Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜನಸಾಗರದೊಂದಿಗೆ ತೆರಳಿ ನಿಖಿಲ್ ನಾಮಪತ್ರ ಸಲ್ಲಿಕೆ

by admin October 25, 2024
written by admin October 25, 2024 0 comments 1 minutes read
Share 0FacebookTwitterPinterestEmail
235

ಚನ್ನಪಟ್ಟಣ:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಆಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಜೊತೆಗೂಡಿ ಅದ್ದೂರಿ ಮೆರವಣಿಗೆಯಲ್ಲಿ ತೆರಳಿ ನಿಖಿಲ್ ನಾಮಪತ್ರ ಸಲ್ಲಿಸಿದರು.

ದೇವಾಲಯಗಳಲ್ಲಿ ಪೂಜೆ

ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ತಮ್ಮ ತಾತ ಎಚ್.ಡಿ.ದೇವೇಗೌಡ ಹಾಗೂ ಕುಟುಂಬ ಸದಸ್ಯರೊಂದಿಗೆ ನಗರದ ವೆಂಕಟ ರಮಣಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಅಲ್ಲಿಂದ ತಮ್ಮ ತಂದೆ ಕುಮಾರಸ್ವಾಮಿ ಹಾಗೂ ಪತ್ನಿ ಜೊತೆಗೂಡಿ ಚನ್ನಪಟ್ಟಣದ ಕೆಂಗಲ್ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಬಿಜೆಪಿ ಹಿರಿಯ ಮುಖಂಡರಾದ ಡಿ.ವಿ.ಸದಾನಂದಗೌಡ, ಆರ್.ಅಶೋಕ್, ಡಾ.ಅಶ್ವತ್ಥನಾರಾಯಣ, ಸಂಸದರಾದ ಡಾ.ಕೆ.ಸುಧಾಕರ್, ಯಧುವೀರ ಒಡೆಯರ್ ಮತ್ತಿತರ ಗಣ್ಯರ ಜೊತೆ ಚನ್ನಪಟ್ಟಣದ ಹೊರವಲಯದ ಶೇರ್ವಾ ವೃತ್ತದಿಂದ ಜನಸಾಗರದೊಂದಿಗೆ ಬೃಹತ್ ಮೆರವಣಿಗೆಯಲ್ಲಿ ತೆರಳಿ ಚುನಾವಣಾಧಿಕಾರಿಯೂ ಆದ ತಹಸೀಲ್ದಾರ್ ಕಚೇರಿ ತಲುಪಿದರು.

ಬೃಹತ್ ರೋಡ್ ಶೋ

ರೋಡ್ ಶೋದಲ್ಲಿ ಜನಸಾಗರವೇ ಬಂದಿದ್ದರಿಂದ ಶೇರ್ವಾ ವೃತ್ತದಿಂದ ತಹಸೀಲ್ದಾರ್ ಕಚೇರಿ ಮುಟ್ಟಲು ಒಂದು ತಾಸಿಗೂ ಹೆಚ್ಚು ಸಮಯ ಹಿಡಿಯಿತು.

ನಂತರ ನಿಖಿಲ್ ಅವರು, ಸಂಸದ ಬಿ.ವೈ.ರಾಘವೇಂದ್ರ, ಸದಾನಂದ ಗೌಡ, ಕುಮಾರಸ್ವಾಮಿ ಹಾಗೂ ಪತ್ನಿ ಜೊತೆ ತೆರಳಿ ನಾಮಪತ್ರ ಸಲ್ಲಿಸಿದರು.

ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿ.ಪಿ.ಯೋಗೇಶ್ವರ್, ಗುರುವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂಡಿ ಅದ್ದೂರಿ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ್ದರು.

ಇಂದು ಎನ್‌ಡಿಎ ಮೈತ್ರಿಕೂಟದ ಕಾರ್ಯಕರ್ತರು, ಅಭ್ಯರ್ಥಿ ಹಾಗೂ ರಾಜ್ಯ ನಾಯಕರನ್ನು ಜಯಘೋಷದೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಕೊಂಡೊಯ್ದರು.

ಉಪಚುನಾವಣೆ : ರಾಜಕೀಯ ಬದಲಾವಣೆ ದಿಕ್ಸೂಚಿ
ಯೋಗೇಶ್ವರ್ ವಿರುದ್ಧ ಕಿಡಿ

ನಾಮಪತ್ರ ಸಲ್ಲಿಕೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ವಿ.ಸದಾನಂದ ಗೌಡ ಹಾಗೂ ಆರ್.ಅಶೋಕ್, ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ವಿರುದ್ಧ ಕಿಡಿಕಾರಿದರು.

ಸ್ವಾರ್ಥಕ್ಕಾಗಿ ರಾಜಕೀಯ ಮಾಡುವ ವ್ಯಕ್ತಿ ಯೋಗೇಶ್ವರ್ ಎಂದು ಬಣ್ಣಿಸಿದ ಗೌಡರು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಖಂಡರಿಗೆ ಮತ್ತೆ ಹಳೆಯ ನೆನಪು ತರಿಸಲಿದ್ದಾರೆ ಎಂದರು.

ಯೋಗೇಶ್ವರ್ ಆಧುನಿಕ ಭಗೀರಥ ಅಲ್ಲವೇ ಅಲ್ಲ, ನನ್ನ ಸಂಪುಟದಲ್ಲಿದ್ದ ಸಂದರ್ಭದಲ್ಲಿ ಕ್ಷೇತ್ರದ ಕೆರೆಗಳಿಗೆ ನೀರು ತರಲು ಹಣ ಬಿಡುಗಡೆ ಮಾಡಿದೆವು, ಅದು ಬಿಜೆಪಿ ಸರ್ಕಾರ ಮಾಡಿದ್ದೇ ಹೊರತು ಯೋಗೇಶ್ವರ್ ಅಲ್ಲ.

ಬೆಂಬಲ ಬೆಲೆಗೆ 11 ಜಿಲ್ಲೆಗಳಲ್ಲಿ ಶೇಂಗಾ ಖರೀದಿ
ಗೆಲುವಿಗೆ ಶ್ರಮಿಸುತ್ತೇವೆ

ಈ ವ್ಯಕ್ತಿಯ ಬಣ್ಣ ಕ್ಷೇತ್ರದ ಜನತೆಗೂ ಗೊತ್ತಿದೆ, ನಿಖಿಲ್ ಕುಮಾರಸ್ವಾಮಿ ಯಾವುದೇ ಸಂಶಯವಿಲ್ಲದೆ ಗೆದ್ದೇ ಗೆಲ್ಲುತ್ತಾರೆ, ನಾವು ಜೆಡಿಎಸ್ ಕಾರ್ಯಕರ್ತರ ಜೊತೆಗೂಡಿ ಅವರ ಗೆಲುವಿಗೆ ಶ್ರಮಿಸುತ್ತೇವೆ.

ನಿಖಿಲ್ ಜೆಡಿಎಸ್ ಅಭ್ಯರ್ಥಿ ಅಲ್ಲ, ಎನ್‌ಡಿಎ ಅಭ್ಯರ್ಥಿ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ ಎಂದರು.

Share this:

  • WhatsApp
  • Post
  • Tweet
  • Print
  • Email
by raghavendrachannapattana by-electiondv sadananda gowdahd devegowdahd kumara swamynikhil kumara swamy filed nominationr.ashokroad show
Share 0 FacebookTwitterPinterestEmail
admin

previous post
ಉಪಚುನಾವಣೆ : ರಾಜಕೀಯ ಬದಲಾವಣೆ ದಿಕ್ಸೂಚಿ
next post
ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಸಿದ್ದರಾಮಯ್ಯ ತಂತ್ರ !

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ