Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಶಕ್ತಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್

by KM Shivaraju October 31, 2024
written by KM Shivaraju October 31, 2024 0 comments 3 minutes read
0FacebookTwitterPinterestEmail
120

ಬೆಂಗಳೂರು: “ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಶಕ್ತಿ ಯೋಜನೆ ಮರುಪರಿಶೀಲನೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  “ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಗಳವರು , ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ತಾವು ಕೆಲಸ ಮಾಡುವ ಕಂಪನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ನಾನು ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ” ಎಂದು ತಿಳಿಸಿದರು.

ಶಕ್ತಿ ಯೋಜನೆ ನಿಲ್ಲಿಸಲು ಸರ್ಕಾರದ ಹುನ್ನಾರ : ಕುಮಾರಸ್ವಾಮಿ

“ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆ ಸೌಲಭ್ಯ ಬೇಡ ಎಂದು ಹೇಳುವವರಿಗೆ ಬಲವಂತ ಮಾಡಲು ಸಾಧ್ಯವೇ? ಅವರ ಸಂಖ್ಯೆ ಶೇಕಡಾ 7-8 ರಷ್ಟು ಇರಬಹುದು. ಹಿಂದೆ ಅಡುಗೆ ಅನಿಲಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಸ್ವಇಚ್ಛೆಯಿಂದ ಸಬ್ಸಿಡಿ ತ್ಯಜಿಸುವವರಿಗೆ ಅವಕಾಶ ನೀಡಿದರು. ಆ ರೀತಿ ಆಲೋಚನೆ ಮಾಡುವುದಾಗಿ ಹೇಳಿದ್ದೇನೆ.

ಕಾಂಗ್ರೆಸ್ ಅಧ್ಯಕ್ಷನಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ಐದೂ ಗ್ಯಾರಂಟಿ ಯೋಜನೆ ಮುಂದುವರಿಯುತ್ತವೆ. ಜನರಿಗೆ ಈ ಸೌಲಭ್ಯ ಮುಂದುವರಿಯಲಿದೆ. ಬೆಲೆ ಏರಿಕೆ ಸಮಸ್ಯೆ ನಿವಾರಿಸಿ ಜನರ ಬದುಕಿನಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಜನ ನಮಗೆ ಆಶೀರ್ವಾದ ಮಾಡುತ್ತಾರೆ. ಈಗಿನ ಅವಧಿ ಜತೆಗೆ ಮುಂದಿನ ಐದು ವರ್ಷದ ಅವಧಿಯೂ ಸೇರಿ ಒಟ್ಟು ಎಂಟೂವರೆ ವರ್ಷ ಈ ಯೋಜನೆ ಮುಂದುವರಿಯಲಿದೆ” ಎಂದು ತಿಳಿಸಿದರು.

ಮೀಸಲಾತಿ: ಎಡಗೈ-ಬಲಗೈಗೆ ಸಮಾನವಾಗಿ ಹಂಚಿಕೆ

ಯಾರಿಗೆ ಬೇಕೋ ಅವರು ಟಿಕೆಟ್ ಖರೀದಿ ಮಾಡಿ ಪ್ರಯಾಣ ಮಾಡಬಹುದಲ್ಲವೇ? ಪರಿಷ್ಕರಣೆ ಯಾಕೆ ಎಂದು ಕೇಳಿದಾಗ, “ಆ ರೀತಿ ಮಾಡಲು ಸಾರಿಗೆ ಸಿಬ್ಬಂದಿಗಳಿಗೆ ಸರ್ಕಾರ ಅನುಮತಿ ನೀಡಬೇಕಲ್ಲವೇ? ಇಲ್ಲದಿದ್ದರೆ ಕಂಡಕ್ಟರ್ ಗಳು ಮಹಿಳೆಯರಿಂದ ಹಣ ಪಡೆಯಲು ಹಿಂಜರಿಯುತ್ತಾರೆ. ನಾಳೆ ನೀವೇ ಹೇಳಬಹುದು, ಮಹಿಳೆಯರಿಂದ ಬಲವಂತವಾಗಿ ಹಣ ಕೀಳುತ್ತಿದ್ದಾರೆ ಎಂದು. ಹೀಗಾಗಿ ಕೆಲವು ಮಹಿಳಾ ಪ್ರಯಾಣಿಕರು ನೀಡಿರುವ ಸಲಹೆ ಬಗ್ಗೆ ನಾವು ಚರ್ಚೆ ಮಾಡಬೇಕಿದೆ. ಈ ವಿಚಾರದಲ್ಲಿ ಯಾವುದೇ ಆತುರವಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಅಸೂಯೆಯಿಂದ ಕುಮಾರಸ್ವಾಮಿ ಟೀಕೆ

ರಾಜ್ಯ ಸರ್ಕಾರ ದಿವಾಳಿಯಾಗುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದಲೇ ಸರ್ಕಾರ ಪತನವಾಗಲಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಈ ಗ್ಯಾರಂಟಿ ಯೋಜನೆಗಳನ್ನು ಕಂಡು ಕುಮಾರಸ್ವಾಮಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. “ಕಾಂಗ್ರೆಸ್ ನವರು 5 ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದಾರೆ. ನಿಮ್ಮ ಅಧಿಕಾರ ಅವಧಿಯಲ್ಲಿ ಇಂತಹ ಒಂದು ಯೋಜನೆ ಕೊಟ್ಟಿಲ್ಲ, ಬಡವರಿಗೆ ನಿವೇಶನ ಕೊಟ್ಟಿಲ್ಲ, ಊರು ಅಭಿವೃದ್ಧಿ ಮಾಡಿಲ್ಲ. ಹೀಗಾಗಿ ಯಾಕೆ ಮತ ಕೇಳುತ್ತೀರಿ ಎಂದು ಜನ ಅವರನ್ನು ಧಿಕ್ಕರಿಸುತ್ತಿದ್ದಾರೆ. ಅದನ್ನು ಸಹಿಸಲಾಗದೆ ನನಗೆ ಈ ಅವಕಾಶ ಸಿಗಲಿಲ್ಲವಲ್ಲ ಎಂದು ಕುಮಾರಸ್ವಾಮಿ ಅಸೂಯೆಯಿಂದ ತಮ್ಮ ಕೈ ಹಿಸುಕಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದರು.

ಇನ್ನೂ ಎಂಟೂವರೆ ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತ

ಆರು ತಿಂಗಳ ಒಳಗಾಗಿ ರಾಜ್ಯಪಾಲರ ಆಡಳಿತ ಬರಲಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರ ಬೀಳಿಸಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ಆದರೆ ಅದು ಅವರ ಹಣೆಯಲ್ಲಿ ಬರೆದಿಲ್ಲ. ಈ ವಿಶೇಷವಾದ ದಿನ ನೀವು ಬರೆದಿಟ್ಟುಕೊಳ್ಳಿ, ಮುಂದಿನ ಎಂಟೂವರೆ ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ನಡೆಸಲಿದೆ” ಎಂದು ಸ್ಪಷ್ಟಪಡಿಸಿದರು.

ಅತ್ಯುತ್ತಮ ಸಲಹೆ ನೀಡಿದ್ದಾರೆ

ಬೆಂಗಳೂರು ಅಭಿವೃದ್ಧಿ ಹಾಗೂ  ರಸ್ತೆ ವಿಚಾರವಾಗಿ ಉದ್ಯಮಿ ಕಿರಣ್ ಮಜೂಮ್ದಾರ್ ಶಾ ಅವರ ಜತೆಗಿನ ಚರ್ಚೆ ಬಗ್ಗೆ ಕೇಳಿದಾಗ, “ನಾನು ಚರ್ಚೆ ಮಾಡಿದ್ದೇನೆ, ಅಧಿಕಾರಿಗಳಿಗೂ ಅವರ ಜತೆ ಚರ್ಚೆ ಮಾಡುವಂತೆ ತಿಳಿಸಿದ್ದೆ. ಅವರು ಅನೇಕ ಸಲಹೆ ನೀಡಿದ್ದಾರೆ. ಕೆಲವು ಸಲಹೆ ಅತ್ಯುತ್ತಮವಾಗಿದ್ದು, ಅವುಗಳನ್ನು ನಾವು ಸ್ವೀಕರಿಸುತ್ತೇವೆ. ಅವರು ತಮ್ಮದೇ ಆದ ವರದಿ ಸಿದ್ಧಪಡಿಸಿಕೊಂಡು ನೀಡಿದ್ದಾರೆ” ಎಂದು ತಿಳಿಸಿದರು.

ಮುಡಾ ಹಗರಣ ದಾಖಲೆಗಳ ಕಳ್ಳತನ, ಮಾಯ !

ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದಲ್ಲಿ ಯಾವಾಗ ಭಾಗವಹಿಸುತ್ತೀರಿ ಎಂದು ಕೇಳಿದಾಗ, “ನಾನು ಹಾಗೂ ರಾಮಲಿಂಗಾ ರೆಡ್ಡಿ ಅವರು ಈಗಾಗಲೇ 25 ಬಾರಿj ಹೋಗಿ ಬಂದಿದ್ದೇವೆ. ನಾವು ಒಂದೊಂದು ದಿನ ಮಾತ್ರ ಜಂಟಿ ಪ್ರಚಾರ ಮಾಡುತ್ತೇವೆ. ಇತರ ದಿನಗಳಲ್ಲಿ ನಮ್ಮ ನಾಯಕರು ಪ್ರಚಾರ ಮಾಡುತ್ತಾರೆ” ಎಂದು ತಿಳಿಸಿದರು.

ಬಿಜೆಪಿಗೆ ರಾಜಕೀಯ ಮಾಡಲು ಬೇರೆ ವಿಚಾರ ಇಲ್ಲ

ಸರ್ಕಾರದ ಸ್ಪಷ್ಟನೆ ಹೊರತಾಗಿಯೂ ಬಿಜೆಪಿ ವಕ್ಫ್ ವಿಚಾರದಲ್ಲಿ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರದ ವಿರುದ್ಧ ಟೀಕೆ ಮಾಡಲು ಬಿಜೆಪಿಯವರ ಬಳಿ ವಿಚಾರಗಳಿಲ್ಲ. ಹೀಗಾಗಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರ ಕಾಲದಲ್ಲೇ ಮೊದಲು ನೋಟೀಸ್ ನೀಡಲಾಗಿದೆ. ಕೋಮು ಗಲಭೆ ಸೃಷ್ಟಿಸಿ, ದೇಶ ಹಾಗೂ  ರಾಜ್ಯ ಒಡೆಯಬೇಕು ಎಂಬುದು ಅವರ ಉದ್ದೇಶ” ಎಂದು ತಿಳಿಸಿದರು.

ಪ್ರಿಯಾಂಕಾ ಗಾಂಧಿ ಕೂಡ ವಯನಾಡಿಗೆ ವಲಸಿಗರು ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರಾಗಲಿ, ಅವರ ಗೌಡರ ಕುಟುಂಬದವರಾಗಲಿ ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಹೊಂದಿಲ್ಲ. ಗಾಂಧಿ ಕುಟುಂಬ ದೇಶವನ್ನು ಒಂದಾಗಿ ಇಟ್ಟಿದೆ. ಆ ಕುಟುಂಬದ ಕೊಡುಗೆಯನ್ನು ಸರಿದೂಗಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ದಕ್ಷಿಣ ಭಾರತವನ್ನು ಪ್ರತಿನಿಧಿಸಿದ್ದರು” ಎಂದು ತಿಳಿಸಿದರು.

 


Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcmdistortedDKFree busGuarantee Schemesmisinterpretedno questionShakti YojanaShivakumarstatementstoppingTravel
0 FacebookTwitterPinterestEmail
KM Shivaraju

previous post
ಶಕ್ತಿ ಯೋಜನೆ ನಿಲ್ಲಿಸಲು ಸರ್ಕಾರದ ಹುನ್ನಾರ : ಕುಮಾರಸ್ವಾಮಿ
next post
ವಕ್ಫ್ ವಿರುದ್ಧ ನವೆಂಬರ್ 4 ರಿಂದ ಬಿಜೆಪಿ ಹೋರಾಟ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ