Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ನಾಯಕರ ಸಿಲುಕಿಸಲು ಸಿದ್ದರಾಮಯ್ಯ ಯತ್ನ

by KM Shivaraju September 13, 2024
written by KM Shivaraju September 13, 2024 0 comments 2 minutes read
Share 0FacebookTwitterPinterestEmail
121

ಬೆಂಗಳೂರು:ಬಿಜೆಪಿ ಆಡಳಿತದಲ್ಲಿ ನಡೆದಿರುವ ಹಗರಣಗಳ ತನಿಖೆ ಪೂರ್ಣಗೊಳಿಸಿ ಎರಡರಿಂದ ನಾಲ್ಕು ವಾರದೊಳಗೆ ಆರೋಪ ಪಟ್ಟಿ ಸಲ್ಲಿಸುವಂತೆ ಪೋಲಿಸ್ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸರ್ಕಾರ ಆದೇಶ ಮಾಡಿದೆ.

ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅಧಿಕಾರಾವಧಿಯಲ್ಲಿ ನಡೆದಿರುವ 21 ಹಗರಣಗಳಿಗೆ ಸಂಬಂಂಧಿಸಿದಂತೆ ಸರ್ಕಾರ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ತನಿಖಾ ಪ್ರಗತಿ ಪರಿಶೀಲಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದ ಸಚಿವರ ಸಮಿತಿ ಈ ಸೂಚನೆ ನೀಡಿದೆ.

ಹಗರಣಗಳ ಪರಿಶೀಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಎರಡು ದಿನಗಳ ಹಿಂದಷ್ಟೇ ಹಗರಣಗಳ ತನಿಖಾ ಪ್ರಗತಿ ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆಗೆ ನೇಮಕಗೊಂಡಿದ್ದ ಸಚಿವರ ಸಮಿತಿ ಇಂದು ಸಭೆ ಸೇರಿ ಎಲ್ಲಾ ವಿಷಯಗಳಿಗೆ ಸಂಬಂಂಧಿಸಿದಂತೆ ತನಿಖಾ ಸಂಸ್ಥೆಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆಯಿತು.

ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದರೂ ಇದುವರೆಗೆ ಕ್ರಮ ಕೈಗೊಳ್ಳದಿರುವುದಕ್ಕೆ ಕಾರಣ ಪಡೆಯಲಾಯಿತು.

ಮುಖ್ಯಮಂತ್ರಿಗಳು ಈಗಾಗಲೇ ಹೇಳಿರುವಂತೆ 21 ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ನಿಮ್ಮಲ್ಲಿ ದಾಖಲೆಗಳಿರುತ್ತವೆ, ಇಷ್ಟಿದ್ದರೂ ಯಾರ ವಿರುದ್ಧವೂ ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ.

ನಾಗಮಂಗಲ ಗಲಭೆ ಕಾಂಗ್ರೆಸ್‌ನ ವ್ಯವಸ್ಥಿತ ಪಿತೂರಿ !
ಎಫ್‌ಐಆರ್ ದಾಖಲಿಸಿ

ನಮಗೆ ತಿಳಿದಿರುವಂತೆ ಕೆಲವು ವಿಷಯಗಳಲ್ಲಿ ತನಿಖೆ ಮುಗಿದಿದ್ದರೆ ನೀವೇ ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಿ.

ಕೆಲವು ಹಗರಣಗಳ ವಿಷಯದಲ್ಲಿ ಸರ್ಕಾರದ ಅನುಮತಿ ಬೇಕಿದ್ದರೆ, ಸಂಪುಟದ ಮುಂದಿಡಿ, ಇನ್ನು ವಿಳಂಬ ಮಾಡಬೇಡಿ ಎಂದು ಸೂಚಿಸಿದ್ದಾರೆ.

ಮುಖ್ಯಮಂತ್ರಿ ಅವರು ನಮ್ಮ ಸಮಿತಿಗೆ ಎರಡು ತಿಂಗಳ ಗಡುವು ನೀಡಿದ್ದಾರೆ, ನಾವು ನಿಮಗೆ ಎರಡರಿಂದ ನಾಲ್ಕು ವಾರಗಳಲ್ಲಿ ಕೆಲವು ಹಗರಣಗಳಿಗೆ ಮೋಕ್ಷ ದೊರಕಿಸಲು ಸಮಯಾವಕಾಶ ನೀಡುತ್ತೇವೆ.

ಮುಂದೆ ನ್ಯಾಯಾಲಯ ತೀರ್ಮಾನ

ಯಾರು ಎಷ್ಟೇ ದೊಡ್ಡವರಿರಲಿ, ತಪ್ಪು ಮಾಡಿದ್ದರೆ ಅವರನ್ನು ಕಾನೂನು ಚೌಕಟ್ಟಿಗೆ ತನ್ನಿ ಮುಂದೆ ನ್ಯಾಯಾಲಯ ತೀರ್ಮಾನ ಕೈಗೊಳ್ಳುತ್ತೆ.

ಬಿಜೆಪಿ ಆಡಳಿತದಲ್ಲಿ ನಡೆದ ಶೇಕಡ 40% ಕಮಿಷನ್ ಸೇರಿದಂತೆ ಕೆಲವು ಹಗರಣಗಳನ್ನು ಮುಂದಿಟ್ಟುಕೊಂಡು ನಾವು ಅಧಿಕಾರಕ್ಕೆ ಬಂದಿದ್ದೇವೆ, ಈಗಾಗಲೇ ಸರ್ಕಾರ ತನಿಖೆಗೆ ಆದೇಶ ಮಾಡಿದೆ.

ದೇವರಾಜ ಅರಸ್ ಟ್ರಕ್ ಟರ್ಮಿನಲ್ ಭ್ರಷ್ಟಾಚಾರ ಹೊರತುಪಡಿಸಿ ಯಾವುದೇ ತನಿಖೆ ಪೂರ್ಣಗೊಳಿಸಿದ ಮಾಹಿತಿ ಇಲ್ಲ ಎಂದು ತಿಳಿಸಿದ ಗೃಹ ಸಚಿವರು, ಸಂಬಂಧಿಸಿದಂತೆ ಪ್ರತಿಯೊಂದು ಹಗರಣಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡರು.

ಪೋಲಿಸ್ ಎಡಿಜಿಪಿಗಳ ವರ್ಗಾವರ್ಗಿ
ತ್ವರಿತ ನಿರ್ಧಾರ ಕೈಗೊಳ್ಳಿ

ಅದರಲ್ಲೂ ಕೋವಿಡ್-19 ಸಂದರ್ಭದ ಭ್ರಷ್ಟಾಚಾರ, ನೀರಾವರಿ ಮತ್ತು ಲೋಕೋಪಯೋಗಿ ಸೇರಿದಂತೆ ಶೇಕಡ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ತ್ವರಿತ ನಿರ್ಧಾರ ಕೈಗೊಳ್ಳಿ ಎಂದು ಸಭೆ ಸೂಚಿಸಿತು.

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದ ಮಾದರಿಯಲ್ಲೇ ಬೋವಿ ಸೇರಿದಂತೆ ವಿವಿಧ ನಿಗಮಗಳಲ್ಲೂ ಭಾರೀ ಭ್ರಷ್ಟಾಚಾರ ನಡೆದಿದೆ, ಅವುಗಳಿಗೆ ಸಂಬಂಧಿಸಿದಂತೆ ಯಾವ ಹಂತದಲ್ಲಿ ತನಿಖೆ ನಡೆದಿದೆ ಎಂದು ಮಾಹಿತಿ ಪಡೆದ ಸಚಿವರ ಸಮಿತಿ, ಇವುಗಳಲ್ಲಿ ಕೆಲವು ಹಗರಣಗಳ ಬಗ್ಗೆ ಇನ್ನು ಎರಡು ವಾರಗಳಲ್ಲಿ ದೂರು ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಆದೇಶ ಮಾಡಿತು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಿಡಿ ನಿವೇಶನ ಹಂಚಿಕೆ ಹಗರಣಗಳಿಂದ ಆಡಳಿತದ ವರ್ಚಸ್ಸಿಗೆ ಉಂಟಾಗಿರುವ ಧಕ್ಕೆ ಉಪಶಮನಕ್ಕೆ ಬಿಜೆಪಿ ಆಡಳಿತದಲ್ಲಿ ನಡೆದಿರುವ ಹಗರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಆ ಪಕ್ಷದ ಮುಖಂಡರಿಗೆ ಬಿಸಿ ಮುಟ್ಟಿಸಲು ಸರ್ಕಾರ ಇಂತಹ ಕ್ರಮಕ್ಕೆ ಮುಂದಾಗಿದೆ.

ನ್ಯಾಯಾಲಯ ತೀರ್ಪಿಗೆ ಮುನ್ನ

ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ಸಂಬಂಧ ನ್ಯಾಯಾಲಯದ ತೀರ್ಪು ಹೊರಬರುವ ಮುನ್ನವೇ ಒಂದೆರಡು ಹಗರಣಗಳನ್ನು ಬಯಲು ಮಾಡಿ, ಬಿಜೆಪಿ ಜನಪ್ರತಿನಿಧಿಗಳ ಬಣ್ಣ ಬಯಲು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಇದರ ಬೆನ್ನಲ್ಲೇ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನೇಮಕಗೊಂಡಿದ್ದ ಸಚಿವರ ಸಮಿತಿ ಸಭೆ ಸೇರಿ ಕೆಲವು ಕಠಿಣ ತೀರ್ಮಾನಗಳನ್ನು ಕೈಗೊಂಡಿದೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಸಂತೋಷ್ ಲಾಡ್ ಹಾಜರಿದ್ದರು.

ಸೆ.25ರಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಾರವಿಡೀ ಮೊಟ್ಟೆ

Share this:

  • WhatsApp
  • Post
  • Tweet
  • Print
  • Email
basavaraja bommaibs yadiyurappasiddaramaiah wants to file case on bjp leaders
Share 0 FacebookTwitterPinterestEmail
KM Shivaraju

previous post
ಪೋಲಿಸ್ ಎಡಿಜಿಪಿಗಳ ವರ್ಗಾವರ್ಗಿ
next post
ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ