Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ

by admin November 1, 2024
written by admin November 1, 2024 0 comments 3 minutes read
Share 0FacebookTwitterPinterestEmail
85

ಸಂಸದರು ಸಂಸತ್ತಿನಲ್ಲಿ ಪ್ರತಿಭಟಿಸಬೇಕು: ಸಿದ್ದರಾಮಯ್ಯ

ಬೆಂಗಳೂರು:ಅನುದಾನ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಭಾರೀ ತಾರತಮ್ಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಕಿಡಿಕಾರಿದ್ದಾರೆ.

ಮಹಾರಾಷ್ಟ್ರ ನಂತರ ಕರ್ನಾಟಕವೇ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕೊಡುವ ರಾಜ್ಯ, ನಾವು 4 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ತೆರಿಗೆ ಕೊಟ್ಟರೂ ನಮಗೆ ಹಿಂತಿರುಗಿ ಬರುತ್ತಿರುವುದು ಕೇವಲ 50 ರಿಂದ 60,000 ಕೋಟಿ ರೂ. ಮಾತ್ರ.

ಒಂದು ರೂ.ಗೆ 15 ಪೈಸೆ

ಹದಿನೈದನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಆದ ಅನ್ಯಾಯವನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ, ಒಂದು ರೂ.ಗೆ ಕೇವಲ 14ರಿಂದ 15 ಪೈಸೆ ಮಾತ್ರ ನಮಗೆ ಹಿಂತಿರುಗಿ ಬರುತ್ತಿದೆ.

ಹಸುವಿನ ಹಾಲನ್ನು ಅದರ ಕರುವಿಗೂ ಉಣಿಸದಿದ್ದರೆ, ಆ ಕರು ಹೇಗೆ ಬಲಿಷ್ಠವಾಗಲು ಸಾಧ್ಯ ಎಂದು ತಮ್ಮದೇ ದಾಟಿಯಲ್ಲಿ ವ್ಯಾಖ್ಯಾನ ಮಾಡುವ ಮೂಲಕ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಶಾಲಾ ಮಕ್ಕಳನ್ನು ಉದ್ದೇಶಿಸಿ ಮಾತನಾಡುವ ವೇಳೆ ಅಂಕಿ-ಅಂಶಗಳನ್ನು ಮುಂದಿಟ್ಟು ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದರು.

ವಕ್ಫ್ ಆಸ್ತಿ ಗೆಜೆಟ್ ಪ್ರಕಟಣೆ ರದ್ದು ಮಾಡಬೇಕು
ನಮ್ಮ ಹಕ್ಕನ್ನು ಕೇಳಬೇಕಿದೆ

ನಾವು ಮುಂದುವರೆದ ರಾಜ್ಯ ಎಂದು ತೆರಿಗೆ ಪಾಲಿನಲ್ಲಿ ಅನ್ಯಾಯ ಮಾಡುತ್ತಾರೆ, ಕನ್ನಡಿಗರಾದ ನಾವೆಲ್ಲರೂ, ಇವರ ಮಲತಾಯಿ ದೋರಣೆ ಅರ್ಥ ಮಾಡಿಕೊಂಡು ನಮ್ಮ ಹಕ್ಕನ್ನು ಕೇಳಬೇಕಿದೆ.

ರಾಜ್ಯದ ಎಲ್ಲಾ ಸಂಸದರು, ಸಂಸತ್ತಿನ ಉಭಯ ಸದನಗಳಲ್ಲೂ ಧ್ವನಿ ಎತ್ತಿ ಪ್ರತಿಭಟಿಸಿದರೆ, ಕನ್ನಡಿಗರಿಗೆ ನ್ಯಾಯ ಸಿಗುತ್ತದೆ ಎಂದರು.

ಈಗಲಾದರೂ ನಮ್ಮ ಸಂಸದರು, ವಿಷಯ ಪ್ರಸ್ತಾಪಿಸಿ, ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ಕೊಡಿಸುವ ಶಕ್ತಿ ಅವರಿಗೆ ಬರಲಿ ಎಂದು ಮಕ್ಕಳ ಮುಂದೆ ಹೇಳಿಕೊಂಡರು.

ಮೊದಲು ಕನ್ನಡಿಗರಾಗಿ

ಕನ್ನಡ ಭಾಷೆ ಉಳಿಸಿ, ಬೆಳೆಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡ ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣ ನಿರ್ಮಿಸಿ ಎಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಕರೆ ನೀಡಿದರು.

ಕರ್ನಾಟಕ ರಾಜ್ಯ ಏಕೀಕರಣಗೊಂಡು 68 ವರ್ಷಗಳು ಕಳೆದಿವೆ, 1953ರಲ್ಲಿ ಫಜಲ್ ಅಲಿ ಅಧ್ಯಕ್ಷತೆಯಲ್ಲಿ ರಾಜ್ಯ ಪುನರ್ವಿಂಗಡಣಾ ಆಯೋಗ ರಚನೆಯಾಯಿತು, ಆಯೋಗದ ವರದಿ ಆಧರಿಸಿ ರಾಜ್ಯಗಳನ್ನು ಭಾಷಾವಾರು ವಿಂಗಡಣೆ ಮಾಡಲಾಯಿತು,1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು.

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಆಡಳಿತಾವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ, ಕರ್ನಾಟಕವೆಂದು ಮರುನಾಮಕರಣಗೊಂಡಿತು.

ನಿಖಿಲ್ ಪರ ಸೋಮವಾರದಿಂದ ದೇವೇಗೌಡರ ಪ್ರಚಾರ
ಬಿಜೆಪಿ ಸರ್ಕಾರ ಸಂಭ್ರಮಿಸಲಿಲ್ಲ

ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ಸಂದಿವೆ, ಈ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಸಂಭ್ರಮಿಸಲಿಲ್ಲ, ಆದರೆ 2023ರ ನವೆಂಬರ್ 1 ರಂದು 51ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಲು ನಿರ್ಧರಿಸಲಾಯಿತು.

ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು ‘ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡ ಭಾಷಾಭಿಮಾನವನ್ನು ಸಂಭ್ರಮಿಸಲಾಯಿತು.

ಮಾತೃಭಾಷೆ ಕನ್ನಡವನ್ನು ವ್ಯವಹಾರಿಕವಾಗಿ ಬಳಸುವುದರ ಜೊತೆಗೆ, ಇತರರೊಂದಿಗೂ ಕನ್ನಡದಲ್ಲಿಯೇ ಮಾತನಾಡುವಂತೆ ಶಪಥ ಮಾಡಬೇಕು, ಕನ್ನಡೇತರರಿಗೆ ಕನ್ನಡ ಕಲಿಸಲು ಪ್ರಯತ್ನಿಸಬೇಕು, ಕನ್ನಡ ರಾಜ್ಯದ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ, ಯಾವುದೇ ಜಾತಿ, ಧರ್ಮ, ಭಾಷೆಯವರಾದರೂ ಇಲ್ಲಿ ವಾಸಿಸುವವರು ಕನ್ನಡಿಗರೇ ಆಗುತ್ತಾರೆ.

ಭಾಷೆ ಬಲಿಕೊಟ್ಟು ಉದಾರಿಗಳಾಗಬೇಡಿ

ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ, ಕನ್ನಡ ಬಹಳ ಪ್ರಾಚೀನ ಭಾಷೆಯಾಗಿದೆ, ಆದ್ದರಿಂದಲೇ ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ದೊರೆತಿದೆ, ಭಾಷೆ ಬಲಿಕೊಟ್ಟು ಉದಾರಿಗಳಾಗಬಾರದು, ಭಾಷೆ ಬಗ್ಗೆ ದುರಾಭಿಮಾನ ಬೆಳೆಸಿಕೊಳ್ಳದೇ, ಅಭಿಮಾನಗಳಾಗಬೇಕು.

ಕನ್ನಡ ಭಾಷೆ ಉಳಿಸಿ, ಬೆಳೆಸಲು ಮೊದಲು ಕನ್ನಡಿಗರಾಗಿ, ಬೇರೆ ಭಾಷೆ ಕಲಿಯಬೇಡಿ ಎನ್ನುತ್ತಿಲ್ಲ, ಬೇರೆ ಭಾಷಾ ಸಂಪತ್ತನ್ನೂ ಬೆಳೆಸಿಕೊಳ್ಳಿ, ಆದರೆ ಕನ್ನಡದಲ್ಲಿ ಮಾತನಾಡುವುದನ್ನು ಮರೆಯಬೇಡಿ, ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಉತ್ತಮ ಎಂದು ಮಹಾತ್ಮಾ ಗಾಂಧಿ ಹೇಳಿದ್ದಾರೆ.

ವಿರೋಧ ಪಕ್ಷದವರಿಗೆ ಮನೆ ಒಡೆಯುವುದೇ ಕೆಲಸ
ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ

ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ, ಕನ್ನಡಿಗರನ್ನು ಹಿಯ್ಯಾಳಿಸುವ ಪ್ರವೃತ್ತಿ ಕಂಡುಬರುತ್ತಿದೆ, ಇದು ನಾಡದ್ರೋಹವೆಂದು ಪರಿಗಣಿಸಿ, ಅಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ ಹಾಗೂ ಚಿಕ್ಕಿ ನೀಡಲಾಗುತ್ತಿದೆ, ಮಕ್ಕಳಿಗೆ ಹಾಲಿನ ಜೊತೆ ಸಾಯಿ ಅನ್ನಪೂರ್ಣ ಸಂಸ್ಥೆ ಸಹಯೋಗದೊಂದಿಗೆ ರಾಗಿಮಾಲ್ಟ್ ಸಹಾ ನೀಡಲಾಗುತ್ತಿದೆ, ಬಡವರ ಮಕ್ಕಳು ಅಪೌಷ್ಠಿಕತೆಯಿಂದ ಬಳಲಬಾರದು, ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬುದು ಸರ್ಕಾರದ ಉದ್ದೇಶ ಎಂದರು.

ಈ ಸಂದರ್ಭದಲ್ಲಿ ಕನ್ನಡ ದೀವಿಗೆ ಪುಸ್ತಕ ಬಿಡುಗಡೆ ಮಾಡಿದರು.

ಸಿದ್ದರಾಮಯ್ಯ, ಶಿವಕುಮಾರ್‌ಗೆ ಖರ್ಗೆ ತರಾಟೆ ಸರಿ

Share this:

  • WhatsApp
  • Post
  • Tweet
  • Print
  • Email
all mp should protestcentral tax policy not faircm siddaramaiahkannada very old language
Share 0 FacebookTwitterPinterestEmail
admin

previous post
ವಕ್ಫ್ ಆಸ್ತಿ ಗೆಜೆಟ್ ಪ್ರಕಟಣೆ ರದ್ದು ಮಾಡಬೇಕು
next post
ಅಟ್ಟದ ಮೇಲೆ ಕೂರುತ್ತಾರಾ ಸಂತೋಷ್ ?

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ