Thursday, May 22, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, May 22, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ

by admin September 14, 2024
written by admin September 14, 2024 0 comments 2 minutes read
Share 0FacebookTwitterPinterestEmail
160

ಬೆಂಗಳೂರು:ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಬಂಧನದ ಭೀತಿಯಲ್ಲಿದ್ದಾರೆ.

ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು 30 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಆರೋಪದಡಿ ಅವರ ವಿರುದ್ಧ ವೈಯಾಲಿಕಾವಲ್ ಪೋಲಿಸ್ ಠಾಣೆಯಲ್ಲಿ ಎರಡು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಹಾಗೂ ಜಾತಿ ನಿಂದನೆ ಮಾಡಿದ್ದಾರೆಂದು ವೇಲುನಾಯಕ್ ಎಂಬುವವರು ನೀಡಿದ ದೂರು ಆಧರಿಸಿ ಪೋಲಿಸರು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಮುನಿರತ್ನ ಅಲ್ಲದೆ, ಸರ್ಕಾರಿ ಅಧಿಕಾರಿ ವಿಜಯಕುಮಾರ್, ಕಾರ್ಯದರ್ಶಿ ಅಭಿಷೇಕ್, ಅವರ ಆಪ್ತ ವಸಂತಕುಮಾರ್ ವಿರುದ್ಧವೂ ಪ್ರಕರಣ ದಾಖಲಾಗಿದೆ.

30 ಲಕ್ಷ ರೂ. ಲಂಚಕ್ಕೆ ಬೇಡಿಕೆ

ಘನತ್ಯಾಜ್ಯ ವಿಲೇವಾರಿ ಗುತ್ತಿಗೆಗೆ ಸಂಬಂಧಿಸಿದಂತೆ ಮುನಿರತ್ನ ಮತ್ತು ಅವರ ಆಪ್ತ ವಸಂತ್‌ಕುಮಾರ್, 30 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚೆಲುವರಾಜು ದೂರು ನೀಡಿದ್ದಾರೆ.

ವೈಯಾಲಿಕಾವಲ್ ಠಾಣೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಶಾಸಕರು ಮತ್ತು ಅವರ ಆಪ್ತರು ಕರೆ ಮಾಡಿ ಹಣ ಕೊಡದಿದ್ದರೆ ನಿನ್ನನ್ನು ರೇಣುಕಸ್ವಾಮಿ ರೀತಿಯಲ್ಲಿ ಕೊಲೆ ಮಾಡುತ್ತೇವೆಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಈ ದೂರು ಆಧರಿಸಿ ಪೊಲೀಸರು ಮುನಿರತ್ನ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಜಾತಿ ನಿಂದನೆಗೆ ಎಫ್‌ಐಆರ್

ಜಾತಿ ನಿಂದನೆ ಆರೋಪದಡಿ ಇದೇ ಠಾಣೆಯಲ್ಲಿ ಶಾಸಕರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಗುತ್ತಿಗೆದಾರ ಚೆಲುವರಾಜು, ನಿನ್ನೆ ಸುದ್ದಿಗೋಷ್ಠಿ ನಡೆಸಿ, ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದರು, ಶಾಸಕರು ತನ್ನಿಂದ ಹಣ ವಸೂಲಿ ಮಾಡಲು ಜಾತಿ ನಿಂದನೆ ಮಾಡಿ, ಹೆಂಡತಿ ಮತ್ತು ತಾಯಿ ಬಗ್ಗೆ ಅತ್ಯಂತ ಅಶ್ಲೀಲ ಭಾಷೆಯಲ್ಲಿ ನಿಂದಿಸಿ ತಮಗೆ ಜೀವ ಬೆದರಿಕೆಯೊಡ್ಡಿದ್ದಾರೆ.

ಮುಂದೆ ನಾನು ಜೀವಂತವಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ, ನನ್ನ ಜಾತಿ ಬಳಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ನನ್ನ ಹೆಂಡತಿ ಫೋಟೋ ತೋರಿಸು ಹೇಗಿದ್ದಾಳೆ ಎನ್ನುತ್ತಾರೆ, ಮುನಿರತ್ನ ನನ್ನ ಹೆಂಡತಿಯನ್ನು ಮಂಚಕ್ಕೆ ಕಳುಹಿಸು ಎಂದಿದ್ದಾರೆ, ನನ್ನ ತಾಯಿಯ ಬಗ್ಗೆ ಅಸಹ್ಯವಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ, ಮುನಿರತ್ನ ಮಾತನಾಡಿರುವುದು ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿದ್ದರು.

ಚುನಾವಣಾ ರಾಜಕೀಯಕ್ಕೆ ಸಚಿವ ರಾಜಣ್ಣ ಗುಡ್‌ಬೈ
ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ

ಈ ಮಧ್ಯೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಡಿ.ಕೆ.ಸುರೇಶ್ ತುರ್ತು ಸುದ್ದಿಗೋಷ್ಠಿ ನಡೆಸಿ, ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಎದುರಿಸುತ್ತಿರುವ ಮುನಿರತ್ನ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮುನಿರತ್ನ ಎರಡು ಜಾತಿಗಳ ಮಧ್ಯೆ ಸಂಘರ್ಷ ತರುವ ಕೆಲಸ ಮಾಡಿದ್ದಾರೆ, ಹಿಂದೆಯೂ ಅವರು ಒಕ್ಕಲಿಗ ಸಮುದಾಯವನ್ನು ಬಹಳ ಕೀಳಾಗಿ ನೋಡಿದ್ದರು, ಬಿಜೆಪಿ ನಾಯಕರು ಇದನ್ನು ಯಾವ ರೀತಿ ಅರಗಿಸಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಮುನಿರತ್ನ ವಿರುದ್ಧದ ಆರೋಪಗಳಿಗೆ ಬಿಜೆಪಿಯ ಒಬ್ಬರೇ ಒಬ್ಬ ನಾಯಕರೂ ಪ್ರತಿಕ್ರಿಯೆ ನೀಡಿಲ್ಲ, ನೈತಿಕತೆ ಇದ್ದರೆ ಇಷ್ಟೊತ್ತಿಗೆ ಪಕ್ಷದಿಂದ ವಜಾ ಮಾಡಬೇಕಿತ್ತು ಎಂದರು.

ಬಿಜೆಪಿ ನಾಯಕರು ಈ ರೀತಿ ಮಾಡುವುದು ಎಷ್ಟು ಸರಿ, ಎರಡು ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಆಗಿದೆ, ಇನ್ನೊಂದು ಕಡೆ ಲಂಚದ ಆರೋಪ, ದುಡ್ಡು ತಂದುಕೊಟ್ಟರೆ ಬದುಕುತ್ತೀಯಾ ಎಂದು ಮುನಿರತ್ನ ನೇರವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ, ಈ ಥರ ನಡೆದುಕೊಂಡಿರುವುದು ಒಬ್ಬ ಸಾಮಾನ್ಯ ವ್ಯಕ್ತಿಯಲ್ಲ, ಬಿಜೆಪಿ ನಾಯಕ, ಸಿನಿಮಾ ನಿರ್ಮಾಪಕ ಎಂದರು.

ಆರೆಸ್ಸೆಸ್ ಜೊತೆ ಒಡನಾಟ

ಸಾರ್ವಜನಿಕ ಜವಾಬ್ದಾರಿ ಸ್ಥಾನದಲ್ಲಿ ಇರುವ ಮಾಜಿ ಸಚಿವ, ಆರ್.ಆರ್.ನಗರ ಕ್ಷೇತ್ರದ ಶಾಸಕರಾಗಿರುವ ಮುನಿರತ್ನ ಬಹಳ ಕೀಳು ದರ್ಜೆಯ ಪದಗಳನ್ನು ಬಳಸಿದ್ದಾರೆ, ಕೀಳರಿಮೆ ಮನಸ್ಥಿತಿ ಇರುವವರೂ ಕೂಡ ಇಂಥ ಪದ ಬಳಸುವುದಿಲ್ಲ, ಒಂದು ಕಡೆ ರಾಮನ ಜಪ, ಒಂದು ಕಡೆ ಸಂಸ್ಕೃತಿ ಜಪ, ಇನ್ನೊಂದು ಕಡೆ ತಾಯಂದಿರನ್ನು ಮಂಚಕ್ಕೆ ಕರೆಯುವ ಮಾಜಿ ಮಂತ್ರಿ, ಸಾಲದೆಂಬಂತೆ ಆರೆಸ್ಸೆಸ್ ಜೊತೆಗೆ ಒಡನಾಟ ಇಟ್ಟುಕೊಂಡವರು ಎಂದು ವ್ಯಂಗ್ಯವಾಡಿದ್ದಾರೆ.

ದಲಿತ ಸಮುದಾಯದ ಮೇಲೆ 80ರ ದಶಕದ ನಂತರ ಯಾರೂ ಇಂಥ ಪದ ಬಳಸುತ್ತಿರಲಿಲ್ಲ, ದಲಿತ ಸಮುದಾಯದ ಮೇಲೆ ಇಂಥ ಪದ ಬಳಕೆ ಮಾಡುವುದು ಎಷ್ಟು ಸರಿ, ಇದಕ್ಕೆ ಬಿಜೆಪಿ ನಾಯಕರು, ಎನ್‌ಡಿಎ ನಾಯಕರು ಸ್ಪಷ್ಟವಾಗಿ ಹೇಳಬೇಕು, ನೈತಿಕತೆ, ಬದ್ಧತೆ ಪ್ರದರ್ಶನ ಮಾಡಬೇಕು ಎಂದು ಆಗ್ರಹಿಸಿದರು.

ಬಿಜೆಪಿಯ ಒಕ್ಕಲಿಗ ನಾಯಕರು ಇದಕ್ಕೆ ಉತ್ತರ ಕೊಡಬೇಕು, ಒಕ್ಕಲಿಗ ಹೆಣ್ಣು ಮಕ್ಕಳನ್ನು ಮಂಚಕ್ಕೆ ಕರೆಯುವುದು ಎಷ್ಟು ಸರಿ ಎಂಬುದನ್ನು ಆರ್. ಅಶೋಕ್ ಹೇಳಬೇಕು, ಒಕ್ಕಲಿಗ ಕೇಂದ್ರ ಸಚಿವರು ಪಕ್ಷದ ವರಿಷ್ಠರಾದ ಜೆ.ಪಿ.ನಡ್ಡಾ, ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ವರದಿ ಕೊಡಲಿ.

ಪರಿಶಿಷ್ಟ ಸಮುದಾಯಕ್ಕೆ ಸೇರಿದ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಮುನಿರತ್ನ ವಿರುದ್ಧ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

Share this:

  • WhatsApp
  • Post
  • Tweet
  • Print
  • Email
bjp mladk sureshmuniratnapolice fir
Share 0 FacebookTwitterPinterestEmail
admin

previous post
ಬಿಜೆಪಿ ನಾಯಕರ ಸಿಲುಕಿಸಲು ಸಿದ್ದರಾಮಯ್ಯ ಯತ್ನ
next post
ಚುನಾವಣಾ ರಾಜಕೀಯಕ್ಕೆ ಸಚಿವ ರಾಜಣ್ಣ ಗುಡ್‌ಬೈ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ