Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಸಿದ್ದರಾಮಯ್ಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ

by admin July 3, 2024
written by admin July 3, 2024 0 comments 2 minutes read
1FacebookTwitterPinterestEmail
573

ಡಿಸಿಎಂ- ಸಿಎಂ ನಡುವಿನ ಶೀಥಲ ಸಮರಕ್ಕೆ ತೆರೆ ಎಳೆಯಲು ಹೈಕಮಾಂಡ್ ಪ್ಲಾನ್

ಬೆಂಗಳೂರು : ನಾಯಕತ್ವಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಕಚ್ಚಾಟ ಶಮನ ಮಾಡಲು ಕಾಂಗ್ರೆಸ್ ವರಿಷ್ಠರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಕರ್ನಾಟಕ ರಾಜಕಾರಣಕ್ಕೆ ಇಳಿಸಲು ಸಿದ್ಧತೆ ನಡೆದಿದೆ.

ಕರ್ನಾಟಕ ಕಾಂಗ್ರೆಸ್ ಅನ್ನು ಆಪರೇಷನ್ ಕಮಲದಿಂದ ಪಾರು ಮಾಡುವುದು ಹಾಗೂ ಕೆಪಿಸಿಸಿಯಲ್ಲಿನ ಆಂತರಿಕ ಕಚ್ಚಾಟಕ್ಕೆ ತೆರೆ ಎಳೆಯಲು ಖರ್ಗೆ ಅವರನ್ನು ಸಿದ್ದರಾಮಯ್ಯ ನಂತರದ ಅವಧಿಗೆ ಮುಖ್ಯಮಂತ್ರಿಯನ್ನಾಗಿ ಮಾಡಲು ವರಿಷ್ಠರು ಮುಂದಾಗಿದ್ದಾರೆ.

ಇಂತಹ ಸಂದರ್ಭದಲ್ಲಿ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗೇ ಮುಂದುವರೆಯುತ್ತಾರೆ. ಅವರ ಜೊತೆಗೆ ಎಂ.ಬಿ.ಪಾಟೀಲ್ ಅವರಿಗೂ ಸಚಿವ ಸ್ಥಾನದಿಂದ ಬಡ್ತಿ ದೊರೆಯಲಿದೆ.

ಅಧಿಕಾರದಿಂದ ಕೆಳಗಿಳಿಯುವ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಇಲ್ಲವೇ ರಾಷ್ಟ್ರ ರಾಜಕಾರಣಕ್ಕೆ ನಿಯೋಜಿಸಲಿದ್ದಾರೆ ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿ ಹಬ್ಬಿದೆ.

ಕಾಂಗ್ರೆಸ್ ಮೂಲ ಮಂತ್ರದಂತೆ ಒಬ್ಬ ವ್ಯಕ್ತಿಗೆ ಒಂದು ಹುದ್ದೆ. ಇದರನ್ವಯ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಸ್ಥಾನ ಇಲ್ಲವೆ ರಾಜ್ಯಸಭೆಯ ಪ್ರತಿಪಕ್ಷ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ.

ಕೇಂದ್ರ ಸಚಿವ ಕುಮಾರಸ್ವಾಮಿ ಜನತಾ ದರ್ಶನ

ಇಂದಿರಾ ಗಾಂಧಿ ಕುಟುಂಬಕ್ಕೆ ಅತ್ಯಂತ ನಿಷ್ಠರಾಗಿರುವ ಖರ್ಗೆ ಅವರನ್ನು ಒಂದು ಬಾರಿಯಾದರೂ ಮುಖ್ಯಮಂತ್ರಿ ಮಾಡಬೇಕೆಂದು ಪಕ್ಷದ ಅಧಿನಾಯಕರಾಗಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಆಸಕ್ತಿ ಹೊಂದಿದ್ದಾರೆ.

ತಾವು ತೆಗೆದುಕೊಂಡ ನಿರ್ಧಾರವನ್ನು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗೆ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಗಮನಕ್ಕೆ ತಂದಿದ್ದಾರೆ ಮತ್ತು ಖರ್ಗೆ ಅವರಿಗೆ ಒಮ್ಮೆ ಅವಕಾಶ ಮಾಡಿಕೊಡಿ ಎಂದು ಸಲಹೆ ಮಾಡಿದ್ದಾರೆ.

ಈ ಬೆಳವಣಿಗೆ ನಂತರ ಶಿವಕುಮಾರ್ ದೆಹಲಿಯಿಂದ ನಗರಕ್ಕೆ ಹಿಂತಿರುಗಿದವರು ಮತ್ತೆ ದೆಹಲಿಗೆ ತೆರಳಿ ಖರ್ಗೆ ಅವರನ್ನು ಭೇಟಿ ಮಾಡಿದ್ದು, ರಾಹುಲ್ ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ರಾಹುಲ್ ತೆಗೆದುಕೊಂಡಿರುವ ನಿರ್ಧಾರವನ್ನು ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವುದಿಲ್ಲ. ಅವರ ಬಗ್ಗೆ ಮುಖ್ಯಮಂತ್ರಿ ಅವರಿಗೆ ಬಹಳ ಅಭಿಮಾನವಿದೆ.

ಎರಡು ಬಾರಿ ಮುಖ್ಯಮಂತ್ರಿ ಆಗುವುದರ ಜೊತೆಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕನಾಗಿ ಕೆಲಸ ಮಾಡಲು ರಾಹುಲ್ ಅವರೇ ಕಾರಣ ಎಂಬ ಗೌರವ ಸಿದ್ದರಾಮಯ್ಯ ಅವರಲ್ಲಿದೆ.

ಈ ಕಾರಣಕ್ಕಾಗಿ ರಾಹುಲ್ ಸೂತ್ರಕ್ಕೆ ಸಂಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ. ಜೊತೆಗೆ ಒಬ್ಬ ದಲಿತ ನಾಯಕನಿಗೆ ಅಧಿಕಾರ ಬಿಟ್ಟುಕೊಟ್ಟೆ ಎಂಬ ಹೆಗ್ಗಳಿಕೆಗೂ ಪಾತ್ರರಾಗುತ್ತಾರೆ.

ನೀರು ಪೂರೈಕೆ ವ್ಯತ್ಯಯವಾದರೆ ಅಧಿಕಾರಿಗಳ ವಿರುದ್ಧ ಕ್ರಮ

ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದರಿಂದ ಕಾಂಗ್ರೆಸ್‌ಗೆ ರಾಷ್ಟ್ರಮಟ್ಟದಲ್ಲಿ ದಲಿತ ನಾಯಕನೊಬ್ಬನನ್ನು ಮುಖ್ಯಮಂತ್ರಿ ಮಾಡಿದ ಕೀರ್ತಿ ಒಂದೆಡೆಯಾದರೆ, ಮತ್ತೊಂದೆಡೆ ಅವರ ಸರ್ಕಾರವನ್ನು ಉರುಳಿಸಲು ಪಕ್ಷದಲ್ಲಿ ಆಂತರಿಕವಾಗಿ ಇಲ್ಲವೇ ಬಾಹ್ಯವಾಗಿ ಯಾರೂ ಪ್ರಯತ್ನ ಮಾಡುವುದಿಲ್ಲ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿಗೆ ಅಧಿಕಾರ ನಡೆಸಲಿದೆ ಎಂಬ ಎಲ್ಲಾ ಲೆಕ್ಕಾಚಾರದಿಂದ ಹಾಗೂ ಖರ್ಗೆ ಅವರಿಗೆ ಒಂದು ಅವಕಾಶ ನೀಡಲು ಸೋನಿಯಾ ಮತ್ತು ರಾಹುಲ್ ಈ ತೀರ್ಮಾನ ಕೈಗೊಂಡಿದ್ದಾರೆಂದು ಹೇಳಲಾಗಿದೆ.

ಎಲ್ಲಕ್ಕಿಂತ ಮುಖ್ಯವಾಗಿ ಲೋಕಸಭಾ ಚುನಾವಣೆಯಲ್ಲಿ ಖರ್ಗೆ ಪ್ರತಿನಿಧಿಸುವ ಕಲ್ಯಾಣ ಕರ್ನಾಟಕದ ಐದೂ ಕ್ಷೇತ್ರಗಳು ಕಾಂಗ್ರೆಸ್ ಮಡಿಲಿಗೆ ಬಂದಿವೆ.

ಇದೂ ಕೂಡ ಅವರಿಗೆ ಕರ್ನಾಟಕದಲ್ಲಿ ಅಧಿಕಾರ ದೊರಕಿಸಲು ಕಾರಣಗಳಲ್ಲಿ ಒಂದಾಗಿದೆ ಎಂದು ಮೂಲಗಳು ತಿಳಿಸಿವೆ.

ದೊಡ್ಡ ಪ್ರಮಾಣದಲ್ಲಿ ಹಿರಿಯ ಅಧಿಕಾರಿಗಳ ವರ್ಗಾ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Chief Minister Karnatakacold warcongressDCM-CMdraw curtainHigh Commandmallikarjuna khargeSiddaramaiah
1 FacebookTwitterPinterestEmail
admin

previous post
ನೀರು ಪೂರೈಕೆ ವ್ಯತ್ಯಯವಾದರೆ ಅಧಿಕಾರಿಗಳ ವಿರುದ್ಧ ಕ್ರಮ
next post
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಗೆ ಎಚ್‌ಡಿಕೆ ನೇಮಕ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ