Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ಒಂದು ವಾರ ಎಸ್‌ಐಟಿ ಕಸ್ಟಡಿಗೆ

by admin May 31, 2024
written by admin May 31, 2024 0 comments 2 minutes read
0FacebookTwitterPinterestEmail
240

ಬೆಂಗಳೂರು:ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಅಪಹರಣ ಆರೋಪ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಚ್ಚಿನ ವಿಚಾರಣೆಗಾಗಿ ಜೂನ್ ೬ರವರೆಗೆ ಎಸ್‌ಐಟಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.

ವಿದೇಶದಿಂದ ಪ್ರಜ್ವಲ್ ಅವರನ್ನು ಇಂದು ಮುಂಜಾನೆ ವಶಕ್ಕೆ ಪಡೆದ ಎಸ್‌ಐಟಿ ಪೊಲೀಸರು, ಮಧ್ಯಾನ್ಹ ನಗರದ 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ವಾದ-ಪ್ರತಿವಾದ ಆಲಿಸಿ ಒಂದು ಗಂಟೆಗಳ ಕಾಲ ತೀರ್ಪು ಕಾಯ್ದಿರಿಸಿದ, ನಂತರ ನ್ಯಾಯಾಧೀಶ ಕೆ.ಎನ್.ಶಿವಕುಮಾರ್, ಒಂದು ವಾರಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿದರು.

ವಕೀಲರ ಭೇಟಿಗೆ ಅವಕಾಶ

ಅಷ್ಟೇ ಅಲ್ಲ ಪ್ರತಿನಿತ್ಯ ಬೆಳಗ್ಗೆ 9-30 ರಿಂದ 10-30 ರವರೆಗೆ ತಮ್ಮ ವಕೀಲರ ಭೇಟಿಗಾಗಿ ಪ್ರಜ್ವಲ್‌ಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಮನೆ ಊಟ ಹಾಗೂ ತಮ್ಮನ್ನು ಇರಿಸುವ ಕೊಠಡಿ ಸ್ವಚ್ಛತೆ, ಅಲ್ಲದೆ, ಮಾಧ್ಯಮಗಳು ತೀರ್ಪುಗಳನ್ನು ನೀಡದಂತೆ ನಿರ್ಬಂಧಿಸಬೇಕು ಎಂಬ ಪ್ರಜ್ವಲ್ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.

ಇದಕ್ಕೂ ಮೊದಲು ಸರ್ಕಾರಿ ವಕೀಲರು ಮತ್ತು ಪ್ರಜ್ವಲ್ ವಕೀಲರು ತಮ್ಮ ತಮ್ಮ ವಾದಗಳನ್ನು ನ್ಯಾಯಾಲಯದ ಮುಂದೆ ಮಂಡಿಸಿದರು.

ಹೊರಗಿಟ್ಟರೆ ಸಾಕ್ಷ್ಯಗಳ ನಾಶ ಸಾಧ್ಯತೆ

ಪ್ರಜ್ವಲ್ ಅವರನ್ನು 15 ದಿನಗಳ ಕಸ್ಟಡಿಗೆ ಕೊಡಬೇಕು, ಇವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಅಪಹರಣ ಆರೋಪ ಪ್ರಕರಣಗಳಿವೆ, ಇವರು ಕಾನೂನು ಮಾಡುವವರು, ಇಂತಹವರನ್ನು ಹೊರಗಿಟ್ಟರೆ ತಮ್ಮ ಪ್ರಭಾವ ಬಳಸಿ ಸಾಕ್ಷ್ಯಗಳನ್ನು ನಾಶ ಪಡಿಸಬಹುದು ಎಂದು ವಾದಿಸಿದರು.

ಇವನೊಬ್ಬ ವಿಕೃತ ಕಾಮಿ ಎನಿಸುತ್ತದೆ, ಈತ ತುಂಬಾ ಡೇಂಜರ್ ಇದ್ದಾನೆ, ಸಂತ್ರಸ್ತ ಮಹಿಳೆ ಹೇಳಿಕೆ ಗಮನಿಸಿದರೆ ಅತ್ಯಾಚಾರ ಎಸಗಿದ್ದಾನೆ, ಹೆಚ್ಚು ಸಂತ್ರಸ್ತೆಯರಿದ್ದಾರೆ, ಮಾಧ್ಯಮಗಳಲ್ಲಿ ಸುದ್ದಿಯಾಗಬಾರದು ಎಂದು ತಡೆಯಾಜ್ಞೆ ತಂದಿದ್ದಾನೆ.

ವಿಡಿಯೊ ಮಾಡಿರುವ ಮೊಬೈಲ್ ಪತ್ತೆ ಮಾಡಬೇಕಿದೆ, ಹಲವು ಸಾಕ್ಷ್ಯಗಳ ಪತ್ತೆ ಆಗಬೇಕಿದೆ, ಈತ ದೇಶ ಬಿಟ್ಟು ಹೋಗಿದ್ದ, ವಾಪಸ್ ಬರುವ ಉದ್ದೇಶ ಇರಲಿಲ್ಲ, ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಲು 15 ದಿನಗಳ ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿದರು.

ಈತ ಸಾಮಾನ್ಯನಲ್ಲ, ತನಿಖೆ ಪೂರ್ಣಗೊಳ್ಳುವವರೆಗೂ ಜಾಮೀನು ನೀಡಬಾರರು ಎಂದು ಬಲವಾದ ವಾದ ಮಾಡಿದರು.

ರೆಡಿಮೇಡ್ ದೂರು

ಇದಕ್ಕೆ ಪ್ರತಿಯಾಗಿ ಪ್ರಜ್ವಲ್ ವಕೀಲರು, ಎಸ್‌ಐಟಿ ಅವರು ರೆಡಿಮೇಡ್ ದೂರು ದಾಖಲಿಸಿದ್ದಾರೆ, ಅವರನ್ನು ಬಂಧನದಲ್ಲಿ ವಿಚಾರಣೆಗೆ ಒಳಪಡಿಸುವ ಅಗತ್ಯವಿಲ್ಲ.

ಎಸ್‌ಐಟಿ ಸಲ್ಲಿಸಿರುವುದು ಸಿದ್ಧಪಡಿಸಿದ ದೂರಿನಂತಿದೆ, ಪ್ರಜ್ವಲ್ ವಿರುದ್ಧ ದೂರು ನೀಡಿದ ಮಹಿಳೆಯ ವಿಡಿಯೊ ಮಾಡಿಲ್ಲ ಎಂದು ದೂರುದಾರರ ವಿಡಿಯೊಕ್ಕೆ ಸಂಬಂಧಿಸಿದ ಬೇರೆ ಪ್ರಕರಣಗಳನ್ನು ಉಲ್ಲೇಖಿಸಿದರು.

ದೂರುದಾರರು ಬಲವಾದ ಸಾಕ್ಷ್ಯಗಳನ್ನು ಒದಗಿಸಿಲ್ಲ, ಎಸ್‌ಐಟಿಗೆ 15 ದಿನಗಳ ಕಾಲ ವಶಕ್ಕೆ ನೀಡುವ ಅಗತ್ಯವೇ ಇಲ್ಲ ಎಂದು ಪ್ರಜ್ವಲ್ ವಕೀಲ ಅರುಣ್ ಬಲವಾಗಿ ವಾದ ಮಂಡಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಜೂನ್ ೬ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶಿಸಿದರು.

ರಾತ್ರಿ ಎಸ್‌ಐಟಿ ಸೆಲ್‌ನಲ್ಲಿ

ಇದಕ್ಕೂ ಮುನ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾದ ಪ್ರಜ್ವಲ್ ರೇವಣ್ಣ ಅವರನ್ನು ರಾತ್ರಿ ಸಿಐಡಿ ಕಚೇರಿ ಆವರಣಲ್ಲಿರುವ ಎಸ್‌ಐಟಿ ಸೆಲ್‌ನಲ್ಲಿ ಇರಿಸಲಾಗಿತ್ತು.

ವಶಕ್ಕೆ ಪಡೆದ ನಂತರ ಅಧಿಕಾರಿಗಳು ಅವರನ್ನು ಯಾವುದೇ ವಿಚಾರಣೆಗೆ ಒಳಪಡಿಸಲಿಲ್ಲ, ಅವರು ವಿದೇಶದಿಂದ ಬಂದ ಉಡುಪಿನಲ್ಲೇ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು.

ವೈದ್ಯಕೀಯ ವರದಿ ಕೈತಲುಪಿದ ತಕ್ಷಣ ಪೊಲೀಸರು ಅವರನ್ನು ಬಿಗಿ ಬಂದೋಬಸ್ತ್‌ನಲ್ಲಿ ನಗರದ 42ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ವಾಲ್ಮೀಕಿ ನಿಗಮ ಹಣ ಅಕ್ರಮ ವರ್ಗಾವಣೆ ಸಿಬಿಐ ತನಿಖೆಗೆ
ಪೊಲೀಸ್ ಸರ್ಪಗಾವಲು

ಪ್ರಜ್ವಲ್ ಪ್ರಬಲ ರಾಜಕೀಯ ಕುಟುಂಬದಿಂದ ಬಂದವರು ಮತ್ತು ಹಾಸನ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವವರು, ಹೀಗಾಗಿ ಸಿಐಡಿ ಕಚೇರಿ ಆವರಣ ಮತ್ತು ಬೌರಿಂಗ್ ಆಸ್ಪತ್ರೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.

ನ್ಯಾಯಾಲಯದ ಹೊರ ಆವರಣದಲ್ಲಿ ಭಾರೀ ಜನಜಂಗುಳಿಯಿತ್ತು, ಪ್ರಜ್ವಲ್‌ನ ಕರೆತರುವುದರಿಂದ ನ್ಯಾಯಾಲಯ ಪ್ರವೇಶಿಸುವ ರಸ್ತೆಯನ್ನು ಬ್ಲಾಕ್ ಮಾಡಲಾಗಿತ್ತು.

ವಿಚಾರಣೆ ಸಂದರ್ಭದಲ್ಲೂ ನ್ಯಾಯಾಲಯ ಕಿಕ್ಕಿರಿದು ತುಂಬಿತ್ತು, ಅಷ್ಟೇ ಅಲ್ಲದೆ, ನ್ಯಾಯಾಲಯದ ಹೊರಗೂ ಜನರು ಕಿಕ್ಕಿರಿದು ಸೇರಿದ್ದರು.

ಮಹಿಳಾ ಪೊಲೀಸ್ ಅಧಿಕಾರಿಗಳು

ವಿಶೇಷವೆಂದರೆ ಪ್ರಜ್ವಲ್ ಅವರನ್ನು ಮಹಿಳಾ ಪೊಲೀಸ್ ಅಧಿಕಾರಿಗಳೇ ಬಂಧಿಸಿದ್ದಲ್ಲದೆ, ವೈದ್ಯಕೀಯ ಪರೀಕ್ಷೆ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸುವ ಕೆಲಸವನ್ನೂ ಮಾಡಿದರು.

ಶುಕ್ರವಾರ ಮುಂಜಾನೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಜ್ವಲ್ ಅವರನ್ನು ಭದ್ರತಾ ಸಿಬ್ಬಂದಿ ಹಾಗೂ ವಲಸೆ ಅಧಿಕಾರಿಗಳು ಅವರನ್ನು ನಿರ್ಗಮನದ ದ್ವಾರದಲ್ಲಿದ್ದ ಎಸ್‌ಐಟಿಯ ಐಪಿಎಸ್ ಅಧಿಕಾರಿ ಸುಮನ್ ಪನ್ನೇಕರ್ ನೇತೃತ್ವದ ತಂಡಕ್ಕೆ ಒಪ್ಪಿಸಿದರು.

ಭದ್ರತಾ ಸಿಬ್ಬಂದಿಯಿಂದ ವಶಕ್ಕೆ ಪಡೆಯುವ ಮುನ್ನ ಅಧಿಕಾರಿ ಪನ್ನೇಕರ್, ಆರೋಪಿ ಪ್ರಜ್ವಲ್ ಅವರಿಗೆ ವಾರೆಂಟ್ ತೋರಿಸಿ ವಶಕ್ಕೆ ತೆಗೆದುಕೊಂಡರು, ನಂತರ ಅವರನ್ನು ಪೊಲೀಸ್ ಜೀಪಿನಲ್ಲಿ ಕೂರಿಸಲಾಯಿತು.

ಈ ಸಂದರ್ಭದಲ್ಲಿ ಅಕ್ಕ-ಪಕ್ಕ ಹಾಗೂ ಹಿಂದೆ-ಮುಂದೆ ಮಹಿಳಾ ಪೊಲೀಸ್ ಅಧಿಕಾರಿಗಳೇ ಇದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
permitted to meet his lawyerprajval 15 day SIT custodyprajval arrested around midnight
0 FacebookTwitterPinterestEmail
admin

previous post
ವಾಲ್ಮೀಕಿ ನಿಗಮ ಹಣ ಅಕ್ರಮ ವರ್ಗಾವಣೆ ಸಿಬಿಐ ತನಿಖೆಗೆ
next post
ವಾಲ್ಮೀಕಿ ನಿಗಮ ಹಗರಣ: ತಪ್ಪಿತಸ್ಥರ ವಿರುದ್ಧ ಕ್ರಮ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ