Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ತಪ್ಪು ಸಾಬೀತಾದರೆ ಕ್ರಮ ಜರುಗಿಸಲಿ

by admin May 18, 2024
written by admin May 18, 2024 0 comments 2 minutes read
0FacebookTwitterPinterestEmail
443

ಬೆಂಗಳೂರು:ಸಂಸದ ಪ್ರಜ್ವಲ್ ರೇವಣ್ಣ ತಪ್ಪೆಸಗಿರುವುದು ಸಾಬೀತಾದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಿ, ಅದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ.

ಜೆ.ಪಿ.ನಗರದ ಶ್ರೀನಿವಾಸ ದೇವಸ್ಥಾನದಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ಮುಂದಿಟ್ಟುಕೊಂಡು ಇಲ್ಲದ ಕಟ್ಟು ಕತೆಗಳನ್ನು ಕಟ್ಟಿ ನಮ್ಮ ಕುಟುಂಬವನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆದಿದೆ.

ತಪ್ಪು ಮಾಡಿದ್ರೆ ಶಿಕ್ಷೆಗೆ ಒಳಪಡಲಿ

ಇಂತಹ ಷಡ್ಯಂತ್ರಗಳನ್ನು ಎದುರಿಸುವ ಶಕ್ತಿಯನ್ನು ಭಗವಂತ ನೀಡಿದ್ದಾನೆ, ಪ್ರಜ್ವಲ್ ಆರೋಪಕ್ಕೆ ಸಂಬಂಧಿಸಿದಂತೆ ನಮ್ಮ ತಕರಾರಿಲ್ಲ, ಆ ಬಗ್ಗೆ ತನಿಖೆ ನಡೆಯುತ್ತಿದೆ, ಅವನು ತಪ್ಪು ಮಾಡಿದ್ರೆ ಶಿಕ್ಷೆಗೆ ಒಳಪಡಲಿ ಎಂದರು.

ಪ್ರಜ್ವಲ್ ಮತ್ತು ರೇವಣ್ಣ ಪ್ರಕರಣದ ನಂತರ ಇದೇ ಮೊದಲ ಬಾರಿಗೆ ಬಹಿರಂಗವಾಗಿ ಕಾಣಿಸಿಕೊಂಡ ದೇವೇಗೌಡರು, ಸುದ್ದಿಗಾರರ ಪ್ರಶ್ನೆಗಳಿಗೂ ಚುಟುಕಾಗಿ ಉತ್ತರಿಸಿದರು.

ನಮ್ಮ ವಿರುದ್ಧ ರಾಜಕೀಯ ಸೇಡು

ರೇವಣ್ಣ ಪ್ರಕರಣವನ್ನು ಸೃಷ್ಠಿಸಿ ನಮ್ಮ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆ, ಅವರು ಯಾರೆಂಬುದು ನಮಗೆ ಗೊತ್ತಿದೆ, ಆ ಬಗ್ಗೆ ಈಗ ಮಾತನಾಡುವುದಿಲ್ಲ, ಮುಂದೆ ಸಮಯ ಬಂದಾಗ ತಿಳಿಸುತ್ತೇನೆ ಎಂದರು.

ರೇವಣ್ಣ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ನಾನು ಹೆಚ್ಚಿಗೆ ಮಾತನಾಡುವುದಿಲ್ಲ, ಪ್ರಜ್ವಲ್ ಪ್ರಕರಣವನ್ನು ನಾವು ವಹಿಸಿಕೊಂಡು ಮಾತನಾಡುವುದಿಲ್ಲ, ಆದರೆ ರೇವಣ್ಣ ಪ್ರಕರಣ ಒಂದು ಕಟ್ಟುಕತೆ.

ಪ್ರಜ್ವಲ್ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ಕುಟುಂಬದ ಪರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ, ಇನ್ನು ರೇವಣ್ಣ ವಿಷಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ, ನಾನು ಆ ಬಗ್ಗೆ ಹೆಚ್ಚು ಮಾತನಾಡುವುದು ಸೂಕ್ತ ಅಲ್ಲ ಎಂದರು.

ಪೆನ್ ಡ್ರೈ ಪ್ರಕರಣ 100 ಕೋಟಿ  ಆಫರ್ !
ಕಾನೂನಿನ ಚೌಕಟ್ಟಿನಡಿ ಕ್ರಮ

ಪ್ರಜ್ವಲ್ ಹೊರಗೆ ಹೋಗಿದ್ದಾನೆ, ಆತನ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ, ಘಟನೆ ಬಗ್ಗೆ ಈ ನೆಲದ ಕಾನೂನಿನ ಚೌಕಟ್ಟಿನಡಿ ಏನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳಲಿ, ಅದಕ್ಕೆ ನಮ್ಮ ಆಕ್ಷೇಪ ಇಲ್ಲ.

ಪ್ರಜ್ವಲ್ ಪ್ರಕರಣದಲ್ಲಿ ಅನೇಕ ಮಂದಿ ಇದ್ದಾರೆ, ನಾನು ಅವರ ಹೆಸರುಗಳನ್ನು ಹೇಳುವಂತಹವನಲ್ಲ, ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು, ಈ ಎಲ್ಲಾ ವಿಚಾರಗಳ ಬಗ್ಗೆ ಕುಮಾರಸ್ವಾಮಿ ಬಿಡಿಸಿ.., ಬಿಡಿಸಿ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಕೀಲ ದೇವರಾಜೇಗೌಡ ಮಾಡಿರುವ ಆರೋಪಕ್ಕೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹೋರಾಡುವ ಛಲ ಇದೆ

ಎಲ್ಲಾ ವಿಚಾರಗಳ ಬಗ್ಗೆ ಕುಮಾರಸ್ವಾಮಿ ಉತ್ತರ ನೀಡಿದ್ದಾರೆ, ನಮ್ಮ ವಿರುದ್ಧ ಎಂತಹ ಆರೋಪ ಬಂದರೂ ನಮಗೆ ಹೋರಾಟ ಮಾಡುವ ಛಲ ಇದೆ.

ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತದೆ, ಆ ನಂತರ ಸಾಕಷ್ಟು ವಿಷಯಗಳ ಬಗ್ಗೆ ನಿಮ್ಮ ಮುಂದಿಡುತ್ತೇನೆ ಎಂದರು.

ಪ್ರಧಾನಿ ಶುಭ ಹಾರೈಕೆ

ತೊಂಭತ್ತೊಂದನೇ ವರ್ಷ ಪೂರ್ಣಗೊಳಿಸಿ 92ಕ್ಕೆ ಕಾಲಿರಿಸಿರುವ ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ಎಕ್ಸ್ ಖಾತೆ ಮೂಲಕ ಶುಭ ಕೋರಿರುವುದಲ್ಲದೆ, ರೈತನ ಮಗನಿಗೆ ತಮ್ಮ ಕಾರ್ಯಕರ್ತನ ಮೂಲಕ ಹಲಸಿನಹಣ್ಣು ಕಳುಹಿಸಿಕೊಟ್ಟಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ಅವರು, ಗೌಡರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ, ನಿಮ್ಮ ಸೇವೆ ಗಣನೀಯವಾಗಿದ್ದು, ರಾಜಕೀಯ ವಲಯದಲ್ಲಿ ಅತ್ಯಂತ ಗೌರವದಿಂದ ಕಾಣಲಾಗುತ್ತದೆ.

ಪ್ರಧಾನಿ ಅವರು ಪಕ್ಷದ ಕಾರ್ಯಕರ್ತನ ಮೂಲಕ ಕಳುಹಿಸಿಕೊಟ್ಟ ಹಲಸಿನ ಹಣ್ಣನ್ನು ದೇವೇಗೌಡರು, ತಮ್ಮ ಮೂಗಿನ ಬಳಿ ಇಟ್ಟುಕೊಂಡು ಆಸ್ವಾದಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
if guilty - let him undergo punishmentpolitical vendettaprajval - devegowda reactswe know how to fight
0 FacebookTwitterPinterestEmail
admin

previous post
ಪೆನ್ ಡ್ರೈ ಪ್ರಕರಣ 100 ಕೋಟಿ  ಆಫರ್ !
next post
ಗ್ರಾಮೀಣ ನೀರು ಪೂರೈಕೆಗೆ ಆದ್ಯತೆ ಮೇಲೆ ಕ್ರಮ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ