Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರ

ದೇವದಾರಿ ಗಣಿಗಾರಿಕೆ ಯೋಜನೆ : ಪರಿಸರ ರಕ್ಷಣೆಗೆ ಕಂಪನಿ ಬದ್ಧ

by admin June 18, 2024
written by admin June 18, 2024 0 comments 2 minutes read
0FacebookTwitterPinterestEmail
510

ಕುದುರೆಮುಖ ಕಬ್ಬಿಣ ಅದಿರು ಕಂಪನಿ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ (KIOCL) ಕೈಗೆತ್ತಿಕೊಂಡಿರುವ ಗಣಿಗಾರಿಕೆ ಯೋಜನೆಯ ಬಗ್ಗೆ ಕಳವಳ ಬೇಡ ಎಂದು ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಕುದುರೆಮುಖ ಕಬ್ಬಿಣ ಅದಿರು ಕಂಪನಿಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗಂಟಿ ವೆಂಕಟ ಕಿರಣ್ ಅವರು ಸೇರಿದಂತೆ ಹಲವು ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಮೋದಿ ಅವರ ಕನಸು ನನಸು

ಅರಣ್ಯ ನಾಶಕ್ಕೆ ನಾನು ಸಹಿ ಹಾಕಿದ್ದಲ್ಲ. ರಾಜ್ಯದಲ್ಲಿ ಉಕ್ಕು ಉತ್ಪಾದನೆ ಆಗಬೇಕು ಹಾಗೂ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಯಾಗಿ ನಮ್ಮ ಯುವಕರಿಗೆ ಉದ್ಯೋಗ ದೊರೆಯಬೇಕು.

ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ‌ನಿರ್ಭರ್ ಭಾರತ ಆಶಯದಂತೆ ಜಿಡಿಪಿ ವೃದ್ಧಿಗೆ ಹೆಚ್ಚು ಕಾಣಿಕೆ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಅರಣ್ಯ ಉಳಿಸಲು ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು.

ಅರಣ್ಯ ನಾಶದ ಆತಂಕ ಬೇಡ

ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂದು ಪ್ರಚಾರ ಮಾಡಲಾಗುತ್ತಿದೆ. ಜನರಲ್ಲಿ ಸ್ವಲ್ಪ ಮಟ್ಟಿಗಿನ ಆತಂಕ‌ ಉಂಟಾಗುವ ರೀತಿಯಲ್ಲಿ ಪ್ರಚಾರವಾಗಿದೆ.

2019ರಲ್ಲಿ ರಾಜ್ಯ ಸರ್ಕಾರವೇ ದೇವದಾರಿ ಗಣಿಗಾರಿಕೆ ಯೋಜನೆಗೆ 404 ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ಕೊಟ್ಟಿದೆ. ನಂತರ ಕೇಂದ್ರ ಸರ್ಕಾರದ ಪರಿಸರ ಇಲಾಖೆ ಕೂಡ ಅನುಮತಿ ನೀಡಿದೆ.

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣ ತಾರ್ಕಿಕ ಅಂತ್ಯಕ್ಕೆ

ಆದರೆ, ಕುಮಾರಸ್ವಾಮಿ ಅವರು ಗಣಿಗಾರಿಕೆಗೆ ಅನುಮತಿ ನೀಡುವ ಯೋಜನೆಗೆ ಸಹಿ ಹಾಕಿದ್ದಾರೆ. ದೇವದಾರಿ ಭಾಗದಲ್ಲಿ ಅರಣ್ಯ ಮತ್ತು ಜೀವರಾಶಿಗಳಿಗೆ ಹಾನಿ ಆಗುತ್ತದೆ.

99 ಸಾವಿರ ಮರಗಳಿಗೆ ಧಕ್ಕೆ ಆಗುತ್ತದೆ ಎಂದು ವರದಿಗಳು ಬಂದಿವೆ. ಆದರೆ, ಅರಣ್ಯ ನಾಶದ ಬಗ್ಗೆ ಆತಂಕ ಬೇಡ ಎಂದು ಕೇಂದ್ರ ಸಚಿವರು ಒತ್ತಿ ಹೇಳಿದರು.

ಕುದುರೆಮುಖ ಕಂಪನಿಯು ಅದಿರು ತೆಗೆಯುವ ಕೆಲಸ ಪ್ರಾರಂಭ ಮಾಡುವ ಮುನ್ನವೇ ಸುಮಾರು 194 ಕೋಟಿ ರೂಪಾಯಿ ವೆಚ್ಚದಲ್ಲಿ 808 ಹೆಕ್ಟೇರ್ ಪ್ರದೇಶದಲ್ಲಿ ಪರ್ಯಾಯವಾಗಿ ಅರಣ್ಯ ಬೆಳೆಸಲಿದೆ.

ಅದಕ್ಕೆ ಅರಣ್ಯ ಇಲಾಖೆಗೆ ಹಣ ಪಾವತಿಸಿದೆ. ಜೀವರಾಶಿಗೆ ತೊಂದರೆಯಾಗದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈ ವಿಷಯವನ್ನು ಆ ಭಾಗದ ಜನತೆ ಗಮನಿಸಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು.

ಅಧಿಕಾರಿಗಳ ಜತೆ ಸಭೆ

ಇದಕ್ಕೂ ಮೊದಲು ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಕುದುರೆಮುಖ ಕಂಪನಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು.

ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗಂಟಿ ವೆಂಕಟ ಕಿರಣ್ ಅವರು ನೀಡಿದ ಕಂಪನಿಯ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಅವರು, ಉಕ್ಕು ಉತ್ಪಾದನೆ, ರಪ್ತು ಬಗ್ಗೆ ವ್ಯಾಪಕ ಚರ್ಚೆ ನಡೆಸಿದರು.

ದೇವದಾರಿ ಯೋಜನೆ ಪ್ರಧಾನಿಗಳ ನೂರು ದಿನ ಕಾರ್ಯಸೂಚಿಯಲ್ಲಿ ಇದ್ದು, ಈ ಬಗ್ಗೆ ಮುತುವರ್ಜಿಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದ ಸಚಿವರು, ಆದಷ್ಟು ಬೇಗ ಗಣಿಗಾರಿಕೆ ಆರಂಭ ಮಾಡಿ ಎಂದು ಹೇಳಿದರು.

ವಿಶ್ವೇಶ್ವರಯ್ಯ ಕಬ್ಬಿಣ ಅದಿರು ಕಾರ್ಖಾನೆ ಪುನಶ್ಬಚೇತನದ ಗ್ಗೆ ಚರ್ಚೆ

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಅದಿರು ಕಾರ್ಖಾನೆ ಪುನಶ್ಚೇತನ ಬಗ್ಗೆ ಕೂಡ ಸಭೆಯಲ್ಲಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಚರ್ಚೆ ನಡೆಸಿದರು.

ಈ ಬಗ್ಗೆ ಆಲೋಚನೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಇದು ಒಳ್ಳೆಯ ಕಾರ್ಖಾನೆ, ಕರ್ನಾಟಕದ ಹೆಗ್ಗುರುತು ಆಗಿತ್ತು. ಅದನ್ನು ಉಳಿಸುವ ಬಗ್ಗೆ ಚಿಂತನೆ ಮಾಡಿ ಎಂದರು.

Spaclity ಸ್ಟೀಲ್ ಉತ್ಪಾದನೆಗೆ ಒತ್ತು ಕೊಡಿ

Spaclity ಸ್ಟೀಲ್ (ಮೌಲ್ಯಾಧಾರಿತ ಉಕ್ಕು) ಅನ್ನು ಹೆಚ್ಚು ಉತ್ಪಾದನೆ ಮಾಡುವ ಕಡೆ ಹೆಚ್ಚು ಗಮನ ಹರಿಸಿ. ಜಾಗತಿಕವಾಗಿ ಅದರಲ್ಲಿಯೂ ಚೀನಾ, ತೈವಾನ್, ದಕ್ಷಿಣ ಕೊರಿಯಾ ಪೈಪೋಟಿ ಎದುರಿಸಲು Spaclity ಸ್ಟೀಲ್ ಉತ್ಪಾದನೆ ಕಡೆ ಹೆಚ್ಚು ಗಮನ ಕೊಡಿ. Spaclity ಸ್ಟೀಲ್ ಉತ್ಪಾದನೆಗೆ ಅಗತ್ಯವಾದ ತಂತ್ರಜ್ಞಾನ ಜೋಡಿಸಿಕೊಳ್ಳಿ ಎಂದು ಸಚಿವರು ನಿರ್ದೇಶನ ನೀಡಿದರು.

ಸೆಮಿಕಂಡಕ್ಟರ್ ಕ್ಷೇತ್ರದ ಭಾರತ ಮುನ್ನಡೆಯು ಮೋದಿ ಕನಸು

ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ಸ್ವಾವಲಂಬನೆ ಸಾಧಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಆದರೆ, ನಾನು ಕೊಟ್ಟ ಆ ಹೇಳಿಕೆಯನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ ಎಂದು ಕೇಂದ್ರ ಸಚಿವರು ಇದೇ ವೇಳೆ ಸ್ಪಷ್ಟಪಡಿಸಿದರು.

ಜುಲೈ 15ರಿಂದ ವಿಧಾನಮಂಡಲ ಅಧಿವೇಶನ

ರಾಜ್ಯ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ನೀಡಿರುವ ಯೂ ಟರ್ನ್ ಹೇಳಿಕೆ‌ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಸೆಮಿಕಂಡಕ್ಟರ್ ಕೈಗಾರಿಕೆ ದೊಡ್ಡ ಪ್ರಮಾಣದಲ್ಲಿ ಬೆಳೆಯಬೇಕಿದೆ. ತೈವಾನ್, ಅಮೆರಿಕದಲ್ಲಿ ಈ ಉದ್ಯಮ ದೊಡ್ಡಮಟ್ಟದಲ್ಲಿದೆ.

ಅದಕ್ಕೆ ಮೋದಿಯವರು ಪ್ರೋತ್ಸಾಹ ನೀಡಲು ಒಂದು ಬೃಹತ್ ಯೋಜನೆ ಜಾರಿಗೆ ತಂದಿದ್ದಾರೆ. ಇದರಲ್ಲಿ ಯೂಟರ್ನ್ ಪ್ರಶ್ನೆ ಏನೂ ಇಲ್ಲ. ದೇಶದ ಪ್ರಗತಿ ಅಷ್ಟೇ ಮುಖ್ಯ ಅವರು ಎಂದರು.

ಪರಿಷತ್ ಉಪಚುನಾವಣೆಗೆ ಬಾದರ್ಲಿ ಕಾಂಗ್ರೆಸ್ ಅಭ್ಯರ್ಥಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Company committedconducted meetingDevadari Mining Projectenvironmental protectionHdIron Ore CompanyKudremukhkumaraswamySpaclity steel productiontop officials
0 FacebookTwitterPinterestEmail
admin

previous post
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣ ತಾರ್ಕಿಕ ಅಂತ್ಯಕ್ಕೆ
next post
ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ