗರಕ್ಕೆ ಹಿಂತಿರುಗಿದ ನಂತರ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಿತ್ರ ಪಕ್ಷದ ಅಭ್ಯರ್ಥಿಗಳಿಂದ ಭಾರೀ ಬೇಡಿಕೆ ಹೆಚ್ಚಿದೆ.

ವಿಶ್ರಾಂತಿಗೂ ಅವಕಾಶ ನೀಡದೆ, ಬಿಜೆಪಿಯಿಂದ ಕಣಕ್ಕಿಳಿದಿರುವ ಅಭ್ಯರ್ಥಿಗಳು ಮತ್ತು ಮುಖಂಡರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ತಮ್ಮನ್ನು ಬೆಂಬಲಿಸಿ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ದಿನಗಳನ್ನು ಮೀಸಲಿಡುವಂತೆ ಮನವಿ ಮಾಡಿದ್ದಾರೆ.

ರಾಜ್ಯಾದ್ಯಂತ ಪ್ರವಾಸ ಮಾಡಿ

ಅವರ ಆರೋಗ್ಯ ವಿಚಾರಿಸುವ ನೆಪದಲ್ಲೇ ತಮ್ಮ ಕ್ಷೇತ್ರಗಳ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿರುವ ಅಭ್ಯರ್ಥಿಗಳು, ತಾವು ಹಾಗೂ ಯಡಿಯೂರಪ್ಪ ಜಂಟಿಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಎಂದಿದ್ದಾರೆ.

ಬಿಜೆಪಿ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸುತ್ತಿದ್ದಂತೆ ಡಾ.ಸುಧಾಕರ್ (ಚಿಕ್ಕಬಳ್ಳಾಪುರ), ಚಿತ್ರದುರ್ಗ ಮೀಸಲು ಕ್ಷೇತ್ರಕ್ಕೆ ಸಂಭವನೀಯ ಅಭ್ಯರ್ಥಿ ಆಗಿರುವ ಗೋವಿಂದ ಕಾರಜೋಳ್, ಬಳ್ಳಾರಿ ಅಭ್ಯರ್ಥಿ ಶ್ರೀರಾಮುಲು ಜೊತೆಗೆ ಭೇಟಿಯಾಗಿ ಮಾತುಕತೆ ನಡೆಸಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ, ಸಂಸದ ಕರಡಿ ಸಂಗಣ್ಣ ಸೇರಿದಂತೆ ಹಲವು ಬಿಜೆಪಿ ನಾಯಕರು ಭೇಟಿ ಮಾಡಿ ಸಮಾಲೋಚನೆ ನಡೆಸಿದರೆ, ಕೆಲವರು ತಮ್ಮ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವಂತೆ ಮನವಿ ಮಾಡಿದರು.

ಇದರ ಮಧ್ಯೆ, ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯಲು ತೀರ್ಮಾನಿಸಿರುವ ಕುಮಾರಸ್ವಾಮಿ, ತಮ್ಮ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಈ ಸಂಬಂಧ ಚರ್ಚೆ ಮಾಡಿದರು.

ಅನಾಥರನ್ನಾಗಿ ಮಾಡಬೇಡಿ

ಚರ್ಚೆ ಸಂದರ್ಭದಲ್ಲಿ ಕೆಲವು ಮುಖಂಡರು ಮತ್ತು ಕಾರ್ಯಕರ್ತರು, ಚನ್ನಪಟ್ಟಣ ಬಿಟ್ಟು ನಮ್ಮನ್ನು ಅನಾಥರನ್ನಾಗಿ ಮಾಡಬೇಡಿ, ಬೇಕಾದರೆ ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಿ ಎಂದು ಮನವಿ ಮಾಡಿದರು.

ಮಹಿಳೆಯರೂ ಸೇರಿದಂತೆ ಕೆಲವು ಕಾರ್ಯಕರ್ತರು ಕುಮಾರಸ್ವಾಮಿ ಅವರ ಕಾಲು ಹಿಡಿದು ಕಣ್ಣೀರಿಟ್ಟು, ಜಿಲ್ಲೆಯ ಕೆಲವು ರಾಜಕಾರಣಿಗಳ ಹಿಡಿತಕ್ಕೆ ಚನ್ನಪಟ್ಟಣ ಬಿಡಬೇಡಿ, ಬಿಟ್ಟರೆ, ಕಾರ್ಯಕರ್ತರಿಗೆ ಉಳಿಗಾಲವಿಲ್ಲ ಎಂದು ಗೋಗರೆದರು.

ಇದರ ಮಧ್ಯೆ, ಮಳವಳ್ಳಿಯಿಂದ ಬಂದಿದ್ದ ಭರತ್ ಎಂಬ ಕಾರ್ಯಕರ್ತ, ಅವರ ಮನೆಯ ಮುಂದೆ, ನೀವು ಮಂಡ್ಯದಿಂದ ಕಣಕ್ಕಿಳಿಯಬೇಕೆಂದು ಆತನ ಬಲಗೈ ಕೊಯ್ದುಕೊಂಡ.

ಚನ್ನಪಟ್ಟಣ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಉಳಿವಿನ ದೃಷ್ಟಿಯಿಂದ ನಾವು ನಿರ್ಧಾರ ತೆಗೆದುಕೊಳ್ಳಲೇಬೇಕಾದ ಅನಿವಾರ್ಯ ಪರಿಸ್ಥಿತಿ ಬಂದಿದೆ ಎಂದು ಕುಮಾರಸ್ವಾಮಿ ಸಭೆಗೆ ತಿಳಿಸಿದರು.

ನಾನು ಎದುರಿಸಿದ ವೈಯಕ್ತಿಕ ರಾಜಕೀಯ ಸವಾಲುಗಳನ್ನು ನೀವೇ ನೋಡಿದ್ದೀರಿ, ಕಷ್ಟ ಕಾಲದಲ್ಲಿ ನನ್ನ ಕೈ ಹಿಡಿದಿದ್ದೀರಿ, ಚನ್ನಪಟ್ಟಣ ಕಾರ್ಯಕರ್ತರಾದ ನೀವು ಕೇಳಿದಾಗ ಬಂದು ನಾನು ನಿಮ್ಮ ಜತೆ ನಿಂತಿದ್ದೇನೆ.

ಮತ್ತೆ ಬಿಜೆಪಿ ಕಡೆ ಉರುಳಿದ ಗಾಲಿ!
ತಾಯಿ-ಮಗನ ಸಂಬಂಧ

ನಿಮ್ಮ-ನನ್ನ ನಡುವಿನ ಸಂಬಂಧ ತಾಯಿ-ಮಗನ ಸಂಬಂಧ, ನನ್ನನ್ನು ಮಗನಂತೆ ಕಂಡಿದ್ದೀರಿ, ರಾಜ್ಯದಲ್ಲಿ ಪಕ್ಷ ಉಳಿಸುವ ಸಮಯ ಬಂದಿದೆ. ಅದಕ್ಕೆ ನಿಮ್ಮ ಸಹಕಾರವೂ ಬೇಕು, ಪಕ್ಷಕ್ಕಾಗಿ ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದರು.

ಈ ಜೀವ ಇರುವ ತನಕ ನಾನು ಚನ್ನಪಟ್ಟಣ, ರಾಮನಗರ ಬಿಡುವ ಪ್ರಶ್ನೆಯೇ ಇಲ್ಲ, ನನ್ನ ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ, ರಾಜ್ಯದಲ್ಲಿ ನಾನು ದೊಡ್ಡ ಮಟ್ಟದ ಹೋರಾಟ ಮಾಡಬೇಕು, ನೀವು ಒಪ್ಪಿಗೆ ಕೊಡಬೇಕು, ನೀವು ಒಪ್ಪಿಗೆ ಕೊಟ್ಟರೆ ಮಾತ್ರ ನಾನು ಪಕ್ಷ ಬಲಪಡಿಸುವ ಕೆಲಸ ಮಾಡಬಹುದು, ಮಾಜಿ ಮುಖ್ಯಮಂತ್ರಿಗಳ ಮಾತಿಗೆ ಸಭೆಯಲ್ಲಿ ಬಹುತೇಕರು ಸಹಮತ ವ್ಯಕ್ತಪಡಿಸಿದರೆ, ಅನೇಕ ಮುಖಂಡರು ಪಕ್ಷ ಉಳಿಸಲು ನಿಮ್ಮ ನಿರ್ಧಾರಕ್ಕೆ ಬದ್ಧ ಎಂದರು.

ನೀವು ಚನ್ನಪಟ್ಟಣದಲ್ಲಿಯೇ ಇರಬೇಕು ಎಂದು ಕೆಲವರ ಮನವಿ, ಕಾರ್ಯಕರ್ತರನ್ನು ಸಮಾಧಾನಪಡಿಸಿದ ನಿಖಿಲ್ ಕುಮಾರಸ್ವಾಮಿ, ಪಕ್ಷ ಬಲಪಡಿಸುವ ಅನಿವಾರ್ಯತೆಯನ್ನು ಅವರಿಗೆ ಮನವರಿಕೆ ಮಾಡಿಕೊಟ್ಟರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp candidates invites kumara swamy to their constituencybjp candidates meets kumara swamychannapattana - mandya jds workers meet kumar swamy
0 FacebookTwitterPinterestEmail
KM Shivaraju

previous post
ಮತ್ತೆ ಬಿಜೆಪಿ ಕಡೆ ಉರುಳಿದ ಗಾಲಿ!
next post
ದಿನ ಭವಿಷ್ಯ : ಮಂಗಳವಾರ, 26 ಮಾರ್ಚ್ 2024

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ