Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದ್ವೇಷದ ರಾಜಕಾರಣ ಮಾಡುವುದಿಲ್ಲ: ಕುಮಾರಸ್ವಾಮಿ

by admin June 14, 2024
written by admin June 14, 2024 0 comments 2 minutes read
0FacebookTwitterPinterestEmail
188

ಕಾಂಗ್ರೆಸ್ ಸರ್ಕಾರದಿಂದ ಅಧಿಕಾರ ದುರುಪಯೋಗ

ಬೆಂಗಳೂರು: ದ್ವೇಷ ಮತ್ತು ನೀಚ ರಾಜಕಾರಣವನ್ನು ಕಾಂಗ್ರೆಸ್‌ನವರು ಬಿಡದಿದ್ದರೆ ಮುಂದೆ ನಾಶವಾಗಿ ಹೋಗುತ್ತಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ನಮ್ಮ ಕುಟುಂಬವನ್ನು ಮುಗಿಸಿಯಾಯಿತು. ಇನ್ನು ಪ್ರಬಲ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಗಿಸಬೇಕೆಂದು ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಗರಕ್ಕೆ ಬಂದ ಕುಮಾರಸ್ವಾಮಿ, ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಆದ ಅಪಮಾನ ತಪ್ಪಿಸಿಕೊಳ್ಳಲು ಇಂತಹ ನೀಚ ರಾಜಕಾರಣಕ್ಕೆ ಇಳಿದಿದ್ದಾರೆ.
ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ 82 ವರ್ಷದ ಯಡಿಯೂರಪ್ಪ ಅವರನ್ನು ಬಂಧಿಸಲು ವಾರೆಂಟ್ ಹೊರಡಿಸಿರುವುದು ಎಂತಹ ನೀಚತನ.
ನಾಲ್ಕು ತಿಂಗಳಿಂದ ಪ್ರಕರಣದ ಬಗ್ಗೆ ಚಕಾರವೆತ್ತದ ಸಿದ್ದರಾಮಯ್ಯ ಸರ್ಕಾರ ಇದೀಗ ಏಕಾಏಕಿ ಅವರನ್ನು ಬಂಧಿಸಲು ಮುಂದಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬವನ್ನು ಮುಗಿಸಿಯಾಯಿತು. ಇನ್ನು ಯಡಿಯೂರಪ್ಪ ಕುಟುಂಬವನ್ನು ಮುಗಿಸಲು ಪೊಲೀಸರು ಮತ್ತು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದೀರಿ, ನಿಮಗೆ ನಾಚಿಕೆ ಇಲ್ಲವೇ ಎಂದು ಪ್ರಶ್ನಿಸಿದರು.
ಪೋಕ್ಸೋ ಪ್ರಕರಣದಲ್ಲಿ ಹಿಂದಿನ ಎರಡು ಘಟನೆಗಳನ್ನು ಇಬ್ಬರು ಸ್ವಾಮೀಜಿಗಳನ್ನು 24 ಗಂಟೆಯೊಳಗೆ ಬಂಧಿಸಿದ್ದೀರಿ, ಯಡಿಯೂರಪ್ಪ ಪ್ರಕರಣದಲ್ಲಿ ಏಕೆ ನಿಧಾನ ಮಾಡಿದಿರಿ.
ನಾಲ್ಕು ತಿಂಗಳ ನಂತರ ಜ್ಞಾನೋದಯವಾಯಿತೇ? ನಿಮ್ಮ ರಾಜಕೀಯ ದಾಳಗಳಿಗೆ ಬಗ್ಗಲಿಲ್ಲ, ಬಿಜೆಪಿ-ಜೆಡಿಎಸ್ ಮೈತ್ರಿ ಸಹಿಸಲಾಗದೆ ಇಂತಹ ಕೃತ್ಯಕ್ಕೆ ಇಳಿದಿದ್ದೀರಿ.
ಎರಡು ಪಕ್ಷಗಳು ಒಂದಾದರೆ ನಿಮಗೆ ಮುಂದೆ ನೆಲೆ ಇಲ್ಲ ಎಂದು ಮೈತ್ರಿಗೆ ಧಕ್ಕೆ ತರಲು ಹೊರಟಿದ್ದೀರಿ.
ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಂದಾಗಿದ್ದಾರೆ, ಮುಂದೆ ನಿಮಗೆ ನೆಲೆ ಇಲ್ಲದಂತೆ ಮಾಡುತ್ತಾರೆ ಎಂದು ತಿಳಿದು ಇಂತಹ ಕೃತ್ಯಗಳನ್ನು ಮಾಡುತ್ತಿದ್ದೀರಿ.
ನಮ್ಮ ಪಕ್ಷದ ಕಾರ್ಯಕರ್ತರ 16 ವರ್ಷಗಳ ಶ್ರಮದ ನಂತರ ನಮಗೆ ಪ್ರತಿಫಲ ದೊರೆತಿದೆ, ಮೋದಿ ಅವರು ನನಗೆ ದೊಡ್ಡ ಕಾರ್ಯಭಾರ ವಹಿಸಿ ಕೆಲಸ ಮಾಡು ಎಂದಿದ್ದಾರೆ.
ನಿಮ್ಮ ರೀತಿ ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ, ರಾಜ್ಯದ ಯಾವುದೇ ಸಮಸ್ಯೆ ಇದ್ದರೂ ಮಂತ್ರಿಗಳ ಜೊತೆ ಸಂಬಂಧಪಟ್ಟ ಇಲಾಖೆಗಳಿಗೆ ತೆರಳಿ ಅದನ್ನು ಪರಿಹರಿಸಲು ಶ್ರಮಿಸುತ್ತೇನೆ.
ಕರ್ನಾಟಕದಿಂದ ಕೇಂದ್ರದೊಂದಿಗೆ ಪ್ರತಿನಿಧಿಸುವ ಸಚಿವರುಗಳು ಒಂದಾಗಿ ರಾಜ್ಯದ ನೀರಾವರಿ ಸೇರಿದಂತೆ ಅಭಿವೃದ್ಧಿಗೆ ಕೆಲಸ ಮಾಡುವುದಾಗಿ ಕಾರ್ಯಕರ್ತರಿಗೆ ಭರವಸೆ ನೀಡಿದರು.
ಸಮಸ್ಯೆಗಳು ಒಂದೆರಡು ದಿನದಲ್ಲೇ ಮುಗಿಯುತ್ತವೆ ಎಂದು ಹೇಳಲಾರೆ. ಸಮಸ್ಯೆ ಬಿಡಿಸಿ ಪರಿಹಾರ ಕಂಡುಕೊಳ್ಳಲು ಹಾಗೂ ದೇಶದ ಅಭಿವೃದ್ಧಿಗೆ ಟೊಂಕ ಕಟ್ಟಿ ಕೆಲಸ ಮಾಡುತ್ತೇನೆ ಎಂದರು.
ಮೊದಲು ಮುಖ್ಯಮಂತ್ರಿಯಾಗಿದ್ದಾಗ ಅನುಭವ ಇಲ್ಲದಿದ್ದರೂ ಬೇರೆಯವರನ್ನು ಕೇಳಿ ಉತ್ತಮ ಆಡಳಿತ ನೀಡಿದೆ. ಈಗಲೂ ಅದೇ ರೀತಿ ಕಾರ್ಯನಿರ್ವಹಿಸುವೆ ಎಂದರು.
ಇದಕ್ಕೂ ಮುನ್ನ ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮರಳಿದ ಕುಮಾರಸ್ವಾಮಿ ಅವರಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.
ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಕುಮಾರಸ್ವಾಮಿ ಅವರನ್ನು ಬರಮಾಡಿಕೊಳ್ಳಲು ಮುಗಿಬಿದ್ದರು.
ಈ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಯಿತು, ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕಾರ್ಯಕರ್ತರನ್ನು ಚದುರಿಸಿದರು.
ವಿಮಾನ ನಿಲ್ದಾಣದ ಸಾದಳ್ಳಿ ಟೋಲ್ ಬಳಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು ತಮ್ಮ ನಾಯಕನನ್ನು ಸಡಗರ, ಸಂಭ್ರಮ, ಅದ್ದೂರಿಯಾಗಿ ಸ್ವಾಗತಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Central SteelcongressCongress governmentdestroyedhd kumaraswamyHeavy Industries MinisterMisuse powerNo hate politicswarned
0 FacebookTwitterPinterestEmail
admin

previous post
ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್ ಆದೇಶ
next post
ಬಿಜೆಪಿಯ ದ್ವೇಷ ರಾಜಕಾರಣಕ್ಕೆ ಬಹುಮತ ಸಿಗಲಿಲ್ಲ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ