Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಕುಮಾರಸ್ವಾಮಿ ರಾಜಕೀಯ ಬಿಟ್ಟು ಕೆಲಸ ಕೊಡಿಸಲಿ

by admin September 30, 2024
written by admin September 30, 2024 0 comments 1 minutes read
0FacebookTwitterPinterestEmail
271

ಬೆಂಗಳೂರು:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜಕಾರಣ ಬಿಟ್ಟು ರಾಜ್ಯದಲ್ಲಿ ಒಂದು ಲಕ್ಷ ಜನರಿಗೆ ಉದ್ಯೋಗ ನೀಡುವ ಕೆಲಸ ಮಾಡಲಿ, ಕಾಂಗ್ರೆಸ್ ಸರ್ಕಾರ ಬೇಕಾದ ಸಹಕಾರ ನೀಡುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ಕು, ಕೈಗಾರಿಕೆಯಂತಹ ದೊಡ್ಡ ಖಾತೆ ಕೊಟ್ಟಿದ್ದಾರೆ, ಈ ಅವಕಾಶ ಬಳಸಿಕೊಳ್ಳಲಿ ಎಂದರು.

ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು, ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರಗಿ ಸೇರಿದಂತೆ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಇತಿಹಾಸ ಬಿಟ್ಟು ಹೋಗಲಿ, ರಾಜಕೀಯ ಇದ್ದಿದ್ದೇ, ಒಳ್ಳೆ ಅವಕಾಶ ಏಕೆ ಕಳೆದುಕೊಳ್ಳುತ್ತಿದ್ದಾರೆ.

ಐದು ಗ್ಯಾರಂಟಿ ಈಡೇರಿಸಿದ್ದೇವೆ

ಗೃಹ ಸಚಿವ ಡಾ.ಪರಮೇಶ್ವರ್ ಅವರೊಂದಿಗೆ ಪ್ರತಿದಿನ ರಾಜಕೀಯ ಮಾಡುತ್ತಲೇ ಇರುತ್ತೇವೆ, ಅಭಿವೃದ್ಧಿ ಇದ್ದರೇ ರಾಜಕೀಯ, ಐದು ಗ್ಯಾರಂಟಿ ಈಡೇರಿಸಿದ್ದೇವೆ, ಎತ್ತಿನಹೊಳೆ ಕೆಲಸ ಮುಗಿಸಬೇಕು, ಪ್ರಣಾಳಿಕೆಗಳಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಬೇಕು, ಪ್ರತಿದಿನ ಸಮಯ ಓಡುತ್ತಿರುತ್ತದೆ.

ಕಾಂಗ್ರೆಸ್‌ನ 136 ಶಾಸಕರು ಒಟ್ಟಿಗೆ ಇದ್ದೇವೆ, ನಾಯಕರ ಹಿಂದೆ ಅಧಿಕಾರಿಗಳು ಬೇಕಾಗಿಲ್ಲ, ಆಲೋಚಿಸುತ್ತೇವೆ, ಚರ್ಚೆ ಮಾಡುತ್ತೇವೆ, ಅಭಿಪ್ರಾಯ ಕೇಳುತ್ತೇವೆ, ಮಾತನಾಡುವವರು ಹಾಗೂ ತೀರ್ಮಾನಿಸುವವರು ಒಬ್ಬರೇ.

ಎಡಿಜಿಪಿ ಚಂದ್ರಶೇಖರ್ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ಮಾಡುವವರು ಅವರು, ತನಿಖೆಗೆ ಒಳಗಾಗುವವರು ಅವರು, ಅದಕ್ಕೂ ನನಗೂ ಸಂಬಂಧವಿಲ್ಲ.

ವಿರೋಧಿಗಳ ದಮನಕ್ಕೆ ಕೀಳುಮಟ್ಟದ ರಾಜಕಾರಣ
ಸರ್ಕಾರ ಬೀಳಿಸಲು ಸಾವಿರ ಕೋಟಿ ರೂ

ಸರ್ಕಾರ ಬೀಳಿಸಲು ಒಂದು ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎನ್ನುವ ಯತ್ನಾಳ್ ಹೇಳಿಕೆ ಬಗ್ಗೆ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತರಲಾಗಿದೆ, ಪಕ್ಷ ಹಾಗೂ ಸರ್ಕಾರ ಉರುಳಿಸಲು ಈ ಕೆಲಸ ನಡೆಯುತ್ತಿದೆ, ಕಾನೂನು ಸಲಹೆಗಾರರ ಬಳಿ ಚರ್ಚಿಸಲಾಗುವುದು, ಈ ಕೃತ್ಯ ಆದಾಯ ತೆರಿಗೆ ಇಲಾಖೆಯಿಂದ ತನಿಖೆ ಆಗಬೇಕು ಎಂದರು.

2025ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು ಹರಿಸಲು ಪ್ರಯತ್ನ ಮಾಡಲಾಗುವುದು, ಈಗಾಗಲೇ ನೀರನ್ನು ಮೇಲಕ್ಕೆತ್ತಿ ಸಂಗ್ರಹ ಮಾಡಲಾಗಿದೆ, ತುಮಕೂರು ಹಾಗೂ ಹಾಸನ ಜಿಲ್ಲೆಯಲ್ಲಿ ಅರಣ್ಯ ಭೂಮಿ ಗುರುತಿಸಲಾಗಿದೆ, ನೀರಾವರಿ ಇಲಾಖೆಗೆ ವರ್ಗಾವಣೆ ಮಾಡಬೇಕು, ಈ ವಿಚಾರವಾಗಿ ಪ್ರತ್ಯೇಕ ಸಭೆ ನಡೆಸಲಾಗುವುದೆಂದು ಮುಖ್ಯಮಂತ್ರಿ ತಿಳಿಸಿದ್ದಾರೆ, ಅರಣ್ಯ ಸಚಿವರ ಬಳಿಯೂ ಚರ್ಚಿಸಲಾಗುವುದು.

ಮಳೆ ಕಡಿಮೆಯಾಗುತ್ತಿದೆ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ, ಬಿಜೆಪಿ ಆಡಳಿತಾವಧಿಯಲ್ಲಿ ಕೊರಟಗೆರೆ ಬಳಿ ಬೈರಗೊಂಡ್ಲು ಜಲಾಶಯ ನಿರ್ಮಾಣ ಯೋಜನೆ ಬದಲಾವಣೆ ಮಾಡಿದ್ದರು, ಈ ಕಾರಣಕ್ಕೆ ಸ್ಥಳ ವೀಕ್ಷಣೆ ಮಾಡಬೇಕು.

ದೊಡ್ಡಬಳ್ಳಾಪುರದ ಒಂದಷ್ಟು ಭಾಗವೂ ಸೇರಿಕೊಂಡಿದೆ, ಪರಿಹಾರ ವಿಚಾರದಲ್ಲಿ ವ್ಯಾಜ್ಯಗಳಿವೆ, ರೈತರು ಒಂದೇ ರೀತಿ ಪರಿಹಾರ ನೀಡಿ ಎನ್ನುತ್ತಿದ್ದಾರೆ, ದಸರಾ ನಂತರ ಎತ್ತಿನಹೊಳೆಯಿಂದ ಬೈರಗೊಂಡ್ಲುವರೆಗೂ ಸ್ಥಳ ವೀಕ್ಷಣೆ ಮಾಡಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central minister hd kumara swamyDCM DK Shivakumarprovide job to karnataka people
0 FacebookTwitterPinterestEmail
admin

previous post
ವಿರೋಧಿಗಳ ದಮನಕ್ಕೆ ಕೀಳುಮಟ್ಟದ ರಾಜಕಾರಣ
next post
ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ದೂರು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ