Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಘರ್ಷಣೆ

by admin July 11, 2024
written by admin July 11, 2024 0 comments 1 minutes read
0FacebookTwitterPinterestEmail
404

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅಕ್ರಮ ವರ್ಗಾವಣೆ ಹಗರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಘರ್ಷಣೆಗೆ ಕಾರಣವಾಗಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಕಳೆದ ಎರಡು ದಿನದಿಂದ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಆರೋಪಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶ ಪಡಿಸಿಕೊಂಡು ಕೆಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಆದರೆ, ನಿಮಗದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಕಡತಗಳು ಎಸ್‌ಐಟಿ ವಶದಲ್ಲಿವೆ.

ಇಡಿ ಅಧಿಕಾರಿಗಳು ನಿನ್ನೆ ನಿಗಮದ ಕಚೇರಿ ಮೇಲಿನ ದಾಳಿ ಸಂದರ್ಭದಲ್ಲಿ ತನಿಖೆಗೆ ನಿಗಮದ ಸಿಬ್ಬಂದಿ ಸಹಕರಿಸದ ಹಿನ್ನೆಲೆಯಲ್ಲಿ ಬಲವಂತವಾಗಿ ಕಪಾಟುಗಳನ್ನು ಒಡೆದು ಕೆಲವು ದಾಖಲೆಗಳನ್ನು ವಶಕ್ಕೆ ಪಡೆದರು.

ಆದರೆ, ಈ ದಾಖಲೆಗಳು ಮಹತ್ವದ್ದಲ್ಲವೆಂದು ಅರಿತ ಇಡಿ ಅಧಿಕಾರಿಗಳು, ನಿಗಮದ ಸಿಬ್ಬಂದಿಯನ್ನು ಪ್ರಶ್ನಿಸಿದಾಗ, ಎಲ್ಲಾ ಕಡತಗಳು ಎಸ್‌ಐಟಿ ವಶದಲ್ಲಿವೆ ಎಂಬ ಮಾಹಿತಿ ನೀಡಿದ್ದಾರೆ.

ನಂತರ ಇಡಿ ಅಧಿಕಾರಿಗಳು ಎಸ್‌ಐಟಿ ಅಧಿಕಾರಿಗಳನ್ನು ಸಂಪರ್ಕಿಸಿ ದಾಖಲೆಗಳನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿದ್ದಾರೆ.

ಇದಕ್ಕೆ, ನಾವೇ ವಿಚಾರಣೆ ನಡೆಸುತ್ತಿದ್ದು, ನಿಮಗೆ ದಾಖಲೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಸಂಸ್ಥೆ ಮುಖ್ಯಸ್ಥರು ಇಡಿ ಅಧಿಕಾರಿಗಳಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ.

ತಮಿಳುನಾಡಿಗೆ ನಿತ್ಯ ಒಂದು ಟಿಎಂಸಿ ನೀರು ಹರಿಸಲು ಆದೇಶ

ಎಸ್‌ಐಟಿ ನೀಡಿದ ಮಾಹಿತಿಯ ಕುರಿತು ಇಡಿಯವರು ದೆಹಲಿಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಸಿಐಡಿ ಆವರಣದಲ್ಲಿರುವ ತನಿಖಾ ಸಂಸ್ಥೆ ಮೇಲೆ ದಾಳಿ ನಡೆಸಿ ದಾಖಲೆಗಳ ವಶಕ್ಕೆ ಕಾರ್ಯತಂತ್ರ ರೂಪಿಸಿದರು.

ಇದರ ಮಾಹಿತಿ ತಿಳಿಯುತ್ತಿದ್ದಂತೆ ಸಿಐಡಿ ಹಾಗೂ ಎಸ್‌ಐಟಿ ಅಧಿಕಾರಿಗಳು, ದಾಳಿ ತಡೆಯಲು ತಮ್ಮ ಕಚೇರಿ ಆವರಣಕ್ಕೆ ಕೆಎಸ್‌ಆರ್‌ಪಿ ಪ್ಲಟೂನ್‌ಗಳನ್ನು ಕರೆಸಿ ತಮ್ಮ ಭದ್ರತೆಗೆ ನಿಯೋಜಿಸಿಕೊಂಡರು.

ಮುಂಜಾನೆ 00-30ರವರೆಗೂ ಎಲ್ಲಾ ಅಧಿಕಾರಿಗಳು ಕಚೇರಿಯಲ್ಲೇ ಬೀಡು ಬಿಟ್ಟಿದ್ದರು. ಇಡಿ ಅಧಿಕಾರಿಗಳು ಬರುವುದಿಲ್ಲ ಎಂಬುದು ಮನದಟ್ಟಾದ ನಂತರ ಮನೆಗೆ ತೆರಳಿದರು.

ಇಂದೂ ಕೂಡಾ ಸಿಐಡಿ ಕಚೇರಿಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಇಡಿ ಅವರು ಯಾವುದೇ ಕ್ಷಣದಲ್ಲಿ ಎಸ್‌ಐಟಿ ತನಿಖಾ ಸಂಸ್ಥೆ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ.

ಕಳೆದ 10 ದಿನಗಳಿಂದ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ಇಡಿ ಅಧಿಕಾರಿಗಳು ಮಾಡಿದ ಮನವಿಗೆ ರಾಜ್ಯ ಪೊಲೀಸರು ಸ್ಪಂದಿಸಿಲ್ಲ.

ದಾಖಲೆಗಳು ದೊರೆಯದೆ ಇಡಿ, ವಿಚಾರಣೆಯನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲೂ ಸಾಧ್ಯವಿಲ್ಲ ಹಾಗೂ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲೂ ಆಗುತ್ತಿಲ್ಲ.

ಈ ಕಾರಣದಿಂದಲೇ ಇಡಿ ಅಧಿಕಾರಿಗಳು ಎಸ್‌ಐಟಿ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಲ್ಳಲು ಮುಂದಾಗಿದ್ದಾರೆ.

ದಾಳಿ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಅಡ್ಡಿ ಉಂಟು ಮಾಡಿದರೆ, ಅವರ ವಿರುದ್ಧವೇ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.

ಈ ಹಿಂದೆ ಪಶ್ಚಿಮ ಬಂಗಾಳ ಹಾಗೂ ಕೇರಳದಲ್ಲೂ ಕೇಂದ್ರ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳ ನಡುವೆ ಇಂತಹದ್ದೇ ಘರ್ಷಣೆ ನಡೆದಿತ್ತು.

ಬಿಜೆಪಿಯೇತರ ಆಡಳಿತ ಇರುವ ಕರ್ನಾಟಕದಲ್ಲೂ ಇಂತಹದೇ ಘರ್ಷಣೆ ಮುಂದುವರೆದಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central governmentconflictkarnataka state governmentmoney transfer scamValmiki Development Corporation
0 FacebookTwitterPinterestEmail
admin

previous post
ತಮಿಳುನಾಡಿಗೆ ನಿತ್ಯ ಒಂದು ಟಿಎಂಸಿ ನೀರು ಹರಿಸಲು ಆದೇಶ
next post
ಕಾಂಗ್ರೆಸ್ ಸರ್ಕಾರದಿಂದ ಪ್ರತಿಭಟನೆ ಹಕ್ಕು ದಮನ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ