Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರದೇಶ ಕಾಂಗ್ರೆಸ್‌ನಲ್ಲಿ ಗಾದಿಗಾಗಿ ಕಿತ್ತಾಟ !

by admin June 29, 2024
written by admin June 29, 2024 0 comments 2 minutes read
0FacebookTwitterPinterestEmail
363

ಬೆಂಗಳೂರು:ಮುಖ್ಯಮಂತ್ರಿ ಬದಲಾವಣೆ, ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಪ್ರದೇಶ ಕಾಂಗ್ರೆಸ್‌ನಲ್ಲಿ ಬೆಂಕಿ ಹೊತ್ತಿಕೊಳ್ಳುವಂತೆ ಮಾಡಿದೆ.

ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲಿಗೆ ಸಚಿವ ಕೆ.ಎನ್.ರಾಜಣ್ಣ ಪ್ರತಿ ಸವಾಲು ಹಾಕಿದ್ದಾರೆ.

ಶಿಸ್ತುಕ್ರಮದ ಎಚ್ಚರಿಕೆ

ಸಿಎಂ, ಡಿಸಿಎಂ ವಿಚಾರ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೆ ನೋಟಿಸ್ ಕೊಟ್ಟು ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

’ಶಿವಕುಮಾರ್ ಅವರ ವಾರ್ನಿಂಗನ್ನು ಕೇಳುತ್ತೀನೇನ್ರಿ’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಷ್ಟೇ ಖಾರವಾಗಿ ಉತ್ತರಿಸಿರುವುದಲ್ಲದೆ, ’ರಾಜಣ್ಣ, ರಾಜಣ್ಣನೇ’ ಎಂದಿದ್ದಾರೆ.

’ಎಲ್ಲರ ಬಾಯಿಗೂ ಬೀಗ ಹಾಕಿದರೆ, ನಾನೂ ಸುಮ್ಮನಿರುತ್ತೇನೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದರೆ, ಕೇಳಿಕೊಂಡು ಸುಮ್ಮನಿರಕ್ಕೆ ಆಗುತ್ತಾ’ ಎಂದು ಸುದ್ದಿಗಾರರ ಮುಂದೆ ಕಿಡಿಕಾರಿದ್ದಾರೆ.

ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುತ್ತಿರುವ ಸಿದ್ದರಾಮಯ್ಯ !
ವಿಧಾನಸಭೆ ವಿಸರ್ಜಿಸಿ

ಇದರ ನಡುವೆ ಮಾಜಿ ಸಂಸದ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್, ಉಪಮುಖ್ಯಮಂತ್ರಿ ಮತ್ತು ನಾಯಕತ್ವ ಕೇಳುವವರು ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ನಂತರ ಎಷ್ಟು ಮುಖ್ಯಮಂತ್ರಿ ಹಾಗೂ ಎಷ್ಟು ಉಪಮುಖ್ಯಮಂತ್ರಿಗಳನ್ನಾದರೂ ಮಾಡಿಕೊಳ್ಳಲಿ ಎಂದು ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಪ್ರಸ್ತಾಪಿಸುವ ಸಚಿವರು ಮತ್ತು ಪಕ್ಷದ ಶಾಸಕರಿಗೆ ನೋಟಿಸ್ ನೀಡಿ, ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ.

ಪಕ್ಷಕ್ಕೆ ಶಿಸ್ತು ಮುಖ್ಯ

ಪಕ್ಷಕ್ಕೆ ಶಿಸ್ತು ಮುಖ್ಯ, ಶಿಸ್ತಿಲ್ಲದೆ ಪಕ್ಷವಿಲ್ಲ, ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ, ಕೆಲವರು ಸುಖಾಸುಮ್ಮನೆ ಮಾತನಾಡುವ ಅವಶ್ಯಕತೆಯಿಲ್ಲ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾನು ಹಾಗೂ ಸಿದ್ದರಾಮಯ್ಯ ಪಕ್ಷದ ಹಿತದೃಷ್ಟಿಯಿಂದ ಹೇಗೆ ಕೆಲಸ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿದ್ದೇವೆ ಎಂದರು.

ಮುಖ್ಯಮಂತ್ರಿ ಬದಲಾವಣೆ ಹಾಗೂ ಉಪಮುಖ್ಯಮಂತ್ರಿಗಳ ನೇಮಕ ಬಗ್ಗೆ ಹೈಕಮಾಂಡ್ ಬಳಿ ಚರ್ಚೆಯಾಗಿಲ್ಲ, ಸ್ವಾಮೀಜಿಗಳು ಅಭಿಮಾನಪೂರ್ವಕವಾಗಿ ಮಾತನಾಡಿದ್ದಾರೆ, ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು, ಅವರು ಮನಸ್ಸಿನಿಂದ ಹರಸಿದರೆ ಸಾಕು.

ಮಂತ್ರಿಗಳು, ಶಾಸಕರು, ಸ್ವಾಮೀಜಿಗಳು ಮಾತನಾಡಬೇಡಿ
ಹೈಕಮಾಂಡ್ ತೀರ್ಮಾನ ಮಾಡುತ್ತೆ

ನಾನು ಮುಖ್ಯಮಂತ್ರಿ ಆಗಲು ಯಾರೂ ಶಿಫಾರಸ್ಸು ಮಾಡಬೇಕಿಲ್ಲ, ನನ್ನ ಕೆಲಸ ನೋಡಿ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತದೆ, ದಯವಿಟ್ಟು ಈ ವಿಚಾರ ಇಲ್ಲಿಗೆ ಕೈಬಿಡಿ ಎಂದು ಮನವಿ ಮಾಡಿದ್ದಾರೆ.

ಹೆಚ್ಚುವರಿ ಉಪಮುಖ್ಯಮಂತ್ರಿಗಳ ನೇಮಕ ಕುರಿತು ಕೆಲವರು ಹೇಳಿಕೆ ಕೊಡುತ್ತಿರುವುದು ನನಗೆ ಗೊತ್ತಿಲ್ಲ, ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ ಎಂದರು.

ಶಿವಕುಮಾರ್ ಹೇಳಿಕೆಗೆ ಅಷ್ಟೇ ಖಾರವಾಗಿ ಉತ್ತರಿಸಿರುವ ರಾಜಣ್ಣ, ’ನೋಟಿಸ್ ಕೊಡುತ್ತಾರಾ, ಕೊಡಲಿ, ಕೊಟ್ಟಾದ ಮೇಲೆ ಮಾತನಾಡುತ್ತೀನಿ, ಹೆಚ್ಚುವರಿ ಉಪಮುಖ್ಯಮಂತ್ರಿ ಏಕೆ ಕೇಳಬಾರದು’ ಎಂದು ಕೆಪಿಸಿಸಿ ಅಧ್ಯಕ್ಷರನ್ನು ಪ್ರಶ್ನಿಸಿ, ’ಕೇಳಿದರೇನು ತಪ್ಪಾ’ ಎಂದಿದ್ದಾರೆ.

ಸಮುದಾಯದ ಸ್ವಾಮೀಜಿಗಳು

ಶಾಮನೂರು ಶಿವಶಂಕರಪ್ಪ, ಸತೀಶ್ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಆಯಾ ಸಮುದಾಯದ ಸ್ವಾಮೀಜಿಗಳು ಹೇಳುತ್ತಾರೆ.

ಸ್ವಾಮೀಜಿಗಳು ಹೇಳೋದನ್ನು ಕೇಳೋಕಾಗುತ್ತಾ, ಅವರು ಕೇಳೋದು ಪ್ರಜಾಪ್ರಭುತ್ವಕ್ಕೆ ಅವಮಾನ, ನಾನು ಹಗರಣ ಮಾಡಿದ್ದರೆ ತನಿಖೆ ಮಾಡಲಿ, ಬಡವರ ಪರ ಸಿದ್ದರಾಮಯ್ಯ ಕೆಲಸ ಮಾಡುತ್ತಾರೆ, ಅದಕ್ಕೆ ಅವರ ಜೊತೆ ನಾನಿದ್ದೇನೆ.

ಡಿ.ಕೆ.ಸುರೇಶ್ ಒಳ್ಳೆ ಸಂಸದನಾಗಿ ಕೆಲಸ ಮಾಡಿದ್ದರೂ, ಇದೇ ಸ್ವಾಮಿಜೀಗಳು ಅವರನ್ನು ಸೋಲಿಸಿದರು.

ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎನ್ನುವುದನ್ನು ಶಾಸಕರು ಮತ್ತು ವರಿಷ್ಠರು ತೀರ್ಮಾನ ಮಾಡುತ್ತಾರೆ ಮಠಗಳಲ್ಲ ಎಂದು ಖಾರವಾಗಿ ಹೇಳಿದ್ದಾರೆ.

ಪೊಲೀಸ್ ಬಲವರ್ಧನೆಗೆ ಕೇಂದ್ರದ ನೆರವು ಕೋರಿಕೆ
ಇಲ್ಲ-ಸಲ್ಲದ ಮಾತುಗಳು

ಪ್ರತ್ಯೇಕವಾಗಿ ಸುದ್ದಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ನಮ್ಮ ಗುರಿ ಇರುವುದು ಒಳ್ಳೆಯ ಆಡಳಿತ ನೀಡುವುದು, ಆದರೆ ಪ್ರತಿನಿತ್ಯ ಇಲ್ಲ-ಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ, ಡಿಸಿಎಂ ಹಾಗೂ ಸಚಿವರನ್ನು ಮಾಡುವ ಅಧಿಕಾರ ಮುಖ್ಯಮಂತ್ರಿಗಳಿಗೆ ಇದೆ, ಅವರು ಎಷ್ಟು ಜನರನ್ನಾದರೂ ಮಾಡಿಕೊಳ್ಳಲಿ.

ಜಾತ್ಯತೀತತೆ ಅಂತ ಹೇಳಿ ಅಧಿಕಾರಕ್ಕೆ ಬಂದು ಜಾತೀಯತೆ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದರು.

ಅಧಿಕಾರದ ಆಸೆ ಇದ್ದವರು ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಲಿ, ನಂತರ ನಾಯಕತ್ವವನ್ನು ಪಡೆದುಕೊಳ್ಳಿ ಎಂದು ತಮ್ಮದೇ ಪಕ್ಷದವರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dk shivakumardk sureshKN Rajannakpcc
0 FacebookTwitterPinterestEmail
admin

previous post
ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುತ್ತಿರುವ ಸಿದ್ದರಾಮಯ್ಯ !
next post
ವಿಜಯೇಂದ್ರ ಕ್ಯಾಂಪಿನ ಕನಸುಗಳು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ