Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹಗರಣಗಳ ತನಿಖೆ: ರಾಜ್ಯಪಾಲರ ಅನುಮತಿಗೆ ಮನವಿ

by admin July 13, 2024
written by admin July 13, 2024 0 comments 2 minutes read
0FacebookTwitterPinterestEmail
561

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಭೂಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಸ್ಪಷ್ಟವಾಗಿದ್ದು ಇವರ ವಿರುದ್ಧ ಪ್ರಕರಣದ ತನಿಖೆ ಹಾಗೂ ನ್ಯಾಯಾಲಯಕ್ಕೆ ಹೋಗಲು ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಮನವಿ ಮಾಡಿದ್ದಾರೆ.

ಆಡಳಿತದಲ್ಲಿದ್ದ ಸಂದರ್ಭದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ಮುಡಾದಲ್ಲಿ ಭಾರೀ ಅವ್ಯವಹಾರ ನಡೆಸಿದ್ದಾರೆಂದು ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಮುಂದಿಟ್ಟರು.

ನ್ಯಾಯಾಲಯಕ್ಕೆ ಹೋಗಲು ಅನುಮತಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನ್ಯಾಯವಾದಿಯೊಬ್ಬರು ಎಲ್ಲಾ ದಾಖಲೆಗಳನ್ನು ರಾಜ್ಯಪಾಲರ ಮುಂದಿಟ್ಟು ಮುಖ್ಯಮಂತ್ರಿ ವಿರುದ್ಧ ತನಿಖೆ ಮತ್ತು ನ್ಯಾಯಾಲಯಕ್ಕೆ ಹೋಗಲು ರಾಜ್ಯಪಾಲರಿಂದ ಅನುಮೋದನೆ ಪಡೆದುಕೊಳ್ಳಬೇಕು.

ಸರ್ಕಾರ ಮಾಡುವ ತನಿಖೆ, ಇಲ್ಲವೇ ನಾವು ಒತ್ತಾಯ ಮಾಡಿ ನಡೆಸುವ ಮತ್ತೊಂದು ತನಿಖೆಯಿಂದ ಸತ್ಯ ಹೊರಬೀಳುವುದಿಲ್ಲ, ಸಿದ್ದರಾಮಯ್ಯ ಅವರ ಮೂಗಿನಡಿಯೇ ಅವರ ಕುಟುಂಬದವರು ಮಾಡಿರುವ ಹಗರಣದ ಬಗ್ಗೆ ನ್ಯಾಯಾಲಯವೇ ತೀರ್ಮಾನಿಸಿ ತಪ್ಪಿಸ್ಥರಿಗೆ ಶಿಕ್ಷೆ ನೀಡಬೇಕು.

ಕರ್ನಾಟಕದಲ್ಲಿ ಈ ಹಿಂದೆ ಇಂತಹ ಅನೇಕ ಘಟನೆಗಳು ನಡೆದಿವೆ, ಮುಡಾ ಭೂಮಿಯನ್ನೇ ಒತ್ತುವರಿ ಮಾಡಿ, ಅದನ್ನು ತಮ್ಮದೆಂದು ಹೇಳಿಕೊಂಡು ಅತ್ಯಂತ ಬೆಲೆ ಬಾಳುವ 14 ನಿವೇಶನ ಪಡೆದಿರುವುದು ಮಹಾಪರಾಧ.

ವಿಧಾನಮಂಡಲದಲ್ಲಿ ಗುಡುಗಲಿರುವ ಹಗರಣಗಳು
3.16 ಎಕರೆ ಭೂಸ್ವಾಧೀನ ವಿವಾದ

ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೇ 3.16 ಎಕರೆ ಭೂಮಿಗೆ ಸಂಬಂಧಿಸಿದಂತೆ ಎಲ್ಲ ವ್ಯವಹಾರವೂ ನಡೆದಿದೆ.

ಇವರು ಹೇಳಿಕೊಳ್ಳುವ ಭೂಮಿ, ನಿಂಗ ಉರುಫ್ ಜವರ ಎಂಬುವರಿಗೆ ಸೇರಿದ್ದು, ಆ ಭೂಮಿಯನ್ನು ಮುಡಾ ಭೂಸ್ವಾಧೀನ ಮಾಡಿಕೊಂಡು ಮಾಲೀಕರಿಗೆ 3.26 ಲಕ್ಷ ರೂ. ಸಂದಾಯ ಮಾಡಿದೆ.

ಈ ಭೂಮಿಗೆ 1992ರಲ್ಲಿ ಪ್ರಾಥಮಿಕ ನೋಟಿಫಿಕೇಷನ್ ಮಾಡಿ 1998ರಲ್ಲಿ ಅಂತಿಮ ನೋಟಿಫಿಕೇಷನ್ ಆಗಿದೆ. 1998ರಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದಾಗ ಈ ಭೂಮಿ ದೇವರಾಜ್ ಎಂಬುವರ ಹೆಸರಿನಲ್ಲಿ ಪೌತಿ ಖಾತೆ ಆಗಿರುತ್ತೆ, ಅವರು ಅದನ್ನು ಡಿ-ನೋಟಿಫಿಕೇಷನ್ ಮಾಡಿಸಿಕೊಂಡಿರುತ್ತಾರೆ.

2004ರವರೆಗೂ ತಕರಾರು ಇಲ್ಲ

2004ರವರೆಗೂ ಯಾರೂ ಈ ಭೂಮಿಯ ಬಗ್ಗೆ ತಕರಾರು ತೆಗೆದಿರುವುದಿಲ್ಲ, ಇದನ್ನು ಅದೇ ವರ್ಷ ಮಲ್ಲಿಕಾರ್ಜುನ ಸ್ವಾಮಿ ಅವರು ದೇವರಾಜ್ ಅವರಿಂದ ಖರೀದಿ ಮಾಡಿರುತ್ತಾರೆ.

ಮಲ್ಲಿಕಾರ್ಜುನಸ್ವಾಮಿ, ಕೃಷಿ ಭೂಮಿಯನ್ನು ವಸತಿ ಸಮುಚ್ಛಯ ನಿರ್ಮಾಣಕ್ಕೆ ಭೂಪರಿವರ್ತನೆಗೆ ಅನುಮತಿ ನೀಡಬೇಕೆಂದು ಡಿಸಿ ಅವರಿಗೆ ಅರ್ಜಿ ಸಲ್ಲಿಸುತ್ತಾರೆ.

ಆ ವೇಳೆಗೆ ಅಲ್ಲಿ ಕೆಲವು ನಿವೇಶನಗಳ ಹಂಚಿಕೆಯಾಗಿ ಪಾರ್ಕ್ ಸಹಾ ಆಗಿರುತ್ತದೆ, ಅಂದಿನ ಜಿಲ್ಲಾಧಿಕಾರಿಗಳಾಗಲಿ, ಅಧಿಕಾರಿಗಳಾಗಲಿ ಸ್ಥಳ ಪರಿಶೀಲನೆ ಮಾಡದೆ ಭೂಪರಿವರ್ತನೆ ಮಾಡಿಕೊಡುತ್ತಾರೆ.

ಅರಿಶಿನ-ಕುಂಕುಮ ಕೊಡುಗೆ

ಭೂಪರಿವರ್ತನೆ ನಂತರ ಮಲ್ಲಿಕಾರ್ಜುನಸ್ವಾಮಿ, ಮುಖ್ಯಮಂತ್ರಿ ಅವರ ಪತ್ನಿಯೂ ಆದ ತಮ್ಮ ಸಹೋದರಿಗೆ ಈ ಭೂಮಿಯನ್ನು ಅರಿಶಿನ-ಕುಂಕುಮ ರೂಪದಲ್ಲಿ ನೀಡುತ್ತಾರೆ.

ಭೂಮಿ ನೋಂದಣೆ ಸಂದರ್ಭದಲ್ಲೂ ಕೃಷಿ ಭೂಮಿಯೆಂದೇ ಸಮೂದಿಸಿರುತ್ತಾರೆ, 2013ರಲ್ಲಿ ಸಿದ್ದರಾಮಯ್ಯ ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ವೇಳೆ ಚುನಾವಣಾ ಪ್ರಮಾಣಪತ್ರದಲ್ಲಿ ಈ ಭೂಮಿಯ ಉಲ್ಲೇಖ ಮಾಡಿರುವುದಿಲ್ಲ.

ಆ ನಂತರ ಅವರು ಮುಖ್ಯಮಂತ್ರಿ ಆಗುತ್ತಾರೆ, 2014ರಲ್ಲಿ ಅವರ ಕುಟುಂಬದವರು ಮುಡಾಗೆ ಪತ್ರ ಬರೆದು ನಮ್ಮ ಭೂಮಿ ಅತಿಕ್ರಮಣ ಮಾಡಿ ಬಡಾವಣೆ ನಿರ್ಮಿಸಿದ್ದೀರಿ, ನಮಗೆ ಪರ್ಯಾಯ ಜಾಗ ಕೊಡಿ ಎಂದು ಕೇಳುತ್ತಾರೆ.

ಮುಖ್ಯಮಂತ್ರಿಗೆ ಕಾಂಗ್ರೆಸ್ ಕಾರ್ಯಕರ್ತರ ದುಂಬಾಲು
ನಿಯಮಬಾಹಿರ ನೋಂದಣಿ

ಈ ಸಂಬಂಧ ಮುಡಾ ಸರಣಿ ಸಭೆಗಳನ್ನು ನಡೆಸಿ, ಅಧಿಕಾರದ ಒತ್ತಡಕ್ಕೆ ಮಣಿದು ನಿಯಮಬಾಹಿರವಾಗಿ 2020ರಲ್ಲಿ ಮೈಸೂರಿನ ಜಲದರ್ಶಿನಿ ಅತಿಥಿ ಗೃಹಕ್ಕೆ ನೋಂದಣಿ ಅಧಿಕಾರಿಗಳನ್ನು ಕರೆಸಿಕೊಂಡು ಅಲ್ಲೇ 14 ನಿವೇಶನಗಳನ್ನು ಅವರ ಕುಟುಂಬಕ್ಕೆ ಮುಡಾ ನೋಂದಣಿ ಮಾಡಿಕೊಡುತ್ತದೆ.

ಪ್ರತಿ ನಿವೇಶನಕ್ಕೆ ಒಂದು ಸಾವಿರ ರೂ.ನಂತೆ ನೋಂದಣಿ ಶುಲ್ಕ ಕಟ್ಟಿಸಿಕೊಂಡು ನಿವೇಶನ ದಾಖಲೆಗಳನ್ನು ನೀಡುತ್ತದೆ, ಮುಡಾ ಬೈಲಾ ಪ್ರಕಾರ ಇವರ ಭೂಮಿಗೆ ಕೇವಲ ಎರಡು ನಿವೇಶನಗಳನ್ನು ಮಾತ್ರ ಅದೇ ಬಡಾವಣೆಯಲ್ಲಿ ನೀಡಬೇಕಿದೆ.

ಆದರೆ, ಇವರು ಅಭಿವೃದ್ಧಿ ಹೊಂದಿದ ಬೇರೆ ಬಡಾವಣೆಗಳಲ್ಲಿ 14 ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಾರೆ.

ಸಿದ್ದರಾಮಯ್ಯ ಅವರ ಅಧಿಕಾರ ಕಾಲದಲ್ಲೇ ಈ ಎಲ್ಲಾ ಭ್ರಷ್ಟಾಚಾರ ನಡೆದಿದೆ, ಬೇರಾವುದೇ ತನಿಖೆಯಿಂದಲೂ ಸತ್ಯ ಹೊರಬರುವುದಿಲ್ಲ, ಯಾರಾದರೂ ಕಾನೂನು ತಜ್ಞರು ಅನುಮತಿ ಕೋರಿದರೆ, ರಾಜ್ಯಪಾಲರು ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
give permission to file case against siddaramaiahhd kumara swamy request to governormuda scam
0 FacebookTwitterPinterestEmail
admin

previous post
ವಿಧಾನಮಂಡಲದಲ್ಲಿ ಗುಡುಗಲಿರುವ ಹಗರಣಗಳು
next post
ವಿಧಾನಸೌಧದ ನವೀಕೃತ ಪಶ್ಚಿಮ ದ್ವಾರ ಮುಖ್ಯಮಂತ್ರಿಗಳಿಂದ ಉದ್ಘಾಟನೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ