Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜೀನಾಮೆ ನೀಡಲು ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

by admin October 7, 2024
written by admin October 7, 2024 0 comments 2 minutes read
0FacebookTwitterPinterestEmail
153

ಗದಗ:ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ, ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ, ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಮುಖ್ಯಮಂತ್ರಿ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ, ಸಿದ್ದರಾಮಯ್ಯ ರಾಜೀನಾಮೆ ನೀಡಲು ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ರಾಜೀನಾಮೆ ನೀಡಿದರೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ನಮಗೆ ಅವಕಾಶವಿದೆ, ಆದ್ದರಿಂದ, ಸರ್ಕಾರ ಉಳಿಸಿಕೊಳ್ಳಲು ನಿರಂತರ ಪ್ರಯತ್ನ ಮಾಡುತ್ತಿದ್ದು, ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ.

ಕರ್ನಾಟಕದ ದೌರ್ಭಾಗ್ಯ

ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ, ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ, ಇಂತಹ ಸರ್ಕಾರ ಪಡೆದಿರುವುದು ಕರ್ನಾಟಕದ ದೌರ್ಭಾಗ್ಯ, ಸರ್ಕಾರ ಅಭದ್ರಗೊಳಿಸುವ ಕೆಲಸ ನಾವು ಮಾಡುವುದಿಲ್ಲ ಎಂದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೇರೆ ಕೆಲಸಕ್ಕೆ ಭೇಟಿಯಾಗಿರಬಹುದು, ನಮ್ಮ ಹೈಕಮಾಂಡ್ ಬಹಳ ಸ್ಪಷ್ಟವಾಗಿದೆ, ರಾಜ್ಯ ಸರ್ಕಾರ ಅಭದ್ರಗೊಳಿಸುವ ಪ್ರಶ್ನೆಯೇ ಇಲ್ಲ.

ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ನಡೆದಿದೆ, ದಸರಾ ನಂತರ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂಬ ವಿಜಯೇಂದ್ರ ಅವರ ಹೇಳಿಕೆ ಪ್ರಕಾರ ರಾಜೀನಾಮೆ ನೀಡಲು ಸಿದ್ದರಾಮಯ್ಯ ಮಾನಸಿಕವಾಗಿ ತಯಾರಿ ಆಗುತ್ತಿದ್ದಾರೆ ಎಂದರು.

ತಪ್ಪು ಮರೆಮಾಚಲು ಸಿದ್ದರಾಮಯ್ಯ ಜಾತಿಗಣತಿ ನಾಟಕ
ಹರಿಪ್ರಸಾದ್ ಸ್ಪಷ್ಟಪಡಿಸಲಿ

ಜಾತಿಗಣತಿ ವಿಷಯವಾಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಮನದಾಳದ ಮಾತು ಹೇಳಿದ್ದಾರೆ, ಜಾತಿಗಣತಿ ಮುಖ್ಯವೋ ಸರ್ಕಾರ ಬೀಳೋದು ಮುಖ್ಯವೋ ಎಂಬುದನ್ನು ಹರಿಪ್ರಸಾದ್ ಸ್ಪಷ್ಟಪಡಿಸಲಿ.

ಜಾತಿಗಣತಿ ಪ್ರಕ್ರಿಯೆ ಅಲ್ಲ, ಅದು ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯಲು ಮಾಡಿದ್ದು, ನಿಖರವಾಗಿ ಜಾತಿಗಣತಿಯ ಆದೇಶವಿಲ್ಲ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ ಆಯೋಗ ಕೊಟ್ಟ ವರದಿ ಏಕೆ ಸ್ವೀಕರಿಸಲಿಲ್ಲ, ಜಯಪ್ರಕಾಶ್ ಹೆಗಡೆ ಅವರು ಆಯೋಗದ ಅಧ್ಯಕ್ಷರಾಗಿ 2-3 ತಿಂಗಳಲ್ಲಿ ಹೇಗೆ ವರದಿ ಕೊಡಲು ಸಾಧ್ಯ.

ಕಾಂತರಾಜ್ ಅವರು 2-3 ವರ್ಷ ಡಾಟಾ ತೆಗೆದುಕೊಂಡಿದ್ದರು, ಹೆಗಡೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ, ಆ ವರದಿ ತೆಗೆದುಕೊಂಡು ಹಿಂದುಳಿದ ವರ್ಗ ಉದ್ಧಾರ ಮಾಡುತ್ತೇವೆ ಅಂತ ಹೇಳುತ್ತಾರೆ, ಗೊಂದಲ ಸ್ಪಷ್ಟವಾಗಬೇಕು, ವೈಜ್ಞಾನಿಕವಾಗಿ ಆಗಬೇಕು, ಹಿಂದುಳಿದವರಿಗೆ ಹೆಚ್ಚಿನ ಕಾರ್ಯಕ್ರಮ ಬರಬೇಕು.

ವರದಿ ಕೊಟ್ಟು 10 ತಿಂಗಳಾಯಿತು

ಜಾತಿಗಣತಿ ಬಿಡುಗಡೆ ಮಾಡಿ ಅಂತಾ ಮೊನ್ನೆಯೇ ಹೇಳಿದ್ದೇನೆ, ವರದಿ ಕೊಟ್ಟು 8-10 ತಿಂಗಳಾಯಿತು ಏಕೆ ಇಟ್ಟುಕೊಂಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಬಂದಮೇಲೆ ಜಾತಿ ಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಮಾತಾಡುತ್ತಾರೆ.

ಜಾತಿ ಗಣತಿ ವರದಿ ಬಿಡಿಗಡೆಗೆ ಆಡಳಿತ ಪಕ್ಷದಲ್ಲಿ ಮೊದಲಿನಿಂದಲೂ ವಿರೋಧವಿದೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ವರದಿ ವಿರೋಧಿಸಿ ಸಹಿ ಮಾಡಿಕೊಟ್ಟಿದ್ದಾರೆ, ಆಡಳಿತ ಪಕ್ಷದಲ್ಲೇ ಹೊಂದಾಣಿಕೆ, ಸ್ಪಷ್ಟತೆ ಇಲ್ಲ, ಆದಷ್ಟು ಬೇಗ ಜಾತಿಗಣತಿ ಹೊರಬಂದು ಚರ್ಚೆಯಾಗಲಿ.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ರಾಯಣ್ಣ ಬ್ರಿಗೇಡ್ ಮರುಸ್ಥಾಪಿಸುವ ಬಗ್ಗೆ ಮಾಹಿತಿ ಇಲ್ಲ, ಅವರು ಮಾಡಲಿ, ನಮ್ಮ ಪಕ್ಷ ತನ್ನದೇ ಕಾರ್ಯಕರ್ತರ ಪಡೆ ಹೊಂದಿದೆ, ನಮ್ಮದು ರಾಷ್ಟ್ರೀಯ ಪಕ್ಷ, ನಾವು ನಿರಂತರ ನಮ್ಮ ಕೆಲಸ ಮಾಡುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basavaraja bommaicaste censusks eshwarappaSiddaramaiah
0 FacebookTwitterPinterestEmail
admin

previous post
ತಪ್ಪು ಮರೆಮಾಚಲು ಸಿದ್ದರಾಮಯ್ಯ ಜಾತಿಗಣತಿ ನಾಟಕ
next post
ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲಿ ತೀರ್ಮಾನ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ