Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಮೋದಿ, ದೇವೇಗೌಡ, ಷಾ, ಯೋಗಿ ಚುನಾವಣಾ ಪ್ರಚಾರ

by admin March 29, 2024
written by admin March 29, 2024 0 comments 1 minutes read
2FacebookTwitterPinterestEmail
194

ಕರ್ನಾಟಕದಲ್ಲಿ ಎನ್ ಡಿಎ ಅಭ್ಯರ್ಥಿಗಳ ಪರ 4 ಸಮಾವೇಶ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ವರಿಷ್ಠ ನಾಯಕರ ದಂಡೇ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದೆ.

ಬಿಜೆಪಿಯ ತಾರಾ ಪ್ರಚಾರಕರ ಪಟ್ಟಿಯಲ್ಲಿ ಪಕ್ಷದ ವರಿಷ್ಠ ನಾಯಕರಲ್ಲದೆ, ಜೆಡಿಎಸ್ ನಾಯಕ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರೂ ಇದ್ದಾರೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ ಹಳೆ ಮೈಸೂರು ಭಾಗದ 14  ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಈ ಕ್ಷೇತ್ರಗಳಿಗೆ ಸೀಮಿತವಾಗಿ ಪ್ರಧಾನಿ ಅವರು ಏಪ್ರಿಲ್ ಮೊದಲ ವಾರದಿಂದ ಪ್ರಚಾರ ಅಂತ್ಯದವರೆಗೂ ನಾಲ್ಕು ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೇಂದ್ರ ಬಿಜೆಪಿ ಕಚೇರಿಯಿಂದ ಬಂದಿರುವ ತಾತ್ಕಾಲಿಕ ವೇಳಾಪಟ್ಟಿಯಂತೆ ಪ್ರಧಾನಿ ಅವರು, ಮೈಸೂರು, ಬೆಂಗಳೂರು ಗ್ರಾಮಾಂತರ ಹಾಗೂ ಹಾಸನದಲ್ಲೂ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಜೆಡಿಎಸ್ -ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ

ಚಿಕ್ಕಬಳ್ಳಾಪುರ ಇಲ್ಲವೇ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಸಮಾವೇಶ ಉದ್ದೇಶಿಸಿ ಅವರು ಭಾಷಣ ಮಾಡುವ ನಿರೀಕ್ಷೆ ಇದೆ.

ಪ್ರಧಾನಿ ಅವರು, ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡುವ ಸ್ಥಳ ಕನಿಷ್ಠ ಮೂರು ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುತ್ತದೆ.

ಮೈಸೂರು ಕೇಂದ್ರದಲ್ಲಿ ಚಾಮರಾಜನಗರ, ಮಂಡ್ಯ ಹಾಗೂ ಸ್ಥಳೀಯ ಕ್ಷೇತ್ರವನ್ನು ಒಳಗೊಂಡಿರುತ್ತದೆ.

ಬೆಂಗಳೂರು ಗ್ರಾಮಾಂತರ ಪ್ರಚಾರ ಸಂದರ್ಭದಲ್ಲಿ ಬೆಂಗಳೂರು ನಗರ ವ್ಯಾಪ್ತಿಗೆ ಬರುವ ಎಲ್ಲಾ ಕ್ಷೇತ್ರಗಳು ಒಳಗೊಂಡಿರುತ್ತದೆ. ಇನ್ನು ಹಾಸನದ ಸಮಾವೇಶ ಉಡುಪಿ-ಚಿಕ್ಕಮಗಳೂರು ಹಾಗೂ ತುಮಕೂರು ಕ್ಷೇತ್ರಗಳನ್ನು ಒಳಗೊಂಡಿರುತ್ತದೆ.

ಪ್ರಧಾನಿ ಭಾಷಣ ಸಂದರ್ಭದಲ್ಲಿ ಒಂದು ಇಲ್ಲವೆ, ಎರಡು ಕಡೆ ಮಾತ್ರ ದೇವೇಗೌಡರು ವೇದಿಕೆ ಹಂಚಿಕೊಳ್ಳಲಿದ್ದಾರೆ.

ಇನ್ನುಳಿದ ಎಲ್ಲಾ ಪ್ರಚಾರ ವೇದಿಕೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾಗಿಯಾಗಲಿದ್ದಾರೆ. ವೇದಿಕೆಯಲ್ಲಿ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಇರಲಿದ್ದಾರೆ.

ಪ್ರಧಾನಿ ಅವರಲ್ಲದೆ, ಬಿಜೆಪಿಯ ಮುಖಂಡರು ಹಾಗೂ ಕೇಂದ್ರ ಸಚಿವರಲ್ಲಿ ಯಾರಾದರು ಒಬ್ಬರು ದಿನನಿತ್ಯ ಮೊದಲ ಹಂತದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಅಮಿತ್ ಷಾ, ಯೋಗಿ ಆದಿತ್ಯನಾಥ್ ಭಾಗವಹಿಸುವ ಸಮಾವೇಶಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲ್ಗೊಳ್ಳಲಿದ್ದಾರೆ.

ರಾಜ್ಯ-ಕೇಂದ್ರದಲ್ಲಿ ಎನ್ ಡಿಎಗೆ ಅಧಿಕಾರ

ಕೆಲವು ಆಯ್ದ ಕ್ಷೇತ್ರಗಳಲ್ಲಿ ದೇವೇಗೌಡರು ಹಾಗೂ ಯಡಿಯೂರಪ್ಪ ಜಂಟಿಯಾಗಿ ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಇದಲ್ಲದೆ, ಯಡಿಯೂರಪ್ಪ-ಕುಮಾರಸ್ವಾಮಿ, ಮತ್ತೆ ಕೆಲವೆಡೆ ಬಿ.ವೈ.ವಿಜಯೇಂದ್ರ-ಕುಮಾರಸ್ವಾಮಿ ಜಂಟಿಯಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದಕ್ಕೂ ಮುನ್ನವೇ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಅವರು ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಗಳನ್ನು ನಡೆಸುವಂತೆ ವರಿಷ್ಠರು ಸೂಚಿಸಿದ್ದು, ಅದರಂತೆ ನಿನ್ನೆಯಿಂದಲೇ ಈ ಪ್ರಕ್ರಿಯೆ ಆರಂಭಗೊಂಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
AdityanathAmit ShahcampaignChief MinisterHome MinisterkarnatakaNarendra Modiprime ministersenior BJP leadersUnionUttar PradeshYogi
2 FacebookTwitterPinterestEmail
admin

previous post
ಅಸ್ತಿತ್ವದಲ್ಲಿಲ್ಲವೆಂದು ಜೆಡಿಎಸ್ನವರೇ ಸಾಬೀತುಪಡಿಸಿದ್ದಾರೆ
next post
ದಿನ ಭವಿಷ್ಯ : ಶನಿವಾರ, 30 ಮಾರ್ಚ್ 2024

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ