Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು

by admin November 22, 2024
written by admin November 22, 2024 0 comments 2 minutes read
Share 0FacebookTwitterPinterestEmail
123

ನವದೆಹಲಿ:ಗ್ಯಾರಂಟಿ ಯೋಜನೆಗಳ ಈಡೇರಿಕೆ ಸಾಧ್ಯವಾಗದೆ ಬಡವರ ಮೇಲೆ ಪ್ರಹಾರ ಮಾಡುವುದನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಬಿಪಿಎಲ್ ಕಾರ್ಡ್ ವಿಷಯದಲ್ಲಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ, ಅನರ್ಹರ ಕಾರ್ಡ್ ಬದಲಿಸಲು ಆಕ್ಷೇಪವಿಲ್ಲ, ಆದರೆ, ಸಮರ್ಪಕ ಮಾನದಂಡವೇ ಇಲ್ಲದೆ ಪ್ಯಾನ್‌ಕಾರ್ಡ್, ಆದಾಯ ತೆರಿಗೆ ವಿಚಾರಗಳನ್ನು ಮುಂದಿಟ್ಟುಕೊಂಡು 10ರಿಂದ 20 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ವಜಾ ಮಾಡಿದೆ.

ಹಣ ಉಳಿತಾಯ ಕುತಂತ್ರ

ಬಿಪಿಎಲ್ ಕಾರ್ಡ್‌ಗೆ ಕತ್ತರಿ ಹಾಕಿದರೆ, ಗೃಹಲಕ್ಷ್ಮಿ ಹಣ ಉಳಿತಾಯ ಉಳಿತಾಯ ಆಗುತ್ತದೆ, 5 ಕೆಜಿ ಅಕ್ಕಿಗೆ ಕೊಡುವ ಹಣವೂ ಉಳಿಯಲಿದೆ, ಸಾವಿರಾರು ಕೋಟಿ ರೂ. ಉಳಿತಾಯಕ್ಕಾಗಿ ಈ ಕುತಂತ್ರಕ್ಕೆ ಮುಂದಾಗಿದ್ದಾರೆ.

ಬಿಪಿಎಲ್ ಕಾರ್ಡ್ ರದ್ದು ಮಾಡಿ ವಂಚನೆ ಮಾಡುವ ಸರ್ಕಾರ ಇದು, ಮನುಷ್ಯತ್ವ ಇದ್ದಿದ್ದರೆ ಬಡವರಿಗೆ ಬರೆ ಎಳೆಯಲು ಮುಂದಾಗುತ್ತಿರಲಿಲ್ಲ.

ಭರವಸೆ ಈಡೇರಿಸಲು ಸಾಧ್ಯವಾಗದೆ, ಹಣ ಕ್ರೋಡೀಕರಣ ಮಾಡಲಾಗದೆ ಮುಖ್ಯಮಂತ್ರಿ ಅಸಹಾಯಕರಾಗಿ ಭಾಗ್ಯಲಕ್ಷ್ಮಿ ಯೋಜನೆಗೆ ಕತ್ತರಿ ಹಾಕಿದ್ದಾರೆ, ಹಾಲಿನ ಪ್ರೋತ್ಸಾಹಧನ ಸುಮಾರು ಒಂದು ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಬಾಕಿ ಇದೆ, ಯಡಿಯೂರಪ್ಪ ಆಡಳಿತದಲ್ಲಿ ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆಯ 4 ಸಾವಿರ ರೂ. ನಿಲ್ಲಿಸಿದ್ದಾರೆ.

ಕೇಂದ್ರದ ವಿರುದ್ಧ ದೂರು

ಸಿದ್ದರಾಮಯ್ಯ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ, ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ, ತಮ್ಮ ಹುಳುಕು ಮುಚ್ಚಿ ಹಾಕಲು ಎಲ್ಲ ವಿಚಾರದಲ್ಲೂ ಕೇಂದ್ರ ಸರ್ಕಾರವನ್ನು ದೂರುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಭ್ರಷ್ಟಾಚಾರ ವಿರುದ್ಧ ಮಾತನಾಡುತ್ತಾರೆ, ಕಾಂಗ್ರೆಸ್ ಆಡಳಿತದಲ್ಲಿ ವಾಲ್ಮೀಕಿ ನಿಗಮದ ಹಗರಣ ನಡೆದಿದೆ, ನೂರಾರು ಕೋಟಿ ರೂ. ಕೊಳ್ಳೆ ಹೊಡೆದು ಚುನಾವಣೆ ನಡೆಸಿ, ತನಿಖೆ ಎದುರಿಸುತ್ತಿದ್ದಾರೆ.

ಹಗರಣದ ಹಿನ್ನೆಲೆಯಲ್ಲಿ ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದಿದ್ದಾರೆ, 600 ಕೋಟಿ ರೂ. ಲಿಕ್ಕರ್ ಹಗರಣ ಬೆಳಕಿಗೆ ಬರುತ್ತಿದೆ, ಸ್ವತಃ ಮುಖ್ಯಮಂತ್ರಿಯೇ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.

ಚನ್ನಪಟ್ಟಣ ಸಮೀಕ್ಷೆ ತಲೆಕೆಳಗಾಗಿ ಕಾಂಗ್ರೆಸ್ ಗೆಲ್ಲುತ್ತೆ
ಪ್ರಾಮಾಣಿಕ ತನಿಖೆ ನಡೆದಿಲ್ಲ

ಮೈಸೂರಿನ ಮುಡಾ ಹಗರಣದಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗುವಂತೆ ತನಿಖಾ ಸಮಿತಿ, ಆಯೋಗ ನೇಮಿಸಲಾಗುತ್ತಿದೆ, ಲೋಕಾಯುಕ್ತ ದುರುಪಯೋಗ ಮಾಡುತ್ತಿದ್ದಾರೆ, ಸಚಿವ ಬೈರತಿ ಸುರೇಶ್ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ಹೋದದ್ದು, ಅಮಾನತು ಆಗಬೇಕಾದ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ವೆಂಕಟಾಚಲಪತಿ ಆಯೋಗದಿಂದ ತನಿಖೆ, ದಾಖಲಾತಿ ಭಸ್ಮ ಮಾಡಲಾಗಿದೆ, ಪ್ರಾಮಾಣಿಕ ತನಿಖೆ ನಡೆದಿಲ್ಲ ಎಂದರು.

ಮುಖ್ಯಮಂತ್ರಿ ಅವರ ಬಾಮೈದ, ಲೋಕಾಯುಕ್ತ ಅಧಿಕಾರಿಗಳನ್ನು ರಾತ್ರೋರಾತ್ರಿ ಭೇಟಿ ಮಾಡಿದ್ದಾರೆ, ಆರೋಪಿ ನಂ.1 ಸ್ಥಾನದಲ್ಲಿರುವ ಸಿದ್ದರಾಮಯ್ಯ ನಿಜವಾಗಿ ಪ್ರಾಮಾಣಿಕರಾಗಿದ್ದರೆ, ಮುಖ್ಯಮಂತ್ರಿ ಸ್ಥಾನದ ಘನತೆ, ಗೌರವ ಉಳಿಸುವ ಕಾಳಜಿ ಕಿಂಚಿತ್ತಾದರೂ ಇದ್ದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು.

ಅಧಿಕಾರ ದುರುಪಯೋಗ ಪಡಿಸಿಕೊಂಡು ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹೇರಿ, ಅವರಿಗೆ ಬೇಕಾದಂತ ವರದಿ, ಕ್ಲೀನ್‌ಚಿಟ್ ಪಡೆಯುವ ಪ್ರಯತ್ನವನ್ನು ಸ್ವತಃ ಮುಖ್ಯಮಂತ್ರಿ ಮಾಡುತ್ತಿದ್ದಾರೆ, ಶೀಘ್ರದಲ್ಲೇ ಕ್ಲೀನ್ ಚಿಟ್ ಸಿಗಲಿದೆ ಎಂದರು.

ನಬಾರ್ಡ್ ವಿಷಯದಲ್ಲಿ ಕಪಟ ನಾಟಕ

ನಬಾರ್ಡ್ ವಿಷಯದಲ್ಲಿ ಸಿದ್ದರಾಮಯ್ಯನವರು ಕಪಟ ನಾಟಕ ಮಾಡುತ್ತಿದ್ದಾರೆ, ಹಣಕಾಸಿನ ಖಾತೆಯನ್ನೂ ಹೊಂದಿರುವ ಅವರು, ಕೇಂದ್ರ ಸರ್ಕಾರದಿಂದ ಬರುವ ಹಣದ ಕುರಿತು ಜನರಿಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ.

ಬ್ಯಾಂಕ್‌ಗಳು ಶೇ. 40ರಷ್ಟು ಮೊತ್ತವನ್ನು ಆದ್ಯತಾ ವಲಯವಾದ ಕೃಷಿ ಕ್ಷೇತ್ರಕ್ಕೆ ಕೊಡುತ್ತಿರುವುದು ಸಿದ್ದರಾಮಯ್ಯನವರಿಗೆ ತಿಳಿದಿಲ್ಲವೇ, ಹಿಂದೆಂದೂ ಈ ಪ್ರಮಾಣದಲ್ಲಿ ನೀಡುತ್ತಿರಲಿಲ್ಲ, ಶೇ.58 ಕಡಿತ ಆಗಿದೆ ಎನ್ನುತ್ತಾರೆ, ಗುಜರಾತ್ ಸೇರಿ ಅನೇಕ ರಾಜ್ಯಗಳಿಗೂ ಇದೇ ರೀತಿ ಕಡಿತ ಮಾಡಲಾಗಿದೆ, ಎಲ್ಲ ಸತ್ಯ ಗೊತ್ತಿದ್ದರೂ ನಬಾರ್ಡ್‌ನಿಂದ ಅನ್ಯಾಯ ಆಗುತ್ತಿದೆ ಎಂಬುದಾಗಿ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದು, ಇಂತಹ ಹೇಳಿಕೆಗಳಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ಬರುವುದಿಲ್ಲ ಎಂದರು.

ಕಾಂಗ್ರೆಸ್ ಸರರ್ಕಾರ ಉರುಳಿಸುವಲ್ಲಿ ಬಿಜೆಪಿ, ಆಸಕ್ತಿ ಹೊಂದಿಲ್ಲ, ನಿಮ್ಮ ನಡವಳಿಕೆಯಿಂದ ಕಾಂಗ್ರೆಸ್ ಶಾಸಕರೇ ನಿಮ್ಮ ಸರ್ಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ, ಅಭಿವೃದ್ಧಿ ಇಲ್ಲದ ಆಡಳಿತ ವೈಖರಿಯೇ ಇದಕ್ಕೆ ಕಾರಣ.

ಆಡಳಿತ ಪಕ್ಷದ ಸಚಿವರು, ಶಾಸಕರಲ್ಲಿ ಮುಖ್ಯಮಂತ್ರಿಗಳ ಮೇಲಿನ ಭರವಸೆ ಕುಸಿದಿದೆ, ಶಾಸಕರ ಅಸಮಾಧಾನ ಭುಗಿಲೆದ್ದಿದ್ದು, ಈ ಸರಕಾರ ಬಹಳ ದಿನ ಉಳಿಯುವುದಿಲ್ಲ ಎಂಬುದು ಗೃಹ ಸಚಿವ ಪರಮೇಶ್ವರ್ ಅವರಿಗೂ ಅನಿಸಿದೆ, ಅದನ್ನೇ ಅವರು ಮೈಸೂರಿನಲ್ಲಿ ವ್ಯಕ್ತಪಡಿಸಿದ್ದಾರೆ ಎಂದರು.

Share this:

  • WhatsApp
  • Post
  • Tweet
  • Print
  • Email
bjp state president b y vijayendracm siddaramaiah should resignnabarad loan
Share 0 FacebookTwitterPinterestEmail
admin

previous post
ಚನ್ನಪಟ್ಟಣ ಸಮೀಕ್ಷೆ ತಲೆಕೆಳಗಾಗಿ ಕಾಂಗ್ರೆಸ್ ಗೆಲ್ಲುತ್ತೆ
next post
ಉಪಚುನಾವಣೆ ವಿಜಯಮಾಲೆ ಯಾರ ಕೊರಳಿಗೆ !

You may also like

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ...

May 18, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ