Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಡಾ ನಿವೇಶನ ಹಂಚಿಕೆಯಲ್ಲಿ ಕುಟುಂಬದ ಪಾತ್ರ ಇಲ್ಲ

by admin July 2, 2024
written by admin July 2, 2024 0 comments 2 minutes read
0FacebookTwitterPinterestEmail
176

ಬಿಜೆಪಿ ಅಧಿಕಾರಾವಧಿಯಲ್ಲಿ ನಿವೇಶನ ವಿತರಣೆ: ಸಿದ್ದರಾಮಯ್ಯ

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣದಲ್ಲಿ ನಮ್ಮ ಕುಟುಂಬದ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಅಧಿಕಾರಾವಧಿಯಲ್ಲಿ ನಿವೇಶನ ಹಂಚಿಕೆ ಆಗಿದೆ ಎಂದರು.

ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಮುಖ್ಯಮಂತ್ರಿ ಅವರು ಮುಡಾ ಹಗರಣದಲ್ಲಿ ನಾಲ್ಕು ಸಾವಿರ ಕೋಟಿ ರೂ. ಗುಳುಂ ಮಾಡಿದ್ದು ತಮ್ಮ ಪತ್ನಿಯವರ ಹೆಸರಿನಲ್ಲೂ ವರ್ಗಾವಣೆ ನಿವೇಶನ ಪಡೆದಿದ್ದಾರೆ ಎಂದು ಗುರುತರ ಆರೋಪ ಮಾಡಿದ್ದರು.

ಅಶೋಕ್ ಈ ಸಂಬಂಧ ಟ್ವೀಟ್ ಮಾಡಿದ ಸ್ವಲ್ಪ ಸಮಯದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ಈ ಹಗರಣ ಬಿಜೆಪಿ ಅವರ ಕಾಲದಲ್ಲೇ ಆಗಿದೆ.

ಪತ್ನಿ ಹೆಸರಿನಲ್ಲಿ ಮೂರು ಎಕರೆ 16 ಗುಂಟೆ

ಮೈಸೂರು ಹೊರವಲಯದ ವರ್ತುಲ ರಸ್ತೆ ಸಮೀಪದಲ್ಲೇ ನನ್ನ ಪತ್ನಿ ಪಾರ್ವತಿ ಹೆಸರಿನಲ್ಲಿ ಮೂರು ಎಕರೆ 16 ಗುಂಟೆ ಜಮೀನು ಇತ್ತು.

ಪ್ರಾಧಿಕಾರ ಹೊಸ ಬಡಾವಣೆ ನಿರ್ಮಾಣ ಸಂದರ್ಭದಲ್ಲಿ ನಮ್ಮ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳದೆ, ನಿವೇಶನ ಮಾಡಿ ಮಾರಾಟ ಮಾಡಿದರು.

ನಮ್ಮ ಜಮೀನಿಗೆ ಸಮಾನಾಂತರವಾಗಿ ನಿವೇಶನಗಳನ್ನು ನೀಡುವುದಾಗಿ ಮುಡಾ ನಮಗೆ 50:50ರ ಅನುಪಾತದಲ್ಲಿ, ಅಂದರೆ 2021ರಲ್ಲಿ 14 ನಿವೇಶನಗಳನ್ನು ಹಂಚಿಕೆ ಮಾಡಿದೆ.

ಮೈಸೂರಿನ ಮುಡಾದಲ್ಲಿ 4,000 ಕೋಟಿ ರೂ. ಗುಳುಂ
ಮುಡಾದಿಂದ ನಷ್ಟ, ಲಾಭವಾಗಿಲ್ಲ

ಈ ನಿವೇಶನಗಳ ಬಗ್ಗೆ ನಾನು ನಮ್ಮ ಆಸ್ತಿಯನ್ನು ಚುನಾವಣಾ ಸಂದರ್ಭದಲ್ಲಿ ಘೋಷಿಸಿಕೊಂಡಿದ್ದೇನೆ, ನಮಗೆ ಮುಡಾದಿಂದ ನಷ್ಟವಾಗಿದೆಯೇ ಹೊರತು ಲಾಭವಾಗಿಲ್ಲ.

ಈ ಜಮೀನನ್ನು ನನ್ನ ಪತ್ನಿಯ ಅವರ ಸಹೋದರ ಮಲ್ಲಿಕಾರ್ಜುನ ಅರಿಶಿನ-ಕುಂಕುಮ ರೂಪದಲ್ಲಿ ನನ್ನ ಪತ್ನಿಗೆ ದಾನವಾಗಿ ನೀಡಿದ್ದರು.

ಅವರ ಕುಟುಂಬದವರು ಆಸ್ತಿ ಹಂಚಿಕೊಳ್ಳುವ ಸಂದರ್ಭದಲ್ಲಿ ನನ್ನ ಪತ್ನಿಗೆ ಈ ಭೂಮಿ ನೀಡಿದ್ದರು.

ದಾನದ ರೂಪದಲ್ಲಿ ಬಂದಿದ್ದು

ನಾನು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಈ ಜಮೀನು ಖರೀದಿ ಮಾಡಿಲ್ಲ, ಅದು ದಾನದ ರೂಪದಲ್ಲಿ ಬಂದಿದ್ದು, ಈ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದವರು ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ನಿವೇಶನ ಅನುಪಾತದ ಹಂಚಿಕೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವರು ಮುಡಾದಲ್ಲಿ ಸಭೆ ನಡೆಸಿ, ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ, ಅದು ಶಿಕ್ಷೆಯಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿಗಳಿಂದ ತನಿಖೆಗೆ ಆದೇಶ ಮಾಡಿದ್ದಾರೆ, ವರದಿ ಬರಲಿ ನಂತರ ಮುಂದಿನ ಕ್ರಮ ಎಂದರು.

ರಾಹುಲ್ ಗಾಂಧಿ ಹಿಂದೂಗಳ ಕ್ಷಮೆ ಕೇಳಬೇಕು
ಜಮೀನು ಸ್ವಾಧೀನ

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ದೇವನೂರು ಬಡಾವಣೆ ನಿರ್ಮಾಣ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು.

ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಪರಿಹಾರವಾಗಿ 71,457 ಚದರಡಿ ಜಾಗ ನೀಡಬೇಕಿತ್ತು, ಆದರೆ, 38,284 ಚದರಡಿ ಜಾಗ ಮಾತ್ರ ಕೊಟ್ಟಿದ್ದಾರೆ.

ಮುಡಾದವರು ಪಾರ್ವತಿ ಅವರಿಗೆ ಪುಕ್ಕಟೆಯಾಗಿ ಕೊಟ್ಟಿಲ್ಲ, ಅವರಿಗೆ ವಿಜಯನಗರ ಬಡಾವಣೆಯಲ್ಲಿ ಕೇವಲ 14 ನಿವೇಶನ ಕೊಟ್ಟಿದ್ದಾರೆ, ಇದು ಅವರಿಗೆ ನಷ್ಟವೇ ಆಗಿದೆ.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ೨೦೨೧ರಲ್ಲಿ ಈ ನಿವೇಶನಗಳನ್ನು ಹಂಚಿಕೆ ಮಾಡಿದೆ, ಇದರಲ್ಲಿ ನಮ್ಮ ಸರ್ಕಾರದ ಪಾತ್ರವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
minister dr.hc mahadevappamuda sites distributionno family involvement - siddaramaiah
0 FacebookTwitterPinterestEmail
admin

previous post
ರಾಹುಲ್ ಗಾಂಧಿ ಹಿಂದೂಗಳ ಕ್ಷಮೆ ಕೇಳಬೇಕು
next post
ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ