Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಇ.ಡಿ., ಸಿಬಿಐ ವಿರುದ್ಧ ಹೋರಾಟ ಮಾಡಿ ಬುದ್ಧಿ ಕಲಿಸುವೆ

by admin July 23, 2024
written by admin July 23, 2024 0 comments 4 minutes read
0FacebookTwitterPinterestEmail
203

ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ವಿರುದ್ಧವೇ ರಾಜ್ಯ ಸರ್ಕಾರ ತಿರುಗಿಬಿದ್ದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಹೋದ್ಯೋಗಿಗಳು ಕೇಂದ್ರ ಸಂಸ್ಥೆಯ ತನಿಖಾಧಿಕಾರಿಗಳನ್ನು ಬಂಧಿಸುವಂತೆ ಇಂದಿಲ್ಲಿ ಧರಣಿ ನಡೆಸಿದರು.

ಹಗರಣ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಸಂಘರ್ಷಕ್ಕೆ ಎಡೆ ಮಾಡಿದ್ದು ಸಿದ್ದರಾಮಯ್ಯ ಅವರು, ಪಶ್ಚಿಮ ಬಂಗಾಳ ಸರ್ಕಾರ ಸಿಬಿಐ ವಿರುದ್ಧ ಟೊಂಕ ಕಟ್ಟಿ ನಿಂತಂತೆ ಇ.ಡಿ. ವಿರುದ್ಧ ಸಿಡಿದೆದ್ದಿದ್ದಾರೆ.

ತನ್ನನ್ನೇ ಹಗರಣದಲ್ಲಿ ಸಿಲುಕಿಸಲು ಇ.ಡಿ. ಅಧಿಕಾರಿಗಳು ಸಂಚು ರೂಪಿಸುತ್ತಿದ್ದಾರೆ ಎಂದು ನೇರವಾಗಿ ಆರೋಪ ಮಾಡಿರುವುದಲ್ಲದೆ, ಕೇಂದ್ರದ ಕೈಗೊಂಬೆಯಾಗಿರುವ ತನಿಖಾಧಿಕಾರಿಗಳನ್ನು ಬಂಧಿಸಲು ಮುಂದಾಗಿದ್ದಾರೆ.

ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ

ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ನಡೆದ ಸಚಿವ ಸಂಪುಟ ಸಭೆಯಲ್ಲೂ ಈ ಸಂಬಂಧ ಸುದೀರ್ಘ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಅವರು, ತಮ್ಮನ್ನು, ಉಪಮುಖ್ಯಮಂತ್ರಿ ಹಾಗೂ ಕೆಲವು ಸಚಿವರನ್ನು ಕೇಂದ್ರ ಸರ್ಕಾರ ಹಗರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆಸಿದೆ.

ಬಿಜೆಪಿಯೇತರ ಆಡಳಿತದ ಕೆಲವು ಮುಖ್ಯಮಂತ್ರಿಗಳನ್ನು ಇ.ಡಿ. ಹೇಗೆ ಹಗರಣಗಳಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸಿತ್ತೋ, ಅದೇ ರೀತಿ ಕಾರ್ಯವನ್ನು ಕರ್ನಾಟಕದಲ್ಲೂ ಮಾಡುತ್ತಿದೆ.

ಕೇಂದ್ರದ ಕೈಗೊಂಬೆಯಾಗಿರುವ ಇ.ಡಿ. ಮತ್ತು ಸಿಬಿಐ ವಿರುದ್ಧ ನಾನು ಹೋರಾಟ ಮಾಡುತ್ತೇನೆ, ಬುದ್ಧಿ ಕಲಿಸುತ್ತೇನೆ ಎಂದು ಶಪಥ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ರಾಷ್ಟ್ರದ ಗಮನ ಸೆಳೆಯಲು ಧರಣಿ ನಡೆಸಿದರು.

ಕಾನೂನಿನ ಹೋರಾಟಕ್ಕೆ ಸಿದ್ಧ

ಧರಣಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ಮಹರ್ಷಿ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣ ಕುರಿತ ಎಸ್‌ಐಟಿ ತನಿಖೆ ಮುಗಿದಿದೆ, ಇ.ಡಿ., ಸಿಬಿಐ ಏನೇ ಇರಲಿ ಕಾನೂನಿನ ಹೋರಾಟಕ್ಕೆ ಸಿದ್ಧ ಎಂದರು.

ರಾಜಕೀಯ ಸೇಡು, ದ್ವೇಷದ ನಡೆಯನ್ನು ಕಾಂಗ್ರೆಸ್ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ, ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು, ಕಾನೂನುಬಾಹಿರವಾಗಿ ತನಿಖೆ ಮಾಡುವಂತಿಲ್ಲ, ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚಿಸಿದ್ದು ಇ.ಡಿ. ದುರುಪಯೋಗ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿಲಾಗಿದೆ.

ಹಗರಣದಲ್ಲಿನ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು, ಯಾರೇ ತಪ್ಪು ಮಾಡಿದ್ದರೂ ಮುಲಾಜಿಗೆ ಒಳಗಾಗುವುದಿಲ್ಲ, ಯಾರನ್ನೂ ರಕ್ಷಣೆ ಮಾಡುವುದಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಕೊಟ್ಟೇ ಕೊಡುತ್ತೇವೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದರು.

ಕೇಂದ್ರ ಬಜೆಟ್: ಕೃಷಿಗೆ 1.52 ಲಕ್ಷ ಕೋಟಿ ರೂ. ಕೊಡುಗೆ
ಸದನದ ಹೊರಗೆ ಹೋರಾಟ

ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿಯೂ ಪ್ರಸ್ತಾಪಿಸಲಿದ್ದೇವೆ, ಸದನದ ಹೊರಗೆ ಹೋರಾಟ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಕುರಿತು ಮೂರು ತನಿಖಾ ಸಂಸ್ಥೆಗಳು ವಿಚಾರಣೆ ನಡೆಸುತ್ತಿವೆ, ಎಸ್.ಐ.ಟಿ.ಯನ್ನು ಮೇ 31ರಂದು ರಚಿಸಲಾಗಿದೆ, ಜೂನ್ 3ರಂದು ಬ್ಯಾಂಕ್ ವತಿಯಿಂದ ಸಿಬಿಐಗೆ ದೂರು ನೀಡಲಾಗಿದೆ, ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಣೆಯಿಂದ ತನಿಖೆ ಮಾಡುತ್ತಿದೆ.

ಒಂದೇ ಹಗರಣದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿರುವುದು ವಿಶೇಷ, ಮೂರು ತನಿಖಾ ಸಂಸ್ಥೆಗಳು ಒಂದೇ ಪ್ರಕರಣದ ಬಗ್ಗೆ ತನಿಖೆ ಮಾಡುವುದು ಈವರೆಗೆ ನನ್ನ ಅನುಭವಕ್ಕೆ ಬಂದಿರಲಿಲ್ಲ ಎಂದರು.

ಅಕ್ರಮ ನಡೆದಿಲ್ಲ ಎನ್ನುತ್ತಿಲ್ಲ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂಬುದಾಗಿ ನಾವು ಹೇಳಿಲ್ಲ, ವಿರೋಧ ಪಕ್ಷದವರು ಪದೇ ಪದೇ 187.33 ಕೋಟಿ ರೂ.ಗಳ ದುರುಪಯೋಗವಾಗಿದೆ ಎಂದು ಆರೋಪಿಸುತ್ತಿದ್ದಾರೆ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ ತೆಲಂಗಾಣಕ್ಕೆ ಹೋಗಿರುವುದು ಕೇವಲ 89.63 ಕೋಟಿ ರೂ. ಮಾತ್ರ, ಎಸ್‌ಐಟಿ ರಚನೆ ನಂತರ ತ್ವರಿತ ತನಿಖೆ ನಡೆಸಲಾಗುತ್ತಿದೆ.

ಈಗಾಗಲೇ 12 ಮಂದಿಯನ್ನು ಬಂಧಿಸಿದ್ದು, ಹಣ ಹಂಚಿಕೊಂಡಿದ್ದ ಮೊತ್ತದಲ್ಲಿ ಇದುವರೆಗೆ 34 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ, ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್, ರತ್ನಾಕರ ಬ್ಯಾಂಕ್ ಸೇರಿದಂತೆ ಒಟ್ಟು 85.25 ಕೋಟಿ ರೂ. ಹಿಂಪಡೆದು, ಮುಟ್ಟುಗೋಲು ಹಾಕಿಕೊಂಡಿದ್ದಾರೆ, ಒಟ್ಟು ಅಕ್ರಮವಾಗಿರುವುದು 85.63 ಕೋಟಿ ರೂ. ಮಾತ್ರ ಎಸ್‌ಐಟಿ ಶೇ.95ರಷ್ಟು ತನಿಖೆ ಪೂರ್ಣಗೊಳಿಸಿದೆ ಎಂದರು.

ಅಕ್ರಮ ನಡೆಯಲು ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ, ಉಪವ್ಯವಸ್ಥಾಪಕರು, ಕ್ರೆಡಿಟ್ ಅಧಿಕಾರಿಗಳು ಕಾರಣ ಎಂದು ಬ್ಯಾಂಕ್‌ನಿಂದ ದೂರು ನೀಡಲಾಗಿದ್ದು ಸಿಬಿಐ ತನಿಖೆ ನಡೆಸುತ್ತಿದೆ.

ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ದಾಳಿ ಮಾಡಲಾಗಿದೆ, ನಾಗೇಂದ್ರ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿ ಇಟ್ಟಿದ್ದಾರೆ.

ಸಚಿವರ ಹೆಸರು ಹೇಳುವಂತೆ ಒತ್ತಾಯ

ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಹೇಳಿಕೆ ಕೊಟ್ಟಿದ್ದರೂ, ಮುಖ್ಯಮಂತ್ರಿ ಹಾಗೂ ಇತರ ಸಚಿವರ ಹೆಸರುಗಳನ್ನು ಬರೆದು ಕೊಡುವಂತೆ ಒತ್ತಾಯ ಮಾಡಲಾಗುತ್ತಿದೆ.

187.33 ಕೋಟಿ ರೂ.ಗಳಲ್ಲಿ 43.33 ಕೋಟಿ ರೂ. ಖಜಾನೆಯಿಂದ ಹೋಗಿದೆ, ಅದಕ್ಕೂ ನಮಗೂ ಸಂಬಂಧವಿಲ್ಲ, ನಮ್ಮ ಹಾಗೂ ಆರ್ಥಿಕ ಇಲಾಖೆ ಪಾತ್ರ ಇಲ್ಲ, ಒಮ್ಮೆ ಬಜೆಟ್ ಅನುಮೋದನೆ ದೊರೆತ ನಂತರ ಅನುದಾನ ಕಾರ್ಯದರ್ಶಿಗಳಿಗೆ, ಅಲ್ಲಿಂದ ನಿರ್ದೇಶಕರಿಗೆ ಹೋಗುತ್ತದೆ, ನಿರ್ದೇಶಕರು ಅನುದಾನವನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ಕೊಡುತ್ತಾರೆ, ಇದು ಸಹಜ ಪ್ರಕ್ರಿಯೆ ಎಂದು ಸಮರ್ಥಿಸಿಕೊಂಡರು.

ಕಲ್ಲೇಶ್ ಅವರನ್ನು ಹೆದರಿಸಿ, ಬೆದರಿಸಿ, ಜೀವ ಭಯ ಉಂಟು ಮಾಡಿ ಅನಗತ್ಯವಾಗಿ ನನ್ನ ಹೆಸರು ಹೇಳುವಂತೆ ಜಾರಿ ನಿರ್ದೇನಾಲಯದ ತನಿಖಾಧಿಕಾರಿಗಳು ಬೆದರಿಸಿದ್ದಾರೆ, ಕಾನೂನಿನಡಿ ನನ್ನ ಮೇಲೆ ಆರೋಪ ಬರುವಂತೆ ಒತ್ತಾಯಿಸಿದ್ದಾರೆ, ಕಲ್ಲೇಶ್ ದೂರು ನೀಡಿ ಪ್ರಕರಣ ದಾಖಲಾಗಿದೆ, ದೂರಿನಲ್ಲಿ ಏನೇನು ನಡೆಯಿತು ಎಂಬುದನ್ನು ವಿವರಿಸಿದ್ದಾರೆ.

ಕೇಂದ್ರದ ವಾಮ ಮಾರ್ಗ

ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ವಾಮ ಮಾರ್ಗ ಅನುಸರಿಸುತ್ತಿದೆ, ಮುಖ್ಯಮಂತ್ರಿಯನ್ನು ಗುರಿಯಾಗಿಸಿಕೊಂಡು ನನ್ನ ಮತ್ತು ಸರ್ಕಾರದ ವರ್ಚಸ್ಸು ಹಾಳು ಮಾಡುವ ಯತ್ನ ನಡೆದಿದೆ.

ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿರುದ್ಧ ಇದೆ ಎಂಬುದಾಗಿ ರಾಜ್ಯದ ಜನತೆ ಮುಂದೆ ಬಿಂಬಿಸಲು ಹೊರಟಿದ್ದಾರೆ, ಸರ್ಕಾರ ಎಂದಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ದುರ್ಬಲ ವರ್ಗ, ಬಡವರು, ರೈತರು, ಕಾರ್ಮಿಕರ ಪರವಾಗಿದೆ.

ಹೇಗಾದರೂ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದೆಂಬ ಉದ್ದೇಶದಿಂದ ವಾಮ ಮಾರ್ಗ ಅನುಸರಿಸುತ್ತಿದ್ದಾರೆ, ಆರ್ಥಿಕ ಇಲಾಖೆಯಾಗಲಿ, ಮುಖ್ಯಮಂತ್ರಿಯಾಗಲಿ ಈ ಹಗರಣಕ್ಕೆ ಸಂಬಂಧಪಟ್ಟಿಲ್ಲ, ಹಗರಣ ನಡೆದಿರುವುದಕ್ಕೆ ತನಿಖೆ ಮಾಡಿಸುತ್ತಿದ್ದೇವೆ.

ತನಿಖೆ ಸರಿಯಾಗಿ ಸಾಗಿದೆ

ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಮೃತ ಚಂದ್ರಶೇಖರ್ ಅವರ ಪತ್ನಿ ಕವಿತಾ ನೀಡಿರುವ ದೂರು, ಪದ್ಮನಾಭ ಅವರ ದೂರಿನನ್ವಯ ತನಿಖೆ ಸರಿಯಾದ ದಾರಿಯಲ್ಲಿ ಸಾಗಿದೆ ಎಂದರು.

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಭೋವಿ ಅಭಿವೃದ್ಧಿ ನಿಗಮ, ದೇವರಾಜ ಅರಸ್ ಟ್ರಕ್ ಟರ್ಮಿನಲ್, ಎ.ಪಿ.ಎಂ.ಸಿ ಹಾಗೂ ಕೋವಿಡ್ ಹಗರಣಗಳ ತನಿಖೆಗೆ ಇ.ಡಿ. ಬರಲಿಲ್ಲ, ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಹೇಳುತ್ತಾರೆ, ಅವರು ವಿರೋಧಪಕ್ಷದಲ್ಲಿದ್ದಾಗ ಸಿಬಿಐ ಅನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು.

ಅವರ ಸರ್ಕಾರ ಕೇಂದ್ರದಲ್ಲಿರುವುದರಿಂದ ಸಿಬಿಐಗೆ ವಹಿಸುವಂತೆ ಒತ್ತಾಯಿಸುತ್ತಿದ್ದಾರೆ, ನಾವು ಅನೇಕ ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇವೆ, ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಪ್ರಕರಣ, ಪರೇಶ್ ಮೆಹ್ತಾ, ರವಿ, ಗಣಪತಿ, ಲಾಟರಿ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿದೆ.

ವಿವೇಚನೆ ಆಧರಿಸಿ ಸರ್ಕಾರ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸುತ್ತದೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಗಸೂಚಿ ಪ್ರಕಾರ 25 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವಿದ್ದರೆ ಸಿಬಿಐ ತನಿಖೆ ಮಾಡಬಹುದು, ತನಿಖೆಗೆ ನಮ್ಮ ತಕರಾರಿಲ್ಲ, ಆದರೆ ಕಾನೂನುಬಾಹಿರ ತನಿಖೆ ಮಾಡುವುದನ್ನು ಖಂಡಿಸುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
oath to teach lesson to ed and cbisiddaramaiah and cabinet on dharanavalmiki scam
0 FacebookTwitterPinterestEmail
admin

previous post
ಕೇಂದ್ರ ಬಜೆಟ್: ಕೃಷಿಗೆ 1.52 ಲಕ್ಷ ಕೋಟಿ ರೂ. ಕೊಡುಗೆ
next post
ವಾಲ್ಮೀಕಿ ಹಗರಣ: ಹೈಕೋರ್ಟ್ ಮಟ್ಟಿಲೇರಿದ ಯೂನಿಯನ್ ಬ್ಯಾಂಕ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ