Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಮೈತ್ರಿ ಗೊಂದಲ ನಿವಾರಣೆಗೆ ಜಂಟಿ ಸಭೆ

by admin March 26, 2024
written by admin March 26, 2024 0 comments 1 minutes read
1FacebookTwitterPinterestEmail
222

ಬಿಜೆಪಿ- ಜೆಡಿಎಸ್ ಮುಖಂಡರು ಭಾಗಿ

ಬೆಂಗಳೂರು:ಬಿಜೆಪಿ-ಜೆಡಿಎಸ್ ಮೈತ್ರಿ ನಂತರ ಉಭಯ ಪಕ್ಷಗಳ ಕಾರ್ಯಕರ್ತರ ನಡುವಿನ ಗೊಂದಲ ನಿವಾರಿಸಲು ಮಾರ್ಚ್ 29 ರಂದು ಜಂಟಿಯಾಗಿ ಮುಖಂಡರ ಸಭೆ ಕರೆದಿದ್ದಾರೆ.
ಉತ್ತರ ಕರ್ನಾಟಕಕ್ಕಿಂತ ಹಳೆ ಮೈಸೂರು ಭಾಗದಲ್ಲಿ ಇರುವ ಗೊಂದಲವನ್ನು ನಿವಾರಿಸುವ ಉದ್ದೇಶದಿಂದ ಉಭಯ ಪಕ್ಷಗಳ ನಾಯಕರು ಇಂತಹ ತೀರ್ಮಾನ ಕೈಗೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಆ ಪಕ್ಷದ ಮುಖಂಡರು, ಜೆಡಿಎಸ್‌ನಿಂದ ಎಚ್.ಡಿ.ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಸೇರಿದಂತೆ ಹಲವು ನಾಯಕರು ಸಭೆ ನಡೆಸಲಿದ್ದಾರೆ.
ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಜಂಟಿಯಾಗಿ ಕರೆದಿರುವ ಈ ಸಭೆಯಲ್ಲಿ ಪ್ರತಿ ಜಿಲ್ಲೆಯಿಂದ ಉಭಯ ಪಕ್ಷಗಳ ತಲಾ ಇಬ್ಬರು ನಾಯಕರಿಗೆ ಆಹ್ವಾನ ನೀಡಲಾಗಿದೆ.

ತುಮಕೂರಿನಲ್ಲಿ ನಿನ್ನೆ ಮಾಜಿ ಸಚಿವ ವಿ.ಸೋಮಣ್ಣ ಅವರ ಪ್ರಚಾರ ವೇದಿಕೆಯಲ್ಲೇ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ನಡುವೆ ನಡೆದ ವಾಗ್ವಾದ ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲೆಯಲ್ಲಿ ಬಿಜೆಪಿ ನಾಯಕರಲ್ಲಿರುವ ಅಸಮಾಧಾನದ ಬೆನ್ನಲ್ಲೇ ಈ ಸಭೆ ಕರೆಯಲಾಗಿದೆ.

ಕಾಂಗ್ರೆಸ್ ಕಪಾಳಕ್ಕೆ ಜನ ಹೊಡೆಯುತ್ತಾರೆ
ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವ ಉದ್ದೇಶದಿಂದ ನಾವು ಕರ್ನಾಟಕದಲ್ಲಿ 28 ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲಲೇ ಬೇಕು, ಇದಕ್ಕಾಗಿ ನಮ್ಮಲ್ಲಿರುವ ವೈಮನಸ್ಸನ್ನು ಹೋಗಲಾಡಿಸಿ, ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಬೇಕು.
ಮೈತ್ರಿ ಧರ್ಮ ಪಾಲನೆ ಮಾಡುವಂತೆ ರಾಜ್ಯ ನಾಯಕರಿಂದ ಉಭಯ ಪಕ್ಷಗಳ ಕಾರ್ಯಕರ್ತರಿಗೆ ಸ್ಪಷ್ಟ ಸೂಚನೆ ಸಭೆಯಲ್ಲಿ ನೀಡಲಿದ್ದಾರೆ.
ಮೈತ್ರಿಯಲ್ಲಿ ಚ್ಯುತಿ ಬಂದರೆ ಅಥವಾ ನೀವು ಕಾರ್ಯಕರ್ತರು ಅಪಸ್ವರ ಎತ್ತಿದರೆ, ಅದನ್ನು ಕಾಂಗ್ರೆಸ್ ರಾಜಕೀಯವಾಗಿ ಲಾಭ ಪಡೆಯುತ್ತದೆ.

ದೇವೇಗೌಡರ ಮಗ-ಮೊಮ್ಮಗ ಲೋಕಾ ಕಣಕ್ಕೆ

ಆ ಪಕ್ಷದ ಮುಖಂಡರು ಇದನ್ನೇ ಬಂಡವಾಳ ಮಾಡಿಕೊಂಡು ನಿಮ್ಮನ್ನು ಖರೀದಿ ಮಾಡುವ ಯತ್ನ ನಡೆದಿರುವುದೂ ನಮ್ಮ ಗಮನಕ್ಕೆ ಬಂದಿದೆ.ಜನ ಮೋದಿ ಪರ ಇದ್ದಾರೆ, ನೀವು ಕಾಂಗ್ರೆಸ್ ಮುಖಂಡರ ಆಮಿಷಗಳಿಗೆ ಬಲಿಯಾಗಬೇಡಿ, ನಮ್ಮಲ್ಲಿ ಯಾರೇ ಅಭ್ಯರ್ಥಿಯಾಗಿದ್ದರೂ ನಿಮ್ಮ ವೈಮನಸ್ಸು ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಿ.
ವೈಯಕ್ತಿಕ ವಿಚಾರಗಳಿಗೆ ಪ್ರಾಮುಖ್ಯತೆ ನೀಡಬೇಡಿ, ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ವಿಷಯದಲ್ಲಿ ಪ್ರಾಮಾಣಿಕವಾಗಿರಿ ಎಂದು ಜಿಲ್ಲಾ ಮುಖಂಡರಿಗೆ ನಾಯಕರು ಸ್ಪಷ್ಟ ಸಂದೇಶ ನೀಡಲಿದ್ದಾರೆ.

ಡಿ.ಕೆ.ಸುರೇಶ್ ಉಡುಗೊರೆ: ತನಿಖೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ
ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಇಬ್ಬರೂ ಒಂದೇ ನಿಲುವನ್ನು ಹೊಂದಿ ಚುನಾವಣಾ ಹೋರಾಟ ನಡೆಸುತ್ತೇವೆ, ಈ ಸರ್ಕಾರದ ವೈಫಲ್ಯಗಳೇ ನಮಗೆ ಅಸ್ತ್ರ, ಅವುಗಳನ್ನು ನೀವು ಜನತೆಗೆ ಮುಟ್ಟಿಸಿ.
ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿರುವ ಜೊತೆಗೆ ಮತದಾರರಿಗೆ ಉಡುಗೊರೆಗಳನ್ನು ಮನೆ ಬಾಗಿಲಿಗೆ ತಲುಪಿಸಿದೆ.
ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡು ದಬ್ಬಾಳಿಕೆಯಲ್ಲಿ ಚುನಾವಣೆ ನಡೆಸಲು ಮುಂದಾಗಿದೆ.
ನೀವು ಒಂದಾಗಿ ಹೋರಾಟ ನಡೆಸಿದರೆ ಇಂತಹ ದಬ್ಬಾಳಿಕೆ ನಡೆಯುವುದಿಲ್ಲ, ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರು ಇಂತಹ ದಬ್ಬಾಳಿಕೆಯನ್ನು ಮೆಟ್ಟಿ ನಿಂತಿದ್ದಾರೆ, ಇದೇ ಉಳಿದ ಕ್ಷೇತ್ರಗಳಲ್ಲೂ ಒಗ್ಗಟ್ಟಿನಿಂದ ಎದುರಿಸಿ ಎಂಬ ಸಂದೇಶವನ್ನು ನೀಡಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
alliancebjpclear confusionjdsJoint meetingleadersparticipated
1 FacebookTwitterPinterestEmail
admin

previous post
ದೇವೇಗೌಡರ ಮಗ-ಮೊಮ್ಮಗ ಲೋಕಾ ಕಣಕ್ಕೆ
next post
ದಿನ ಭವಿಷ್ಯ :  ಬುಧವಾರ, 27 ಮಾರ್ಚ್ 2024

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ