Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಲೋಕಸಭಾ ಚುನಾಣೆಯಲ್ಲಿ ಹಿನ್ನಡೆ : 5 ರಿಂದ 6 ಸಚಿವರ ತಲೆದಂಡ!

by admin June 16, 2024
written by admin June 16, 2024 0 comments 1 minutes read
Share 0FacebookTwitterPinterestEmail
294

ಸಚಿವರ ಸಾಧನೆ ವರದಿ ಸಲ್ಲಿಸಲು ಸಿಎಂಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಸರ್ಕಾರ, ಪಕ್ಷಕ್ಕೆ ಹೊರೆಯಾಗಿರುವ ಸಚಿವರನ್ನು ಅಧಿಕಾರದಿಂದ ಕೆಳಗಿಳಿಸಿ ಎಂದು ಕಾಂಗ್ರೆಸ್ ವರಿಷ್ಠರು ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ.

ಪಂಚ ಗ್ಯಾರಂಟಿಗಳನ್ನು ನೀಡಿದ ನಂತರವೂ ಕರ್ನಾಟಕದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಎರಡಂಕಿ ದಾಟದಿರುವುದು ಭಾರೀ ಮುಜುಗರ ತಂದಿದೆ.

ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯನ್ನು ಹೊರತುಪಡಿಸಿ ಉಳಿದ ಸಚಿವರುಗಳು ತಮ್ಮ ಇಲಾಖೆಗಳಲ್ಲಿ ಮಾಡಿರುವ ಸಾಧನೆಯ ವರದಿಯನ್ನು ಸಲ್ಲಿಸುವಂತೆ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಸೂಚಿಸಿದೆ.

ಸಚಿವರುಗಳು ತಮಗೆ ವಹಿಸಿದ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಜೊತೆಗೆ ಪಕ್ಷ ಸಂಘಟನೆಗೆ ಒತ್ತು ನೀಡಿದ್ದರೆ, ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗಳಿಸಬಹುದಿತ್ತು ಎಂಬುದು ವರಿಷ್ಠರ ಅಭಿಪ್ರಾಯ.

ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿದ ನಂತರವೂ ಕೇವಲ 9 ಕ್ಷೇತ್ರಗಳಲ್ಲಿ ಮಾತ್ರ ಪಕ್ಷ ಗೆಲುವು ಸಾಧಿಸಿದೆ.

ನೂತನ ಪ್ರವಾಸೋದ್ಯಮ ನೀತಿ ಜಾರಿ

ರಾಜ್ಯದಲ್ಲಿ 15 ರಿಂದ 18 ಸ್ಥಾನ ನಿರೀಕ್ಷಿಸಿದ್ದ ವರಿಷ್ಠರಿಗೆ ಅದರಲ್ಲಿ ಅರ್ಧದಷ್ಟು ಮಾತ್ರ ಸ್ಥಾನ ಬಂದಿರುವುದೇ ಕೋಪಕ್ಕೆ ಕಾರಣ.

ಸಚಿವರು ಪ್ರತಿನಿಧಿಸುವ 14 ವಿಧಾನಸಭಾ ಕ್ಷೇತ್ರಗಳಲ್ಲೇ ಪಕ್ಷಕ್ಕೆ ಹಿನ್ನಡೆಯಾಗಿದೆ. ಸಚಿವರುಗಳೇ ಪಕ್ಷದ ಅಭ್ಯರ್ಥಿಗಳಿಗೆ ಮುನ್ನಡೆ ದೊರಕಿಸಿಕೊಡದಿದ್ದರೆ ಬೇರೆ ಕ್ಷೇತ್ರಗಳ ಸ್ಥಿತಿ ಏನು? ಅದರಲ್ಲೂ ಎರಡು-ಮೂರು ಮಂತ್ರಿಗಳ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ಗೆ 50 ಸಾವಿರ ಮತಗಳು ಹೆಚ್ಚು ಹೋಗಿವೆ.

ಟಿಕೆಟ್ ಹಂಚಿಕೆ ಸಂದರ್ಭದಲ್ಲೂ ಸಚಿವರ ಶಿಫಾರಸಿಗೆ ಮನ್ನಣೆ ನೀಡಿರುವುದಲ್ಲದೆ, ಕೆಲವು ಕ್ಷೇತ್ರಗಳಲ್ಲಿ ನಮಗೆ ನಿರ್ದಿಷ್ಟ ಅಭ್ಯರ್ಥಿಯೇ ಬೇಕೆಂದಾಗ ಅಂಥವರಿಗೇ ಟಿಕೆಟ್ ನೀಡಿದರೂ ನಮ್ಮ ಪರ ಫಲಿತಾಂಶ ಬರಲಿಲ್ಲ.

ಜನಸ್ನೇಹಿ ಆಡಳಿತ ನೀಡಿ, ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಯಾವುದೇ ಕಡತಗಳೂ ನಿಗದಿತ ಸಮಯದಲ್ಲಿ ವಿಲೇವಾರಿ ಆಗುವಂತೆ ನೋಡಿಕೊಳ್ಳಿ. ಸಚಿವರ ಕಾರ್ಯವೈಖರಿ ಬಗ್ಗೆ ಗಮನಹರಿಸಿ ಎಂದು ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿವಿಮಾತು ಹೇಳಿದ್ದರು.

ಲೋಕಸಭಾ ಚುನಾವಣೆ ನಂತರ ಸೇರಿದ್ದ ಮೊದಲ ಸಂಪುಟ ಸಭೆಯಲ್ಲೇ ಮುಖ್ಯಮಂತ್ರಿ ಸಚಿವರಿಗೆ ಕ್ಲಾಸ್ ತೆಗೆದುಕೊಂಡು ನೀತಿ ಪಾಠ ಹೇಳಿದ್ದರು.

ಆಡಳಿತದಲ್ಲಿ ಸುಧಾರಣೆ ಆಗಬೇಕು. ಕಡತಗಳ ವಿಳಂಬವನ್ನು ತಪ್ಪಿಸಿ, ಜನಸ್ನೇಹಿ ಆಡಳಿತ ನೀಡಿ ಎಂದು ಮುಖ್ಯಮಂತ್ರಿ ಅವರು ಅಂದಿನ ಸಭೆಯಲ್ಲಿ ತಿಳಿಸಿದ್ದಲ್ಲದೆ, ಮುಖ್ಯಕಾರ್ಯದರ್ಶಿ ಅವರಿಗೂ ಸೂಚನೆಗಳನ್ನು ನೀಡಿದ್ದರು.

ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಸೋಲಿನ ಪರಾಮರ್ಶೆ ನಡೆಯುತ್ತಿದ್ದು, ಜಿಲ್ಲಾ ಸಚಿವರುಗಳಿಂದಲೇ ವರದಿ ಪಡೆಯಲಾಗುತ್ತಿದೆ.

ಸಚಿವರುಗಳು ಕಳೆದ ಒಂದು ವರ್ಷಗಳಲ್ಲಿ ತಮ್ಮ ಇಲಾಖೆಗಳಲ್ಲಿ ಮಾಡಿರುವ ಸಾಧನೆ ಬಗ್ಗೆ ಪಕ್ಷ ಮತ್ತು ಸರ್ಕಾರ ಪ್ರತ್ಯೇಕವಾಗಿ ವರದಿ ಸಿದ್ಧಪಡಿಸಿ, ಪಕ್ಷದ ವರಿಷ್ಠರಿಗೆ ತಲುಪಿಸಲಿದ್ದಾರೆ.

ವರದಿ ತಲುಪಿದ ನಂತರವೇ ಕೆಲವು ಸಚಿವರ ತಲೆದಂಡ ಆಗುವುದು ನಿಶ್ಚಿತ. ಕನಿಷ್ಠ ನಾಲ್ಕರಿಂದ ಆರು ಮಂದಿ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕರ್ನಾಟಕದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಯತ್ನ

Share this:

  • WhatsApp
  • Post
  • Tweet
  • Print
  • Email
5- 6 ministersbeheadedcmelectionFive GuaranteesHigh CommandinstructskarnatakaLok Sabhaministersperformancereportsetback
Share 0 FacebookTwitterPinterestEmail
admin

previous post
ನೂತನ ಪ್ರವಾಸೋದ್ಯಮ ನೀತಿ ಜಾರಿ
next post
ತೈಲ ದರ ಏರಿಕೆ ವಿರೋಧಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ

You may also like

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ...

May 18, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ