Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಎಸ್‌ಐಟಿ ಕಚೇರಿಯಲ್ಲಿ ಅಡಗಿದ ಕಾಂಗ್ರೆಸ್ ಶಾಸಕ ದದ್ದಲ್ !

by KM Shivaraju July 12, 2024
written by KM Shivaraju July 12, 2024 0 comments 2 minutes read
Share 0FacebookTwitterPinterestEmail
210

ಮಾಜಿ ಸಚಿವ ಬಿ.ನಾಗೇಂದ್ರ ಇ.ಡಿ. ವಶಕ್ಕೆ

ಬೆಂಗಳೂರು:ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ತೆಗೆದುಕೊಂಡಿದೆ.

ನಾಗೇಂದ್ರ ವಶಕ್ಕೆ ಪಡೆದ ಬೆನ್ನಲ್ಲೇ ನಿಗಮದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್, ಎಸ್‌ಐಟಿ ಕಚೇರಿಯಲ್ಲಿ ಅಡಗಿ ಕುಳಿತಿದ್ದಾರೆ.

ವಶಕ್ಕೆ ಪಡೆಯಲು ಯತ್ನ

ಇವರನ್ನು ವಶಕ್ಕೆ ಪಡೆಯಲು ಇಡಿ ಅಧಿಕಾರಿಗಳು ಮುಂಜಾನೆಯಿಂದಲೇ ನಡೆಸಿದ ಪ್ರಯತ್ನ ಫಲ ಕೊಟ್ಟಿಲ್ಲ.

ನಾಗೇಂದ್ರ ಅವರನ್ನು ನಗರದ ಡಾಲರ‍್ಸ್ ಕಾಲೋನಿ ನಿವಾಸದಲ್ಲಿ ವಶಕ್ಕೆ ಪಡೆದುಕೊಂಡ ನಂತರ ದದ್ದಲ್ ಅವರನ್ನು ಬಂಧಿಸಲು ಯಲಹಂಕಕ್ಕೆ ತೆರಳಿದ್ದರು.

ಇದರ ಸುಳಿವರಿತ ದದ್ದಲ್ ರಾಯಚೂರಿಗೆ ಹೊರಟವರು ನಗರಕ್ಕೆ ಸೀದಾ ಹಿಂತಿರುಗಿ ಎಸ್‌ಐಟಿ ಕಚೇರಿ ಒಳಹೊಕ್ಕು, ತಮ್ಮನ್ನು ಬಂಧಿಸುವಂತೆ ವಿಚಾರಣಾಧಿಕಾರಿ ಡಿವೈಎಸ್‌ಪಿ ಶ್ರೀನಿವಾಸ ಮುಂದೆ ಅವಲತ್ತುಕೊಂಡರು.

ಕಬ್ಬಿಣದ ಅದಿರು ಪೂರೈಕೆ ಸ್ಥಿರತೆ ಕಾಪಾಡಿಕೊಳ್ಳಬೇಕು
ಅಗತ್ಯ ಇದ್ದವರನ್ನಷ್ಟೇ ವಶಕ್ಕೆ

ನನ್ನನ್ನು ಬಂಧಿಸಿ ಎಂದು ಸ್ವಯಂಪ್ರೇರಿತವಾಗಿ ದದ್ದಲ್ ಮನವಿ ಮಾಡಿಕೊಂಡರೂ, ನಿಮ್ಮ ಬಂಧನದ ಅವಶ್ಯಕತೆ ಇಲ್ಲ, ನಾವು ಈಗಾಗಲೇ ತನಿಖೆ ನಡೆಸಿದ್ದೇವೆ, ನಮಗೆ ಅಗತ್ಯ ಇದ್ದವರನ್ನಷ್ಟೇ ವಶಕ್ಕೆ ಪಡೆಯುತ್ತೇವೆ ಎಂದು ಎಸ್‌ಐಟಿ ಹೇಳಿದರೂ ಮಹಾಶಯ ಅಲ್ಲೇ ಕುಳಿತಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಕರಣವನ್ನು ಸಿಬಿಐಗೆ ವಹಿಸಿದ ನಂತರ ಭಾರೀ ಮೊತ್ತದ ಹಣಕಾಸು ಅವ್ಯವಹಾರ ಆಗಿರುವುದರಿಂದ ಇಡಿ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೂ ನೀಡಿದ್ದರೂ ಸಿಬಿಐ ಮತ್ತು ಇಡಿ ಸಹಾ ತನಿಖೆ ಮುಂದುವರಿಸಿವೆ.

ಇದರ ಬೆನ್ನಲ್ಲೇ ಕಳೆದ ಎರಡು ದಿನಗಳ ಹಿಂದೆ ನಾಗೇಂದ್ರ ಮತ್ತು ದದ್ದಲ್ ಸೇರಿದಂತೆ ಹಗರಣದಲ್ಲಿ ಪಾಲುದಾರ ಆರೋಪ ಎದುರಿಸುತ್ತಿರುವ ವ್ಯಕ್ತಿಗಳ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಕೆಲವರನ್ನು ವಶಕ್ಕೆ ಪಡೆದುಕೊಂಡಿತ್ತು.

ಕಾವೇರಿ ನೀರು ಆದೇಶ: ಕಾನೂನು ತಜ್ಞರೊಂದಿಗೆ ಚರ್ಚೆ
ಬೆಳ್ಳಂಬೆಳಗ್ಗೆ ವಶಕ್ಕೆ ಯತ್ನ

ಇವರು ನೀಡಿದ ಮಾಹಿತಿ ಆಧಾರದ ಮೇಲೆ ಇಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಪ್ರಮುಖ ಆರೋಪಿಗಳಾದ ನಾಗೇಂದ್ರ ಮತ್ತು ದದ್ದಲ್ ಅವರನ್ನು ವಶಕ್ಕೆ ಪಡೆಯಲು ಮುಂದಾಯಿತು.

ಮಾಜಿ ಸಚಿವರನ್ನು ಇಡಿ ವಶಕ್ಕೆ ಪಡೆಯಿತಾದರೂ, ದದ್ದಲ್ ಕೇಂದ್ರದ ತನಿಖಾ ಸಂಸ್ಥೆ ಅಧಿಕಾರಿಗಳ ಕಣ್ತಪ್ಪಿಸಿ ಅಡಗಿ ಕುಳಿತಿದ್ದಾರೆ.

ಹಗರಣ ಬಯಲಾಗುತ್ತಿದ್ದಂತೆ ಇಲಾಖೆ ಹೊಣೆ ಹೊತ್ತಿದ್ದ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.

ಈ ಬೆಳವಣಿಗೆ ನಂತರ ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‌ಐಟಿಗೆ ವಹಿಸಿತು.

ಕಾಂಗ್ರೆಸ್ ಸರ್ಕಾರದಿಂದ ಪ್ರತಿಭಟನೆ ಹಕ್ಕು ದಮನ
ಅಧಿಕಾರಿಗಳ ಬಂಧನ

ನಿಗಮದ ಅಧಿಕಾರಿಗಳನ್ನು ಬಂಧಿಸಿದ ಎಸ್‌ಐಟಿ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ತನ್ನ ವಶಕ್ಕೆ ಪಡೆದುಕೊಂಡಿತು. ಅಷ್ಟೇ ಅಲ್ಲ ಕಳೆದ ಮಂಗಳವಾರ ನಾಗೇಂದ್ರ ಮತ್ತು ದದ್ದಲ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು.

ಎಸ್‌ಐಟಿಯಿಂದ ಪ್ರಮುಖ ಆರೋಪಿಗಳು ಹೊರಬರುತ್ತಿದ್ದಂತೆ ಎಚ್ಚೆತ್ತ ಇ.ಡಿ., ಸಂಬಂಧಪಟ್ಟವರ ಮನೆಗಳ ಮೇಲೆ ದಾಳಿ ನಡೆಸಿದ್ದಲ್ಲದೆ, ಇವರನ್ನು ವಶಕ್ಕೆ ಪಡೆಯಲು ಮುಂದಾಯಿತು.

ತನ್ನ ಮಾಜಿ ಸಹೋದ್ಯೋಗಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತುಟಿ ಬಿಚ್ಚುತ್ತಿಲ್ಲ. ಪತ್ರಕರ್ತರು ನಾಗೇಂದ್ರ ಅವರ ಬಗ್ಗೆ ಎಷ್ಟೇ ಪ್ರಶ್ನೆ ಕೇಳಿದರೂ ಪ್ರತಿಕ್ರಿಯೆಗೆ ನಿರಾಕರಿಸಿದರು.

Share this:

  • WhatsApp
  • Post
  • Tweet
  • Print
  • Email
b.nagendra in ED custodymla daddal in SIT office !valmiki money scam
Share 0 FacebookTwitterPinterestEmail
KM Shivaraju

previous post
ಕಬ್ಬಿಣದ ಅದಿರು ಪೂರೈಕೆ ಸ್ಥಿರತೆ ಕಾಪಾಡಿಕೊಳ್ಳಬೇಕು
next post
ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಆಯೇಷಾ ಖಾನಮ್ ಅಧ್ಯಕ್ಷೆ

You may also like

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,581)
  • ರಾಜ್ಯ (1,870)
  • ರಾಷ್ಟ್ರ (1,842)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ :...

May 16, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ