Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಟ ದರ್ಶನ್ ರಕ್ಷಿಸುವ ಪ್ರಯತ್ನ ಮಾಡಿಲ್ಲ

by admin June 12, 2024
written by admin June 12, 2024 0 comments 2 minutes read
0FacebookTwitterPinterestEmail
83

ಬೆಂಗಳೂರು:ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ರಕ್ಷಣೆಗೆ ಯಾವ ರಾಜಕಾರಣಿಯೂ ಪ್ರಯತ್ನ ಮಾಡಿಲ್ಲ, ಸರ್ಕಾರದಿಂದ ನಾವ್ಯಾರೂ ಮಧ್ಯ ಪ್ರವೇಶಿಸುವುದಿಲ್ಲ, ಮುಕ್ತವಾಗಿ ತನಿಖೆ ನಡೆಸಲು ಪೊಲೀಸರಿಗೆ ಅವಕಾಶವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳಲು ಅವಕಾಶವಿದೆಯೋ ಅದನ್ನು ಪೊಲೀಸರು ಮಾಡುತ್ತಾರೆ, ಎಲ್ಲರಿಗೂ ಕಾನೂನು ಒಂದೇ, ನಟ ದರ್ಶನ್‌ಗೂ ಒಂದೇ ಕಾನೂನು, ಪರಮೇಶ್ವರ್‌ಗೂ ಒಂದೇ ಕಾನೂನು, ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು ಎಂದರು.

ದರ್ಶನ್ ದೂರು ಕೊಡಬಹುದಾಗಿತ್ತು

ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಆಪ್ತೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎನ್ನಲಾಗಿದೆ, ಈ ಬಗ್ಗೆ ದರ್ಶನ್ ದೂರು ಕೊಡಬಹುದಾಗಿತ್ತು, ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು, ಅದನ್ನು ಬಿಟ್ಟು, ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ.

ದೂರು ಕೊಟ್ಟಿದ್ದರೆ ಇದೆಲ್ಲವನ್ನು ತಡೆಯಲು ಅವಕಾಶವಿತ್ತು, ಆದರೆ, ಘಟನೆ ನಡೆದು ಹೋಗಿದೆ, ಯಾರೂ ಏನೂ ಮಾಡಲು ಆಗುವುದಿಲ್ಲ, ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಕಾನೂನು ಪ್ರಕಾರ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ.

ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ವರ್ಗದ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ, ಪ್ರಕರಣದಲ್ಲಿ ಭಾಗಿಯಾಗಿದ್ದ ೧೩ ಜನರನ್ನು ಈಗಾಗಲೇ ಬಂಧಿಸಲಾಗಿದೆ, ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ಕೊಡುವ ಅಗತ್ಯವಿಲ್ಲ.

ತನಿಖೆ ನಂತರ ಎಲ್ಲ ಮಾಹಿತಿ

ತನಿಖೆ ಪೂರ್ಣಗೊಂಡ ನಂತರ ಎಲ್ಲ ಮಾಹಿತಿ ಗೊತ್ತಾಗುತ್ತದೆ, ಅಲ್ಲಿಯವರೆಗೆ ಈ ಬಗ್ಗೆ ಅಧಿಕಾರಿಗಳನ್ನು ನಾವು ಕೇಳುವುದಿಲ್ಲ, ಅವರೂ ನಮಗೆ ಹೇಳುವುದಿಲ್ಲ ಎಂದರು.

ನಟ ದರ್ಶನ್ ಅವರ ಘಟನೆಗಳು ಇದೇ ಮೊದಲಲ್ಲ, ಮಾಧ್ಯಮಗಳಲ್ಲಿ ಬಂದಿರುವುದನ್ನು ಗಮನಿಸಿದ್ದೇನೆ, ಪೊಲೀಸರು ತನಿಖೆ ಮಾಡುತ್ತಾರೆ, ತನಿಖೆ ನಂತರ ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ನೋಡಬೇಕು, ಪೊಲೀಸರಿಗೆ ಫ್ರೀ ಹ್ಯಾಂಡ್ ಇದೆ, ಸೆಕ್ಷನ್ ಹಾಕುವುದಕ್ಕೆ ಅವರು ಸಮರ್ಥರು, ನಮ್ಮನ್ನು ಕೇಳಿಕೊಂಡು ಸೆಕ್ಷನ್ ಹಾಕುವುದಿಲ್ಲ ಎಂದರು.

ರಾಜ್ಯ ಜೆಡಿಎಸ್‌ಗೆ ಹೊಸ ನಾಯಕತ್ವ
ನಿಯಮದ ಚೌಕಟ್ಟಿನಲ್ಲಿ ಪೊಲೀಸರ ವರ್ಗಾವಣೆ

ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಸಂಬಂಧಿಸಿದಂತೆ ಶಿಸ್ತು ಬದ್ಧವಾಗಿ ನಿಯಮದ ಚೌಕಟ್ಟಿನಲ್ಲಿ ನಡೆಯಬೇಕಾಗುತ್ತದೆ, ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ, ಪೋರ್ಟಲ್ ಅರ್ಜಿಗಳು ನಿಯಮದ ಪ್ರಕಾರ ಆಗುತ್ತವೆ.

ಪೊಲೀಸ್ ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವು ನಿಯಮಗಳಿವೆ, ಅವನ್ನು ಮೀರಿ ವರ್ಗಾವಣೆ ಮಾಡಲು ಆಗುವುದಿಲ್ಲ, ಹಾಗೆ ಮಾಡಬೇಕಾದರೆ ನಿಯಮಗಳನ್ನು ಬದಲಾಯಿಸಬೇಕಾಗುತ್ತದೆ.

ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಒಂದು ವರ್ಷದ ನಿಯಮವಿತ್ತು, ಸದನದಲ್ಲಿ ಕಾನೂನು ಬದಲಾಯಿಸಿ ಎರಡು ವರ್ಷ ಮಾಡಲಾಗಿದೆ, ಇರುವಂತಹ ನಿಯಮ ಉಲ್ಲಂಘನೆ ಮಾಡಿ, ವರ್ಗಾವಣೆ ಮಾಡುವುದಕ್ಕೆ ಅವಕಾಶವಿಲ್ಲ, ಡಿಜಿಯಾಗಲಿ, ನಾನಾಗಲೀ ಅಥವಾ ಯಾರೇ ಆಗಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ.

ವರ್ಗಾವಣೆಗೆ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿರುವುದಕ್ಕೆ ಸಿಬ್ಬಂದಿಗಳಿಗೆ ಸಣ್ಣಪುಟ್ಟ ತೊಂದರೆಗಳು ಆಗಿದ್ದರೆ ಸರಿಪಡಿಸುವುದಕ್ಕೆ ಸೂಚನೆ ನೀಡಲಾಗುವುದು, ಅವರಿಗೂ ಕುಟುಂಬಗಳಿವೆ, ಇದನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕಾಗುತ್ತದೆ ಎಂದರು.

545 ಪಿಎಸ್‌ಐ ನೇಮಕಾತಿ

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಕುರಿತು ಕೋರ್ಟ್‌ನಿಂದ ಆದೇಶ ತಂದಾಗ, ನಮ್ಮ ಕೈ ಕಟ್ಟಿ ಹಾಕಿದಂತಾಗುತ್ತದೆ, ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ಆದೇಶ ಕೊಡಬೇಕೆಂಬ ಉದ್ದೇಶದಿಂದ ಪರೀಕ್ಷೆ ಪೂರ್ಣಗೊಳಿಸಿದ್ದೇವೆ.

ಈ ಹಂತದಲ್ಲಿ ಕೆಲವರು ಕೋರ್ಟ್‌ಗೆ ಹೋಗಿದ್ದಾರೆ, ಸದರಿ ಪ್ರಕರಣ ಮುಗಿದರೆ ಮುಂದಿನ ನೇಮಕಾತಿಗಳಿಗೆ ಅನುಕೂಲವಾಗುತ್ತದೆ, 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
actor darshanno cbi enquiryno one rescuing himpolice transfersrules should be followed
0 FacebookTwitterPinterestEmail
admin

previous post
ಕಚೇರಿ ಪೂಜೆ ಸಲ್ಲಿಸಿ ಅಧಿಕಾರ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ
next post
ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿಹಿ ಸುದ್ದಿ !

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ