Friday, May 23, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, May 23, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕ್ರೀಡಾಕೂಟ ನೆಪದಲ್ಲಿ ಕಾಂಗ್ರೆಸ್ ಅಸಮಾಧಾನಿತ ಶಾಸಕರ ಸಭೆ !

by KM Shivaraju July 17, 2024
written by KM Shivaraju July 17, 2024 0 comments 2 minutes read
Share 0FacebookTwitterPinterestEmail
180

ಕ್ಷೇತ್ರಗಳಿಗೆ ಅಭಿವೃದ್ಧಿ ಹಣ ನೀಡುತ್ತಿಲ್ಲವೆಂಬ ಕೋಪ

ಬೆಂಗಳೂರು:ಅಭಿವೃದ್ಧಿಗೆ ಹಣವಿಲ್ಲ, ಕ್ಷೇತ್ರದಲ್ಲಿ ನಮಗೆ ಬೇಕಾದ ಅಧಿಕಾರಿಗಳನ್ನು ನಿಯೋಜಿಸಿಕೊಳ್ಳುವ ಅಧಿಕಾರಕ್ಕೂ ಕಡಿವಾಣ ಹಾಕಿರುವ ಬಗ್ಗೆ ಯುವ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿನ್ನೆ ರಾತ್ರಿ ನಗರದ ಖಾಸಗಿ ಪಂಚತಾರಾ ಹೋಟೆಲ್ ಒಂದರಲ್ಲಿ ಸೇರಿದ್ದ 40ಕ್ಕೂ ಹೆಚ್ಚು ಶಾಸಕರು, ಸರ್ಕಾರ ಹಾಗೂ ಸಚಿವರ ನಿರ್ಧಾರಗಳ ಬಗ್ಗೆ ತೀವ್ರ ಕಿಡಿಕಾರಿದ್ದಾರೆ.

ಒಂದೆಡೆ ನಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ, ಮತ್ತೊಂದೆಡೆ ನಮಗೆ ಬೇಕಾದ ಅಧಿಕಾರಿಗಳನ್ನು ನಿಯೋಜಿಸಿಕೊಳ್ಳುವ ಅಧಿಕಾರವನ್ನೂ ಕಿತ್ತುಕೊಂಡರೆ ನಾವು ಏನು ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

ನಾಯಕತ್ವದ ವಿರುದ್ಧ ಬಂಡಾಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಸಚಿವರುಗಳು ಲಾಬಿ ನಡೆಸುತ್ತಿರುವ ಬೆನ್ನಲ್ಲೇ ಯುವಪಡೆ ಸಭೆ ಸೇರಿ ಇಂತಹ ತೀರ್ಮಾನ ಕೈಗೊಂಡಿರುವುದು ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ಧ ಬಂಡಾಯ ಎದ್ದಂತಿದೆ.

ಮಂಡ್ಯ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುವ ರವಿ ಗಾಣಿಗ ಅವರ ಮುಂದಾಳತ್ವದಲ್ಲಿ ಮಂಗಳವಾರ ರಾತ್ರಿ ನಡೆದ ಸಭೆಯಲ್ಲಿ ಯುವ ಶಾಸಕರೇ ಹೆಚ್ಚಾಗಿ ಭಾಗವಹಿಸಿದ್ದರು.

ಕಳೆದ ವರ್ಷ ಪ್ರಾರಂಭದಲ್ಲೂ ಇಂತಹ ಸಭೆ ಮಾಡಿದ್ದರಾದರೂ, ಅದು ಕೇವಲ ಒಂದು ಸ್ನೇಹಕೂಟಕ್ಕೆ ಸೀಮಿತವಾಗಿತ್ತು, ಆದರೆ ನಿನ್ನೆ ನಡೆದ ಸಭೆಯಲ್ಲಿ ಸರ್ಕಾರದ ನಿರ್ಧಾರಗಳ ಬಗ್ಗೆ ಮೆಲ್ಲಗೆ ಅಪಸ್ವರಗಳು ಕೇಳಿಬಂದಿದೆ.

ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿ ಇ.ಡಿ. ವಶಕ್ಕೆ
25 ಕೋಟಿ ರೂ. ಬಿಡುಗಡೆ ವಾಗ್ದಾನ

ಮುಖ್ಯಮಂತ್ರಿಗಳ (ಶಾಸಕರ) ನಿಧಿಯಿಂದ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಕಳೆದ ನಾಲ್ಕು ತಿಂಗಳ ಹಿಂದೆಯೇ ಸಿದ್ದರಾಮಯ್ಯ ತಿಳಿಸಿದ್ದರು.

ಇದುವರೆಗೂ ಆ ಹಣ ಬಿಡುಗಡೆಯಾಗಿಲ್ಲ, ಅಲ್ಲದೆ, ಬೇರೆ ಇಲಾಖೆಗಳ ಲೆಕ್ಕದ ಬಾಬ್ತಿನಡಿಯಲ್ಲೂ ಅಭಿವೃದ್ಧಿ ಕಾರ್ಯಕ್ಕೆ ಹಣ ಸಿಗುತ್ತಿಲ್ಲ.

ಬಡವರಿಗಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ತಂದರೂ ಲೋಕಸಭಾ ಚುನಾವಣೆಯಲ್ಲಿ ಅದರ ಪೂರ್ಣ ಲಾಭ ನಮಗೆ ದಕ್ಕಿಲ್ಲ.

ರಸ್ತೆ ಗುಂಡಿಗಳನ್ನೂ ಮುಚ್ಚಲಾಗದ ಸ್ಥಿತಿ

ಕ್ಷೇತ್ರಗಳಲ್ಲಿ ರಸ್ತೆ ಗುಂಡಿಗಳನ್ನೂ ಮುಚ್ಚಲಾಗದೆ ನಮ್ಮ ಸ್ಥಿತಿ ಚಿಂತಾಜನಕವಾಗಿದೆ, ಇದರ ನಡುವೆ ಕೆಳಹಂತದ ಅಧಿಕಾರಿಗಳನ್ನು ನಿಯೋಜಿಸಿಕೊಳ್ಳುವ ಅವಕಾಶವೂ ತಪ್ಪುತ್ತಿದೆ.

ಮತ ನೀಡಿದವರು ಅಭಿವೃದ್ಧಿ ಬಗ್ಗೆ ಪ್ರಶ್ನೆ ಮಾಡಿದರೆ ಉತ್ತರಿಸುವ ಶಕ್ತಿ ಇಲ್ಲದಂತಾಗಿರುವುದಲ್ಲದೆ, ತಮ್ಮವರೊಬ್ಬರನ್ನು ಕ್ಷೇತ್ರದಲ್ಲಿ ಅಧಿಕಾರಿಯಾಗಿ ನಿಯೋಜಿಸುವಂತೆ ಮಾಡಿದ ಮನವಿಗೂ ಸ್ಪಂದನೆ ಇಲ್ಲವಾಗಿದೆ.

ವೈದ್ಯರು ಮತ್ತು ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ನಿಯೋಜಿಸಲಾಗುತ್ತಿದೆ, ಇದೀಗ ಗ್ರಾಮೀಣಾಭಿವೃದ್ಧಿಯಡಿ ಬರುವ ಪಿಡಿಒಗಳು ಹಾಗೂ ಕಂದಾಯ ಇಲಾಖೆಯಡಿ ಬರುವ ನೋಂದಣಿ ಅಧಿಕಾರಿಗಳ ನಿಯೋಜನೆಗೂ ಇದೇ ಪದ್ಧತಿ ತರಲಾಗಿದೆ.

ಖಾಸಗಿ ಸಂಸ್ಥೆಗಳಲ್ಲೂ ಕನ್ನಡಿಗರಿಗೆ ಶೇ.100 ಉದ್ಯೋಗ
ವರ್ಗಾವಣೆಗೂ ಹೊಸ ಮಾರ್ಗಸೂಚಿ

ಪೊಲೀಸ್ ವರ್ಗಾವಣೆಗೂ ಹೊಸ ಮಾರ್ಗಸೂಚಿ ಬಂದಿದೆ, ಇದರಿಂದ ನಾವು ನಮ್ಮ ಕ್ಷೇತ್ರದಲ್ಲಿ ಬೇಕಾದ ’ಸಿ’ ಮತ್ತು ’ಡಿ’ ದರ್ಜೆ ನೌಕರರನ್ನೂ ನಿಯೋಜಿಸಿಕೊಳ್ಳುವ ಅಧಿಕಾರ ಇಲ್ಲದಂದಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಸಕರ ಕ್ರೀಡಾಕೂಟ ನೆಪದಲ್ಲಿ ಸೇರಿದ್ದ ಸಭೆ ಕೊನೆ ಕೊನೆಯಲ್ಲಿ, ಮುಖ್ಯಮಂತ್ರಿ ಹಾಗೂ ಸಚಿವರುಗಳ ನಿರ್ಧಾರಗಳ ಬಗ್ಗೆ ಪರೋಕ್ಷ ಅಸಮಾಧಾನ ವ್ಯಕ್ತವಾಗಿದೆ.

ರವಿ ಗಾಣಿಗ ಅವರ ಮುಂದಾಳತ್ವದಲ್ಲಿ ಸಭೆ ನಡೆಯಿತಾದರೂ ಹಳೇ ಮೈಸೂರು ಭಾಗದ ಹಿರಿಯ ಸಚಿವರೊಬ್ಬರು ತೆರೆಮರೆಯಲ್ಲಿ ಈ ಔತಣಕೂಟದ ಮುಂದಾಳತ್ವ ವಹಿಸಿದ್ದರು.

Share this:

  • WhatsApp
  • Post
  • Tweet
  • Print
  • Email
congres mla's meetingin a five star hotelnearly 40 mla's meetno money to development works
Share 0 FacebookTwitterPinterestEmail
KM Shivaraju

previous post
ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿ ಇ.ಡಿ. ವಶಕ್ಕೆ
next post
ವಾಲ್ಮೀಕಿ ನಿಗಮ ಹಣ ಲೂಟಿಗೆ ಲೆಕ್ಕಾಧಿಕಾರಿ ಹುದ್ದೆ ಸೃಷ್ಠಿ

You may also like

ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್

May 23, 2025

ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

May 22, 2025

ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

May 22, 2025

ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ

May 22, 2025

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025

Categories

  • Special Story (181)
  • ಅಂಕಣ (102)
  • ಉದ್ಯೋಗ (240)
  • ದಿನ ಭವಿಷ್ಯ (110)
  • ರಾಜಕೀಯ (1,587)
  • ರಾಜ್ಯ (1,876)
  • ರಾಷ್ಟ್ರ (1,848)
  • ವಿಶ್ಲೇಷಣೆ (184)
  • ಶಿಕ್ಷಣ (319)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್

    May 23, 2025
  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

    May 22, 2025

KMS Special

  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್

May 23, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ