Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಅಂಕಣ

ಮಿಸ್ಟರ್ ಕೂಲ್ ಆಗಿದ್ದಾರೆ ಸಿದ್ದು

by admin June 17, 2024
written by admin June 17, 2024 0 comments 4 minutes read
0FacebookTwitterPinterestEmail
142

ದಿಲ್ಲಿಯ ಬಿಜೆಪಿ ಕಂಪೋಂಡಿನಿಂದ ಕುತೂಹಲಕಾರಿ ಸುದ್ದಿಯೊಂದು ತೇಲಿ ಬಂದಿದೆ. ಆಂಧ್ರದ ಚಂದ್ರಬಾಬು ನಾಯ್ಡು ಮತ್ತು ಬಿಹಾರದ ನಿತೀಶ್ ಕುಮಾರ್ ಎಂಬ ಜೋಡೆತ್ತುಗಳನ್ನು ಪ್ರಧಾನಿ ನರೇಂದ್ರ ಮೋದಿ ಹೇಗೆ ನಿಯಂತ್ರಣಕ್ಕೆ ತೆಗೆದುಕೊಂಡರು ಎಂಬುದೇ ಈ ಸುದ್ದಿ.

ಅಂದ ಹಾಗೆ ಜೂನ್ ನಾಲ್ಕರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಯಿತಲ್ಲ, ಇದು ಸ್ಪಷ್ಟವಾಗುತ್ತಾ ಹೋದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಂದು ವಿಷಯ ಕ್ಲಿಯರ್ ಆಗಿದೆ. ಅದೆಂದರೆ ಬಿಜೆಪಿ ಸ್ವಯಂಬಲದಿಂದ ಅಧಿಕಾರಕ್ಕೆ ಬರುವುದಿಲ್ಲ, ಎನ್‌ಡಿಎ ಮಿತ್ರ ಪಕ್ಷಗಳ ಜತೆ ಸೇರಿ ಸರ್ಕಾರ ರಚಿಸಿದರೂ ಆ ಇಬ್ಬರು ಮಿತ್ರರು ಮಾತ್ರ ಸಮಯ ನೋಡಿ ಆಟ ಆಡಲು ಹಿಂಜರಿಯುವುದಿಲ್ಲ ಎಂಬುದು.

ಅರ್ಥಾತ್, ಸಂಯುಕ್ತ ಜನತಾದಳದ ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್ ಮತ್ತು ಆಂಧ್ರದ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ತಮಗಿರುವ ಬಲದಿಂದ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ, ಮುಜುಗರಕ್ಕೆ ಈಡು ಮಾಡುತ್ತಾರೆ ಎಂಬುದು ನರೇಂದ್ರ ಮೋದಿ ಅವರ ಅನುಮಾನ.

ಹಾಗಂತಲೇ ಅವತ್ತು ಅಮಿತ್ ಷಾ, ಜಗತ್ ಪ್ರಕಾಶ್ ನಡ್ಡಾ ಸೇರಿದಂತೆ ಪಕ್ಷದ ಹಲವು ನಾಯಕರ ಜತೆ ತುರ್ತು ಸಮಾಲೋಚನೆ ನಡೆಸಿದ ನರೇಂದ್ರ ಮೋದಿ ಈ ಸಭೆಯಲ್ಲಿ ಒಂದು ತೀರ್ಮಾನ ಪ್ರಕಟಿಸಿದ್ದಾರೆ. ಈ ಹಂತದಲ್ಲಿ ನಾವು ಸರ್ಕಾರ ರಚಿಸುವುದು ಬೇಡ ಎಂಬುದು ಅವರ ತೀರ್ಮಾನ.

ಕಾರಣ, ಹೇಗಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅಗತ್ಯವಾದ 273 ಸೀಟು ಬಂದಿಲ್ಲ, ಹೀಗಾಗಿ ನಾವು ಸರ್ಕಾರ ರಚಿಸುವ ಬದಲು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೆ ಅವಕಾಶ ಕೊಡೋಣ. ಸದ್ಯಕ್ಕೆ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಅವರೆಲ್ಲ ಆ ಒಕ್ಕೂಟಕ್ಕೇ ಬೆಂಬಲ ಕೊಡಲಿ.

ಅಂದ ಹಾಗೆ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಜನರಿಗೆ ಬೇಕಾದಷ್ಟು ಭರವಸೆ ನೀಡಿದ್ದಾರೆ. ದೇಶದ ಪ್ರತಿ ಗೃಹಿಣಿಯ ಖಾತೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಹಾಕುತ್ತೇವೆ ಎಂದಿದ್ದಾರೆ. ಇದೇ ರೀತಿ ಅವರು ಕೊಟ್ಟಿರುವ ಹಲವು ಭರವಸೆಗಳನ್ನು ಈಡೇರಿಸಲು ಕನಿಷ್ಟವೆಂದರೂ ಐವತ್ತು ಲಕ್ಷ ಕೋಟಿ ರೂಪಾಯಿ ಬೇಕು, ಅಂದರೆ, ಕೇಂದ್ರ ಸರ್ಕಾರದ ವಾರ್ಷಿಕ ಬಜೆಟ್ ಗಾತ್ರಕ್ಕಿಂತ ಈ ಭರವಸೆಗಳ ಗಾತ್ರ ದೊಡ್ಡದು.

ಹೀಗಾಗಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಮೊದಲು ಸರ್ಕಾರ ರಚಿಸಲು ಬಿಡೋಣ. ನಾವು ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತು ಅವರೇನು ಆಡಳಿತ ಕೊಡುತ್ತಾರೋ ನೋಡೋಣ ಅಂತ ಮೋದಿ ವಿವರಿಸಿದಾಗ ಸಭೆಯಲ್ಲಿದ್ದ ಎಲ್ಲರೂ ಮೌನವಾಗಿ ತಲೆ ಆಡಿಸಿದ್ದಾರೆ.

ಇದಾದ ಕೆಲವೇ ಕ್ಷಣಗಳಲ್ಲಿ ಮೋದಿಯವರ ತೀರ್ಮಾನ ನಿತೀಶ್‌ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರಿಗೆ ತಲುಪಿದೆ. ಯಾವಾಗ ಈ ವಿಷಯ ತಮ್ಮ ಕಿವಿಗೆ ಬಿತ್ತೋ ಆಗ ಹೌಹಾರಿದ ಈ ನಾಯಕರು ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪರ್ಕಿಸಿದ್ದಾರೆ. ಅಷ್ಟೇ ಅಲ್ಲ, ಯಾವ ಕಾರಣಕ್ಕೂ ಇಂಡಿಯಾ ಮೈತ್ರಿಕೂಟಕ್ಕೆ ಸರ್ಕಾರ ರಚಿಸುವ ಆಫರ್ ಹೋಗುವುದು ಬೇಡ, ನಾವಾದರೂ ಅಷ್ಟೇ, ಯಾವ ಕಾರಣಕ್ಕೂ ಆ ಕೂಟದ ಬೆಂಬಲಕ್ಕೆ ನಿಲ್ಲುವುದಿಲ್ಲ.

ಯಾಕೆಂದರೆ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ಸ್ಥಿರ ಸರ್ಕಾರ ರಚಿಸಲು ಸಾಧ್ಯವೇ ಇಲ್ಲ. ಒಂದು ವೇಳೆ ಅವರು ಸರ್ಕಾರ ರಚಿಸಿದರೆ ಮಿತ್ರ ಪಕ್ಷಗಳ ಮಾರಾಮಾರಿಯ ಮಧ್ಯೆ ಆ ಸರ್ಕಾರ ಉರುಳುತ್ತದೆ.

ಇವತ್ತು ಎಲ್ಲಕ್ಕಿಂತ ಮುಖ್ಯವಾಗಿ ದೇಶಕ್ಕೆ ಬೇಕಿರುವುದು ಸ್ಥಿರ ಸರ್ಕಾರ, ಅಂತಹ ಸರ್ಕಾರವನ್ನು ಕೊಡಲು ನಿಮ್ಮ ನೇತೃತ್ವದ ಬಿಜೆಪಿಗೆ ಮಾತ್ರ ಸಾಧ್ಯ, ಹೀಗಾಗಿ ನಾವೇನು ಎನ್‌ಡಿಎ ಮಿತ್ರಪಕ್ಷಗಳಿದ್ದೇವೆ, ನಾವು ನಿಮ್ಮನ್ನೇ ನಂಬಿದ್ದೇವೆ, ಅಷ್ಟೇ ಅಲ್ಲ, ಧೃಢವಾಗಿ ನಿಮ್ಮ ಜತೆ ನಿಲ್ಲುತ್ತೇವೆ ಎಂದಿದ್ದಾರೆ.

ಹೀಗೆ ಚಂದ್ರಬಾಬು ನಾಯ್ಡು ಮತ್ತು ನಿತೀಶ್‌ಕುಮಾರ್ ಅವರಾಡಿದ ಮಾತು ಕೇಳಿ ಮೋದಿ ಮುಖದಲ್ಲಿ ಮಂದಹಾಸ ಮಿನುಗಿದೆ.

ಯಾವಾಗ ಈ ಬೆಳವಣಿಗೆ ನಡೆಯಿತೋ, ಇದಾದ ನಂತರ ನಾಯ್ಡು, ನಿತೀಶ್ ಹೇಗೆ ಮೋದಿಯವರ ಅಕ್ಕ ಪಕ್ಕ ನಿಂತರು, ಒತ್ತಡ ಹೇರುವ ಗೋಜಿಗೆ ಹೋಗದೆ ಹೇಗೆ ಕೇಂದ್ರ ಸಂಪುಟದಲ್ಲಿ ತಮಗೆ ಸಿಕ್ಕ ಪಾಲನ್ನು ಪಂಚಾಮೃತ ಅಂತ ಒಪ್ಪಿಕೊಂಡರು ಎಂಬುದು ರಹಸ್ಯವೇನಲ್ಲ. ಅದೇನೇ ಇರಲಿ, ಒಟ್ಟಿನಲ್ಲಿ ತಮ್ಮ ನೇತೃತ್ವದ ಸರ್ಕಾರಕ್ಕೆ ಮಿತ್ರರಿಂದ ಆಗಬಹುದಾದ ತೊಂದರೆಗಳನ್ನು ಊಹಿಸಿದ ಮೋದಿಯವರು ನಿತೀಶ್ ಮತ್ತು ಚಂದ್ರಬಾಬು ನಾಯ್ಡು ಅವರಿಗೆ ತಿರುನಲ್ವೇಲಿ ಹಲ್ವ ತಿನ್ನಿಸಿದ್ದಾರೆ. ಹೀಗೆ ಅವರು ತಿನ್ನಿಸಿದ ಹಲ್ವದ ಘಮ ದೇಶದೆಲ್ಲೆಡೆ ಹರಡುತ್ತಿದೆ ಮತ್ತು ಎನ್‌ಡಿಎ ಸರ್ಕಾರ ಅಪಾಯದಿಂದ ಬಚಾವಾಗಿದೆ ಎಂಬುದನ್ನು ಸಂಕೇತಿಸುತ್ತಿದೆ.

ಸಿದ್ದು ಮಿಸ್ಟರ್ ಕೂಲ್ ಆಗಿದ್ದೇಕೆ?

ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಹಲವು ಸಚಿವರಿಗೆ ಚಿಂತೆ ಶುರುವಾಗಿದೆ, ಕಾರಣ, ಸಿದ್ದರಾಮಯ್ಯ ಇದ್ದಕ್ಕಿದ್ದಂತೆ ಮಿಸ್ಟರ್ ಕೂಲ್ ಆಗಿರುವುದು.

ಈ ಹಿಂದೆ ತಮ್ಮ ನಿರ್ಧಾರಗಳಿಗೆ ಯಾರೇ ವ್ಯತಿರಿಕ್ತ ಹೆಜ್ಜೆ ಇಟ್ಟರೂ ಭುಸುಗುಡುತ್ತಿದ್ದ, ತಕ್ಷಣ ತಿರುಗೇಟು ನೀಡುತ್ತಿದ್ದ ಸಿದ್ದರಾಮಯ್ಯ ಈಗ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲವಂತೆ.

ಇತ್ತೀಚೆಗೆ ವಿಧಾನ ಪರಿಷತ್ತಿನ ಟಿಕೆಟ್ ಹಂಚಿಕೆ ವಿಚಾರವಾಗಿ ವರಿಷ್ಠರ ಜತೆ ಮಾತನಾಡಲು ಅವರು ದೆಹಲಿಗೆ ಹೋಗಿದ್ದರಲ್ಲ, ಈ ಸಂದರ್ಭದಲ್ಲಿ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದಾರೆ. ಹೀಗೆ ಭೇಟಿ ಮಾಡಿದವರು, ಪರಿಷತ್ತಿಗೆ ಹೋಗಬೇಕಾದವರು ಯಾರು ಅಂತ ಪಟ್ಟಿ ಕೊಟ್ಟಿದ್ದಾರೆ. ಅವರು ಕೊಟ್ಟ ಪಟ್ಟಿಯನ್ನು ಒಮ್ಮೆ ನೋಡಿದ ಖರ್ಗೆಯವರು, ಓಕೆ, ಇದನ್ನು ರಾಹುಲ್ ಗಾಂಧಿ ಅವರ ಗಮನಕ್ಕೆ ತಂದು ಕ್ಲಿಯರ್ ಮಾಡಿಸುತ್ತೇನೆ ಎಂದಿದ್ದಾರೆ.

ಇದಾದ ನಂತರ ಬೆಂಗಳೂರಿಗೆ ವಾಪಸ್ಸಾದ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಪ್ರಕಟಿಸಿದ ಪಟ್ಟಿ ಸಿಕ್ಕಿದೆ. ಅಷ್ಟೇ ಅಲ್ಲ, ಈ ಪಟ್ಟಿಯಲ್ಲಿ ತಾವು ಹೇಳಿದ ಕೆಲವರಿಗೆ ಟಿಕೆಟ್ ಸಿಕ್ಕಿಲ್ಲ ಎಂಬುದು ಗಮನಕ್ಕೆ ಬಂದಿದೆ. ಆದರೆ ಇಷ್ಟಾದರೂ ಸಿದ್ದರಾಮಯ್ಯ ದೂಸುರಾ ಮಾತನಾಡದೆ ಮೌನವಾಗಿದ್ದಾರೆ. ಹಿಂದೆಲ್ಲ ಆಗಿದ್ದರೆ ರಪ್ಪಂತ ತಿರುಗೇಟು ಹೊಡೆಯುತ್ತಿದ್ದ ಸಿದ್ದರಾಮಯ್ಯ ಈಗೇಕೆ ತಣ್ಣಗಿದ್ದಾರೆ ಎಂಬುದೇ ಹಲವು ಸಚಿವರ ಅನುಮಾನ.

ಇದೇ ರೀತಿ ಅಧಿಕಾರಕ್ಕೆ ಬಂದ ಶುರುವಿನಲ್ಲಿ, ನಾನೇ ಐದು ವರ್ಷ ಮುಖ್ಯಮಂತ್ರಿ ಅಂತ ಗುಟುರು ಹಾಕುತ್ತಿದ್ದ ಅವರು ಈಗ ಈ ವಿಷಯದಲ್ಲೂ ಸೈಲೆಂಟ್ ಆಗಿದ್ದಾರೆ. ಅವರ ಈ ಮೌನವೇ ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ ಸೇರಿದಂತೆ ಹಲವು ಸಚಿವರ ಅನುಮಾನಕ್ಕೆ ಕಾರಣವಾಗಿದೆಯಲ್ಲದೆ, ದಿಲ್ಲಿ ರಾಜಕಾರಣದಲ್ಲಿ ನಡೆದಿರಬಹುದಾದ ಸೀಕ್ರೇಟಿನ ಬಗ್ಗೆ ಚರ್ಚಿಸುವಂತೆ ಮಾಡಿದೆ.

ಸದ್ಯದ ಸ್ಥಿತಿಯಲ್ಲಿ ಸಿಎಂ ಪಟ್ಟದ ಹಂಚಿಕೆ ಬಗ್ಗೆ ವರಿಷ್ಠರಿಂದ ಹಿಡಿದು ಯಾರೊಬ್ಬರೂ ಚಕಾರವೆತ್ತುತ್ತಿಲ್ಲ, ಆದರೂ ಸಿದ್ದರಾಮಯ್ಯ ಅವರ ಇತ್ತೀಚಿನ ಕೂಲ್ ಕೂಲ್ ನಡವಳಿಕೆ ಈ ಸಚಿವರ ಅನುಮಾನಕ್ಕೆ ಕಾರಣವಾಗಿದೆ.

ಒಂದು ವೇಳೆ ಮೇಡಂ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರೇನಾದರೂ ಅಧಿಕಾರ ಹಂಚಿಕೆಗೆ ಸಹಕರಿಸಿ ಅಂತ ಹೇಳಿದರೆ ಸಿದ್ದರಾಮಯ್ಯ ಅದನ್ನು ಪುರಸ್ಕರಿಸಬಹುದು ಎಂಬುದು ಈ ಸಚಿವರ ಅನುಮಾನ.

ಹೀಗಾಗಿಯೇ ಮುಂದಿನ ದಿನಗಳು ಹೇಗಿರಬಹುದು ಎಂಬುದನ್ನು ಊಹಿಸಿ ಕಾರ್ಯಾಚರಣೆಗಿಳಿದಿರುವ ಸಚಿವರ ಪಡೆ, ಅಧಿಕಾರ ಹಂಚಿಕೆಯ ಸನ್ನಿವೇಶ ಉದ್ಭವಿಸಿದರೆ ಏನು ಮಾಡಬೇಕು ಅಂತ ಬ್ಲೂ ಪ್ರಿಂಟು ರೆಡಿ ಮಾಡುತ್ತಿದೆ.

ಒಂದು ವೇಳೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರ ರಾಜಕಾರಣದಿಂದ ಮರಳಿದರೆ ಯಾವ ಹೆಜ್ಜೆ ಇಡಬೇಕು ಅಥವಾ ಅವರು ಬರದೆ ಹೋದರೆ ಯಾವ ಹೆಜ್ಜೆ ಇಡಬೇಕು ಎಂಬುದು ಈ ಬ್ಲೂ ಪ್ರಿಂಟಿನ ಸೆಂಟರ್ ಪಾಯಿಂಟು.

ಮಂತ್ರಿ ರಾಜಣ್ಣ ಗೇಮ್ ಪ್ಲಾನು

ಇನ್ನು ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೇರಲು ಟ್ರೈ ಕೊಡುತ್ತಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೊಸ ಗೇಮ್ ಪ್ಲಾನಿನೊಂದಿಗೆ ದಿಲ್ಲಿಗೆ ದೌಡಾಯಿಸಲಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷ ನಿರೀಕ್ಷಿತ ಸಾಧನೆ ಮಾಡದಿರಲು ಕಾರಣವೇನು ಮತ್ತು ಭವಿಷ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವನ್ನು ಹಣಿಯಲು ಅನುಸರಿಸಬೇಕಾದ ತಂತ್ರವೇನು ಎಂಬ ಬಗ್ಗೆ ಕೆ.ಎನ್.ರಾಜಣ್ಣ ರಿಪೋರ್ಟು ರೆಡಿ ಮಾಡಿದ್ದಾರೆ.

ಅಂದ ಹಾಗೆ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದರೂ ಒಕ್ಕಲಿಗರ ಪ್ರಾಬಲ್ಯವಿರುವ ಹಾಸನದಲ್ಲಿ ಗೆಲುವು ಗಳಿಸಿತ್ತು.

ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎದುರು ಕಾಂಗ್ರೆಸ್ಸಿನ ಶ್ರೇಯಸ್ ಪಟೇಲ್ ಗೆಲುವು ಸಾಧಿಸಲು ಹಲವು ಕಾರಣಗಳಿದ್ದರೂ ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಕೆ.ಎನ್.ರಾಜಣ್ಣ ಅನುಸರಿಸಿದ ಒಂದು ತಂತ್ರ ದೊಡ್ಡ ಮಟ್ಟದಲ್ಲಿ ಫಲ ನೀಡಿದೆ.

ಅರ್ಥಾತ್, ಹಾಸನದ ರಣಾಂಗಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸೈನ್ಯ ಒಗ್ಗೂಡಿ ಕೆಲಸ ಮಾಡದಂತೆ ಸಚಿವ ರಾಜಣ್ಣ ನೋಡಿಕೊಂಡಿದ್ದರು.

ಇದಕ್ಕಾಗಿ ತಮ್ಮ ಸಂಪರ್ಕಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡ ಅವರು ಮೈತ್ರಿಕೂಟದ ನಾಯಕರು ವಿರುದ್ಧ ನೆಲೆಯಲ್ಲಿ ನಿಲ್ಲುವಂತೆ ಮಾಡಿದರು.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಕೆಲಸ ಮಾಡಿದ್ದು ನಿಜವಾದರೂ, ಆಳದಲ್ಲಿ ರಾಜಣ್ಣ ಅನುಸರಿಸಿದ ಗೇಮ್ ಪ್ಲಾನು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಮುಖ್ಯ ಕಾರಣವಾಯಿತು.

ಹೀಗಾಗಿ ಇದೇ ಗೇಮ್ ಪ್ಲಾನಿನ ವಿವರವನ್ನು ದಿಲ್ಲಿಗೆ ಕೊಂಡೊಯ್ಯಲು ಸಜ್ಜಾಗುತ್ತಿರುವ ಅವರು, ರಣಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಸೈನ್ಯ ಒಗ್ಗೂಡದಂತೆ ನೋಡಿಕೊಳ್ಳಬೇಕು ಅಂತ ವರಿಷ್ಠರಿಗೆ ವಿವರಿಸಲಿದ್ದಾರೆ.

ರಾಜಣ್ಣ ಅವರ ಪ್ರಕಾರ, ಈ ತಂತ್ರವನ್ನು ಅನುಸರಿಸಿದರೆ ಮುಂದಿನ ವಿಧಾನಸಭೆ ಚುನಾವಣೆಯ ವೇಳೆಗೆ ಬಿಜೆಪಿ ಮತ್ತು ಜೆಡಿಎಸ್ ಪರಸ್ಪರ ವಿರುದ್ಧ ನೆಲೆಗಳಲ್ಲಿ ನಿಲ್ಲಲಿವೆ.

ಅಂದ ಹಾಗೆ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಕೇಂದ್ರ ಸಂಪುಟ ರಚನೆಯಾದ ನಂತರ ಬಿಜೆಪಿಯ ಲಿಂಗಾಯತ ಪಡೆ ಕುದಿಯುತ್ತಿದೆ, ಕಾರಣ, ಮೋದಿ-ಅಮಿತ್ ಷಾ ಜೋಡಿ ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರಿಗೆ ಪ್ರಾಮಿನೆನ್ಸು ನೀಡುತ್ತಿದ್ದಾರೆ.

ಹೀಗಾಗಿ ಜೆಡಿಎಸ್ ಎಂದರೆ ಕುದಿಯುತ್ತಿರುವ ಯಡಿಯೂರಪ್ಪ ಟೀಮು ಮುಂದಿನ ದಿನಗಳಲ್ಲಿ ಜೆಡಿಎಸ್ ವಿರುದ್ಧ ತಿರುಗಿ ಬೀಳಲಿದೆ. ಈ ಸನ್ನಿವೇಶವನ್ನು ನಾವು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಮತ್ತು ಅದೇ ಕಾಲಕ್ಕೆ ಅಹಿಂದ ವರ್ಗಗಳನ್ನು ಕನ್‌ಸಾಲಿಡೇಟ್ ಮಾಡಬೇಕು ಎಂಬುದು ರಾಜಣ್ಣ ಅವರ ಗೇಮ್ ಪ್ಲಾನು.

ಹೀಗೆ ರೆಡಿ ಮಾಡಿರುವ ಗೇಮ್ ಪ್ಲಾನಿನೊಂದಿಗೆ ದಿಲ್ಲಿಗೆ ದೌಡಾಯಿಸಲಿರುವ ಅವರು, ಇದನ್ನು ಸಾಧಿಸಲು ನನಗೆ ಕೆಪಿಸಿಸಿ ಅಧ್ಯಕ್ಷ ಪದವಿ ಕೊಡಿ ಎಂಬ ಪ್ರಸ್ತಾಪವನ್ನು ವರಿಷ್ಠರ ಮುಂದಿಟ್ಟು ಬರಲಿದ್ದಾರೆ.

ಆರ್.ಟಿ.ವಿಠ್ಠಲಮೂರ್ತಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bs yadiyurappacm siddaramaiahdr.g.parameshwarhd kumara swamyKN Rajannamallikarjuna khargepm narendra modiRahul Gandhisoniya gandhi
0 FacebookTwitterPinterestEmail
admin

previous post
ಸೆಸ್ ಹಂಚಿಕೆಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಎಂ ಬಿ ಪಾಟೀಲ
next post
ಇನ್ನೊಂದು ಧರ್ಮ ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಿ

You may also like

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಅರಸು, ಕೃಷ್ಣ, ಯಡಿಯೂರಪ್ಪ ಅವರಿಗೆ ನಸೀಬು ಇತ್ತು

September 15, 2025

ಇತಿಹಾಸದ ಪುಟಗಳಲ್ಲಿ ರಾಚಯ್ಯ ನೆಲೆಸಿದ ಕತೆ

September 13, 2025

ವಿಜಯೇಂದ್ರ – ನಿಖಿಲ್ ಈಗ ಜೋಡೆತ್ತುಗಳು

September 8, 2025

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

August 25, 2025

ಆರ್‌ಸಿಬಿ ತಂಡಕ್ಕೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ

June 4, 2025

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

May 19, 2025

ಇತಿಹಾಸ ಮರೆಯದ ಕೌತುಕದ ಕ್ಷಣಗಳು..

April 21, 2025

ಕೇಂದ್ರ ಮಂತ್ರಿ ಕುಮಾರಣ್ಣನ ಲೇಟೆಸ್ಟು ಸಂಕಟ

February 17, 2025

ಅಮಿತ್ ಷಾ ಆಟ ಬಲ್ಲವರಾರು?

February 3, 2025

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ