Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಶೇಕಡ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು!

by KM Shivaraju April 3, 2024
written by KM Shivaraju April 3, 2024 0 comments 2 minutes read
Share 1FacebookTwitterPinterestEmail
304

ಚುನಾವಣಾ ತಂತ್ರ ನಿಪುಣ ಕನಗೋಳ್ ವರದಿ

ಬೆಂಗಳೂರು:ಸಂಪುಟದ ಕೆಲವು ಸಚಿವರನ್ನು ಕಣಕ್ಕಿಳಿಸಿದ್ದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 19ರಿಂದ 20 ಕ್ಷೇತ್ರಗಳಲ್ಲಿ ಜಯ ಗಳಿಸುತ್ತಿತ್ತಂತೆ.

ಸಚಿವರನ್ನು ಕಣಕ್ಕಿಳಿಸದ ಕಾರಣ 14 ರಿಂದ 15 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಜಯಭೇರಿ ಭಾರಿಸಲಿದ್ದಾರೆ ಎಂದು ಚುನಾವಣಾ ತಂತ್ರ ನಿಪುಣ ಸುನೀಲ್ ಕನಗೋಳ್ ಎಐಸಿಸಿಗೆ ಸಮೀಕ್ಷಾ ವರದಿ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳೇ ಕೈಹಿಡಿದಿದ್ದು

ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಪಕ್ಷವನ್ನು ಕೈಹಿಡಿದಿದ್ದು, ಇಷ್ಟು ದೊಡ್ಡ ಸಂಖ್ಯೆಯಲ್ಲಿ ಗೆಲುವಿಗೆ, ಜನರ ಮನೆ ಬಾಗಿಲಿಗೆ ಪಂಚ ಯೋಜನೆಗಳು ತಲುಪಿರುವುದೇ ಕಾರಣ ಎಂದಿದ್ದಾರೆ.

ರಾಜ್ಯದ 28 ಕ್ಷೇತ್ರಗಳ ಪ್ರಚಾರ ಸಂದರ್ಭದಲ್ಲೂ ಗ್ಯಾರಂಟಿ ಯೋಜನೆಗಳನ್ನೇ ಮುಂದಿಟ್ಟುಕೊಳ್ಳಿ, ಬರದ ವಿಷಯದಲ್ಲಿ ಕೇಂದ್ರದ ಮಲತಾಯಿ ಧೋರಣೆಯನ್ನು ಜನರ ಮುಂದೆ ಎಳೆ ಎಳೆಯಾಗಿ ಬಿಡಿಸಿಡಿ ಎಂದು ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕನಗೋಳ್ ಅವರೇ ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದಲ್ಲದೆ, ಐದು ಯೋಜನೆಗಳನ್ನು ಹಂತ ಹಂತವಾಗಿ ಮತದಾರರ ಮುಂದಿಟ್ಟು ಕಾಂಗ್ರೆಸ್ ಗೆಲುವಿಗೆ ಪ್ರಮುಖ ರೂವಾರಿಯಾಗಿದ್ದರು.

ಅಂದಿನ ಬಿಜೆಪಿ ಸರ್ಕಾರದ ಶೇಕಡ 40 ಪರ್ಸೆಂಟ್ ಕಮೀಷನ್ ಹಾಗೂ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು, ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಭರ್ಜರಿ ಜಯ ಸಾಧಿಸಿ ಅಧಿಕಾರಕ್ಕೆ ಬಂದಿತು.

ಕನಗೋಳ್ ಗ್ಯಾರಂಟಿ ಮ್ಯಾಜಿಕ್

ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರ ಬಳಗದಲ್ಲಿರುವ ಸುನೀಲ್ ಕನಗೋಳ್ ತೆಲಂಗಾಣದಲ್ಲೂ ಪಕ್ಷ ಅಧಿಕಾರಕ್ಕೆ ಬರಲು, ಅಲ್ಲಿಯೂ ಗ್ಯಾರಂಟಿ ಮ್ಯಾಜಿಕ್ ಮಾಡಿದ್ದರು.

ಲೋಕಸಭಾ ಚುನಾವಣೆಗೆ ಇದೇ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಿ ಎಂದು ವಿವರವಾದ ವರದಿ ನೀಡಿದ್ದಾರೆ.

ಅವರು ನೀಡಿರುವ ವರದಿಯಂತೆ ಬಿಜೆಪಿ ವಶದಲ್ಲಿರುವ ಕೆಲವು ಅಚ್ಚರಿ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಲಿವೆಯಂತೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದ ಕಾಂಗ್ರೆಸ್ ಇದೀಗ ಶೇಕಡ 50ರಷ್ಟು ಪಾಲು ಪಡೆಯಲಿದೆ ಎಂದು ಕನಗೋಳ್ ಹೇಳಿದ್ದಾರೆ.

ಕುಮಾರಸ್ವಾಮಿಗಾಗಿ ಹಿಂದೆ ಸರಿದ ಸುಮಲತಾ
ರಾಜಕೀಯದಲ್ಲಿ ಮಹತ್ತರ ಬದಲಾವಣೆ

ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳುವುದಕ್ಕೂ ಮುನ್ನವೇ ಕನಗೋಳ್ ನೀಡಿರುವ ವರದಿ ಇದು, ಅದಾದ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆ ಆಗಿದೆ.

ಜೆಡಿಎಸ್, ಎನ್‌ಡಿಎ ಮೈತ್ರಿಕೂಟ ಸೇರಿದೆ, ಬಿಜೆಪಿ ಬಹುತೇಕ ಹಳೆ ಮುಖದ ಜಾಗದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಟ್ಟಿದೆ.

ಕನಗೋಳ್ ನೀಡಿದ ವರದಿ ನಂತರ ಈ ಬೆಳವಣಿಗೆ ಆಗಿರುವುದು, ಚುನಾವಣಾ ತಂತ್ರ ನಿಪುಣನ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಸೇರುತ್ತಿದ್ದಂತೆ, ನಾವು ಮತ್ತು ಬಿಜೆಪಿ 28-28 ಗೆಲ್ಲುತ್ತೇವೆ ಎಂಬುದು ಸುಳ್ಳು.

ಕಾಂಗ್ರೆಸ್ 14ರಿಂದ 16 ಸ್ಥಾನಗಳಲ್ಲಿ ಜಯಭೇರಿ ಭಾರಿಸಲಿದೆ ಎಂದು ಮಾಹಿತಿ ನೀಡಿದರು. ಅಷ್ಟೇ ಅಲ್ಲ, ತಮ್ಮ ಚುನಾವಣಾ ಪ್ರಚಾರದಲ್ಲಿ ಗ್ಯಾರಂಟಿ ಯೋಜನೆಗಳನ್ನೇ ಮುಂದಿಟ್ಟುಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಾ ಇದೇ ಮಾರ್ಗಲ್ಲಿದ್ದಾರೆ.

ಗ್ಯಾರಂಟಿ ಫಲಾನುಭವಿಗಳ ಸಮಾವೇಶ

ಕನಗೋಳ್ ವರದಿ ನೀಡಿದ ನಂತರ ಚುನಾವಣಾ ವೇಳಾಪಟ್ಟಿ ಪ್ರಕಟಕ್ಕೂ ಮುನ್ನವೇ ಸರ್ಕಾರದ ಕಾರ್ಯಕ್ರಮದಡಿಯಲ್ಲಿಯೇ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಇದೇ ಕಾರಣಕ್ಕೆ ನಡೆಸಿತು.

ಕನಗೋಳ್ ವರದಿ ಪ್ರಕಾರ ಚಾಮರಾಜನಗರ, ಹಾಸನ, ಮಂಡ್ಯ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಹಾವೇರಿ, ಕಲಬುರಗಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳು ಸೇರಿದಂತೆ ಶೇಕಡ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದಿದ್ದಾರೆ.

ಅವರು ವರದಿ ನೀಡಿದ ನಂತರ ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ಬದಲಾವಣೆಗಳಾಗಿವೆ, ಬೆಂಗಳೂರು ಗ್ರಾಮಾಂತರದಿಂದ ಡಾ.ಮಂಜುನಾಥ್ ಅವರನ್ನು ಕಣಕ್ಕಿಳಿಸಿ ವರ್ಚಸ್ಸಿನ ಮೂಲಕ ಗೆಲುವಿಗೆ ಹೊರಟಿದ್ದರೆ, ಮೈಸೂರು-ಕೊಡಗು ಕ್ಷೇತ್ರದಲ್ಲೂ ಇದೇ ಮಾನದಂಡವಾಗಿಸಿಕೊಂಡು ಒಡೆಯರ್ ಅವರನ್ನು ಕಣಕ್ಕಿಳಿಸಿದೆ.

ಮಂಡ್ಯದಿಂದ ಎನ್‌ಡಿಎ ಅಭ್ಯರ್ಥಿ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವಲ್ಲಿ ಬಿಜೆಪಿ ವರಿಷ್ಠರು ಯಶಸ್ವಿಯಾಗಿದ್ದಾರೆ.

ಬರಕ್ಕೆ ಸ್ಪಂದಿಸದ ಕೇಂದ್ರಕ್ಕೆ ಜನರಿಂದ ತಕ್ಕ ಪಾಠ
ಹೊಸ ಮುಖಗಳಿಗೆ ಬಿಜೆಪಿ ಮಣೆ

ಇದೇ ರೀತಿ ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಸೇರಿದಂತೆ ಹೊಸ ಮುಖಗಳಿಗೆ ಬಿಜೆಪಿ ಮಣೆ ಹಾಕಿದೆ.

ಬದಲಾದ ಚುನಾವಣಾ ರಾಜಕೀಯ ಸನ್ನಿವೇಶದಲ್ಲಿ ಕನಗೋಳ್ ವರದಿ ವಿಧಾನಸಭೆಯಂತೆ ಲೋಕಸಭೆಯಲ್ಲೂ ಯಶಸ್ಸು ಕಾಣುತ್ತದೆಯೇ ಕಾದು ನೋಡಬೇಕು.

ಸುನೀಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಡಳಿತ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡು ಸಂಪುಟ ದರ್ಜೆ ಸ್ಥಾನಮಾನ ನೀಡಿರುವುದಲ್ಲದೆ, ವಿಧಾನಸೌಧದ ಮೂರನೇ ಮಹಡಿಯಲ್ಲಿ ದೊಡ್ಡ ಕೊಠಡಿಯೇ ನೀಡಿದ್ದಾರೆ, ಆದರೆ ಅವರು, ಇದುವರೆಗೂ ಕಚೇರಿಗೆ ಪ್ರವೇಶ ಮಾಡಿಲ್ಲ.

Share this:

  • WhatsApp
  • Post
  • Tweet
  • Print
  • Email
congres to get 14 to 16 seatsguarenty scheems are the key factormagic figures to congres
Share 1 FacebookTwitterPinterestEmail
KM Shivaraju

previous post
ಕುಮಾರಸ್ವಾಮಿಗಾಗಿ ಹಿಂದೆ ಸರಿದ ಸುಮಲತಾ
next post
ದಿನ ಭವಿಷ್ಯ : ಗುರುವಾರ, 04 ಏಪ್ರಿಲ್ 2024

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ