Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಸಿದ್ದರಾಮಯ್ಯ ಬಣದಲ್ಲೇ ಬಿರುಕು

by KM Shivaraju October 8, 2024
written by KM Shivaraju October 8, 2024 0 comments 1 minutes read
0FacebookTwitterPinterestEmail
237

ಪರ್ಯಾಯ ನಾಯಕತ್ವದ ಬಿಕ್ಕಟ್ಟು ಉಲ್ಬಣ

ಬೆಂಗಳೂರು : ಪರ್ಯಾಯ ನಾಯಕತ್ವಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದಲ್ಲೇ ಬಿರುಕು ಮೂಡಿದೆ. ಮುಡಾ ಬಿಡಿ ನಿವೇಶನ ಹಾಗೂ ಪ್ರಾಧಿಕಾರದ ಹಣವನ್ನು ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಬಳಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿದೇರ್ಶನಾಲಯ (ಇ.ಡಿ.) ಯಾವುದೇ ಕ್ಷಣದಲ್ಲಿ ಮುಖ್ಯಮಂತ್ರಿ ಅವರಿಗೆ ನೋಟಿಸ್ ಜಾರಿ ಮಾಡಿ ಕಾನೂನು ಕ್ರಮಕ್ಕೆ ಮುಂದಾಗಬಹುದು.

ನ್ಯಾಯಾಲಯಗಳು ಕರ್ನಾಟಕದ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಆದೇಶ ನೀಡಿದ ನಂತರ ಕಾಂಗ್ರೆಸ್ ವರಿಷ್ಠರು ಮೌನ ವಹಿಸಿರುವುದಲ್ಲದೆ, ತೆರೆಮರೆಯಲ್ಲೇ ಪರ್ಯಾಯ ನಾಯಕತ್ವಕ್ಕೆ ಅನ್ವೇಷಣೆ ನಡೆಸಿದ್ದಾರೆ. ಇದರ ಸುಳಿವರಿತ ಸಿದ್ದರಾಮಯ್ಯ ತಾವು ಅಧಿಕಾರ ತ್ಯಜಿಸಿದರೆ, ತಮ್ಮ ಬೆಂಬಲಿಗರೇ ನಾಯಕತ್ವ ವಹಿಸಿಕೊಳ್ಳಬೇಕೆಂಬ ತೀರ್ಮಾನಕ್ಕೆ ಬಂದಿದ್ದಾರೆ.

ಇದರ ಹಿನ್ನೆಲೆಯಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ಬೆಂಬಲಿಗರ ಮೂಲಕ ಕರ್ನಾಟಕ ರಾಜಕೀಯಕ್ಕೆ ಹಿಂತಿರುಗಿ ಮುಖ್ಯಮಂತ್ರಿ ಆಗಿ ಎಂಬ ಸಂದೇಶ ನೀಡಿದ್ದರು. ಅವರು ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎನ್ನುವುದು ತಿಳಿದ ವಿಚಾರವೇ ಆದರೂ, ಎಐಸಿಸಿ ವಿಶ್ವಾಸ ಪಡೆದುಕೊಳ್ಳಲು ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದ್ದರು.

ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರಲು ನಿರಾಕರಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಸಿರು ನಿಶಾನೆ ತೋರಿದ್ದಾರಂತೆ. ಜಾರಕಿಹೊಳಿಯನ್ನು ಬೆಂಬಲಿಸಿದ್ದು ಅದೇ ಬಣಕ್ಕೆ ಸೇರಿದ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಡಾ.ಹೆಚ್.ಸಿ.ಮಹದೇವಪ್ಪ ಅವರಿಗೆ ಇರಿಸು-ಮುರಿಸು ತಂದಿದೆ.

ವಿಷಯ ತಿಳಿಯುತ್ತಿದ್ದಂತೆ ಡಾ.ಪರಮೇಶ್ವರ್ ಹಾಗೂ ಡಾ.ಮಹದೇವಪ್ಪ ಈ ಎಲ್ಲಾ ಬೆಳವಣಿಗೆಗಳಿಂದ ದೂರ ಉಳಿದು ತಮ್ಮ ಜಿಲ್ಲಾ ಕೇಂದ್ರಗಳಲ್ಲೇ ಬಿಡಾರ ಹೂಡಿದ್ದಾರೆ. ಇದರ ಸುಳಿವರಿತ ಜಾರಕಿಹೊಳಿ ಕಳೆದ ಎರಡು ದಿನಗಳ ಹಿಂದೆ ತುಮಕೂರಿಗೆ ತೆರಳಿ ಡಾ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿದರು.

ಇಂದು ಮೈಸೂರಿಗೆ ತೆರಳಿ ಡಾ.ಮಹದೇವಪ್ಪ ಅವರೊಂದಿಗೆ ಚರ್ಚಿಸಿದ ಜಾರಕಿಹೊಳಿ ತಮ್ಮಲ್ಲಿನ ಒಗ್ಗಟ್ಟು ಕಾಪಾಡುವ ಹಾಗೂ ವಿಶ್ವಾಸ ಗಳಿಸುವಲ್ಲಿ ಪ್ರಯತ್ನ ಮುಂದುವರೆಸಿದ್ದಾರೆ. ಕಳೆದ ಎರಡು ದಿನಗಳಿಂದ ನಗರದಲ್ಲೇ ಬಿಡಾರ ಹೂಡಿದ್ದ ಜಾರಕಿಹೊಳಿ ಕೆಲವು ಸಚಿವರು ಮತ್ತು ಶಾಸಕರ ಜೊತೆಯೂ ಗೌಪ್ಯ ಮಾತುಕತೆ ನಡೆಸಿದ್ದರು.

ಸಿದ್ದರಾಮಯ್ಯ ಮಾತ್ರ ತಮಗೇನೂ ತಿಳಿದಿಲ್ಲ ಎನ್ನುವಂತಿದ್ದು, ಅಗತ್ಯ ಕಂಡುಬಂದಲ್ಲಿ ಪರ್ಯಾಯ ನಾಯಕತ್ವಕ್ಕೆ ವೇದಿಕೆ ಸಿದ್ಧ ಪಡಿಸುತ್ತಿದ್ದಾರೆ.
ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಂದೆ ಅವಕಾಶ ದೊರೆಯುವುದಾದರೆ ವರಿಷ್ಠರು ತಮ್ಮನ್ನು ಕೈಬಿಡುವುದಿಲ್ಲ ಎಂಬ ತುಂಬು ವಿಶ್ವಾಸದಲ್ಲಿದ್ದಾರೆ.

ಇದರ ನಡುವೆಯೇ ತಮ್ಮ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಮೂಲಕವೂ ಬಹಳ ಗೌಪ್ಯವಾಗಿ ತಮಗೆ ಅಧಿಕಾರ ತಪ್ಪದಂತೆ ಜಾಗ್ರತೆ ವಹಿಸಿದ್ದಾರೆ.
ಸುರೇಶ್ ನಿನ್ನೆ ಸತೀಶ್ ನಿವಾಸಕ್ಕೆ ತೆರಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ಮಾಡಿದ್ದಾರೆ. ಆದರೆ, ಮಾತುಕತೆ ವಿವರ ತಿಳಿದುಬಂದಿಲ್ಲ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
AlternativecrisisescalatesleadershipSiddaramaiahteam
0 FacebookTwitterPinterestEmail
KM Shivaraju

previous post
ಜಾತಿಗಣತಿ ಅನುಷ್ಠಾನಕ್ಕೆ ಒಕ್ಕಲಿಗರ ಸಂಘ ವಿರೋಧ
next post
ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಸಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ