Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನೇಹಾ ಹತ್ಯೆ ತನಿಖೆ ಸಿಒಡಿಗೆ: ಸಿಎಂ ಘೋಷಣೆ

by admin April 22, 2024
written by admin April 22, 2024 0 comments 2 minutes read
0FacebookTwitterPinterestEmail
127

ಬೆಂಗಳೂರು:ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಲಾಗುವುದು, ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಘೋಷಣೆ ಮಾಡಿದ್ದಾರೆ.

ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ನಾವು ಮುಚ್ಚಿಹಾಕುವ ಪ್ರಯತ್ನ ಮಾಡಿಲ್ಲ, ಇದನ್ನು ಕೆಲವರು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ, ಧರಣಿ ಮಾಡುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಅವರು ಸಿಒಡಿ ತನಿಖೆ ಘೋಷಣೆ ಮಾಡಿದ್ದಾರೆ.

ಪ್ರಕರಣ ನಮ್ಮ ಗಮನಕ್ಕೆ ಬರುತ್ತಿದ್ದಂತೆ ನಮ್ಮ ಸಚಿವ ಹೆಚ್.ಕೆ.ಪಾಟೀಲ್ ಭೇಟಿ ನೀಡಿದ್ದಾರೆ, ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ನಾನೂ ಭೇಟಿ ನೀಡುವುದಾಗಿ ಸಿದ್ದರಾಮಯ್ಯ ತಿಳಿಸಿದರು.

ತಪ್ಪಿತಸ್ತ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ

ತಪ್ಪಿತಸ್ತ ಉಗ್ರ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಇದೇ ಕಾರಣಕ್ಕಾಗಿ ನಾವು ಪ್ರಕರಣವನ್ನು ಸಿಒಡಿಯಿಂದ ತನಿಖೆ ಮಾಡಿಸುತ್ತಿರುವುದಲ್ಲದೆ, ವಿಶೇಷ ನ್ಯಾಯಾಲಯ ಸ್ಥಾಪಿಸಿ ತ್ವರಿತವಾಗಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು.

ಬಿಜೆಪಿಯವರು ರಾಜಕೀಯ ಬಣ್ಣ ಕಟ್ಟಿ ಇದನ್ನು ಚುನಾವಣೆಗೆ ಬಳಸಿಕೊಳ್ಳಲು ಹೋಗುತ್ತಿದ್ದಾರೆ, ಜನಕ್ಕೂ ಇದು ಅರ್ಥವಾಗುತ್ತದೆ, ತನಿಖೆಯಿಂದ ಸತ್ಯಾಸತ್ಯತೆ ಹೊರಬೀಳಲಿದೆ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾನ ಆಸ್ತಿ ಹಂಚಿಕೆ ಮಾಡುತ್ತಾರೆ, ಮಹಿಳೆಯರ ಮಾಂಗಲ್ಯವನ್ನು ಮುಸ್ಲಿಂಮರಿಗೆ ಕೊಡುತ್ತಾರೆ ಎಂದು ಪ್ರಧಾನಮಂತ್ರಿ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಪ್ರಧಾನಿಯಾಗಿ ಅವರು ಇಷ್ಟು ಕೆಳಮಟ್ಟದಲ್ಲಿ ಮಾತನಾಡ ಬಾರದಿತ್ತು, ಹಿಂದೂಗಳ ಮಂಗಳಸೂತ್ರವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವಂಥ ಮಾತುಗಳು, ದೇಶದ ಪ್ರಧಾನಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು, ಇಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ ಎಂದರು.

ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲರೂ ಮುಖ್ಯವಾಹಿನಿಗೆ ಬರಬೇಕು, ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲ.

ಕಾಂಗ್ರೆಸ್‌ಗೆ ಮತ ಹಾಕಿದರೆ ವ್ಯರ್ಥ: ಬಿಜೆಪಿ ಟೀಕೆ
ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್

ಕಾಂಗ್ರೆಸ್ ಜಾಹಿರಾತಿಗೆ ಪ್ರತಿಯಾಗಿ ಬಿಜೆಪಿಯವರು ಕಾಂಗ್ರೆಸ್ ಡೇಂಜರ್ ಎಂಬ ಜಾಹಿರಾತು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹೆಣ್ಣುಮಕ್ಕಳಿಗೆ ಉಚಿತ ಬಸ್ ಸೌಲಭ್ಯ, ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಗಳು ಡೇಂಜರ್ ಆಗುತ್ತವೆಯೇ, ಸಮಾಜವನ್ನು ಒಡೆಯುವಂತಹ ಕಾರ್ಯಗಳು, ಮತಗಳ ಧ್ರುವೀಕರಣ ಮಾಡುವುದು ಅಪಾಯಕಾರಿಯೇ ಹೊರತು, ವಿವಿಧತೆಯಲ್ಲಿ ಏಕತೆಯನ್ನು ತರುವುದು ಡೇಂಜರ್ ಅಲ್ಲ, ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಇದ್ದರೆ, ಭ್ರಷ್ಟಾಚಾರ ಹೆಚ್ಚಾಗಲಿದೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾನೂನು ಪ್ರಕಾರ ರೇಡ್ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ, ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ, ಯಡಿಯೂರಪ್ಪ, ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ, ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ ರೇಡ್‌ಗಳು ಏಕೆ ಆಗುತ್ತಿಲ್ಲ, ಆದಾಯ ತೆರಿಗೆಯನ್ನು ಸರಿಯಾಗಿ ಪಾವತಿಸದವರ ಮೇಲೆ ಕ್ರಮವಾಗಲಿ, ಆದಾಯಮೀರಿ ಆಸ್ತಿ ಸಂಪಾದಿಸಿದ ಎಲ್ಲರ ಮೇಲೂ ಕಾನೂನು ಕ್ರಮವಾಗಬೇಕು ಎಂದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಸರಿಯಲ್ಲ, 2022ರಲ್ಲಿ ಹೋಲಿಸಿದರೆ ಕಾಂಗ್ರೆಸ್ ಸರ್ಕಾರವಿದ್ದಾಗಲೇ ಅಪರಾಧಗಳು ಕಡಿಮೆಯಾಗಿದೆ. 2023 ರಲ್ಲಿ 1,295 ಅಪರಾಧ ಪ್ರಕರಣಗಳು ನಡೆದಿದ್ದರೆ, ಬಿಜೆಪಿ ಆಡಳಿತ ಕಾಲದಲ್ಲಿ 2022 ರಲ್ಲಿ 1,370 ಪ್ರಕರಣಗಳು ನಡೆದಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp is danger to the nationcm to visit neha houseneha murder case to cod - siddaramaiahspecial court to be established
0 FacebookTwitterPinterestEmail
admin

previous post
ಕಾಂಗ್ರೆಸ್‌ಗೆ ಮತ ಹಾಕಿದರೆ ವ್ಯರ್ಥ: ಬಿಜೆಪಿ ಟೀಕೆ
next post
ಒಂದು ವಾರದಲ್ಲಿ ರಾಜ್ಯಕ್ಕೆ ಕೇಂದ್ರದ ಬರ ಪರಿಹಾರ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ