Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಿಧಾನಸಭೆಯಲ್ಲಿ ಮುಡಾ ಕೋಲಾಹಲ: ಅಹೋರಾತ್ರಿ ಧರಣಿ

by admin July 24, 2024
written by admin July 24, 2024 0 comments 2 minutes read
0FacebookTwitterPinterestEmail
193

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಿಡಿ ನಿವೇಶನಗಳ ಹಂಚಿಕೆ ವಿಧಾನಸಭೆಯಲ್ಲಿಂದು ಭಾರೀ ಕೋಲಾಹಲಕ್ಕೆ ಕಾರಣವಾಯಿತು.

ಚರ್ಚೆಗೆ ಅವಕಾಶ ನೀಡಲಿಲ್ಲವೆಂದು ಬಿಜೆಪಿ ಸದಸ್ಯರು ಎರಡೂ ಸದನಗಳಲ್ಲಿ ಅಹೋರಾತ್ರಿ ಧರಣಿಗೆ ಮುಂದಾದರು.

ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಈ ಬಗ್ಗೆ ಭಾರೀ ವಾಕ್ ಸಮರ ನಡೆದು ಸಭಾಧ್ಯಕ್ಷರು ಎರಡು ಬಾರಿ ಸದನ ಮುಂದೂಡಿದರಾದರೂ ಈ ವಿಷಯನ್ನು ನಿಲುವಳಿ ಸೂಚನೆಯಡಿ ಚರ್ಚೆಗೆ ತೆಗೆದುಕೊಳ್ಳಲು ನಿರಾಕರಿಸಿ ಪ್ರತಿಪಕ್ಷಗಳ ಮನವಿಯನ್ನು ತಳ್ಳಿಹಾಕಿದರು.

ಬೆಳಗ್ಗೆ ಸದನ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ಸದಸ್ಯರು, ಮುಡಾದಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದೆ, ಇದರಲ್ಲಿ ಮುಖ್ಯಮಂತ್ರಿ ಅವರೂ ಶಾಮೀಲಾಗಿದ್ದಾರೆ.

ಶಿವಕುಮಾರ್ ಭೇಟಿ ಮಾಡಿದ ನಟ ದರ್ಶನ್ ಪತ್ನಿ
ನಿಲುವಳಿ ಸೂಚನೆಯಡಿ ಚರ್ಚೆಗೆ ಪಟ್ಟು

ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಲು ಪ್ರಶ್ನೋತ್ತರ ಅವಧಿ ಬದಿಗಿಟ್ಟು ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಪ್ರಶ್ನೋತ್ತರ ಅವಧಿ ಮುಗಿಯುತ್ತಿದ್ದಂತೆ ನಿಮ್ಮ ನಿಲುವಳಿ ಸೂಚನೆ ಕುರಿತು ತೀರ್ಮಾನ ಕೈಗೊಳ್ಳುತ್ತೇನೆ, ಮೊದಲು ಪ್ರಶ್ನೋತ್ತರ ತೆಗೆದುಕೊಳ್ಳೋಣ ಎಂದರು.

ಪ್ರಶ್ನೋತ್ತರ ಮತ್ತು ಶೂನ್ಯ ವೇಳೆ ಮುಗಿಯುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ಮುಡಾ ಹಗರಣ ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.

ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಮುಡಾ ಹಗರಣ ಇಡೀ ದೇಶದಲ್ಲಿ ಭಾರೀ ಸದ್ದು ಮಾಡುತ್ತಿದೆ, ಈ ಹಗರಣದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ನ ಸದಸ್ಯರೂ, ಮುಖಂಡರೂ ಇದ್ದಾರೆ ಎಂಬ ಮಾಹಿತಿ ಇದೆ, ಎಲ್ಲರ ಬಣ್ಣ ಬಯಲಾಗಲಿ, ಚರ್ಚೆಗೆ ಅವಕಾಶ ಕೊಡಿ, ಆರೋಪಿಗಳ ಬಣ್ಣ ಬಯಲಾದರೆ ಮುಂದೆ ಒಳ್ಳೆಯವರು ಬರುತ್ತಾರೆ ಎಂದರು.

ಹಗರಣಗಳಿಂದ ಹೆದರಿಕೊಂಡಿರುವ ಸಿದ್ದರಾಮಯ್ಯ !
ಬಿಜೆಪಿ ಅನಾಚಾರದ ಸಾಕ್ಷಿ

ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸದನದಲ್ಲಿ ಕೆಲವು ದಾಖಲೆಗಳನ್ನು ಪ್ರದರ್ಶಿಸಿ, ಬಿಜೆಪಿಯವರು ಮಾಡಿರುವ ಅನಾಚಾರದ ಸಾಕ್ಷಿ ಇಲ್ಲಿದೆ, ಒಂದು ಬಂಡಿಯಷ್ಟು ಭ್ರಷ್ಟಾಚಾರ ಇದೆ, ಅವೆಲ್ಲವನ್ನೂ ನಾವು ಬಿಚ್ಚಿಡುತ್ತೇವೆ ಎಂದರು.

ಆಗ ಮತ್ತೆ ಯತ್ನಾಳ್ ಮಾತನಾಡಿ, ಯಾರೆಲ್ಲಾ ಲೂಟಿ ಮಾಡಿದ್ದಾರೆ ಎಂಬ ಸತ್ಯ ಹೊರಬರಲಿ, ಪಕ್ಷಾತೀತವಾಗಿ ಭ್ರಷ್ಟಾಚಾರ ಹೊರಗೆ ಬರಬೇಕು, ತಪ್ಪು ಮಾಡಿದವರನ್ನು ಮನೆಗೆ ಕಳುಹಿಸಿ, ಪ್ರಾಮಾಣಿಕರನ್ನು ಇಲ್ಲಿ ಉಳಿಸೋಣ ಎಂದರು.

ಮಾತು ಮುಂದುವರೆಸಿದ ಬೈರತಿ ಸುರೇಶ್, ಬಿಜೆಪಿಯವರು ನಕಲಿ ದಾಖಲೆ ಕೊಟ್ಟು ಎಕರೆಗಟ್ಟಲೆ ತೆಗೆದುಕೊಂಡಿದ್ದಾರೆ, ಅವೆಲ್ಲವನ್ನೂ ನಾವು ಬಿಚ್ಚಿಡುತ್ತೇವೆ ಎಂದು ಪ್ರತಿಪಕ್ಷ ಸದಸ್ಯರಿಗೆ ತಿರುಗೇಟು ನೀಡಿದರು.

ಭಾರೀ ವಾಕ್ ಸಮರ

ಈ ಸಂದರ್ಭದಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಭಾರೀ ವಾಕ್ ಸಮರ ನಡೆದಾಗ ಸಭಾಧ್ಯಕ್ಷರು ಸದನ ಕಲಾಪವನ್ನು ಎರಡು ಗಂಟೆಗಳ ಕಾಲ ಮುಂದೂಡಿದರು.

ಸದನ ಮುಂದೂಡುವುದಕ್ಕೂ ಮುನ್ನ ಪ್ರತಿಪಕ್ಷ ಸದಸ್ಯರು ತಂದಿದ್ದ ನಿಲುವಳಿಸೂಚನೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಂಗ ತನಿಖೆ ಆರಂಭಗೊಂಡಿದೆ, ಈ ಕಾರಣದಿಂದ ಸದನದಲ್ಲಿ ಚರ್ಚೆಗೆ ಅವಕಾಶ ಸಾಧ್ಯವಿಲ್ಲ ಎಂದು ರೂಲಿಂಗ್ ನೀಡಿದರು.

ಬೋಜನ ವಿರಾಮದ ನಂತರ ಮತ್ತೆ ಸದನ ಸಮಾವೇಶಗೊಂಡಾಗ, ಪ್ರತಿಪಕ್ಷ ಸುನೀಲ್‌ಕುಮಾರ್ ಮಾತನಾಡಿ, ಮುಡಾ ಹಗರಣದ ಮೇಲಿನ ನಿಲುವಳಿಸೂಚನೆಗೆ ನೀವು ನೀಡಿರುವ ರೂಲಿಂಗ್ ಅನ್ನು ಮರುಪರಿಶೀಲಿಸಬೇಕೆಂದು ಮನವಿ ಮಾಡಿದರು.

ಮುಖ್ಯಮಂತ್ರಿ ಅವರೇ ಹಗರಣದಲ್ಲಿ ಆರೋಪಿಯಾಗಿದ್ದಾರೆ, ಕೋಟ್ಯಂತರ ರೂ. ಹಗರಣ ನಡೆದಿದೆ, ಚರ್ಚೆಗೆ ಅವಕಾಶ ಮಾಡಿಕೊಂಡುವಂತೆ ಮಾಡಿದ ಮನವಿಗೆ ಸಭಾಧ್ಯಕ್ಷರು, ಈಗ ಮಸೂದೆಗಳನ್ನು ತೆಗೆದುಕೊಳ್ಳೋಣ, ನಿಮ್ಮ ಕೋರಿಕೆಯನ್ನು ನಂತರ ಪರಿಶೀಲಿಸುತ್ತೇನೆ ಎಂದರು.

ರೂಲಿಂಗ್ ನಂತರ ಮತ್ತೆ ಅವಕಾಶ ಸಾಧ್ಯವಿಲ್ಲ

ತಕ್ಷಣವೇ ಮುಖ್ಯಮಂತ್ರಿ ಎದ್ದು ನಿಂತು, ಒಂದು ಬಾರಿ ರೂಲಿಂಗ್ ನೀಡಿದ ನಂತರ ಮತ್ತೆದೇ ವಿಷಯ ಪ್ರಸ್ತಾವಕ್ಕೆ ಅವಕಾಶ ಸಾಧ್ಯವಿಲ್ಲ ಎಂದು ಸಭಾಧ್ಯಕ್ಷರಿಗೆ ಹೇಳಿದರು.

ಸಭಾಧ್ಯಕ್ಷರು ಮಾತನಾಡಿ, ಎರಡು ವರ್ಷಗಳ ಹಿಂದಿನ ಹಗರಣವನ್ನು ಇಲ್ಲಿ ಪ್ರಸ್ತಾಪ ಮಾಡುತ್ತಿದ್ದೀರಿ, ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಯುತ್ತಿದೆ, ಅದರ ಮುಂದೆ ನಿಮ್ಮ ದಾಖಲೆಗಳನ್ನು ನೀಡಿ ಎಂದು ವಿಷಯಕ್ಕೆ ತೆರೆ ಎಳೆದು ಮಸೂದೆಗಳ ಮಂಡನೆಗೆ ಅವಕಾಶ ಮಾಡಿದರು.

ಇದನ್ನು ಬಲವಾಗಿ ವಿರೋಧಿಸಿದ ಪ್ರತಿಪಕ್ಷ ಸದಸ್ಯರು, ಸಭಾಧ್ಯಕ್ಷರ ವಿರುದ್ಧವೇ ತಿರುಗಿಬಿದ್ದರಲ್ಲದೆ, ಮುಡಾ ಹಗರಣ ಬಗ್ಗೆ ಎಳೆ ಎಳೆಯಾಗಿ ಬಿಡಿಸಿಟ್ಟು ಭಾರೀ ಗದ್ದಲ ಎಬ್ಬಿಸಿ ಜೆಡಿಎಸ್ ಸದಸ್ಯರ ಜೊತೆಗೂಡಿ ಅಹೋರಾತ್ರಿ ಧರಣಿ ಆರಂಭಿಸಿದರು.

ಗದ್ದಲದ ನಡುವೆಯೇ ಮಸೂದೆಗಳಿಗೆ ಅಂಗೀಕಾರ ಪಡೆದ ಸಭಾಧ್ಯಕ್ಷರು ಕಲಾಪವನ್ನು ಮುಂದೂಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assembly adjourned twicebjpjdsmuda scam echo
0 FacebookTwitterPinterestEmail
admin

previous post
ಹಗರಣಗಳಿಂದ ಹೆದರಿಕೊಂಡಿರುವ ಸಿದ್ದರಾಮಯ್ಯ !
next post
‘ತೇಜಸ್ವಿ ಎಂಬ ವಿಸ್ಮಯ’ ದೃಶ್ಯ ಸರಣಿ ಬಿಡುಗಡೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ