Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಿಧಾನಮಂಡಲದಲ್ಲಿ ಗುಡುಗಲಿರುವ ಹಗರಣಗಳು

by KM Shivaraju July 13, 2024
written by KM Shivaraju July 13, 2024 0 comments 1 minutes read
0FacebookTwitterPinterestEmail
189

ಬೆಂಗಳೂರು:ಸೋಮವಾರದಿಂದ ಆರಂಭಗೊಳ್ಳಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ವಿಷಯಗಳು ಪ್ರತಿಧ್ವನಿಸಲಿವೆ.

ಸಿದ್ದರಾಮಯ್ಯ ತಮ್ಮ ಮೊದಲ ಅಧಿಕಾರಾವಧಿಯಲ್ಲಿ ಯಾವುದೇ ಹಗರಣಗಳಲ್ಲೂ ಸಿಲುಕಿರಲಿಲ್ಲ, ಆದರೆ, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಾಗೂ ವಾಲ್ಮೀಕಿ ನಿಗಮದ 187 ಕೋಟಿ ರೂ. ಅಕ್ರಮ ವರ್ಗಾವಣೆ ಆರೋಪ ಉರುಳು ಸುತ್ತಿಕೊಳ್ಳುತ್ತಿದೆ.

ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ

ಪ್ರತಿಪಕ್ಷ ಎನ್‌ಡಿಎ ಮೈತ್ರಿಕೂಟದ ಬಿಜೆಪಿ-ಜೆಡಿಎಸ್, ಈ ಎರಡೂ ಹಗರಣಗಳನ್ನು ಸದನಗಳಲ್ಲಿ ಪ್ರಸ್ತಾಪಿಸಿ, ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸುವುದಲ್ಲದೆ, ಹಗರಣಗಳನ್ನು ಸಿಬಿಐ ತನಿಖೆಗೆ ವಹಿಸವಂತೆ ಪಟ್ಟು ಹಿಡಿಯಲು ನಿರ್ಧರಿಸಿವೆ.

ಕಳೆದ ಶುಕ್ರವಾರ ಸಂಜೆ ಮೈತ್ರಿಕೂಟದ ಶಾಸಕರು ಸಭೆ ಸೇರಿ ಸರ್ಕಾರದ ವಿರುದ್ಧ ಸದನದಲ್ಲಿ ನಡೆಸಬೇಕಾದ ಹೋರಾಟದ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದಾರೆ.

ಈ ಹಗರಣಗಳಲ್ಲದೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ವರ್ಗಾವಣೆ ದಂಧೆ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವುದು, ರೈತರ ಆತ್ಮಹತ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಸರ್ಕಾರವೇ ಹೊಣೆ ಎಂದು ಬೊಟ್ಟು ಮಾಡಲಿದ್ದಾರೆ.

ಮುಖ್ಯಮಂತ್ರಿಗೆ ಕಾಂಗ್ರೆಸ್ ಕಾರ್ಯಕರ್ತರ ದುಂಬಾಲು
ಆಡಳಿತ ಸಂಪೂರ್ಣ ಕುಸಿತ

ಗ್ಯಾರಂಟಿ ಹೆಸರಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳದೆ, ಆಡಳಿತ ಸಂಪೂರ್ಣ ಕುಸಿದಿದೆ.

ಎಲ್ಲದಕ್ಕೂ ಮಿಗಿಲಾಗಿ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಅವರ ಕುಟುಂಬವೇ ಪಾಲುದಾರಿಕೆ ಹೊಂದಿದೆ.

ಅವರು ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲೇ ಈ ಹಗರಣ ನಡೆದಿದ್ದರೂ ಪ್ರಾಧಿಕಾರದಿಂದ 62 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ, ತಮ್ಮದಲ್ಲದ ಭೂಮಿಯನ್ನು ಬೇನಾಮಿ ಹೆಸರಿನಲ್ಲಿ ನೋಂದಾಯಿಸಿ ನಂತರ ಖರೀದಿ ಮಾಡಿದ್ದಾರೆ.

ಭೂಮಿಗೆ ಪರಿಹಾರ ಕೊಡಿ

ಪ್ರಾಧಿಕಾರ ತನ್ನ ಭೂಮಿ ಎಂದು ಬಡಾವಣೆ ನಿರ್ಮಿಸಿ ಹಂಚಿಕೆ ಮಾಡುವವರೆಗೂ ತುಟಿ ಬಿಚ್ಚದ ಮುಖ್ಯಮಂತ್ರಿ ಕುಟುಂಬ, ಆ ನಂತರ, ತಮ್ಮ ಭೂಮಿ ವಶ ಪಡಿಸಿಕೊಳ್ಳಲಾಗಿದೆ, ಪರಿಹಾರ ಕೊಡಿ ಎಂದು ಒತ್ತಾಯಿಸುತ್ತಿದೆ.

ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಅವರ ಅರಿವಿಗೆ ಬಾರದೇ ನಿಗಮವೊಂದರಿಂದ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಅಕ್ರಮ ವರ್ಗಾವಣೆ ಸಾಧ್ಯವೇ ಇಲ್ಲ ಎಂದು ಪ್ರತಿಪಕ್ಷ ಆರೋಪಿಸಲಿದೆ.

ಈ ಹಗರಣದಲ್ಲೂ ಮುಖ್ಯಮಂತ್ರಿ ಪಾತ್ರ ಇದೆಯೆಂದು ಆರೋಪಿಸಿ ರಾಜೀನಾಮೆಗೆ ಒತ್ತಡ ತರಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ.

ಪ್ರತಿಪಕ್ಷಗಳ ಅಸ್ತ್ರ

ಪ್ರತಿಪಕ್ಷಗಳ ಬಳಿ ಅಸ್ತ್ರಗಳಿವೆ, ಆದರೆ, ಅದನ್ನು ಸಮರ್ಪಕವಾಗಿ ಬಳಸುವ ಯೋಧರ ಕೊರತೆ ಕಂಡುಬರುತ್ತಿದೆ.

ಇಂತಹ ಸನ್ನಿವೇಶದಲ್ಲಿ ಪ್ರತಿಪಕ್ಷ ನಾಯಕರಾಗಿ ಆರ್.ಅಶೋಕ್ ತಮ್ಮ ಪ್ರೌಢಿಮೆಯನ್ನು ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂಬುದನ್ನು ಎನ್‌ಡಿಎ ಗಮನಿಸುತ್ತಿದೆ.

ಪ್ರತಿಪಕ್ಷಗಳ ಆರೋಪಗಳನ್ನು ಎದುರಿಸಲು ಆಡಳಿತ ಪಕ್ಷವೂ ಸಿದ್ಧಗೊಂಡಿದೆ, ಇದರಿಂದ ಜನಪರ ಚರ್ಚೆಗಿಂತ ಹಗರಣಗಳ ವಿಷಯವೇ 9 ದಿನಗಳ ಅಧಿವೇಶನದ ಪ್ರಮುಖ ಅಂಶವಾಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
demand to cm resignationMudastormy assembly sessionvalmiki
0 FacebookTwitterPinterestEmail
KM Shivaraju

previous post
ಮುಖ್ಯಮಂತ್ರಿಗೆ ಕಾಂಗ್ರೆಸ್ ಕಾರ್ಯಕರ್ತರ ದುಂಬಾಲು
next post
ಹಗರಣಗಳ ತನಿಖೆ: ರಾಜ್ಯಪಾಲರ ಅನುಮತಿಗೆ ಮನವಿ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ