Saturday, May 24, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, May 24, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್-ಬಿಜೆಪಿ/ಜೆಡಿಎಸ್ ನಡುವೆ ನೇರ ಹಣಾಹಣಿ

by KM Shivaraju April 8, 2024
written by KM Shivaraju April 8, 2024 0 comments 2 minutes read
Share 1FacebookTwitterPinterestEmail
245

ಬೆಂಗಳೂರು:ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್ 26ರಂದು ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಎನ್‌ಡಿಎ ಮೈತ್ರಿಕೂಟದ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳಲು ಕಡೆಯ ದಿನವಾದ ಇಂದು ಮೂರೂ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು

ಮೊದಲ ಹಂತದಲ್ಲಿ ಚುನಾವಣೆಯ ನಡೆಯಲಿರುವ ಕ್ಷೇತ್ರಗಳಲ್ಲಿ ಪ್ರಮುಖ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡುವ ಸ್ಥಿತಿಯಲ್ಲಿಲ್ಲ.

ಕಾಂಗ್ರೆಸ್ 14 ಕ್ಷೇತ್ರಗಳಲ್ಲೂ ತನ್ನ ಉಮೇದುವಾರರನ್ನು ನಿಲ್ಲಿಸಿದ್ದರೆ, ಎನ್‌ಡಿಎ ಮೈತ್ರಿಕೂಟದ ಬಿಜೆಪಿ 11 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಮೂರು ಕ್ಷೇತ್ರಗಳನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ವಿರುದ್ಧ ಕಾಂಗ್ರೆಸ್ ನೇರ ಹಣಾಹಣಿ ನಡೆಸಲಿದೆ.

ಬಿರುಸಿನ ಪ್ರಚಾರ

ಈಗಾಗಲೇ ಮೂರೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಇವರುಗಳಿಗೆ ಬೆನ್ನೆಲುಬಾಗಿ ಪಕ್ಷದ ಮುಖಂಡರು ತಮ್ಮ ಅಭ್ಯರ್ಥಿಗಳ ಪರ ರೋಡ್ ಶೋ ಮತ್ತು ಸಭೆಗಳನ್ನು ನಡೆಸಿ ಮತದಾರರನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾತ್ರ ಬೆಂಗಳೂರು ಗ್ರಾಮಾಂತರದಲ್ಲಿ ಸ್ಫರ್ಧಿಸಿರುವ ಅಭ್ಯರ್ಥಿ ಡಾ.ಮಂಜುನಾಥ್ ಪರ ಬೃಹತ್ ರೋಡ್ ಶೋ ನಡೆಸಿದ್ದನ್ನು ಹೊರತುಪಡಿಸಿದರೆ, ಉಳಿದ ಯಾವುದೇ ರಾಷ್ಟ್ರೀಯ ನಾಯಕರು ರಾಜ್ಯದಲ್ಲಿ ಇನ್ನೂ ಚುನಾವಣಾ ಪ್ರಚಾರ ಕೈಗೊಂಡಿಲ್ಲ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜವಂಶದ ಯದುವೀರ್ ಕೃಷ್ಣದತ್ತ ಒಡೆಯರ್, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ವಿರುದ್ಧ ಬಿಜೆಪಿಯಿಂದ ಡಾ.ಮಂಜುನಾಥ್ ಕಣಕ್ಕಿಳಿದಿರುವುದರಿಂದ ಇವುಗಳು ಮೊದಲ ಹಂತದ ಚುನಾವಣೆಯ ಪ್ರತಿಷ್ಠೆಯ ಕ್ಷೇತ್ರಗಳಾಗಿವೆ.

11 ಸಾಮಾನ್ಯ ಕ್ಷೇತ್ರಗಳು

ಚಾಮರಾಜನಗರ, ಕೋಲಾರ ಹಾಗೂ ಚಿತ್ರದುರ್ಗ ಮೀಸಲು ಕ್ಷೇತ್ರಗಳಾಗಿದ್ದು, ಉಳಿದ 11 ಸಾಮಾನ್ಯ ಕ್ಷೇತ್ರಗಳಾಗಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟದಲ್ಲಿರುವ ಪ್ರಭಾವೀ ಮಂತ್ರಿಗಳು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳು ಈ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಗೆ ಒಳಪಟ್ಟಿವೆ.

ಸಿದ್ದರಾಮಯ್ಯ ಅವರಿಗೆ ತಮ್ಮ ವರುಣ ಕ್ಷೇತ್ರ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬಂದರೂ ಅವರು ಮೈಸೂರು-ಕೊಡಗು ಕ್ಷೇತ್ರವನ್ನೂ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಏಪ್ರಿಲ್ 2ನೇ ವಾರ ದ್ವಿತೀಯ ಪಿಯು ಫಲಿತಾಂಶ
ಬಿರುಸಿನ ರೋಡ್ ಶೋ

ಈಗಾಗಲೇ ಅವರು ಈ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸಿ ಬಿಜೆಪಿ ಮುಷ್ಠಿಯಲ್ಲಿರುವ ಬೆಂಗಳೂರು ಕ್ಷೇತ್ರಗಳನ್ನೂ ತಮ್ಮದಾಗಿಸಿಕೊಳ್ಳಲು ಕಳೆದ ಎರಡು ದಿನಗಳಿಂದ ಬಿರುಸಿನ ರೋಡ್ ಶೋ ನಡೆಸಿದ್ದಾರೆ.

ಮತದಾನಕ್ಕೆ ಇನ್ನು ಕೇವಲ 20 ದಿನ, ಆದರೆ ಪ್ರಚಾರಕ್ಕೆ ಉಳಿದಿರುವುದೇ 18 ದಿನಗಳು. ಇಷ್ಟರಲ್ಲಿ ಮತದಾರರನ್ನು ಯಾರು ಓಲೈಸಿಕೊಳ್ಳುವರೋ ಅವರು ಜಯದ ಮಾಲೆ ಧರಿಸುತ್ತಾರೆ.

ರಾಜ್ಯದ ಉಳಿದ 14 ಕ್ಷೇತ್ರಗಳಿಗೆ ಮೇ 7ರಂದು ಚುನಾವಣೆ ನಡೆಯಲಿದ್ದು, ಅತ್ತ ಕಡೆಗೆ ಪಕ್ಷದ ಮುಖಂಡರುಗಳು ಇನ್ನೂ ಗಮನ ಹರಿಸಿಲ್ಲ, ಎಲ್ಲರೂ ಮೊದಲ ಹಂತದ ಕಡೆಯೇ ಹೆಚ್ಚು ಗಮನ ಕೇಂದ್ರೀಕರಿಸಿದ್ದಾರೆ.

Share this:

  • WhatsApp
  • Post
  • Tweet
  • Print
  • Email
bjp - jdscongresfirst phase election in karnatakaloka sabha election - 2024nda v/s congres
Share 1 FacebookTwitterPinterestEmail
KM Shivaraju

previous post
ಏಪ್ರಿಲ್ 2ನೇ ವಾರ ದ್ವಿತೀಯ ಪಿಯು ಫಲಿತಾಂಶ
next post
ದಿನ ಭವಿಷ್ಯ : ಮಂಗಳವಾರ, 09 ಏಪ್ರಿಲ್ 2024

You may also like

ಪ್ರವಾಸಿಗರಿಗೆ ಜೂನ್ 1ರಿಂದ ಶಕ್ತಿಸೌಧ ವೀಕ್ಷಣೆ ಅವಕಾಶ

May 24, 2025

ಸಿ.ಡಿ.ಫ್ಯಾಕ್ಟರಿ ಮಾಲಿಕರಿಂದ ಡಾ.ಪರಮೇಶ್ವರ್‌ಗೆ ಸಂಕಷ್ಟ

May 23, 2025

ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್

May 23, 2025

ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

May 22, 2025

ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

May 22, 2025

ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ

May 22, 2025

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025

Categories

  • Special Story (181)
  • ಅಂಕಣ (102)
  • ಉದ್ಯೋಗ (241)
  • ದಿನ ಭವಿಷ್ಯ (110)
  • ರಾಜಕೀಯ (1,588)
  • ರಾಜ್ಯ (1,878)
  • ರಾಷ್ಟ್ರ (1,850)
  • ವಿಶ್ಲೇಷಣೆ (184)
  • ಶಿಕ್ಷಣ (320)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರವಾಸಿಗರಿಗೆ ಜೂನ್ 1ರಿಂದ ಶಕ್ತಿಸೌಧ ವೀಕ್ಷಣೆ ಅವಕಾಶ

    May 24, 2025
  • ಸಿ.ಡಿ.ಫ್ಯಾಕ್ಟರಿ ಮಾಲಿಕರಿಂದ ಡಾ.ಪರಮೇಶ್ವರ್‌ಗೆ ಸಂಕಷ್ಟ

    May 23, 2025
  • ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್

    May 23, 2025

KMS Special

  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರವಾಸಿಗರಿಗೆ ಜೂನ್ 1ರಿಂದ ಶಕ್ತಿಸೌಧ ವೀಕ್ಷಣೆ ಅವಕಾಶ

May 24, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ