Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಮಲದ ಕೈಹಿಡಿದ ಸುಮಲತಾ

by admin April 5, 2024
written by admin April 5, 2024 0 comments 2 minutes read
2FacebookTwitterPinterestEmail
615

ಬೆಂಗಳೂರು:ಸಂಸದೆ ಸುಮಲತಾ ಅಂಬರೀಶ್ ಇಂದಿಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಪ್ರಸಕ್ತ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದು ಕಮಲದ ಚಿನ್ಹೆ ಹಿಡಿದ ಸುಮಲತಾ ಅವರನ್ನು ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರವಾಲ್, ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಸುಮಲತಾ ಅವರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.

ಪಕ್ಷ ಸೇರ್ಪಡೆಗೊಂಡ ನಂತರ ಮಾತನಾಡಿದ ಸುಮಲತಾ ಅವರು, ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕೆಂಬ ದೃಷ್ಟಿಯಿಂದ ಬಿಜೆಪಿ ಸೇರಿದ್ದೇನೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿ ದೇಶದ ದೃಷ್ಟಿಕೋನವನ್ನು ಬದಲಿಸಿದ್ದಾರೆ.

ದೇಶದ ಹಿತದೃಷ್ಟಿಯಿಂದ ಪಕ್ಷ ಸೇರ್ಪಡೆ

2047ರ ವೇಳೆಗೆ ರಾಷ್ಟ್ರವನ್ನು ವಿಶ್ವದಲ್ಲೇ ಬಲಿಷ್ಠ ದೇಶವನ್ನಾಗಿ ರೂಪಿಸುವ ಕನಸು ಹೊಂದಿದ್ದಾರೆ, ಅವರ ಕನಸು ನನಸು ಮಾಡಲು ನಾವೆಲ್ಲರೂ ಒಗ್ಗೂಡಿ ದುಡಿಯೋಣ, ನಾನು ನನ್ನ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಸೇರ್ಪಡೆಯಾಗಿಲ್ಲ, ಮಂಡ್ಯ ಮತ್ತು ದೇಶದ ಹಿತದೃಷ್ಟಿಯಿಂದ ಬಿಜೆಪಿ ಸೇರಿದ್ದೇನೆ.

ನನಗೆ, ಇಂದಿನ ದಿನವು ನನ್ನ ರಾಜಕೀಯ ಜೀವನದಲ್ಲಿ ಮಹತ್ವ ಪಡೆದಿರುವ ಸುದಿನವಾಗಿದೆ. ಐದು ವರ್ಷಗಳ ಹಿಂದೆ ಮಂಡ್ಯ ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವು ಸಿಕ್ಕಿತ್ತು, ಆ ಚುನಾವಣೆ, ಆ ಸಂದರ್ಭವನ್ನು ಎಂದಿಗೂ ಮರೆಯುವುದಿಲ್ಲ.

ಮೋದಿ ಬೆಂಬಲ ಮರೆಯುವುದಿಲ್ಲ

ಮಂಡ್ಯದ ಜನತೆ, ಅಂಬರೀಶ್ ಅಭಿಮಾನಿಗಳ ಬಳಗ ನನಗೆ ಬೆನ್ನೆಲುಬಾಗಿ ನಿಂತಿದೆ, 5 ವರ್ಷದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಾ ನನಗೆ ಬೆಂಬಲ ನೀಡಿದ್ದರು, ಅದನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ಮೊದಲ ಸಂದರ್ಭದಲ್ಲೇ ನನ್ನನ್ನು ಸಂಸದರ ಸಭೆಯಲ್ಲಿ ಕರೆದು ಕ್ಷೇತ್ರಕ್ಕೆ ಏನಾಗಬೇಕೆಂದು ಮಾಹಿತಿ ಪಡೆದು, ಜಿಲ್ಲೆಯ ಅಭಿವೃದ್ಧಿಗೆ ನಾಂದಿ ಹಾಡಿದರು.

ಮಂಡ್ಯ ಸಕ್ಕರೆ ಕಾರ್ಖಾನೆ ಪುನರುಜ್ಜೀವನಕ್ಕೆ 50 ಕೋಟಿ ರೂ. ನೀಡುವ ಮೂಲಕ ಕಾರ್ಖಾನೆಯಲ್ಲಿ ಮತ್ತೆ ಕಬ್ಬು ಅರೆಯುವುದಕ್ಕೆ ಚಾಲನೆ ನೀಡಿದರು.

ಇಂದಿನ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕೆಲವರು ನಾವೇ ಎಲ್ಲಾ ಹೊಸದಾಗಿ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ, ಸತ್ಯ ಏನೆಂಬುದನ್ನು ನಿಮ್ಮ ಮುಂದಿಟ್ಟಿದ್ದೇನೆ ಎಂದರು.

ಬಿಜೆಪಿ ಗೆಲುವು ನಿಶ್ಚಿತ

ಸುಮಲತಾ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ನಂತರ ಮಾತನಾಡಿದ ವಿಜಯೇಂದ್ರ, ಕರ್ನಾಟಕ ಸೇರಿ ದೇಶಾದ್ಯಂತ ಬಿಜೆಪಿ ಹಾಗೂ ಮೋದಿ ಪರ ಅಲೆ ಇದೆ, ಮೋದಿ ಅವರ ನಾಯಕತ್ವ ಮೆಚ್ಚಿ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ, ಇದರಿಂದ ಪಕ್ಷಕ್ಕೆ ಬಲ ಬಂದಿದೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದರು.

ಮೋದಿ ಪರ ಅಲೆಯಿಂದಾಗಿ ಕಾಂಗ್ರೆಸ್ಸಿನ ಯಾವುದೇ ಸಚಿವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿಲ್ಲ, 28ಕ್ಕೆ 28 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಗೆಲುವಿನ ಸಂಕಲ್ಪ ನಮ್ಮದು ಎಂದರು.

ಇದೇ ಸಂದರ್ಭದಲ್ಲಿ ಕೊಪ್ಪಳ ಕ್ಷೇತ್ರದ ಮಾಜಿ ಸಂಸದ ಎಸ್.ಶಿವರಾಮೇಗೌಡ, ವಿಜಯಪುರ ಜಿಲ್ಲೆಯ ಯುವ ನಾಯಕ ಹಾಗೂ ಸಚಿವ ಶಿವಾನಂದ ಪಾಟೀಲ್ ಸಹೋದರನ ಪುತ್ರ ಹರ್ಷಗೌಡ ಶಿವಶರಣ ಪಾಟೀಲ್, ಮಾಜಿ ಕ್ರಿಕೆಟ್ ಪಟು ದೊಡ್ಡ ಗಣೇಶ್, ಗಾಯತ್ರಿ ತಿಮ್ಮಾರೆಡ್ಡಿ, ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಶ್ರೀನಿವಾಸ್, ತುಕಾರಾಂಗೌಡ ಪಾಟೀಲ್, ಕಾಂಗ್ರೆಸ್ ಮುಖಂಡ ಪ್ರಭುರಾಜ ಎಸ್. ಪಾಟೀಲ್, ಗಂಗಾವತಿ ತಾಲ್ಲೂಕು ಪಂಚಾಯತ್ ಅಧ್ಯಕ್ಷ ವೀರಭದ್ರಗೌಡ ಸೇರಿದಂತೆ ಹಲವು ಮಂದಿ ಪಕ್ಷ ಸೇರ್ಪಡೆಗೊಂಡರು.

ಗೆಲುವು ಸಾಧಿಸದಿದ್ದರೆ ಬ್ಲ್ಯಾಕ್‌ಲಿಸ್ಟ್‌ಗೆ!

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
sumalata joined bjpto make modi pm for third time - joined partyvijayendra and many leaders welcomed sumalata to bjp
2 FacebookTwitterPinterestEmail
admin

previous post
ದಿನ ಭವಿಷ್ಯ : ಶುಕ್ರವಾರ, 05 ಏಪ್ರಿಲ್ 2024
next post
ಗೆಲುವು ಸಾಧಿಸದಿದ್ದರೆ ಬ್ಲ್ಯಾಕ್‌ಲಿಸ್ಟ್‌ಗೆ!

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ