Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದ್ವೇಷದ ರಾಜಕಾರಣ ಮಾಡುವುದಿಲ್ಲ: ಕುಮಾರಸ್ವಾಮಿ

by admin June 14, 2024
written by admin June 14, 2024 0 comments 2 minutes read
0FacebookTwitterPinterestEmail
203

ಕಾಂಗ್ರೆಸ್ ಸರ್ಕಾರದಿಂದ ಅಧಿಕಾರ ದುರುಪಯೋಗ

ಬೆಂಗಳೂರು: ದ್ವೇಷ ಮತ್ತು ನೀಚ ರಾಜಕಾರಣವನ್ನು ಕಾಂಗ್ರೆಸ್‌ನವರು ಬಿಡದಿದ್ದರೆ ಮುಂದೆ ನಾಶವಾಗಿ ಹೋಗುತ್ತಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ನಮ್ಮ ಕುಟುಂಬವನ್ನು ಮುಗಿಸಿಯಾಯಿತು. ಇನ್ನು ಪ್ರಬಲ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಗಿಸಬೇಕೆಂದು ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಗರಕ್ಕೆ ಬಂದ ಕುಮಾರಸ್ವಾಮಿ, ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಆದ ಅಪಮಾನ ತಪ್ಪಿಸಿಕೊಳ್ಳಲು ಇಂತಹ ನೀಚ ರಾಜಕಾರಣಕ್ಕೆ ಇಳಿದಿದ್ದಾರೆ.
ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ 82 ವರ್ಷದ ಯಡಿಯೂರಪ್ಪ ಅವರನ್ನು ಬಂಧಿಸಲು ವಾರೆಂಟ್ ಹೊರಡಿಸಿರುವುದು ಎಂತಹ ನೀಚತನ.
ನಾಲ್ಕು ತಿಂಗಳಿಂದ ಪ್ರಕರಣದ ಬಗ್ಗೆ ಚಕಾರವೆತ್ತದ ಸಿದ್ದರಾಮಯ್ಯ ಸರ್ಕಾರ ಇದೀಗ ಏಕಾಏಕಿ ಅವರನ್ನು ಬಂಧಿಸಲು ಮುಂದಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬವನ್ನು ಮುಗಿಸಿಯಾಯಿತು. ಇನ್ನು ಯಡಿಯೂರಪ್ಪ ಕುಟುಂಬವನ್ನು ಮುಗಿಸಲು ಪೊಲೀಸರು ಮತ್ತು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದೀರಿ, ನಿಮಗೆ ನಾಚಿಕೆ ಇಲ್ಲವೇ ಎಂದು ಪ್ರಶ್ನಿಸಿದರು.
ಪೋಕ್ಸೋ ಪ್ರಕರಣದಲ್ಲಿ ಹಿಂದಿನ ಎರಡು ಘಟನೆಗಳನ್ನು ಇಬ್ಬರು ಸ್ವಾಮೀಜಿಗಳನ್ನು 24 ಗಂಟೆಯೊಳಗೆ ಬಂಧಿಸಿದ್ದೀರಿ, ಯಡಿಯೂರಪ್ಪ ಪ್ರಕರಣದಲ್ಲಿ ಏಕೆ ನಿಧಾನ ಮಾಡಿದಿರಿ.
ನಾಲ್ಕು ತಿಂಗಳ ನಂತರ ಜ್ಞಾನೋದಯವಾಯಿತೇ? ನಿಮ್ಮ ರಾಜಕೀಯ ದಾಳಗಳಿಗೆ ಬಗ್ಗಲಿಲ್ಲ, ಬಿಜೆಪಿ-ಜೆಡಿಎಸ್ ಮೈತ್ರಿ ಸಹಿಸಲಾಗದೆ ಇಂತಹ ಕೃತ್ಯಕ್ಕೆ ಇಳಿದಿದ್ದೀರಿ.
ಎರಡು ಪಕ್ಷಗಳು ಒಂದಾದರೆ ನಿಮಗೆ ಮುಂದೆ ನೆಲೆ ಇಲ್ಲ ಎಂದು ಮೈತ್ರಿಗೆ ಧಕ್ಕೆ ತರಲು ಹೊರಟಿದ್ದೀರಿ.
ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಂದಾಗಿದ್ದಾರೆ, ಮುಂದೆ ನಿಮಗೆ ನೆಲೆ ಇಲ್ಲದಂತೆ ಮಾಡುತ್ತಾರೆ ಎಂದು ತಿಳಿದು ಇಂತಹ ಕೃತ್ಯಗಳನ್ನು ಮಾಡುತ್ತಿದ್ದೀರಿ.
ನಮ್ಮ ಪಕ್ಷದ ಕಾರ್ಯಕರ್ತರ 16 ವರ್ಷಗಳ ಶ್ರಮದ ನಂತರ ನಮಗೆ ಪ್ರತಿಫಲ ದೊರೆತಿದೆ, ಮೋದಿ ಅವರು ನನಗೆ ದೊಡ್ಡ ಕಾರ್ಯಭಾರ ವಹಿಸಿ ಕೆಲಸ ಮಾಡು ಎಂದಿದ್ದಾರೆ.
ನಿಮ್ಮ ರೀತಿ ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ, ರಾಜ್ಯದ ಯಾವುದೇ ಸಮಸ್ಯೆ ಇದ್ದರೂ ಮಂತ್ರಿಗಳ ಜೊತೆ ಸಂಬಂಧಪಟ್ಟ ಇಲಾಖೆಗಳಿಗೆ ತೆರಳಿ ಅದನ್ನು ಪರಿಹರಿಸಲು ಶ್ರಮಿಸುತ್ತೇನೆ.
ಕರ್ನಾಟಕದಿಂದ ಕೇಂದ್ರದೊಂದಿಗೆ ಪ್ರತಿನಿಧಿಸುವ ಸಚಿವರುಗಳು ಒಂದಾಗಿ ರಾಜ್ಯದ ನೀರಾವರಿ ಸೇರಿದಂತೆ ಅಭಿವೃದ್ಧಿಗೆ ಕೆಲಸ ಮಾಡುವುದಾಗಿ ಕಾರ್ಯಕರ್ತರಿಗೆ ಭರವಸೆ ನೀಡಿದರು.
ಸಮಸ್ಯೆಗಳು ಒಂದೆರಡು ದಿನದಲ್ಲೇ ಮುಗಿಯುತ್ತವೆ ಎಂದು ಹೇಳಲಾರೆ. ಸಮಸ್ಯೆ ಬಿಡಿಸಿ ಪರಿಹಾರ ಕಂಡುಕೊಳ್ಳಲು ಹಾಗೂ ದೇಶದ ಅಭಿವೃದ್ಧಿಗೆ ಟೊಂಕ ಕಟ್ಟಿ ಕೆಲಸ ಮಾಡುತ್ತೇನೆ ಎಂದರು.
ಮೊದಲು ಮುಖ್ಯಮಂತ್ರಿಯಾಗಿದ್ದಾಗ ಅನುಭವ ಇಲ್ಲದಿದ್ದರೂ ಬೇರೆಯವರನ್ನು ಕೇಳಿ ಉತ್ತಮ ಆಡಳಿತ ನೀಡಿದೆ. ಈಗಲೂ ಅದೇ ರೀತಿ ಕಾರ್ಯನಿರ್ವಹಿಸುವೆ ಎಂದರು.
ಇದಕ್ಕೂ ಮುನ್ನ ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮರಳಿದ ಕುಮಾರಸ್ವಾಮಿ ಅವರಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.
ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಕುಮಾರಸ್ವಾಮಿ ಅವರನ್ನು ಬರಮಾಡಿಕೊಳ್ಳಲು ಮುಗಿಬಿದ್ದರು.
ಈ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಯಿತು, ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕಾರ್ಯಕರ್ತರನ್ನು ಚದುರಿಸಿದರು.
ವಿಮಾನ ನಿಲ್ದಾಣದ ಸಾದಳ್ಳಿ ಟೋಲ್ ಬಳಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು ತಮ್ಮ ನಾಯಕನನ್ನು ಸಡಗರ, ಸಂಭ್ರಮ, ಅದ್ದೂರಿಯಾಗಿ ಸ್ವಾಗತಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Central SteelcongressCongress governmentdestroyedhd kumaraswamyHeavy Industries MinisterMisuse powerNo hate politicswarned
0 FacebookTwitterPinterestEmail
admin

previous post
ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್ ಆದೇಶ
next post
ಬಿಜೆಪಿಯ ದ್ವೇಷ ರಾಜಕಾರಣಕ್ಕೆ ಬಹುಮತ ಸಿಗಲಿಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ