Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೇಶ ವಿಭಜನೆಗೆ ಮತ ಬೇಡ!

by admin April 11, 2024
written by admin April 11, 2024 0 comments 2 minutes read
0FacebookTwitterPinterestEmail
170

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೊಡುವ ಮತ ಭ್ರಷ್ಟಾಚಾರಕ್ಕೆ ಮತ್ತು ದೇಶದ ಅಭದ್ರತೆಗೆ ನೀಡುವ ಮತವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಅವರ ಗ್ಯಾರಂಟಿಗೆ ಮತ ನೀಡುವುದರಿಂದ ಸದೃಢ, ಸುರಕ್ಷಿತ ಭಾರತದ ಆರ್ಥಿಕ ಪ್ರಗತಿಗೆ ಹಾಗೂ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದಿದ್ದಾರೆ.

ಎನ್‌ಡಿಎ ಅಭ್ಯರ್ಥಿಗಳಿಗೆ ಮತ ಹಾಕಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಮತ ನೀಡಿದರೆ ಆಂತರಿಕ ಸುರಕ್ಷತೆಯ ಅಪಾಯಕ್ಕೆ ನಾಂದಿಯಾಗುತ್ತದೆ, ಮತ ನೀಡುವ ಮುನ್ನ ರಾಷ್ಟ್ರದ ಭದ್ರತೆ ಮತ್ತು ಐಕ್ಯತೆಯನ್ನು ಗಮನಲ್ಲಿಟ್ಟುಕೊಂಡು ಎನ್‌ಡಿಎ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಮನವಿ ಮಾಡಿದರು.

ದೇಶ ವಿಭಜನೆಯ ಅಪಸ್ವರ ಎತ್ತುವವರನ್ನು, ಜನರನ್ನು ಭಾಷೆ, ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಒಡೆಯುವ ಇಂಡಿಯಾ ಮೈತ್ರಿಕೂಟವನ್ನು ಜನತೆ ಸಾರಾಸಗಟಾಗಿ ತಿರಸ್ಕರಿಸುವಂತೆ ಕೋರಿದರು.

ಮೋದಿ ಅವರು ಗ್ಯಾರಂಟಿ ನೀಡಿದರೆ ಅದು ಜಾರಿಗೆ ಬಂದೇ ಬರುತ್ತದೆ, ಪೊಳ್ಳು ಆಶ್ವಾಸನೆ ನೀಡುವ ಪ್ರಶ್ನೆಯೇ ಇಲ್ಲವಾಗಿದೆ ಎಂಬುದನ್ನು ರಾಷ್ಟ್ರದ ಜನತೆ ನಂಬಿದ್ದಾರೆ.

ಕಾಂಗ್ರೆಸ್ ಪಕ್ಷ ಸುಳ್ಳಿನ ಕಂತೆ

ಕಾಂಗ್ರೆಸ್ ಪಕ್ಷ ಸುಳ್ಳಿನ ಕಂತೆಯ ಪ್ರಣಾಳಿಕೆಯಂತೆ, ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ರಾಜ್ಯದಲ್ಲಿ ಕಳೆದ 10 ತಿಂಗಳಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡದೆ, ಸಿದ್ದರಾಮಯ್ಯ ಸರ್ಕಾರ ಬರೀ ಗ್ಯಾರಂಟಿಯಲ್ಲೇ ಜಪ ಮಾಡಿಕೊಂಡು ಕಳೆದಿದೆ, ಇಂತಹವರಿಗೆ ಮತ ನೀಡಿ ವ್ಯರ್ಥ ಮಾಡಿಕೊಳ್ಳಬೇಡಿ ಎಂದರು.

ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಪದೇ ಪದೆ ಹರಿಹಾಯುತ್ತಲೇ ಬಂದಿದ್ದಾರೆ, ಎರಡು ಕೋಟಿ ಉದ್ಯೋಗ ಕೊಟ್ಟರಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ. 2014ರಿಂದ ಈವರೆಗೂ 7 ಕೋಟಿ ಹೊಸ ಉದ್ಯೋಗ ಸೇರ್ಪಡೆಯಾಗಿದೆ, ಎಂಎಸ್‌ಎಂಇ ಸಂಖ್ಯೆ ಕೂಡ ಹೆಚ್ಚಳವಾಗಿದೆ ಎಂದರು.

ಆರು ವಂದೇ ಭಾರತ್ ರೈಲು

ರಾಷ್ಟ್ರೀಯ ಹೆದ್ದಾರಿ 3,234 ಕಿ.ಮೀ ಬಿಜೆಪಿ ಅವಧಿಯಲ್ಲಿ ಆಗಿದೆ, ಪ್ರತಿ ದಿನ 33 ಕಿ.ಮೀ ರಸ್ತೆ ಮಾಡಲಾಗುತ್ತಿದೆ, ಕರ್ನಾಟಕದಲ್ಲಿ ರೈಲ್ವೇ ಯೋಜನೆಯನ್ನು ವಿದ್ಯುದೀಕರಣ ಮಾಡಲಾಗಿದೆ. ಆರು ವಂದೇ ಭಾರತ್ ರೈಲು ಸಂಚಾರ ಮಾಡುತ್ತಿವೆ.

ರಾಜ್ಯದ 54 ಲಕ್ಷ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಆರು ಸಾವಿರ ರೂ. ಕೊಡಲಾಗುತ್ತಿದೆ. ಇದರೊಂದಿಗೆ ಬಿಜೆಪಿ ಅಧಿಕಾರದಲ್ಲಿದ್ದಾಗ ಹೆಚ್ಚುವರಿಯಾಗಿ ನಾಲ್ಕು ಸಾವಿರ ರೂ. ರೈತರಿಗೆ ನೀಡುತ್ತಿದ್ದೆವು, ಈಗಿನ ರಾಜ್ಯ ಸರ್ಕಾರ ಅದನ್ನು ನಿಲ್ಲಿಸಿದೆ.

ಕೇಂದ್ರದ ಹತ್ತು ವರ್ಷಗಳ ಸಾಧನೆ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ, ವಿಶ್ವದ ಆರ್ಥಿಕ ಅಭಿವೃದ್ಧಿಯಲ್ಲಿ ಐದನೇ ಸ್ಥಾನದಲ್ಲಿ ಭಾರತ ಇದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ.

ಶುಕ್ರವಾರ 2ನೇ ಹಂತದ ರಣಕಹಳೆ
ಸಂವಿಧಾನ ವಿಧಿ 370 ರದ್ದು

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ಕೇದಾರನಾಥ ಜೀರ್ಣೋದ್ಧಾರ, ಎಕ್ಸ್‌ಪ್ರೆಸ್ ಕಾರಿಡಾರ್, ಸಂವಿಧಾನ ವಿಧಿ 370 ರದ್ದು, 21 ಲಕ್ಷ ನಿವೃತ್ತ ಯೋಧರಿಗೆ ಒಂದು ಶ್ರೇಣಿ ಒಂದು ಪೆನ್ಷನ್.

ಕೇಂದ್ರದಿಂದ ರಾಜ್ಯಕ್ಕೆ 1.85 ಲಕ್ಷ ಕೋಟಿ ರೂ. ತೆರಿಗೆ ಹಣ ಪಾವತಿಯಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಲಕ್ಷಾಂತರ ಮನೆಗೆ ನಲ್ಲಿ ನೀರು ಹರಿಸಲಾಗಿದೆ, ಸುಕನ್ಯಾ ಸಮೃದ್ಧಿ ಯೋಜನೆ ಜಾರಿಗೆ ತರಲಾಗಿದೆ.

ಗರೀಬ್ ಕಲ್ಯಾಣ ಯೋಜನೆ ಮೂಲಕ 70 ಲಕ್ಷ ಮೆಟ್ರಿಕ್ ಟನ್ ಆಹಾರಧಾನ್ಯ ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಐಐಡಿ, ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು ತೆರೆಯಲಾಗಿದೆ, ಬೆಂಗಳೂರಿನಲ್ಲಿ ಸ್ಯಾಟಲೈಟ್ ರಿಂಗ್ ರೋಡ್ ನಿರ್ಮಾಣಕ್ಕೆ ಭಾರತ್ ಮಾಲಾ ಯೋಜನೆಯಡಿ ಹಣ ಬಿಡುಗಡೆಗೆ ತಯಾರಿ ನಡೆಯುತ್ತಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್-2 ಕಾರ್ಯಾರಂಭವಾಗಿದೆ ಎಂದು ಯಡಿಯೂರಪ್ಪ ಕೇಂದ್ರದಿಂದ ರಾಜ್ಯಕ್ಕೆ ನೀಡಲಾದ ಕಾರ್ಯಕ್ರಮಗಳ ಪಟ್ಟಿ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
6 vande bharat rail to karnatakabjp blames congresbs yadiyurappamodi is the only guarenty to the nationnda
0 FacebookTwitterPinterestEmail
admin

previous post
ದಿನ ಭವಿಷ್ಯ : ಗುರುವಾರ, 11 ಏಪ್ರಿಲ್ 2024
next post
ಶುಕ್ರವಾರ 2ನೇ ಹಂತದ ರಣಕಹಳೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ