Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರೇವಣ್ಣಗೆ ಮತ್ತೊಂದು ಪ್ರಕರಣದಲ್ಲೂ ಜಾಮೀನು

by admin May 20, 2024
written by admin May 20, 2024 0 comments 2 minutes read
0FacebookTwitterPinterestEmail
180

ಬೆಂಗಳೂರು:ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಪ್ರೀತ್, ತಾವು ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಿದರು.

ಐದು ಲಕ್ಷ ರೂ. ಬಾಂಡ್

ಐದು ಲಕ್ಷ ರೂ. ಮೊತ್ತದ ಬಾಂಡ್ ಹಾಗೂ ಇಷ್ಟೇ ಮೊತ್ತದ ಭದ್ರತೆ ನೀಡುವುದೂ ಸೇರಿದಂತೆ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಕಳೆದ ೧೭ ರಂದು ತೀರ್ಪು ಕಾಯ್ದಿರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನೊಂದು ಪ್ರಕರಣದಲ್ಲಿ ಈಗಾಗಲೇ ಜಾಮೀನು ದೊರೆತಿರುವುದರಿಂದ ರೇವಣ್ಣಗೆ ಬಿಗ್ ರಿಲೀಫ್ ದೊರೆತಂತಾಗಿದೆ.

ಬರಿಗಾಲಲ್ಲಿ ಹಾಜರು

ಇಂದು ವಿಚಾರಣೆಗೆ ರೇವಣ್ಣ ಬರಿಗಾಲಲ್ಲೇ ಹಾಜರಾಗಿದ್ದರು. ಜಾಮೀನು ದೊರೆತ ಬಳಿಕ ಅವರ ಮುಖದಲ್ಲಿ ನಿರಾಳತೆ ಕಂಡುಬಂತು. ನಂತರ ಹಾಸನಕ್ಕೆ ತೆರಳಿದರು.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರು.

ಯಾರಿಗೂ ಅನ್ಯಾಯವಾಗದಂತೆ ಜಾತಿ ಗಣತಿ ವರದಿ ಜಾರಿ
ಪೊಲೀಸರ ವಶಕ್ಕೆ ನೀಡಲು ವಾದ

ಆರೋಪಿ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣದ ಇನ್ನೊಬ್ಬ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಸಿ.ವಿ.ನಾಗೇಶ್, ತಮ್ಮ ಕಕ್ಷಿದಾರರ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ, ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು.

ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ, ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ, ಈಗಾಗಲೇ ರೇವಣ್ಣ ಅವರನ್ನು ಬಂಧಿಸಲಾಗಿತ್ತು, ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು, ಈಗ ಎಸ್‌ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಕಾಂಗ್ರೆಸ್ ಆಡಳಿತದ ಒಂದು ವರ್ಷ ಶೂನ್ಯ ಸಾಧನೆ: ಬಿಜೆಪಿ
ಅರೇಬಿಯನ್ ನೈಟ್ಸ್ ಕಥೆ

ಪ್ರಕರಣದಲ್ಲಿ ದೂರನ್ನು ಹೇಗೆ ದಾಖಲಿಸಲಾಗಿದೆ ಎಂಬ ವಿವರಣೆ ಇದೆ, ಇದೊಂದು ರೀತಿಯಲ್ಲಿ ಅರೇಬಿಯನ್ ನೈಟ್ಸ್ ಕಥೆ ರೀತಿಯಲ್ಲಿದೆ, ಸಂತ್ರಸ್ತೆ ದೂರನ್ನು ಟೈಪ್ ಮಾಡಿ ದಾಖಲು ಮಾಡಲಾಗಿದೆ.

ಸಿಆರ್‌ಪಿಸಿ 154 ರಡಿ ಅತ್ಯಾಚಾರ ಆರೋಪ ಪ್ರಕರಣಗಳ ದೂರನ್ನು ಮಹಿಳಾ ಅಧಿಕಾರಿ ದಾಖಲಿಸಿಕೊಳ್ಳಬೇಕು, ಸಂತ್ರಸ್ತೆ ಹೇಳಿಕೆಯ ವಿಡಿಯೊ ಮಾಡಬೇಕಿತ್ತು, ಆದರೆ, ಯಾವುದನ್ನೂ ಪಾಲಿಸಿಲ್ಲ, ಎಫ್‌ಐಆರ್ ಅನ್ನೂ ಕಾನೂನುಬಾಹಿರವಾಗಿ ದಾಖಲಿಸಲಾಗಿದೆ ಎಂದು ವಾದ ಮಂಡಿಸಿದರು.

ದೂರುದಾರೆಯ ಹೇಳಿಕೆ ಸಂಪೂರ್ಣ ಗೊಂದಲಮಯವಾಗಿದೆ, ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಸಿಲುಕಿಸಲಾಗಿದೆ, ಇದೊಂದು ಸುಳ್ಳು ಕೇಸ್ ಎಂದು ವಾದಿಸಿದರು.

ದೂರುದಾರರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿಲ್ಲ, ಹೊಳೆನರಸೀಪುರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರು ತಮಗೆ ನೀಡಿದಂತೆ ದೂರುದಾರರಿಂದ ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂದು ವಾದಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
42nd acmm court sanctions bailfive lakhs rs. bond and suretyrevanna gets bail in another case
0 FacebookTwitterPinterestEmail
admin

previous post
ಯಾರಿಗೂ ಅನ್ಯಾಯವಾಗದಂತೆ ಜಾತಿ ಗಣತಿ ವರದಿ ಜಾರಿ
next post
48 ಗಂಟೆಯೊಳಗೆ ಶರಣಾಗುವಂತೆ ಪ್ರಜ್ವಲ್‌ಗೆ ಕುಮಾರಸ್ವಾಮಿ ಸಲಹೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ