Wednesday, August 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, August 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ರಾಜ್ಯಕ್ಕೆ 3 ಖಾಸಗಿ ಹೊಸ ವೈದ್ಯಕೀಯ ಕಾಲೇಜು

by admin July 8, 2024
written by admin July 8, 2024 0 comments 2 minutes read
0FacebookTwitterPinterestEmail
303

ಬೆಂಗಳೂರು:ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ)ವು ಕರ್ನಾಟಕಕ್ಕೆ ಈ ಬಾರಿ ಮೂರು ಖಾಸಗಿ ಹೊಸ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದು, ಕನಕಪುರ ಮತ್ತು ರಾಮನಗರಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ನಿರಾಕರಿಸಿದೆ.

ಮೂರು ಖಾಸಗಿ ವೈದ್ಯಕೀಯ ಕಾಲೇಜುಗಳಾದ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ನಗರೂರ್, ಬೆಂಗಳೂರು ಉತ್ತರ), ಪಿಇಎಸ್ ವಿಶ್ವವಿದ್ಯಾಲಯ ಹಾಗೂ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆ (ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು) ಮತ್ತು ಎಸ್‌ಆರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಾಗಲಕೋಟೆ) ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭವಾಗಲಿದೆ.

ಬಿಜಿಎಸ್‌ಗೆ 150, ಪಿಇಎಸ್‌ಗೆ 100 ಹಾಗೂ ಬಾಗಲಕೋಟೆ ಎಸ್‌ಆರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ 100 ವೈದ್ಯಕೀಯ ಸೀಟುಗಳು ಲಭ್ಯವಾಗಲಿವೆ.

ಒಟ್ಟು ಐದು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಬೇಕೆಂದು ರಾಜ್ಯದಿಂದ ಈ ಬಾರಿ ಎನ್‌ಎಂಸಿಗೆ ಮನವಿ ಮಾಡಲಾಗಿತ್ತು, ರಾಮನಗರ ಮತ್ತು ಕನಕಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಬೇಡಿಕೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಕೆಲವು ತಾಂತ್ರಿಕ ಕಾರಣಗಳಿಂದ ಅನುಮೋದನೆ ನೀಡಿಲ್ಲ.

ವೈದ್ಯಕೀಯ ಸೀಟುಗಳ ಸಂಖ್ಯೆ 12,095ಕ್ಕೆ ಏರಿಕೆ

ಪ್ರಸ್ತುತ ಮೂರು ವೈದ್ಯಕೀಯ ಕಾಲೇಜುಗಳು ಹೊಸದಾಗಿ ಪ್ರಾರಂಭ ಆಗುತ್ತಿರುವುದರಿಂದ ಪ್ರಸ್ತುತ ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 73ಕ್ಕೆ ಏರಿಕೆಯಾಗಲಿದ್ದು, ಸದ್ಯ 11,745 ವೈದ್ಯಕೀಯ ಸೀಟುಗಳು ಲಭ್ಯವಾಗಲಿವೆ, 2024-25ನೇ ಸಾಲಿನ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಸೀಟುಗಳ ಸಂಖ್ಯೆ 12,095ಕ್ಕೆ ಏರಿಕೆಯಾಗಲಿದೆ.

ಒಂದು ವೇಳೆ ರಾಮನಗರ ಮತ್ತು ಕನಕಪುರಕ್ಕೂ ಈ ವರ್ಷದಿಂದಲೇ ವೈದ್ಯಕೀಯ ಕಾಲೇಜುಗಳ ಪ್ರಾರಂಭಕ್ಕೆ ಎನ್‌ಎಂಸಿ ಅನುಮೋದನೆ ನೀಡಿದ್ದರೆ ಹೆಚ್ಚುವರಿಯಾಗಿ ಇನ್ನು 300 ವೈದ್ಯಕೀಯ ಸೀಟುಗಳು ಲಭ್ಯವಾಗುತ್ತಿದ್ದವು.

ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸಿಬ್ಬಂದಿ ಕೊರತೆ ಮತ್ತು 650 ಬೆಡ್‌ಗಳು ಇರಬೇಕೆಂಬ ನಿಯಮವಿದೆ.

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ ಜನ ಸೇವಕರು
ಮಾನದಂಡಗಳ ಪಾಲನೆ ಕಡ್ಡಾಯ

ಪ್ರಸ್ತುತ ರಾಮನಗರದಲ್ಲಿ ಸಿಬ್ಬಂದಿ ಕೊರತೆ ಇರುವ ಕಾರಣ ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲು ತಡವಾಗಿದೆ, ಒಂದು ವೈದ್ಯಕೀಯ ಕಾಲೇಜನ್ನು ಹೊಸದಾಗಿ ಪ್ರಾರಂಭಿಸಲು ಎಂಎನ್‌ಸಿ ಮತ್ತು ಎಂಸಿಐನ ಕೆಲವು ಮಾನದಂಡಗಳನ್ನು ಪಾಲಿಸಲೇಬೇಕು.

2024-25ನೇ ಶೈಕ್ಷಣಿಕ ಸಾಲಿನಿಂದ ಆರಂಭವಾಗುವ ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಸೀಟುಗಳ ಮಿತಿಯನ್ನು ಗರಿಷ್ಠ 150ಕ್ಕೆ ನಿಗದಿಪಡಿಸಲಾಗಿದೆ.

ಪ್ರತಿ 10 ಲಕ್ಷ ಜನಸಂಖ್ಯೆಗೆ 100 ವೈದ್ಯಕೀಯ ಪದವಿ ಸೀಟುಗಳು ಇರಬೇಕೆಂಬ ಅನುಪಾತಕ್ಕೆ ಅನುಗುಣವಾಗಿ ಮಾನದಂಡ ರೂಪಿಸಲಾಗಿದೆ.

ಆಯೋಗದ ಮಾರ್ಗಸೂಚಿ

ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಪದವಿ ಕೋರ್ಸ್, ಹೊಸ ವೈದ್ಯಕೀಯ ಕೋರ್ಸ್ ಆರಂಭ, ಹಾಲಿ ಇರುವ ಸೀಟುಗಳ ಹೆಚ್ಚಳ, ಮೌಲ್ಯಮಾಪನ ಮತ್ತು ಮೌಲ್ಯಾಂಕನ ನಿಯಮಗಳಿಗೆ ಸಂಬಂಧಿಸಿದಂತೆ ಆಯೋಗ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಈ ಬಗ್ಗೆ ವಿವರಿಸಲಾಗಿದೆ.

ಯಾವುದೇ ಕಾಲೇಜಿಗೆ ಹೆಚ್ಚುವರಿಯಾಗಿ ಅನುಮತಿಸಿದ ಕೋಟಾ ಸೀಟುಗಳು ಕಾಲೇಜಿಗೆ ಮಂಜೂರು ಮಾಡಿರುವ ಒಟ್ಟು ಸೀಟುಗಳ ಮಿತಿಯನ್ನು ಮೀರಬಾರದು.

ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆದಿರುವ ಹೊಸ ವೈದ್ಯಕೀಯ ಕಾಲೇಜುಗಳಿಗೆ ಮೊದಲ ಮೂರು ವರ್ಷಗಳಲ್ಲಿ ಅನುಕ್ರಮವಾಗಿ 50, 100 ಹಾಗೂ 150 ಸೀಟುಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.

ಸುಸಜ್ಜಿತ ಆಸ್ಪತ್ರೆ ಇರಬೇಕು

ಹೊಸ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಸುಸಜ್ಜಿತ ಆಸ್ಪತ್ರೆ ಇರಬೇಕು ಜೊತೆಗೆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯವೂ ಇರಬೇಕು.

ಆಸ್ಪತ್ರೆಯು ಕನಿಷ್ಠ 220 ಹಾಸಿಗೆ ಸಾಮರ್ಥ್ಯ ಹೊಂದಿರಬೇಕು, ಕಾಲೇಜು ಮತ್ತು ಆಸ್ಪತ್ರೆ ನಡುವೆ ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಯ ಪ್ರಯಾಣದ ಅಂತರ 30 ನಿಮಿಷಕ್ಕೂ ಹೆಚ್ಚಿರಬಾರದು.

ಸಹಾಯಕ ವೈದ್ಯರಿಗೆ ನೆರವಾಗುವಂತೆ ಕಾಲೇಜಿನ ವ್ಯಾಪ್ತಿಯಲ್ಲಿ ಗ್ರಾಮೀಣ ಆರೋಗ್ಯ ಕೇಂದ್ರಗಳು/ಸಮುದಾಯ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು ಇರಬೇಕು, ಪ್ರತಿ ವೈದ್ಯಕೀಯ ಸಂಸ್ಥೆಯಲ್ಲೂ ವಿದ್ಯಾರ್ಥಿಗಳ ಕೌಶಲವೃದ್ಧಿಗೆ ಪೂರಕವಾಗುವಂತಹ ಸುಸಜ್ಜಿತ ಪ್ರಯೋಗಾಲಯ ಇರಬೇಕು ಎಂಬ ಮಾನದಂಡಗಳಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
no new govt. medical collage this yearthree new medical collage to statetotal medical seates raise to 12095
0 FacebookTwitterPinterestEmail
admin

previous post
ಜಿಲ್ಲಾಧಿಕಾರಿಗಳು ಮಹಾರಾಜರಲ್ಲ ಜನ ಸೇವಕರು
next post
ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ

You may also like

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026

33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

August 3, 2026

ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

July 31, 2026

ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

July 30, 2026

ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

July 29, 2026

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (531)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,025)
  • ರಾಜ್ಯ (2,339)
  • ರಾಷ್ಟ್ರ (2,304)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026
  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026

KMS Special

  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026
  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ