Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ

by admin November 1, 2024
written by admin November 1, 2024 0 comments 3 minutes read
0FacebookTwitterPinterestEmail
159

ಸಂಸದರು ಸಂಸತ್ತಿನಲ್ಲಿ ಪ್ರತಿಭಟಿಸಬೇಕು: ಸಿದ್ದರಾಮಯ್ಯ

ಬೆಂಗಳೂರು:ಅನುದಾನ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಭಾರೀ ತಾರತಮ್ಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಕಿಡಿಕಾರಿದ್ದಾರೆ.

ಮಹಾರಾಷ್ಟ್ರ ನಂತರ ಕರ್ನಾಟಕವೇ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕೊಡುವ ರಾಜ್ಯ, ನಾವು 4 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ತೆರಿಗೆ ಕೊಟ್ಟರೂ ನಮಗೆ ಹಿಂತಿರುಗಿ ಬರುತ್ತಿರುವುದು ಕೇವಲ 50 ರಿಂದ 60,000 ಕೋಟಿ ರೂ. ಮಾತ್ರ.

ಒಂದು ರೂ.ಗೆ 15 ಪೈಸೆ

ಹದಿನೈದನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಆದ ಅನ್ಯಾಯವನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ, ಒಂದು ರೂ.ಗೆ ಕೇವಲ 14ರಿಂದ 15 ಪೈಸೆ ಮಾತ್ರ ನಮಗೆ ಹಿಂತಿರುಗಿ ಬರುತ್ತಿದೆ.

ಹಸುವಿನ ಹಾಲನ್ನು ಅದರ ಕರುವಿಗೂ ಉಣಿಸದಿದ್ದರೆ, ಆ ಕರು ಹೇಗೆ ಬಲಿಷ್ಠವಾಗಲು ಸಾಧ್ಯ ಎಂದು ತಮ್ಮದೇ ದಾಟಿಯಲ್ಲಿ ವ್ಯಾಖ್ಯಾನ ಮಾಡುವ ಮೂಲಕ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಶಾಲಾ ಮಕ್ಕಳನ್ನು ಉದ್ದೇಶಿಸಿ ಮಾತನಾಡುವ ವೇಳೆ ಅಂಕಿ-ಅಂಶಗಳನ್ನು ಮುಂದಿಟ್ಟು ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದರು.

ವಕ್ಫ್ ಆಸ್ತಿ ಗೆಜೆಟ್ ಪ್ರಕಟಣೆ ರದ್ದು ಮಾಡಬೇಕು
ನಮ್ಮ ಹಕ್ಕನ್ನು ಕೇಳಬೇಕಿದೆ

ನಾವು ಮುಂದುವರೆದ ರಾಜ್ಯ ಎಂದು ತೆರಿಗೆ ಪಾಲಿನಲ್ಲಿ ಅನ್ಯಾಯ ಮಾಡುತ್ತಾರೆ, ಕನ್ನಡಿಗರಾದ ನಾವೆಲ್ಲರೂ, ಇವರ ಮಲತಾಯಿ ದೋರಣೆ ಅರ್ಥ ಮಾಡಿಕೊಂಡು ನಮ್ಮ ಹಕ್ಕನ್ನು ಕೇಳಬೇಕಿದೆ.

ರಾಜ್ಯದ ಎಲ್ಲಾ ಸಂಸದರು, ಸಂಸತ್ತಿನ ಉಭಯ ಸದನಗಳಲ್ಲೂ ಧ್ವನಿ ಎತ್ತಿ ಪ್ರತಿಭಟಿಸಿದರೆ, ಕನ್ನಡಿಗರಿಗೆ ನ್ಯಾಯ ಸಿಗುತ್ತದೆ ಎಂದರು.

ಈಗಲಾದರೂ ನಮ್ಮ ಸಂಸದರು, ವಿಷಯ ಪ್ರಸ್ತಾಪಿಸಿ, ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ಕೊಡಿಸುವ ಶಕ್ತಿ ಅವರಿಗೆ ಬರಲಿ ಎಂದು ಮಕ್ಕಳ ಮುಂದೆ ಹೇಳಿಕೊಂಡರು.

ಮೊದಲು ಕನ್ನಡಿಗರಾಗಿ

ಕನ್ನಡ ಭಾಷೆ ಉಳಿಸಿ, ಬೆಳೆಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡ ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣ ನಿರ್ಮಿಸಿ ಎಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಕರೆ ನೀಡಿದರು.

ಕರ್ನಾಟಕ ರಾಜ್ಯ ಏಕೀಕರಣಗೊಂಡು 68 ವರ್ಷಗಳು ಕಳೆದಿವೆ, 1953ರಲ್ಲಿ ಫಜಲ್ ಅಲಿ ಅಧ್ಯಕ್ಷತೆಯಲ್ಲಿ ರಾಜ್ಯ ಪುನರ್ವಿಂಗಡಣಾ ಆಯೋಗ ರಚನೆಯಾಯಿತು, ಆಯೋಗದ ವರದಿ ಆಧರಿಸಿ ರಾಜ್ಯಗಳನ್ನು ಭಾಷಾವಾರು ವಿಂಗಡಣೆ ಮಾಡಲಾಯಿತು,1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು.

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಆಡಳಿತಾವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ, ಕರ್ನಾಟಕವೆಂದು ಮರುನಾಮಕರಣಗೊಂಡಿತು.

ನಿಖಿಲ್ ಪರ ಸೋಮವಾರದಿಂದ ದೇವೇಗೌಡರ ಪ್ರಚಾರ
ಬಿಜೆಪಿ ಸರ್ಕಾರ ಸಂಭ್ರಮಿಸಲಿಲ್ಲ

ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ಸಂದಿವೆ, ಈ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಸಂಭ್ರಮಿಸಲಿಲ್ಲ, ಆದರೆ 2023ರ ನವೆಂಬರ್ 1 ರಂದು 51ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಲು ನಿರ್ಧರಿಸಲಾಯಿತು.

ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು ‘ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡ ಭಾಷಾಭಿಮಾನವನ್ನು ಸಂಭ್ರಮಿಸಲಾಯಿತು.

ಮಾತೃಭಾಷೆ ಕನ್ನಡವನ್ನು ವ್ಯವಹಾರಿಕವಾಗಿ ಬಳಸುವುದರ ಜೊತೆಗೆ, ಇತರರೊಂದಿಗೂ ಕನ್ನಡದಲ್ಲಿಯೇ ಮಾತನಾಡುವಂತೆ ಶಪಥ ಮಾಡಬೇಕು, ಕನ್ನಡೇತರರಿಗೆ ಕನ್ನಡ ಕಲಿಸಲು ಪ್ರಯತ್ನಿಸಬೇಕು, ಕನ್ನಡ ರಾಜ್ಯದ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ, ಯಾವುದೇ ಜಾತಿ, ಧರ್ಮ, ಭಾಷೆಯವರಾದರೂ ಇಲ್ಲಿ ವಾಸಿಸುವವರು ಕನ್ನಡಿಗರೇ ಆಗುತ್ತಾರೆ.

ಭಾಷೆ ಬಲಿಕೊಟ್ಟು ಉದಾರಿಗಳಾಗಬೇಡಿ

ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ, ಕನ್ನಡ ಬಹಳ ಪ್ರಾಚೀನ ಭಾಷೆಯಾಗಿದೆ, ಆದ್ದರಿಂದಲೇ ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ದೊರೆತಿದೆ, ಭಾಷೆ ಬಲಿಕೊಟ್ಟು ಉದಾರಿಗಳಾಗಬಾರದು, ಭಾಷೆ ಬಗ್ಗೆ ದುರಾಭಿಮಾನ ಬೆಳೆಸಿಕೊಳ್ಳದೇ, ಅಭಿಮಾನಗಳಾಗಬೇಕು.

ಕನ್ನಡ ಭಾಷೆ ಉಳಿಸಿ, ಬೆಳೆಸಲು ಮೊದಲು ಕನ್ನಡಿಗರಾಗಿ, ಬೇರೆ ಭಾಷೆ ಕಲಿಯಬೇಡಿ ಎನ್ನುತ್ತಿಲ್ಲ, ಬೇರೆ ಭಾಷಾ ಸಂಪತ್ತನ್ನೂ ಬೆಳೆಸಿಕೊಳ್ಳಿ, ಆದರೆ ಕನ್ನಡದಲ್ಲಿ ಮಾತನಾಡುವುದನ್ನು ಮರೆಯಬೇಡಿ, ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಉತ್ತಮ ಎಂದು ಮಹಾತ್ಮಾ ಗಾಂಧಿ ಹೇಳಿದ್ದಾರೆ.

ವಿರೋಧ ಪಕ್ಷದವರಿಗೆ ಮನೆ ಒಡೆಯುವುದೇ ಕೆಲಸ
ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ

ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ, ಕನ್ನಡಿಗರನ್ನು ಹಿಯ್ಯಾಳಿಸುವ ಪ್ರವೃತ್ತಿ ಕಂಡುಬರುತ್ತಿದೆ, ಇದು ನಾಡದ್ರೋಹವೆಂದು ಪರಿಗಣಿಸಿ, ಅಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ ಹಾಗೂ ಚಿಕ್ಕಿ ನೀಡಲಾಗುತ್ತಿದೆ, ಮಕ್ಕಳಿಗೆ ಹಾಲಿನ ಜೊತೆ ಸಾಯಿ ಅನ್ನಪೂರ್ಣ ಸಂಸ್ಥೆ ಸಹಯೋಗದೊಂದಿಗೆ ರಾಗಿಮಾಲ್ಟ್ ಸಹಾ ನೀಡಲಾಗುತ್ತಿದೆ, ಬಡವರ ಮಕ್ಕಳು ಅಪೌಷ್ಠಿಕತೆಯಿಂದ ಬಳಲಬಾರದು, ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬುದು ಸರ್ಕಾರದ ಉದ್ದೇಶ ಎಂದರು.

ಈ ಸಂದರ್ಭದಲ್ಲಿ ಕನ್ನಡ ದೀವಿಗೆ ಪುಸ್ತಕ ಬಿಡುಗಡೆ ಮಾಡಿದರು.

ಸಿದ್ದರಾಮಯ್ಯ, ಶಿವಕುಮಾರ್‌ಗೆ ಖರ್ಗೆ ತರಾಟೆ ಸರಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
all mp should protestcentral tax policy not faircm siddaramaiahkannada very old language
0 FacebookTwitterPinterestEmail
admin

previous post
ವಕ್ಫ್ ಆಸ್ತಿ ಗೆಜೆಟ್ ಪ್ರಕಟಣೆ ರದ್ದು ಮಾಡಬೇಕು
next post
ಅಟ್ಟದ ಮೇಲೆ ಕೂರುತ್ತಾರಾ ಸಂತೋಷ್ ?

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ