Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ

by admin May 11, 2024
written by admin May 11, 2024 0 comments 1 minutes read
Share 0FacebookTwitterPinterestEmail
348

ಬೆಂಗಳೂರು:ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಯಲಿದೆ.

ಪದವಿ ಹಾಗೂ ಶಿಕ್ಷಕರ ಆರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ನಾಲ್ಕರಲ್ಲೂ, ಜೆಡಿಎಸ್ ಎರಡರಲ್ಲೂ ಸ್ಪರ್ಧಿಸಲಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆ ಚರ್ಚೆ ಮಾಡಿದ ನಂತರ ಸೀಟು ಹೊಂದಾಣಿಕೆ ಅಂತಿಮಗೊಂಡಿದೆ.

ಬಿಜೆಪಿ-ಜೆಡಿಎಸ್ ಒಗ್ಗಟ್ಟಿನಿಂದ ಕೆಲಸ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದು, ಇದನ್ನೇ ಪ್ರಜ್ಞಾವಂತ ಮತದಾರರ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲೂ ಮುಂದುವರೆಸಲು ತೀರ್ಮಾನಿಸಲಾಗಿದೆ.

ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ಹೊರಬೀಳುತ್ತಿದ್ದಂತೆ ಮೈತ್ರಿಯಲ್ಲಿ ಬಿರುಕು ಎಂಬ ಮಾತುಗಳು ಕೇಳಿಬಂದಿದ್ದವು.

ಇತ್ತೀಚಿಗೆ ಅಮಿತ್ ಷಾ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲೂ ಕುಮಾರಸ್ವಾಮಿ ಅವರೊಂದಿಗೆ ಚುನಾವಣೆ ಬಗ್ಗೆ ಪ್ರಾಸ್ತಾವಿಕವಾಗಿ ಚರ್ಚೆ ಮಾಡಿದ್ದರು, ಅದಾದ ನಂತರ ರಾಜ್ಯ ಬಿಜೆಪಿ ನಾಯಕರೊಂದಿಗೆ ನಡ್ಡಾ ಅವರು ಸಮಾಲೋಚಿಸಿ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.

ಯಾರಿಗೆ ಯಾವ ಕ್ಷೇತ್ರ ಎಂಬ ಪಟ್ಟಿ ಹೊರಬೀಳಲಿದೆ. ಉನ್ನತ ಮೂಲಗಳ ಪ್ರಕಾರ ಜೆಡಿಎಸ್‌ಗೆ ಕರ್ನಾಟಕ ದಕ್ಷಿಣ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರಗಳು ದೊರೆಯುವ ಸಾಧ್ಯತೆ ಇದೆ.

ಉಳಿದಂತೆ ಕರ್ನಾಟಕ ಈಶಾನ್ಯ, ನೈಋತ್ಯ, ಆಗ್ನೇಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಪದವೀಧರರ ಕ್ಷೇತ್ರ ಬಿಜೆಪಿ ಪಾಲಾಗಬಹುದು.

ಕಾಂಗ್ರೆಸ್ ಸರ್ಕಾರ ಪತನ ಹಗಲುಗನಸು
ಅಭ್ಯರ್ಥಿಗಳ ಆಯ್ಕೆ ಚರ್ಚೆ

ನಡ್ಡಾ ಅವರ ಸೂಚನೆ ತಲುಪುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಪಾಲಿಗೆ ಬಂದಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ರಾಜ್ಯ ಮುಖಂಡರೊಂದಿಗೆ ಇಡೀ ದಿನ ಚರ್ಚೆ ಮಾಡಿದ್ದಾರೆ.

ನಾಳೆ ಬೆಳಗ್ಗೆ ಬಹುತೇಕ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಜೆಪಿ ವರಿಷ್ಠರಿಗೆ ಕಳುಹಿಸಲು ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ.

ಕಳೆದ ಬಾರಿ ಈ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮೂರರಲ್ಲೂ, ಜೆಡಿಎಸ್ ಎರಡರಲ್ಲೂ, ಕಾಂಗ್ರೆಸ್ ಒಂದರಲ್ಲೂ ಗೆದ್ದಿದ್ದವು.

ಈ ಮಧ್ಯೆ, ಪ್ರವಾಸದಲ್ಲಿರುವ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ-ಜೆಡಿಎಸ್ ಮೈತ್ರಿ ವಿಧಾನ ಪರಿಷತ್‌ಗೆ ನಡೆಯಲಿರುವ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲೂ ಮುಂದುವರೆಯಲಿದೆ ಎಂದಿದ್ದಾರೆ.

ಬಿಜೆಪಿ ನಾಲ್ಕು ಸ್ಥಾನಗಳಲ್ಲೂ, ಜೆಡಿಎಸ್ ಎರಡು ಕ್ಷೇತ್ರಗಳನ್ನು ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸುವುದಾಗಿ ತಿಳಿಸಿದ್ದಾರೆ.

ಮೋದಿ ಅವರನ್ನು ರಾಜಕೀಯವಾಗಿ ಸೋಲಿಸಲು ಹೋರಾಟ

Share this:

  • WhatsApp
  • Post
  • Tweet
  • Print
  • Email
4-2 seat sharingbjp-jds coalitioncandidates selection is oncouncil election
Share 0 FacebookTwitterPinterestEmail
admin

previous post
ಕಾಂಗ್ರೆಸ್ ಸರ್ಕಾರ ಪತನ ಹಗಲುಗನಸು
next post
ಕರ್ನಾಟಕ ಸರ್ಕಾರದ ಪ್ರಥಮ ವರ್ಷದ ಸಾಧನಾ ಸಂಭ್ರಮಾಚರಣೆ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ