Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸುಮಲತಾ ಸಹಕಾರ ಕೋರಿದ ಕುಮಾರಸ್ವಾಮಿ

by admin March 31, 2024
written by admin March 31, 2024 0 comments 2 minutes read
Share 1FacebookTwitterPinterestEmail
173

ಏಪ್ರಿಲ್ 4ಕ್ಕೆ ಮಂಡ್ಯದಲ್ಲಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಏಪ್ರಿಲ್ ನಾಲ್ಕರಂದು ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಸಂಸದರಾದ ಸುಮಲತಾ ಅವರ ಸಹಕಾರ ಕೋರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ಕ್ಷೇತ್ರದ ಸಂಸದರಾದ ಸುಮಲತಾ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಇವತ್ತಿನ ಮಾತುಕತೆ ಸೌಹಾರ್ದಯುತವಾಗಿ ನಡೆಯಿತು. ಮಾಜಿ ಸಚಿವ ದಿ. ಅಂಬರೀಷ್ ಅವರ ಮನೆ ನನಗೆ ಹೊಸದಲ್ಲ. ಹಲವಾರು ವರ್ಷಗಳ ಕಾಲ ಜತೆಗೂಡಿ ಬದುಕಿದವರು ನಾವು. ನಾನು ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಸುಮಲತಾ ಅವರ ಸಹಕಾರ ಕೋರಿದ್ದೇನೆ.

ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅವರಿಗೂ ಹಿತೈಷಿಗಳು ಮತ್ತು ಅಂಬರೀಶ್ ಅವರ ಅಭಿಮಾನಿಗಳು ಇದ್ದಾರೆ. ಶನಿವಾರ ಅವರು ಬೆಂಗಳೂರಿನಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿ, ಏಪ್ರಿಲ್ 3ನೇ ತಾರೀಖು ಮಂಡ್ಯದಲ್ಲಿಯೇ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ. ಈಗಾಗಲೇ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರೂ ಸುಮಲತಾ ಅವರ ಜತೆ ಚರ್ಚೆ ನಡೆಸಿದ್ದಾರೆ ಎಂದರು.

ಹೃದಯದ ಶಕ್ತಿ ಹೆಚ್ಚಳಕ್ಕೆ ಅಂಜಲಿ ಮುದ್ರೆ

ಎಲ್ಲಾ ವಿಚಾರಗಳ ಬಗ್ಗೆಯೂ ಮುಕ್ತವಾಗಿ ಚರ್ಚೆ ನಡೆಸಿದ್ದೇವೆ. ಅವರು ತಮ್ಮ ಮುಂದೆ ಯಾವ ಬೇಡಿಕೆಯನ್ನು ಇಟ್ಟಿಲ್ಲ. ಅವರು ಬಿಜೆಪಿ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟ ಹೆಚ್ಡಿಕೆ

ಅಮೃತ ಕೊಟ್ಟವರಿಗೆ ವಿಷಾನ? ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪಾಪ.  ಡಿ.ಕೆ.ಶಿವಕುಮಾರ್ ವೈರಿಯಲ್ಲ ನನಗೆ. ಅವರು ನನ್ನ ದೊಡ್ಡಮಟ್ಟದ  ಹಿತೈಷಿಗಳು. ಅವರಷ್ಟು ಹಿತೈಷಿಗಳು ನನಗೆ ಯಾರೂ ಇಲ್ಲ ಎಂದು ವ್ಯಂಗ್ಯವಾಡಿದರು.

ಐದು ವರ್ಷ ಕಾಲ ಸರ್ಕಾರ ನಡೆಸಲಿ ಎಂದು 39 ಶಾಸಕರಿರುವ ಪಕ್ಷಕ್ಕೆ ಸಿಎಂ ಸ್ಥಾನ ಕೊಟ್ಟೆವು ಎಂದು ಅವರು ಪದೆ ಪದೇ ಹೇಳುತ್ತಿದ್ದಾರೆ.  ಐದು ವರ್ಷ ನಾಮಕಾವಸ್ತೆಯಾಗಿ ನಮಗೆ ಅಧಿಕಾರ ಕೊಟ್ಟರು. ಒಂದು ದಿನವೂ ನೆಮ್ಮದಿಯಾಗಿ ಸರ್ಕಾರ ನಡೆಸಲು ಬಿಡಲಿಲ್ಲ. ಎಷ್ಟು ಚಿತ್ರಹಿಂಸೆ ಕೊಟ್ಟರು ಎಂಬುದು ನನಗಷ್ಟೇ ಗೊತ್ತು. ಅದಕ್ಕೇ ಸಮ್ಮಿಶ್ರ ಸರ್ಕಾರ ಹೋಗಿದ್ದು, ನನ್ನಿಂದ ಆ ಸರ್ಕಾರ ಹೋಗಲಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

ನನ್ನನ್ನು ಮುಖ್ಯಮಂತ್ರಿ ಮಾಡಿಕೊಂಡು ಯಾವ ರೀತಿ ನಡೆಸಿಕೊಂಡರು? ಎಷ್ಟು ಅಪಮಾನ ಮಾಡಿದರು? ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಚಳಿ, ಮಳೆ, ಗಾಳಿ ಯಾವುದನ್ನೂ ಲೆಕ್ಕಿಸದೇ ನನ್ನ ಜೊತೆ ನಿಂತುಕೊಂಡರು ನೋಡಿ. ಅವರು ನನಗೆ ಸಹಕಾರ ನೀಡಿದ್ದರಲ್ಲ, ಅದಕ್ಕೆ ಹದಿನಾಲ್ಕು ತಿಂಗಳಿಗೆ ಸರ್ಕಾರ ಹೋಗಿದ್ದು.

ಸರ್ಕಾರ ಬಂದ ಆರಂಭದಲ್ಲಿಯೇ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೋಳಿ ಘರ್ಷಣೆ ಮಾಡಿಕೊಂಡರಲ್ಲ, ಅದೇನು ಸರ್ಕಾರ ಉಳಿಸೋದಕ್ಕೆ ಘರ್ಷಣೆ ಮಾಡಿದರಾ? ಯಾರು ಶತ್ರು, ಯಾರು ಹಿತೈಷಿ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದು ಅವರು ಹೇಳಿದರು.

Share this:

  • WhatsApp
  • Post
  • Tweet
  • Print
  • Email
April 4cooperationkumaraswamymandyaNominationsoughtSubmissionSumalatha
Share 1 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 31 ಮಾರ್ಚ್ 2024
next post
ದಿನ ಭವಿಷ್ಯ : ಸೋಮವಾರ, 01 ಏಪ್ರಿಲ್ 2024

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ